ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರ ಸಾವು

ಬಳ್ಳಾರಿ: ಜಿಲ್ಲೆಯ ಶಿಡಿಗಿನಮೊಳ ಗ್ರಾಮದಲ್ಲಿ ಹೊಲದಲ್ಲಿದ್ದ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವಿಗೀಡಾಗಿರುವ ಘಟನೆ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತರನ್ನು ರಾಜೇಶ್ (11) ಮತ್ತು ಶಿವಶಂರ್ಕ (12) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕ್ರಿಕೆಟ್ ಆಡಿದ ನಂತರ ಮಕ್ಕಳು ಈಜಲು ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ. ’ನಾಲ್ವರು ಬಾಲಕರು ಈಜಲೆಂದು ಕೃಷಿ ಹೊಂಡಕ್ಕೆ ತೆರಳಿದ್ದಾರೆ. ಈ ವೇಳೆ ಒಬ್ಬ ನೀರಿಗಿಳಿದ ಕೂಡಲೇ ಮುಳುಗಿದರೆ, ಆತನ ರಕ್ಷಣೆಗೆಂದು ನೀರಿಗಿಳಿದ ಮತ್ತೊಬ್ಬ ಬಾಲಕ ಕೂಡ ಮುಳುಗಿದ್ದಾನೆ’ ಎಂದು … Read more

ಮಿನಿಬಸ್-ಲಾರಿ ನಡುವೆ ಅಪಘಾತ, 7-8 ಜನರಿಗೆ ಗಾಯ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ಅಪಘಾತ ಜರುಗಿದೆ. ಅದೃಷ್ಟವಶಾತ್ ಈ ರಸ್ತೆ ಅಪಘಾತಕ್ಕೆ ಯಾರೂ ಬಲಿಯಾಗಿಲ್ಲವಾದರೂ ಮಿನಿಬಸ್ ಚಾಲಕ ಬಹಳ ಗಂಭೀರವಾಗಿ ಗಾಯಗೊಂಡಿದ್ದಾನೆ ಮತ್ತು ಲಭ್ಯವಾಗಿರುವ ಮಾಹಿತಿ ಪ್ರಕಾರ ಅವನ ಬಲಗಾಲು ಫ್ರ್ಯಾಕ್ಚರ್ ಆಗಿದೆ. ತನ್ನ ಮುಂದೆ ಚಲಿಸುತ್ತಿದ್ದ ಲಾರಿಯನ್ನು ಓವರ್ಟೇಕ್ ಮಾಡುವ ಭರದಲ್ಲಿ, ಮಿನಿಬಸ್ ಡ್ರೈವರ್ ಅದಕ್ಕೆ ಗುದ್ದಿದ್ದಾನೆ. ಬಸ್ಸಲ್ಲಿದ್ದ ಇತರ ಆರೇಳು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಲೈಂಗಿಕ ದೌರ್ಜನ್ಯ- ಶಿಕ್ಷಕನ ಬಂಧನ

ಮೈಸೂರು: ಇತ್ತೀಚೆಗಿನ ದಿನಗಳಲ್ಲಿ ಗುರುವಿನ ಸ್ಥಾನದಲ್ಲಿದ್ದು ಪಾಠ ಮಾಡಬೇಕಾದ ಶಿಕ್ಷಕರೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಪ್ರಕರಣ ಹೆಚ್ಚು ಹೆಚ್ಚಾಗಿ ಬೆಳಕಿಗೆ ಬರುತ್ತಿದ್ದು, ಗುರು ದೇವೋ ಭವ ಎನ್ನುವ ಬದಲು ಶಿಕ್ಷಕರನ್ನು ಕೂಡ ಅನುಮಾನದ ದೃಷ್ಟಿಯಿಂದ ನೋಡುವ ಪರಿಸ್ಥಿತಿ ಎದುರಾಗುತ್ತಿದೆ.ಈ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮತ್ತು ಸರ್ಕಾರ ಇಂತಹ ಕೃತ್ಯಗಳಲ್ಲಿ ಭಾಗಿಯಾಗುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದ ಕಾರಣದಿಂದಾಗಿ ಮೇಲಿಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಪಡುವಂತಾಗಿದೆ. … Read more

ಕೊಲೆ ಆರೋಪಿ ಕಾಲಿಗೆ ಗುಂಡು

ವಿಜಯನಗರ: ನಗರದ ಜಂಬುನಾಥ ರಸ್ತೆಯಲ್ಲಿ ಬುಧವಾರ ರಾತ್ರಿ ಯುವಕನ ಬರ್ಬರ ಕೊಲೆ ಮಾಡಿದ ಆರೋಪಿ ಹುಚ್ಚಕಾಳಿ ಎಂಬಾತನ ಕಾಲಿಗೆ ಗುಂಡು ಹಾರಿಸಿದ ಘಟನೆ ಗುರುವಾರ ನಸುಕಿನಲ್ಲಿ ನಗರದ ಹೊರವಲಯದ ಮಹಾದೇವ ಇಂಡಸ್ಟ್ರೀಸ್ ಬಳಿ ನಡೆದಿದೆ. ಕೊಲೆ ಆರೋಪಿ ಹುಚ್ಚಕಾಳಿ ಕೊಲೆಗೆ ಬಳಸಿದ ಚಾಕು ವಶಪಡಿಸಿಕೊಳ್ಳುವ ಪ್ರಯತ್ನದ ವೇಳೆ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ.ಆಗ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಪಿಐ ಹಾಗೂ ತನಿಖಾಧಿಕಾರಿ ಹುಲುಗಪ್ಪರಿಂದ ಆರೋಪಿಯ ಕಾಲಿಗೆ ಗುಂಡು ಹಾರಿಸಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಅರೋಪಿ ನಡೆಸಿದ … Read more

ಪ್ರಪಾತಕ್ಕೆ ಉರುಳಿ ಬಿದ್ದ ಬಸ್

ಚಿಕ್ಕಮಗಳೂರು: ಕೆ ಎಸ್ ಆರ್ ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗಾ ಬಳಿ ನಡೆದಿದೆ. ಬಸ್ ಬೆಂಗಳೂರಿನಿಂದ ಶೃಂಗೇರಿ ಕಡೆಗೆ ಹೋಗುತ್ತಿತ್ತು. ಈ ವೇಳೆ ಭಾರೀ ಮಳೆ ಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಬಸ್ 30 ಅಡಿ ಇದ್ದ ಪುಟ್ಟಪ್ಪ ಪೂಜಾರಿ ಎಂಬವರ ಮನೆಯ ಮೇಲೆ ಬಸ್ ಉರುಳಿ ಬಿದ್ದಿದೆ. ಬಸ್ಸಿನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರು ಇದ್ದು, ಅದರಲ್ಲಿ 30 … Read more

ಫೋಕ್ಸೋ ಪ್ರಕರಣದ ಆರೋಪಿಗೆ ಶಿಕ್ಷೆ

ತುಮಕೂರು: ಕಳೆದ ವರ್ಷ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಫೋಕ್ಸೋ ಪ್ರಕರಣದ ಆರೋಪಿಗೆ ತುಮಕೂರು ಎಫ್ ಟಿ ಎಸ್ ಸಿ-1 ನ್ಯಾಯಾಲಯ ತೀರ್ಪು ನೀಡಿ ಶಿಕ್ಷೆ ಪ್ರಕಟಿಸಿದೆ. ಬಾಲಕಿ ತಾಯಿ ಆಂಜಿನಮ್ಮ ನೀಡಿದ ದೂರಿನ ಮೇರೆಗೆ ಆರೋಪಿ ರಘು (29) ಕೋಡಿಹಳ್ಳಿ ಗ್ರಾಮ, ಕೋರ ಹೋಬಳಿ ತುಮಕೂರು ತಾಲ್ಲೂಕು ಈತನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿ ನ್ಯಾಯಾಲಕ್ಕೆ ದೋಷಾ ರೋಪಣ ಪತ್ರ ಸಲ್ಲಿಕೆಯಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪವು ಸಾಬೀತಾದ … Read more

3.5ಕೆಜಿ ಚಿನ್ನಾಭರಣ ದರೋಡೆ- ಐವರ ಬಂಧನ

ಕೋಲಾರ: ಕಾಂಗ್ರೆಸ್ ಮುಖಂಡನ ಗ್ಯಾಂಗ್ ನಿಂದ 3.5ಕೆಜಿ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಬಂಧಿಸಿದಂತೆ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದು, ಓರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬಂಧಿತರನ್ನು ತಮಿಳುನಾಡು ಮೂಲದ ಪಿ.ವೇದಾವಲಂ, ಕುಮಾರನ್, ರಂಜಿತ್, ಶಂಕರ್, ದೇಬೇಶ್ ಚಕ್ರವರ್ತಿ ಹಾಗೂ ವೇಲು ಎಂದು ಗುರುತಿಸಲಾಗಿದೆ. ಪ್ರಕರಣದ ಎಂಟನೇ ಆರೋಪಿ ಅಪ್ಪು ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಮಿಳುನಾದಿನ ಕಂಬಟ್ಟುಬಳಿ ಮರಕ್ಕೆ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಏಪ್ರಿಲ್ 2 ರಂದು ರಾತ್ರಿ ಕೋಲಾರ ಜಿಲ್ಲೆಯ ಕೆಜಿಎಫ್ ನ ಕಾಂಗ್ರೆಸ್ … Read more

