ಐಪಿಎಲ್ ಟಿಕೆಟ್ ಮಾರಾಟ ದಂಧೆ- 12 ಮಂದಿ ಬಂಧನ

ಬೆಂಗಳೂರು: ಐಪಿಎಲ್ ಟಿ 20 ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿದಂತೆ ಕಾಳಸಂತೆಯಲ್ಲಿ ಟಿಕೆಟ್ ಮಾರಾಟ ದಂಧೆಯಲ್ಲಿ ತೊಡಗಿದ್ದ 12 ಮಂದಿಯನ್ನು ಸಿಸಿ ಪೊಲೀಸರು ಬಂಧಿಸಿದ್ದಾರೆ. 1.55 ಲಕ್ಷ ರೂ. ನಗದು ವಶಪಡಿಸಿಕೊಂಡು ಆರೋಪಿಗಳ ಬ್ಯಾಂಕ್ ಅಕೌಂಟ್ ಗಳಲಿದ್ದ 2.5 ಲಕ್ಷ ರೂ.ಹಣವನ್ನು ಲೀನ್ ಮಾಡಿದ್ದಾರೆ.ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಳಸಂತೆಯಲ್ಲಿ ಟಿಕೆಟ್ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಬ್ಬನನ್ನು ಬಂ ಸಿ 13 ಸಾವಿರ ರೂ. ಮುಖ ಬೆಲೆಯ 2 … Read more

ಎಣ್ಣೆ ಕುಡಿದು ರೋಗಿ ತಪಾಸಣೆ ಮಾಡಿದ ವೈದ್ಯ

ಬೆಳಗಾವಿ: ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬ ಕಂಠಪೂರ್ತಿ ಕುಡಿದು ಎಣ್ಣೆ ಮತ್ತಲ್ಲೇ ರೋಗಿಗೆ ತಪಾಸಣೆ ಮಾಅಡಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ಸುರೇಶ್ ಹಿತ್ತಲಮನಿ ಎಣ್ಣೆ ಹೊಡೆದು ಫುಲ್ ಟೈಟಾಗಿ ಬಂದು ಹೃದ್ರೋಗಿಯ ತಪಾಸಣೆ ನಡೆಸಿದ್ದಾರೆ.ರೋಗಿಯ ಸಂಬಂಧಿಕರು ಈ ಸ್ಥಿತಿಯಲ್ಲಿ ರೋಗಿಯನ್ನು ತಪಾಸಣೆ ನಡೆಸದಂತೆ ಹೇಳಿದ್ದಾರೆ. ಆದರೂ ಕೇಳದ ವೈದ್ಯ ತುರಾಡುತ್ತಲೇ ಬಂದು ನಿಂತುಕೊಳ್ಳಲು ಆಗದಿದ್ದರೂ ಓಲಾಡುತ್ತಲೇ ರೋಗಿಯ ಪರೀಕ್ಷೆ ಮಾಡಿದ್ದಾರೆ. ಈ ವೇಳೆ ರೋಗಿಯ ಕುಟುಂಬದವರು ವೈದ್ಯನನ್ನು ಹಿಗ್ಗಾ ಮುಗ್ಗಾ ಬೈದು … Read more

ನೇಣಿಗೆ ಶರಣಾದ ಪ್ರೇಮಿಗಳು

ದಾವಣಗೆರೆ: ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ಹರಪನಹಳ್ಳಿ ಪಟ್ಟಣದ ಹೊರವಲಯದ ಅನಂತನಹಳ್ಳಿ ಸರ್ಕಾರಿ ಐಟಿಐ ಎದುರಿಗಿರುವ ಅರಣ್ಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಜಿಟ್ಟಿನಕಟ್ಟೆ ಗ್ರಾಮದ ಮದ್ದನ ಸ್ವಾಮಿ(18), ಬಂಡ್ರಿ ಗ್ರಾಮದ ದೀಪಿಕಾ(18) ನೇಣಿಗೆ ಶರಣಾದ ಪ್ರೇಮಿಗಳು. ಒಂದೇ ಮರದ ಕೊಂಬೆಗೆ ಇಬ್ಬರೂ ನೇಣುಬಿಗಿದುಕೊಂಡಿದ್ದಾರೆ.ಮದ್ದನಸ್ವಾಮಿ ಹಾಗೂ ದೀಪಿಕಾ ಹರಪನಹಳ್ಳಿ ಸರ್ಕಾರಿ ಪಿಯು ಕಾಲೇಜ್ ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಇವರಿಬ್ಬರು ಏ.15 ಪಿಯುಸಿ ಫಲಿತಾಂಶ ಬಂದ ದಿನದಿಂದ ನಾಪತ್ತೆಯಾಗಿದ್ದರು. ಇಬ್ಬರೂ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಯಾಗಿದ್ದು, ದೀಪಿಕಾ 438 … Read more

ಮಾಜಿ ಪ್ರೇಮಿ ಬ್ಲಾಕ್ ಮೇಲ್ : ದೈಹಿಕ ಶಿಕ್ಷಕಿ ಆತ್ಮಹತ್ಯೆ!

