ಗಾಳಿ-ಮಳೆಗೆ ನೆಲಕ್ಕುರುಳಿದ ಅಡಿಕೆ ಮರಗಳು

ಚಿಕ್ಕನಾಯಕನ ಹಳ್ಳಿ: ತಾಲೂಕಿನ ಗೋಡೆಕೆರೆಯಲ್ಲಿ ಶುಕ್ರವಾರ ಸಂಜೆ ಸುರಿದ ಬಾರಿ ಮಳೆ ಗಾಳಿ ಹಲವಾರು ಅವಾಂತರ ಸೃಷ್ಟಿ ಮಾಡಿದ್ದು ತೆಂಗು, ಅಡಿಕೆ ಮರಗಳು ಹಾಗು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಗೋಡೆಕೆರೆ ಗೊಲ್ಲರಹಟ್ಟಿಯ ಸಿ.ಶಿವಣ್ಣ ಎಂಬುವವರ ಸೊಂಡೆನಹಳ್ಳಿ ಸರ್ವೆ ನಂ.62/2 ತೋಟದಲ್ಲಿ ಸುಮಾರು 60 ರಿಂದ 70 ಅಡಿಕೆ ಮರಗಳು, 50 ಕ್ಕೂ ಹೆಚ್ಚು ತೆಂಗಿನ ಮರಗಳು ವಿಪರಿತ ಗಾಳಿಗೆ ನೆಲಕ್ಕುರುಳಿವೆ, ಜೆ.ಸಿ.ಪುರ ಹಾಗು ಗೋಡೆಕೆರೆ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳ ಮೇರೆ ಮರಗಳು ಬಿದ್ದು ಹಲವಾರು ವಿದ್ಯುತ್ ಕಂಬಗಳು … Read more

ಅಪ್ರಾಪ್ತನಿಗೆ ಸ್ಕೂಟಿ ಚಾಲನೆ- 25 ಸಾವಿರ ದಂಡ

ಚಿಕ್ಕಮಗಳೂರು: ಅಪ್ರಾಪ್ತನಿಗೆ ಸ್ಕೂಟಿ ಚಾಲನೆ ಮಾಡಲು ನೀಡಿದ ವಾಹನ ಮಾಲೀಕನಿಗೆ ನ್ಯಾಯಾಲಯ 25 ಸಾವಿರ ದಂಡ ವಿಧಿಸಿದೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಜೆಎಂಎಫ್ ಸಿ ನ್ಯಾಯಾಲಯ ಸ್ಕೂಟಿ ಮಾಲೀಕರಿಗೆ 25 ಸಾವಿರ ದಂಡ ವಿಧಿಸಿದೆ. ಏ.4ರಂದು ಮೂಡಿಗೆರೆ ಪೊಲೀಸ್ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿ ಅವರ ಸಮ್ಮುಖದಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಅಪ್ರಾಪ್ತ ಸ್ಕೂಟಿ ಚಾಲನೆ ಮಾಡಿಕೊಂಡು ಬಂದಿದ್ದು ಬಾಲಕನನ್ನು ತಡೆದು ದಾಖಲೆಗಳನ್ನು ಪರಿಶೀಲನೆ ನಡೆಸಿದಾಗ ಸ್ಕೂಟಿಯು ಬಾಪುನಗರ ನಿವಾಸಿ ಮಹಮ್ಮದ್ ಸಿರಾಜ್ ಎಂಬುವವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. … Read more

ಬುರ್ಖಾ ಧರಿಸಿದ ವ್ಯಕ್ತಿ ಬಂಧನ

ಇಳಕಲ್: ಬುರ್ಖಾ ಧರಿಸಿಕೊಂಡು ಕೈಯಲ್ಲಿನ ಚೀಲದಲ್ಲಿ ಚಾಕೊಲೇಟ್, ಬಳೆ, ಹಗ್ಗಗಳನ್ನು ಮತ್ತು ಮುತ್ತಿನ ಸಾಮಾನುಗಳನ್ನು ಇಟ್ಟುಕೊಂಡು ತಿರುಗುತ್ತಿದ್ದ ವ್ಯಕ್ತಿಯೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಈ ಬುರ್ಖಾಧಾರಿ ವ್ಯಕ್ತಿಯನ್ನು ನೋಡಿ ಹಿಂದೂ ಟ್ರಸ್ಟ್ ಸಂಚಾಲಕ ಪರಶುರಾಮ ಬಿಸಲದಿನ್ನಿ ಅವನನ್ನು ಹಿಡಿದುಕೊಂಡು ಬಂದು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಜಾವೀದ್ ಎಂಬ ಅರೆಮಾನಸಿಕ ವ್ಯಕ್ತಿಯನ್ನು ಬಂಧಿಸಿದ ಪೋಲಿಸರು ಅವನ ಬಳಿ ಬ್ಯಾಗಿನಲ್ಲಿ ಇದ್ದ ಎಲ್ಲಾ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಪ್ರಕರಣವನ್ನು ಶಹರ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದಾರೆ. ಪಿ ಎಸ್ ಐ ಷಹಜಹಾನ … Read more

ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್ ಬೆಂಚ್ ಸ್ಥಾಪನೆಗೆ ಒತ್ತಾಯ

ಬೆಂಗಳೂರು: ನಗರದಲ್ಲಿ ಸುಪ್ರೀಂ ಕೋರ್ಟ್ ಬೆಂಚ್ ಸ್ಥಾಪನೆ ಮಾಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ(ಕೆಪಿಸಿಸಿ) ಸದಸ್ಯ ಹಾಗೂ ಮಾಜಿ ಕಾರ್ಯದರ್ಶಿ ಎಸ್.ಮೋಹನದಾಸ್ ಹೆಗ್ಡೆ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಅವರು, ದಕ್ಷಿಣ ಭಾರತದ ನಾಗರಿಕರಿಗೆ ನ್ಯಾಯದ ಸುಲಭ ಪ್ರವೇಶವನ್ನು ಒದಗಿಸುವ ಜೊತೆಗೆ, ರಾಷ್ಟ್ರೀಯ ಏಕತೆ, ಪ್ರಾದೇಶಿಕ ಸಮಾನತೆ ಮತ್ತು ಶಾಶ್ವತ ಅಭಿವದ್ಧಿಯನ್ನು ಬಲಪಡಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್ ಬೆಂಚ್ ಅನ್ನು ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಬೆಂಗಳೂರು ನಗರದಲ್ಲಿ … Read more

ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ ಚಾಲಕ

ಚಿಕ್ಕಮಗಳೂರು: ಅಧಿಕಾರಿ ನೀಡುತ್ತಿದ್ದಂತ ಕಿರುಕುಳಕ್ಕೆ ಬೇಸತ್ತು, ತನಗೆ ಕಿರುಕುಳ ನೀಡುತ್ತಿದ್ದಂತ ಅಧಿಕಾರಿಯ ಎದುರೇ ಕೆಎಸ್ ಆರ್ ಟಿಸಿ ಚಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಕಡೂರು ಡಿಪೋದಲ್ಲಿ ನಡೆದಿದೆ.ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಕೆಎಸ್ ಆರ್ ಟಿಸಿ ಡಿಪೋದಲ್ಲಿ ಚಾಲಕರಾಗಿ ಮಧು ಎಂಬುವರು ಕಾರ್ಯನಿರ್ವಹಿಸುತ್ತಿದ್ದರು. ಇವರಿಗೆ ಸಹಾಯಕ ಸಂಚಾರ ನಿರೀಕ್ಷಕ ಪುಟ್ಟಸ್ವಾಮಿ ಎಂಬುವರು ಕಿರುಕುಳ ನೀಡುತ್ತಿದ್ದರಂತೆ. ಈ ಕಾರಣಕ್ಕೆ ಬೇಸತ್ತ ಅವರು, ಇಂದು ಅವರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿ ಆತ್ಮಹತ್ಯೆಗೆ … Read more

ಬಿಎಂಟಿಸಿ ಬಸ್ ಗೆ ಅಡ್ಡ ಬಂದ ಕಾಡಾನೆ ಹಿಂಡು

ಬೆಂಗಳೂರು: ಇತ್ತೀಚಿನ ದಿನಗಳ ಕಾಡಾನೆಗಳು ನಾಡಿಗೆ ಬಂದು ದಾಳಿ ನಡೆಸುತ್ತಿರುವ ಘಟನೆ ಹೆಚ್ಚುತ್ತಿದೆ. ಕಾಡಾನೆಗಳ ಹಿಂಡೊಂದು ಬಿಎಂಟಿಸಿ ಬಸ್ ಗೆ ಅಡ್ದಗಟ್ಟಿದ ಘಟನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ನಡೆದಿದೆ. ಕನಕಪುರ ರಸ್ತೆಯ ಕಗ್ಗಲೀಪುರ ಬಳಿ ಗುಲ್ಲಹಟ್ಟಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಬಿಎಂಟಿಸಿ ಬಸ್ ಗೆ ಅಡ್ದಗಟ್ಟಿದೆ. ಕಂಗಾಲಾದ ಬಸ್ ಚಾಲಕ, ಪ್ರಯಾಣಿಕರು ಜೀವಭಯದಲ್ಲಿ ಕೆಲಕಾಲ ಪರದಾಡಿದ್ದಾರೆ. ರಸ್ತೆ ಮಧ್ಯೆಯೇ ಕಾಡಾನೆಯೊಂದು ಬಸ್ ನ್ನು ಅಡ್ದಗಟ್ಟಿ ನಿಲ್ಲಿಸಿದೆ. ಬಸ್ ಸುತ್ತ ಒಂದು ಸುತ್ತು ಹೊಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರು … Read more