ಆನ್ ಲೈನ್ ಬೆಟ್ಟಿಂಗ್ ನಿಯಂತ್ರಣಕ್ಕೆ ಹೊಸ ಕಾನೂನು

ಮಂಡ್ಯ: ಆನ್ ಲೈನ್ ಬೆಟ್ಟಿಂಗ್ ಮತ್ತು ಜೂಜಾಟವನ್ನು ನಿಯಂತ್ರಿಸಲು ರಾಜ್ಯದಲ್ಲಿ ಹೊಸ ಕಾನೂನನ್ನು ಸರ್ಕಾರ ಜಾರಿಗೆ ತರಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಬುಧವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಹಿರಿಯ ಅಧಿಕಾರಿಗಳು ಮತ್ತು ಉದ್ಯಮದ ಪ್ರತಿನಿಧಿಗಳ ಸಮಿತಿಯನ್ನು ರಚಿಸಲಾಗಿದೆ ಮತ್ತು ಪ್ರಸ್ತಾವಿತ ಮಸೂದೆಯ ಕರಡನ್ನು ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಹೇಳಿದರು. ಮೊನ್ನೆ ನಾನು ಐಟಿ ಸಚಿವರೊಂದಿಗೆ ಆನ್ ಲೈನ್ ಬೆಟ್ಟಿಂಗ್ ಮತ್ತು ಜೂಜಾಟಕ್ಕೆ ಸಂಬಂಧಿಸಿದಂತೆ ಸಭೆಯ ಅಧ್ಯಕ್ಷತೆ ವಹಿಸಿದ್ದೆ. ಉದ್ಯಮದ ಪ್ರತಿನಿಧಿಗಳನ್ನು ಕರೆಯಲಾಗಿತ್ತು. … Read more

ಕಾವೇರಿ ನೀರು ದರ ಹೆಚ್ಚಳಕ್ಕೆ ನಿರ್ಧಾರ

ಬೆಂಗಳೂರು: ನಗರದ ಜನತೆಗೆ ಹಾಲು, ಮೊಸರು, ವಿದ್ಯುತ್ ಬಿಲ್ ಏರಿಕೆಯ ನಂತ್ರ ಈಗ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಅದೇ ಕಾವೇರಿ ನೀರು ಸರಬರಾಜಿನ ದರ ಹೆಚ್ಚಳಕ್ಕೆ ಬಿ ಡಬ್ಲ್ಯೂ ಎಸ್ ಎಸ್ ಬಿ ನಿರ್ಧರಿಸಿದೆ. ಈ ಕುರಿತಂತೆ ಬಿ ಡಬ್ಲ್ಯೂ ಎಸ್ ಎಸ್ ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಮಾಹಿತಿ ಹಂಚಿಕೊಂಡಿದ್ದು, ನಗರದಲ್ಲಿ ನೀರಿನ ದರವನ್ನು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಗೃಹ ಬಳಕೆಯ ನೀರು ಸರಬರಾಜಿನ ದರವನ್ನು 1 ಪೈಸೆ ಹೆಚ್ಚಳ ಮಾಡಲು ನಿರ್ಧರಿಸಿರುವುದಾಗಿ … Read more

ದರ್ಶನ್ ಗೆ ಕೋರ್ಟ್ ಖಡಕ್ ವಾರ್ನಿಂಗ್

ಬೆಂಗಳೂರು: ಡಿ ಬಾಸ್ ದರ್ಶನ್ ಗೆ ಕೋರ್ಟ್ ಖಡಕ್ ವಾರ್ನಿಂಗ್ ಕೊಟ್ಟಿದ್ದು, ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ.20 ಕ್ಕೆ ಕೋರ್ಟ್ ವಿಚಾರಣೆ ಮುಂದೂಡಿಕೆ ಮಾಡಿದೆ. ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆದಿದೆ. ಆದರೆ ಮಂಗಳವಾರ ಕೋರ್ಟ್ ಗೆ ನಟ ದರ್ಶನ್ ಗೈರಾಗಿದ್ದರು. ಬೆನ್ನು ನೋವಿನ ಕಾರಣ ಹೇಳಿ ವಿಚಾರಣೆಯಿಂದ ವಿನಾಯಿತಿ ಕೋರಿ ಕೋರ್ಟ್ ಗೆ ನಟ ದರ್ಶನ್ ಪರ … Read more