ಗದಗ: ಮಾಜಿ ಪ್ರೇಮಿಯ ಬ್ಲಾಕ್ ಮೇಲ್ ಗೆ ಬೇಸತ್ತ ದೈಹಿಕ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದ ಅಸುಂಡಿ ಗ್ರಾಮದಲ್ಲಿ ನಡೆದಿದೆ. ಅಸುಂಡಿ ಗ್ರಾಮದ 29 ವರ್ಷದ ಸೈರಾಬಾನು ನದಾಫ್ ಎಂಬ ದೈಹಿಕ ಶಿಕ್ಷಣ ಶಿಕ್ಷಕಿ ಭಾನುವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಗೆ 8 ದಿನ ಇದ್ದರಿಂದ ಯುವತಿ ಪೋಷಕರು ಮದುವೆ ಸಾಮಾಗ್ರಿಗಳನ್ನು ತರಲು ಹೋಗಿದ್ದರು. ಪೋಷಕರು ಮರಳಿ ಬರುವಷ್ಟರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 5 ವರ್ಷಗಳಿಂದ ಮೈಲಾರಿ ಎಂಬಾತನನ್ನು … Read more

ತಂದೆಯನ್ನೇ ಭೀಕರವಾಗಿ ಹತ್ಯೆಗೈದ ಮಗ

ಬೆಂಗಳೂರು: ಶಿಸ್ತಿನಿಂದಿರು ಅಂತಾ ಹೇಳಿದ್ದಕ್ಕೆ ಮಗನೇ ತನ್ನ ತಂದೆ ಭೀಕರವಾಗಿ ಹತ್ಯೆಗೈದ ಘಟನೆ ವಿವೇಕನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶನಿವಾರ ತಡರಾತ್ರಿ 2:30ರ ಸುಮಾರಿಗೆ ವಿವೇಕನಗರ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಮನೆಯಲ್ಲಿ ಘಟನೆ ನಡೆದಿದ್ದು, ಇಸ್ಲಾಂ ಅರಬ್ (47) ಕೊಲೆಗೀಡಾದ ತಂದೆ. ಹಲ್ಲೆಗೈದು, ಚಾಕುವಿನಿಂದ ಇರಿದು ಹತ್ಯೆಗೈದಿರುವ ಅವರ ಪುತ್ರ ಬೋಲು ಅರಬ್ನನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ನಿವೃತ್ತ ಸೈನಿಕರಾಗಿದ್ದ ಇಸ್ಲಾಂ ಅರಬ್, ಶಿಸ್ತಿನಿಂದ ಇರುವಂತೆ ಹೆಚ್ಚು ಕಟ್ಟುನಿಟ್ಟಾಗಿ ಇರುತ್ತಿದ್ದರು. ತಂದೆಯ ಕಠಿಣ ನಿಯಮಗಳನ್ನು ಸಹಿಸಲಾರದೆ … Read more

ವಿಂಗ್ ಕಮಾಂಡರ್ ಮೇಲೆ ಹಲ್ಲೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡು ರಸ್ತೆಯಲ್ಲಿಯೇ ವಿಂಗ್ ಕಮಾಂಡರ್ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಏರ್ ಪೋರ್ಟ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಶಿಲಾದಿತ್ಯ ಬೋಸ್ ಹಲ್ಲೆಗೊಳಗಾದ ವಿಂಗ್ ಕಮಾಂಡರ್. ಪತ್ನಿ ಜೊತೆ ಏರ್ ಪೋರ್ಟ್ ಗೆ ತೆರಳುತ್ತಿದ್ದ ವಿಂಗ್ ಕಮಾಂಡರ್ ಮೇಲೆ ಬೈಕ್ ಸವಾರನೊಬ್ಬ ಕಿರಿಕ್ ಮಾಡಿ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ್ದಾನೆ. ಶಿಲಾದಿತ್ಯ ಅವರ ಕಾರ್ ಮುಂದೆ ಬೈಕ್ ನಿಲ್ಲಿಸಿ ಅವಾಚ್ಯಶಬ್ದಗಳಿಂದ ನಿಂದಿಸಿದ್ದಾನೆ. ಕಾರಿನ ಮೇಲಿದ್ದ ಡಿಆರ್ ಡಿಒ ಸ್ಟಿಕ್ಕರ್ ನೋಡಿ … Read more

