ಕೊರಟಗೆರೆ: ಅಪರಿಚಿತ ನಾಯಿ ದಾಳಿಯಿಂದ ಕರುಗೆ ವಿಪರೀತ ಗಾಯ ಉಂಟು ಮಾಡಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಕೊರಟಗೆರೆ ತಾಲ್ಲೂಕಿನ ಕರುಕಲಘಟ್ಟ ಗ್ರಾಮದ ನಾಗರಾಜು ಎಂಬುವವರಿಗೆ ಸೇರಿದ್ದ 10 ತಿಂಗಳ ಕರು ಮೇಲೆ 3 ಅಪರಿಚಿತ ನಾಯಿಗಳು ದಾಳಿ ಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕರು ಕಳೆದುಕೊಂಡ ರೈತನ ಆಕ್ರಂದನ ಮುಗಿಲುಮಟ್ಟಿದೆ.
ಗ್ರಾಮದಲ್ಲಿ ನಾಯಿಗಳ ಹಾವಳಿ ಹೆಚ್ಚಿದ ಪರಿಣಾಮ ಈ ಘಟನೆ ನಡೆದಿದ್ದು, ಒಬ್ಬಂಟಿಯಾಗಿ ಮಕ್ಕಳು, ಗ್ರಾಮಸ್ಥರು ಓಡಾಡವುದು ಕಷ್ಟಕರವಾಗಿದ್ದು, ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಎಂಬ ಮಾಹಿತಿಯನ್ನು ಗ್ರಾಮದವರೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.
ಈ ಘಟನೆಯನ್ನು ಪಶುಪಾಲನಾ ಇಲಾಖೆ ಅಧಿಕಾರಿಗಳು ಸೂಕ್ಷ್ಮವಾಗಿ ಗಮನಿಸಿ ಕರು ಕಳೆದುಕೊಂಡ ರೈತನ ಕುಟುಂಬಕ್ಕೆ ಸಾಂತ್ವನ ತಿಳಿಸಿ ಪರಿಹಾರ ಒದಗಿಸಬೇಕಿದೆ ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.
ನಾಯಿ ದಾಳಿಗೆ 10 ತಿಂಗಳ ಕರು ಬಲಿ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು