13 ಲಕ್ಷ ಮೌಲ್ಯದ ಗಾಂಜಾ ವಶ

ತುಮಕೂರು: ನಗರದಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸಿಇಎನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ 17 ಕೆಜಿ 89 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಾದ ಗಾರ್ಡನ್ ರಸ್ತೆ ಹಾಗೂ ಟೂಡ ಲೇಔಟ್ ನಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೈಸೂರಿನ ರಾಕೇಶ್ ಹಾಗೂ ಮಂಡ್ಯದ ಹರ್ಷ ಎಂಬ ಇಬ್ಬರು ವ್ಯಕ್ತಿಗಳನ್ನು ನಗರದ ಸಿಇಎನ್ ಠಾಣೆ ಪೊಲೀಸರು ಬಂಧಿಸಿ ಅವರಿಂದ 13,60,000/-ರೂ ಮೌಲ್ಯದ 17 ಕೆಜಿ 89 ಗ್ರಾಂ ಗಾಂಜಾ ವಶಪಡಿಸಿಕೊಂಡು … Read more

ಬಲವಂತವಾಗಿ ವಿವಾಹ- ಪ್ರಕರಣ ದಾಖಲು

ಕುಣಿಗಲ್: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ವಿವಾಹವಾಗಿ ಅಕ್ರಮ ಬಂಧರದಲ್ಲಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಲಕಿಯ ತಾಯಿ ನೀಡಿದ ದೂರಿನ ಮೇಲೆ ಕುಣಿಗಲ್ ಪೊಲೀಸರು ಬಾಲ್ಯ ವಿವಾಹ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ. ರಾಮೇನಹಳ್ಳಿಯ ಅಪ್ರಾಪ್ತ ಬಾಲಕಿಯನ್ನು ತಾಲೂಕಿನ ನಾಗನಹಳ್ಳಿ ತಾಂಡ್ಯದ ಹಾಲಿ ಬೆಂಗಳೂರಿನ ಸುಂಕದಕಟ್ಟೆ ವಾಸಿ ಹೇಮಂತ್ ನಾಯಕ ಎಂಬುವರು ಬಲವಂತವಾಗಿ ಕರೆತಂದು, ಪಟ್ಟಣದ ಗ್ರಾಮ ದೇವತೆ ದೇವಾಲಯದ ಮುಂದೆ ವಿವಾಹವಾಗಿ ಬೆಂಗಳೂರಿನ ಸುಂಕದಕಟ್ಟೆಯ ಮನೆಯಲ್ಲಿ ಅಕ್ರಮವಾಗಿ ಇಟ್ಟಿದ್ದರು, ಅಪ್ರಾಪ್ತೆಯ ವಿವಾಹಕ್ಕೆ ಕಾರಣ … Read more

ಹನಿಟ್ರ್ಯಾಪ್ ಆಗಿದ್ದರೆ ಕಂಪ್ಲೇಂಟ್ ಕೊಡಲಿ: ಡಿಕೆಶಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇದೀಗ ಪ್ರಭಾವಿ ಸಚಿವರಿಗೆ ಹನಿಟ್ರ್ಯಾಪ್ ಮಾಡಲಾಗಿದೆ ಎಂಬ ಸುದ್ದಿ ಸದ್ದು ಮಾಡುತ್ತಿದೆ, ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆಶಿ ಶಿವಕುಮಾರ್ ಅವರು ಹನಿಟ್ರ್ಯಾಪ್ ಆಗಿದ್ದರೆ ಕೂಡಲೇ ಕಂಪ್ಲೇಂಟ್ ಕೊಡಲಿ.ಕಾನೂನು ಪ್ರಕಾರ ಕ್ರಮಕೈಗೊಳುತ್ತೇವೆ. ಯಾರೇ ಇರಲಿ ಮೊದಲು ಪೊಲೀಸ್ ಠಾಣೆಗೆ ದೂರು ನೀಡಿದರೆ ತನಿಖೆ ಮಾಡಿಸಲಾಗುವುದು ಎಂದರು. ಇನ್ನು ಸಚಿವರ ಮೇಲೆ ಎರಡು ಸಲ ಹನಿಟ್ರ್ಯಾಪ್ ಆಗಿದ್ದು ನಿಜ ಎಂದಿರುವ ಸಚಿವ ಸತೀಶ್ ಜಾರಕಿಹೊಳಿ ಅವರು, ಹನಿಟ್ರ್ಯಾಪ್ ಅನ್ನು ಕೆಲವರು ಬಂಡವಾಳವಾಗಿ ಮಾಡಿಕೊಂಡಿದ್ದಾರೆ. … Read more

