ತಡೆಗೋಡೆಗೆ ಬೈಕ್ ಡಿಕ್ಕಿ- ಯುವತಿ ಸಾವು

ಕುಣಿಗಲ್: ಬೈಕ್ ಚಾಲಕ ಆಯತಪ್ಪಿ ರಸ್ತೆ ಬದಿಯ ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟು, ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆಯ ಉರ್ಕೆ ಹಳ್ಳಿ ಗ್ರಾಮದ ಬಳಿ ಸೋಮವಾರ ಬೆಳಗಿನ ಜಾವ ಸಂಭವಿಸಿದೆ. ಮೃತ ಬೈಕ್ ಸವಾರಳನ್ನು ದಿವ್ಯಶ್ರೀ(23) ಎಂದು ಗುರುತಿಸಲಾಗಿದ್ದು ಈಕೆ ಬಿಬಿಎಂಪಿ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದು ಸಹೋದ್ಯೋಗಿ ಕೌಶಿಕ್ ಎಂಬಾತನೊಂದಿಗೆ ಬೈಕ್ ನಲ್ಲಿ ಧರ್ಮಸ್ಥಳಕ್ಕೆ ಪ್ರವಾಸ … Read more

ಹನಿಟ್ರ್ಯಾಪ್ ಬಲೆಗೆ ಬಿದ್ದ ಯುವಕ

ಗುಬ್ಬಿ: ಗುಬ್ಬಿ ಪಟ್ಟಣ ಪಂಚಾಯಿತಿ ಸದಸ್ಯಜಿ.ಎನ್.ಅಣ್ಣಪ್ಪ ಸ್ವಾಮಿ ಹನಿ ಟ್ರ್ಯಾಪ್ ಬಲೆಗೆ ಬಿದ್ದಿದ್ದು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟ ಸಂದರ್ಭದಲ್ಲಿ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಅಣ್ಣಪ್ಪ ಸ್ವಾಮಿ ಪ್ರಕರಣ ದಾಖಲು ಮಾಡಿದ್ದಾರೆ. ಫೇಸ್ ಬುಕ್ ನಲ್ಲಿ ಬಂದ ಫ್ರೆಂಡ್ ರಿಕ್ವೆಸ್ಟ್ ಗೆ ಒಪ್ಪಿಗೆ ನೀಡಿ ನಂತರ ಹಾಯ್, ಬಾಯ್, ಗುಡ್ ಮಾನಿರ್ಂಗ್ ಅಂತೆಲ್ಲ ಬೆಳೆದ ಸಲುಗೆ ಮಿತಿ ಮೀರಿ ವೀಡಿಯೋ ಕಾಲಿಂಗ್ ಮಾಡಿ ಮಾತನಾಡುವ ಮಟ್ಟ ತಲುಪಿದ್ದು ಇದನ್ನೇ ಬಂಡವಾಳ ಮಾಡಿಕೊಂಡ ಮಹಿಳೆ ಹಲವು ಕಡೆ ಬಲವಂತವಾಗಿ … Read more

ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ- ಕರು, ಹಸು ಸಜೀವ ದಹನ

ಕೊರಟಗೆರೆ: ರೈತನೋರ್ವನ ಜಾನುವಾರು ಕೊಟ್ಟಿಗೆಗೆ ಬಿದ್ದ ಆಕಸ್ಮಿಕ ಬೆಂಕಿಯಿಂದ ಕರು ಮತ್ತು ಹಸುಗಳು ಸುಟ್ಟು ಭಸ್ಮವಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಸಿಎನ್ ದುರ್ಗಾ ಹೋಬಳಿಯ ತೋವಿನಕೆರೆ ಗ್ರಾಮದ ಕೊಂಡಪ್ಪ ಬಿನ್ ದೊಡ್ಡ ತಿಮ್ಮಯ್ಯ ಎಂಬುವರ ಸರ್ವೇ ನಂ.15/3ರಲ್ಲಿ ನಿರ್ಮಿಸಲಾದ ಜಾನುವಾರು ಕೊಟ್ಟಿಗೆಗೆ ತಡರಾತ್ರಿ ಆಕಸ್ಮಿಕ ಬೆಂಕಿ ತಗಲಿ ಹಸುಗಳು ಸ್ಥಳದಲ್ಲೇ ಮೃತಪಟ್ಟಿದ್ದು, ರೈತನ ಸಮಯ ಪ್ರಜ್ಞೆಯಿಂದ ಗಾಯಗೊಂಡ ಕರುವನ್ನು ರಕ್ಷಣೆ ಮಾಡಲಾಗಿತ್ತು. ಘಟನೆಯ ಬಗ್ಗೆ ಪಶು ಇಲಾಖೆಯ ವೈದ್ಯರಿಗೆ ಮಾಹಿತಿ ತಿಳಿಸಿದ ಕೂಡಲೇ … Read more

ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸಾವು

ಕೊರಟಗೆರೆ: ಅಕ್ರಮವಾಗಿ ಮಣ್ಣು ಸಾಗಾಣಿಕೆಯಲ್ಲಿ ತೊಡಗಿದ್ದ ಟ್ರಾಕ್ಟರ್ ಚಾಲಕನ ಅವೈಜ್ಞಾನಿಕ ಮತ್ತು ಅತಿವೇಗದ ಚಾಲನೆಯಿಂದ ಐಸ್ ಕ್ರೀಂ ಮಾರಾಟ ಮಾಡಲು ತೆರಳುತ್ತಿದ್ದ ದ್ವೀಚಕ್ರ ವಾಹನದ ಮೇಲೆ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದ ಸಮೀಪದ ಟ್ರಾಕ್ಟರ್ ಮತ್ತು ದ್ವೀಚಕ್ರ ವಾಹನದ ನಡುವೆ ಅಪಘಾತ ನಡೆದಿದ್ದು ಅಲಪನಹಳ್ಳಿಯ ಲಿಂಗಪ್ಪ (50) ಮೃತ ದುರ್ದೈವಿ. ಕ್ಯಾಮೇನಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಂಪುಗಾನಹಳ್ಳಿಯಿಂದ ಲಂಕೇನಹಳ್ಳಿ ಸಂಪರ್ಕ ಕಲ್ಪಿಸುವ ಮಾರ್ಗದ … Read more