ಯುವತಿ ಮೇಲೆ ಗ್ಯಾಂಗ್ ರೇಪ್ ಶಂಕೆ

ಮಂಗಳೂರು: ಮಂಗಳೂರಿನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಂಗಳೂರಿನ ಹೊರವಲಯದ ಕಲ್ಲಾಪು ಬಳಿ ನಿರ್ಜನ ಪ್ರದೇಶದಲ್ಲಿ ಹೊರರಾಜ್ಯದ ಯುವತಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಯುವತಿಯ ಮೈಮೇಲೆ ಗಾಯಗಳಾಗಿದ್ದು, ತಡರಾತ್ರಿ ನಶೆಯಲ್ಲಿ ಯುವತಿ ಸ್ಥಳೀಯರ ಮನೆಯ ಬಾಗಿಲು ಬಡಿದು, ನೀರು ಕೇಳಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ.ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಉಳ್ಳಾಲ ಠಾಣೆ ಪೊಲೀಸರು ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೊನ್ನೆ ತಡರತರಿ ನಾಲ್ವರ ತಂಡ ಕಲ್ಲಾಪು ಬಳಿ ಬಂದಿರುವ … Read more

ಆನ್ ಲೈನ್ ಗೇಮಿಂಗ್ ವ್ಯಸನಕ್ಕೆ ಬಿದ್ದ ವಿದ್ಯಾರ್ಥಿ: ತನ್ನದೆ ಕುಟುಂಬದ ಮೂವರಿಗೆ ಚಾಕು ಇರಿತ

ಬೆಂಗಳೂರು: ಆನ್ ಲೈನ್ ಗೇಮಿಂಗ್ ವ್ಯಸನಕ್ಕೆ ಬಿದ್ದ ಡಿಪ್ಲೊಮೊ ವಿದ್ಯಾರ್ಥಿಯೊಬ್ಬ ತನ್ನ ಕುಟುಂಬದ ಮೂವರಿಗೆ ಚಾಕು ಇರಿದ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ನಡೆದಿದೆ. ಮನೆಯಲ್ಲಿ ಮಲಗಿದ್ದ ತನ್ನ ತಂದೆ, ತಾಯಿ ಮತ್ತು ಸಹೋದರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾನೆ ಕೃಷ್ಣಮೂರ್ತಿ (51), ಅವರ ಪತ್ನಿ ಪಾರ್ವತಮ್ಮ (48) ಮತ್ತು ನಯನಾ (24) ಹಲ್ಲೆಯಿಂದ ಗಾಯಗೊಂಡಿದ್ದಾರೆ. ಆರೋಪಿ ಹರ್ಷ ಇತ್ತೀಚೆಗೆ ಡಿಪ್ಲೊಮಾ ಮುಗಿಸಿದ್ದ. ಮಂಗಳವಾರ ಬೆಳಗಿನ ಜಾವ 2.30 ರ ಸುಮಾರಿಗೆ, ಹರ್ಷ ತನ್ನ ತಂದೆ, … Read more

3 ಕಾರುಗಳ ನಡುವೆ ಅಪಘಾತ: ಓರ್ವ ಸಾವು

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೆಯಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, 10 ಮಂದಿಗೆ ಗಂಭೀರ ಗಾಯಗೊಂಡ ಘಟನೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡ್ಯದ ಬಳಿ ನಡೆದಿದೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಬೆಂಗಳೂರಿನಿಂದ ಮೈಸೂರು ಕಡೆಗೆ ವೇಗವಾಗಿ ಬರುತ್ತಿದ್ದ ಹೋಂಡಾ ಸಿವಿಕ್ ಕಾರಿನ ಚಾಲಕ, ಲಂಬಾಣಿ ತಾಂಡ್ಯದ ಬಳಿ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕದ ಮೇಲೆ ಕಾರು ಹತ್ತಿಸಿದ್ದಾನೆ. ಕಾರು ಪಲ್ಟಿಯಾಗಿ ಪಕ್ಕದ ರಸ್ತೆಗೆ ಜಿಗಿದು, ಬೆಂಗಳೂರು ಕಡೆಗೆ … Read more

ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವು

ಬೆಳಗಾವಿ: ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ದುರಂತ ಬೆಳಗಾವಿಯ ಹೊಸ ಗಾಂಧಿನಗರ ಬಳಿ ಬುಧವಾರರಂದು ನಡೆದಿದೆ. ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಬಸವರಾಜ ಸುರವಿ (38) ಹಾಗೂ ಶಿವಲಿಂಗ ಸುರವಿ (20) ಮೃತ ದುರ್ದೈವಿ ಕಾರ್ಮಿಕರು. ಕರ್ನಾಟಕ ರಾಜ್ಯ ಕುಡಿಯುವ ನೀರು ಮತ್ತು ಒಳಚರಂಡಿ ಇಲಾಖೆಯಿಂದ ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳಲಾಗಿದ್ದು, ಹೊಸ ಗಾಂಧಿ ನಗರದ ಬಳಿ ರಸ್ತೆಯ ಬದಿ ಮಣ್ಣು ಅಗೆಯುತ್ತಿದ್ದ ವೇಳೆ ಘಟನೆ ನಡೆದಿದೆ.ಪೈಪ್ … Read more