ನನ್ನ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿತ್ತು

ಸಹಕಾರ ಸಚಿವ ಕೆ.ಎನ್.ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಹನಿಟ್ರ್ಯಾಪ್ ಸದ್ದು ಮಾಡುತ್ತಿದೆ. ವಿಧಾನಸೌಧದ ಮೊಗಸಾಲೆಯಲ್ಲೂ ಹನಿಟ್ರ್ಯಾಪ್ ಕುರಿತು ಗುಸು ಗುಸು ಚರ್ಚೆಗಳು ನಡೆಯುತ್ತಿವೆ. ಕೆಲವು ಸಚಿವರು ಬಹಿರಂಗವಾದ ಹೇಳಿಕೆ ನೀಡುತ್ತಿದ್ದು, ಪ್ರಭಾವಿ ಸಚಿವರನ್ನೇ ಹನಿಟ್ರ್ಯಾಪ್ ಮಾಡುವ ಪ್ರಯತ್ನ ವಿಫಲಗೊಂಡಿದೆ ಎಂಬ ಸುದ್ದಿಗಳೂ ಹರಿದಾಡುತ್ತಿತ್ತು. ಕೆಲವು ದಿನಗಳ ಹಿಂದೆ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಗೆ ಕೆಡವೋ ಪ್ರಯತ್ನ ನಡೆಸಲಾಗಿತ್ತು. ಆದರೆ ಅದು ಯಶಸ್ವಿ ಆಗಿಲ್ಲ. ಹೀಗಿರುವಾಗ ಹನಿಟ್ರ್ಯಾಪ್ ಗೆ ಬಲಿಯಾದವರು ಯಾರು ಎಂಬುದು ಭಾರೀ ಕುತೂಹಲಕ್ಕೆ … Read more

ರನ್ಯಾ ನ್ಯೂಸ್ ನಿರ್ಬಂಧಕ್ಕೆ ನಿರ್ದೇಶನ

ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್ ಮತ್ತು ಕೆ.ರಾಮಚಂದ್ರ ರಾವ್ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧಕ್ಕೆ ಸೂಕ್ತ ಆದೇಶ ಹೊರಡಿಸಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ನಿರ್ಬಂಧ ವಿಧಿಸಿ ಅಧೀನ ನ್ಯಾಯಾಲಯ ಆದೇಶಿಸಿದ್ದರೂ, ರನ್ಯಾ ರಾವ್ ಕುಟುಂಬ ವಿರುದ್ಧ ಆಧಾರರಹಿತ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವ ಮಾಧ್ಯಮಗಳ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಮಾಧ್ಯಮ ಸಂಸ್ಥೆಗಳು ಕೇಂದ್ರ … Read more