ಸರ್ಕಾರಿ ಗೌರವದೊಂದಿಗೆ ಓಂ ಪ್ರಕಾಶ್ ಅಂತ್ಯಕ್ರಿಯೆ

ಬೆಂಗಳೂರು: ಆಸ್ತಿ ವಿಚಾರವಾಗಿ ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ನಿವಾಸದಲ್ಲಿ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರು ಪತ್ನಿ ಪಲ್ಲವಿ ಅವರಿಂದ ಭೀಕರವಾಗಿ ಕೊಲೆಯಾಗಿದ್ದರು ಇದೀಗ ಪಂಚಭೂತಗಳಲ್ಲಿ ಓಂ ಪ್ರಕಾಶ್ ಅವರು ಲೀನವಾದರು. ಬೆಂಗಳೂರಿನ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರ ದಲ್ಲಿ ಓಂ ಪ್ರಕಾಶ್ ಅಂತ್ಯಕ್ರಿಯೆ ನೆರವೇರಿತು. ಓಂ ಪ್ರಕಾಶ್ ಪುತ್ರ ಕಾರ್ತಿಕೇಶ್ ಅವರಿಂದ ಓಂ ಪ್ರಕಾಶ್ ಅವರ ಮೃತದೇಹಕ್ಕೆ ಅಗ್ನಿ ಸ್ಪರ್ಶ ಮಾಡಿದರು. ಪೊಲೀಸ್ ಗೌರವದೊಂದಿಗೆ ನಿವೃತ್ತ ಡಿಜಿ ಮತ್ತು … Read more

ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ- ಸತ್ಯ ಬಯಲು

ಬೆಳಗಾವಿ: ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ದಲಿತ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಒಂದು ವಾರದ ಹಿಂದೆ ಬೆಳಗಾವಿಯ ಮಹಾಂತೇಶ್ ನಗರದ ಸಮಾಜ ಕಲ್ಯಾಣ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಬಿಸಿಎ ಓದುತ್ತಿದ್ದ ವಿದ್ಯಾರ್ಥಿನಿ ಶಿಲ್ಪಾ ಆತ್ಮಹತ್ಯೆಗೆ ಶರಣಾಗಿದ್ದಳು. ಇದೀಗ ಈ ಒಂದು ಆತ್ಮಹತ್ಯೆ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಚಿಕ್ಕಮಲ್ಲೂರು ಗ್ರಾಮದ ನಿವಾಸಿಯಾದ ಶಿಲ್ಪಾ (22) ಆತ್ಮಹತ್ಯೆಗೆ ಶರಣಾಗಿದ್ದಳು. ಹಾವೇರಿ ಜಿಲ್ಲೆಯ … Read more

ಸಾಸಲು ಗ್ರಾಮದ ಬಳಿ ದಾವಣಗೆರೆ ಮಣಿಕಂಠ ಹತ್ಯೆ

ದಾವಣಗೆರೆ: ಕಲ್ಲಿನಿಂದ ತಲೆಗೆ ಜಜ್ಜಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಸಾಸಲು ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೂಲತಃ ಹೊನ್ನಾಳಿ ತಾಲೂಕಿನ ಮಾರಿಕೊಪ್ಪ ಗ್ರಾಮದ ದಾವಣಗೆರೆ ನಿವಾಸಿ ಮಣಿಕಂಠ (34) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಸಾಸಲು ಗ್ರಾಮದ ಪೆಟ್ರೋಲ್ ಬಂಕ್ ಬಳಿ ಸ್ನೇಹಿತರೊಂದಿಗೆ ಜಗಳ ನಡೆದಿದೆ. ಈ ವೇಳೆ ಮಣಿಕಂಠ ಅವರ ತಲೆಗೆ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿದೆ ಎನ್ನಲಾಗಿದ್ದು, ಸ್ನೇಹಿತರ ಜೊತೆಗೆ ರಾತ್ರಿ ಬುಲೆರೋ ವಾಹನದಲ್ಲಿ ಮಣಿಕಂಠ … Read more

ಶಿಶುವಿನ ಶವ ಪತ್ತೆ- ಯುವಕ ಬಂಧನ

ಬೆಂಗಳೂರು: ಯಲಹಂಕದ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಏ.2 ರಂದು ಗಾಂಧಿನಗರದ 2ನೇ ಅಡ್ಡರಸ್ತೆಯ ಕಸದತೊಟ್ಟಿಯಲ್ಲಿ ಕಂಬಳಿ ಸುತ್ತಿ ಬಿಸಾಡಿದ್ದ ಶಿಶುವನ್ನು ನೋಡಿದ ಸ್ಥಳೀಯರು, ಪೊಲೀಸರಿಗೆ ತಿಳಿಸಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಶಿಶುವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಪರೀಕ್ಷಿಸಿದ ವೈದ್ಯರು ಶಿಶು ಮೃತಪಟ್ಟಿರುವು ದಾಗಿ ತಿಳಿಸಿದರು. ಪ್ರ6ಕರಣ ದಾಖಲಿಸಿಕೊಂಡು ಪೋಷಕರ ಪತ್ತೆಗಾಗಿ ಸುತ್ತಮುತ್ತಲ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸಲಾಯಿತು. ವೃದ್ಧರೊಬ್ಬರು ಹಸುಗೂಸನ್ನು … Read more