ಆಕಸ್ಮಿಕ ಬೆಂಕಿಗೆ ಬಸ್ ಭಸ್ಮ

ಔರಾದ್: ತಾಲ್ಲೂಕಿಗೆ ಸಮೀಪದ ಕಪ್ಪೆಕೇರಿ ಬಳಿ ಬುಧವಾರ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಿ ಉರಿದಿದೆ. ಬೀದರ್ ಕಡೆಯಿಂದ ಬರುತ್ತಿದ್ದ ಔರಾದ್ ಘಟಕದ ಬಸ್ ಕಪ್ಪೆಕೇರಿ ಬಳಿ ಎಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ.ಇದರಿಂದ ಭಯಭೀತರಾದ ಪ್ರಯಾಣಿಕರು ಬಸ್ ನಿಂದ ಕೆಳಗಿಳಿಯುತ್ತಿದ್ದಂತೆ ಹೊಗೆ ಬೆಂಕಿಯಾಗಿ ಇಡೀ ಬಸ್ ಧಗ ಧಗನೇ ಹೊತ್ತಿ ಉರಿದಿದೆ. ತಕ್ಷಣ ಸ್ಥಳಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಎಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡ … Read more

ಪತ್ನಿ ಕಾಟಕ್ಕೆ ಬೇಸತ್ತ ಪತಿ- ದೂರು ದಾಖಲು

ಬೆಂಗಳೂರು: ಕುಟುಂಬದವರೇ ನೋಡಿ ಮದುವೆ ಮಾಡಿದ್ದ ಸಾಫ್ಟ್ ವೇರ್ ಇಂಜಿನಿಯರ್ ಓರ್ವ ಇದೀಗ ಪತ್ನಿ ಕಾಟಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ.ಟೆಕ್ಕಿ ಶ್ರೀಕಾಂತ್ 2022ರಲ್ಲಿ ಯುವತಿಯಿಬಳನ್ನು ವಿವಾಹವಾಗಿದ್ದ. ಮದುವೆಯಾದಾಗಿನಿಂದಲೂ ಪತ್ನಿ ಕಿರುಕುಳ ನೀಡುತ್ತಲೇ ಇದ್ದಾಳಂತೆ. ಪ್ರತಿದಿನ ದಿನದ ಖರ್ಚಿಗೆ 5000 ರೂಪಾಯಿ ಕೇಳುತ್ತಾಳಂತೆ. ಬ್ಯೂಟಿ ಹಾಳಾಗುತ್ತೆ ಎಂದು ಮಕ್ಕಳನ್ನು ಮಡಿಕೊಳ್ಳಲು ರೆಡಿ ಇಲ್ಲವಂತೆ. ಸ್ವಂತ ಮಕ್ಕಳು ಬೇಡ ದತ್ತು ಮಕ್ಕಳನ್ನು ಪಡೆಯೋಣ ಎನ್ನುತ್ತಾಳಂತೆ.ಒತ್ತಾಯ ಮಾಡಲು ಹೋದರೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಾಳಂತೆ. ವರ್ಕ ಫ್ರಂ … Read more

ಕಂದಾಯ ಇಲಾಖೆ ನೌಕರರಿಬ್ಬರ ಅಮಾನತು

ಕುಣಿಗಲ್: ತಾಲೂಕಿನ ಕಂದಾಯ ಇಲಾಖೆ ಇಬ್ಬರು ನೌಕರರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅಮಾನತಿಗೆ ಒಳಗಾದ ನೌಕರರನ್ನು ಕುಣಿಗಲ್ ತಾಲೂಕು ಕಸಬಾ ಹೋಬಳಿಯ ರಾಜಸ್ವ ನಿರೀಕ್ಷಕ ಪರಮೇಶ್, ತಾಲೂಕು ಕಚೇರಿ ದ್ವಿತೀಯ ದರ್ಜೆ ಸಹಾಯಕ ರವಿಕುಮಾರ್ ಎಂದು ಗುರುತಿಸಲಾಗಿದೆ, ಪರಮೇಶ್, ತುರುವೇಕೆರೆ ತಾಲೂಕು ಮಾಯಸಂದ್ರ ಹೋಬಳಿ ರಾಜಸ್ವ ನಿರೀಕ್ಷಕರಾಗಿ ಸೇವೆ ಸಲ್ಲಿಸುವಾಗ ಸರ್ಕಾರಿ ಭೂಮಿಗಳನ್ನು ಬಗರ್ ಹುಕುಂ ಸಕ್ರಮೀಕರಣ ಸಮಿತಿಯಲ್ಲಿ ಮಂಜೂರಾಗದೆ ಇದ್ದರೂ ಅಕ್ರಮವಾಗಿ, ಕಾನೂನು ಬಾಹಿರವಾಗಿ ಖಾತೆ ಮಾಡಿರುವ ಬಗ್ಗೆ ಆರೋಪದ ಮೇರೆಗೆ ತಿಪಟೂರು ಉಪವಿಭಾಗಾಧಿಕಾರಿಗಳು … Read more

ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ

ಪ್ರೀತಿಯಲ್ಲಿ ಮೋಸ- ಯುವತಿ ಸಾವು- ಅಂಗಾಂಗ ದಾನ ಮಧುಗಿರಿ: ಪ್ರೀತಿಯಲ್ಲಿ ಮೋಸ ಹೋದ ಯುವತಿಯೊಬ್ಬರು ಹುಡುಗ ಕೈಕೊಟ್ಟನೆಂದು ಆತ್ಮಹತ್ಯೆಗೆ ಯತ್ನಿಸಿ 10 ದಿನಗಳ ಕಾಲ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಬದುಕುವುದಿಲ್ಲವೆಂದು ಖಚಿತವಾದ ಹಿನ್ನೆಲೆಯಲ್ಲಿ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಏನಿದು ಪ್ರಕರಣ: ತಾಲೂಕಿನ ದೊಡ್ಡೇರಿ ಹೋಬಳಿಯ ಬಡಿಗೊಂಡನಹಳ್ಳಿ ಗ್ರಾಮದ ಯುವತಿ ಬಿ.ಎಸ್.ಲಿಖಿತ (23) ಎಂಬುವವರು ಸೀಮಾಂಧ್ರದ ಅಗಳಿ ಮಂಡಲ್ನ ರಾಗಿ ನಿಂಗನಹಳ್ಳಿ ಗ್ರಾಮದ ಕಾರ್ ಡ್ರೈವರ್ ಚೇತನ್ ಎಂಬ ಯುವಕ ಪರಸ್ಪರ … Read more

ಈಜಲು ಹೋದ ವಿದ್ಯಾರ್ಥಿ ನೀರು ಪಾಲು

ಕೊಡಿಗೇನಹಳ್ಳಿ: ಶಾಲೆ ಮುಗಿಸಿ ಈಜಾಡಲು ಹೋದ ಯುವಕ ಈಜು ಬಾರದೆ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಕೊಡಿಗೇನಹಳ್ಳಿ ಸರ್ವೋದಯ ಪ್ರೌಢ ಶಾಲೆಯಲ್ಲಿ ಎಂಟನೇ ತರಗತಿ ಓದುತಿದ್ದ ರಂಗನಹಳ್ಳಿ ಗ್ರಾಮ ಹರ್ಷವರ್ಧನ್ (14) ಡ್ರಾಯಿಂಗ್ ಕ್ಲಾಸ್ ಮುಗಿಸಿ ಹುಡುಗರ ಜತೆ ಕೊಡಿಗೇನಹಳ್ಳಿಯ ಜಯಮಂಗಲಿ ನದಿಯಲ್ಲಿ ಈಜಾಡಲು ಹೋಗಿದ್ದು ಈಜು ಬಾರದೆ ನೀರಲ್ಲಿ ಸಿಲುಕಿ ಮೃತಪಟ್ಟಿದ್ದಾನೆ. ಮೃತನ ಕೊಡಿಗೇನಹಳ್ಳಿ ದೇವರಾಜು ಅರಸು ಹಿಂದುಳಿದ ವಸತಿ ನಿಲಯದಲ್ಲಿ ಊಟ ಮಾಡಿ ಶಾಲೆಗೆ ತೆರಳಿದ್ದು ಶಾಲೆಯಲ್ಲಿ 2 ಗಂಟೆಗೆ ಕ್ಲಾಸ್ … Read more