ಹೈವೆಯಲ್ಲಿ ದರೋಡೆ ಗ್ಯಾಂಗ್ ಬಗ್ಗೆ ಎಚ್ಚರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದರೋಡೆ ಗ್ಯಾಂಗ್, ಕಳ್ಳತನದ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅದರಂತೆ ಇಲ್ಲೊಂದು ಖತರ್ನಾಕ್ ಡೆಡ್ಲಿ ದರೋಡೆ ಗ್ಯಾಂಗ್, ಬೆಂಗಳೂರು ಚೆನ್ನ ಎಕ್ಸ್ಪ್ರೆಸ್ ನಲ್ಲಿ ಫುಲ್ ಆಯಕ್ಟೀವ್ ಆಗಿದ್ದಾರೆ. ವೇಗವಾಗಿ ಬರೋ ಕಾರ್ ಗಳನ್ನೇ ಈ ಖದೀಮರ ಗ್ಯಾಂಗ್ ಟಾರ್ಗೆಟ್ ಮಾಡುತ್ತೆ. ಹೈವೇ ಮಧ್ಯ ಕಲ್ಲಿಟ್ಟು ಆಕ್ಸಿಡೆಂಟ್ ಮಾಡಿಸಿ ಗ್ಯಾಂಗ್ ಲೂಟಿ ಮಾಡುತ್ತಿದೆ. ಅಪಘಾತ ಆಗ್ತಿದ್ದಂತೆ ಡೆಡ್ಲಿ ಅಟ್ಯಾಕ್ ಮಾಡಿ ಲೂಟಿ ಮಾಡುತ್ತಾರೆ. ಸದ್ಯ ಹೊಸಕೋಟೆಯಿಂದ ಚಿತ್ತೂರಿನವರೆಗೆ ಈ ಹೈವೇ ಸಂಪರ್ಕ ಇದ್ದು, ಕಳೆದ … Read more

ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಅಪಮಾನ

ಮೈಸೂರು: ವ್ಯಕ್ತಿಯೋರ್ವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಹತ್ತಿ ಕುಳಿತಿದ್ದೂ ಅಲ್ಲದೇ, ಮೂರ್ತಿ ಬಾಯಿಗೆ ಸಿಗರೇಟ್ ಇಟ್ಟು ಹುಚ್ಚಾಟ ಮೆರೆದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಕೆ.ಆರ್.ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಮೇಲೆ ಹತ್ತಿ ಕುಳಿತಿದ್ದ ವ್ಯಕ್ತಿ ಬಳಿಕ ಕೆಳಗಿಳಿದು ಬಂದಿದ್ದಾನೆ.ಮತ್ತೆ ಪ್ರತಿಮೆ ಬಳಿ ಹೋಗಿ ಪ್ರತಿಮೆಯ ಬಾಯಿಗೆ ಸಿಗರೇಟ್ ಇಟ್ಟಿದ್ದಾನೆ. ವ್ಯಕ್ತಿಯ ಹುಚ್ಚಾಟಕ್ಕೆ ಸಾರ್ವಜನಿಕರು ಗಾಬರಿಯಾಗಿದ್ದಾರೆ. ಸ್ಥಳದಲ್ಲಿ ಜನರು ಸೇರುತ್ತಿದಂತೆ ವ್ಯಕ್ತಿ ಪರಾರಿಯಾಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯ ವಿಡಿಯೋ ವೈರಲ್ ಆಗಿದೆ. … Read more

ಮಳೆಯಿಂದ ಸಾವು- ಕುಟುಂಬಗಳಿಗೆ 5 ಲಕ್ಷ ಪರಿಹಾರ

ಮಂಗಳೂರು: ಕಳೆದ ವಾರ ಕರಾವಳಿ ಪ್ರದೇಶದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವಿಗೀಡಾದವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಘೋಷಿಸಿದ್ದಾರೆ. ಮಳೆ ಪೀಡಿತ ಸ್ಥಳಗಳಿಗೆ ಬೇಟಿ ನೀಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಿರಂತರ ಭಾರಿ ಮಳೆಯ ನಡುವೆ ಭೂಕುಸಿತ, ಮನೆ ಕುಸಿತ ಮತ್ತು ಇತರ ಅವಘಡಗಳಿಂದಾಗಿ ಏಳು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು. ಕಳೆದ ವಾರ ಕರಾವಳಿ ಜಿಲ್ಲೆಯಲ್ಲಿ ಮಳೆಯಿಂದಾಗಿ ಅನಾಹುತ ಸಂಭವಿಸಿದ್ದು, … Read more

ತಾಯಿಯನ್ನೇ ಕೊಂದ ಪಾಪಿ ಮಗ

ಹುಬ್ಬಳ್ಳಿ: ಅಣ್ಣ ತಮ್ಮನ ಜಗಳ ಬಿಡಿಸಲು ಬಂದಿದ್ದ ತಾಯಿಯನ್ನು ಪಾಪಿ ಮಗನೊಬ್ಬ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ತೊರವಿಹಕ್ಕಲ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪದ್ಮ (46) ಎಂದು ತಿಳಿದುಬಂದಿದೆ. ಮಂಜುನಾಥ್ ಮತ್ತು ಲಕ್ಷ್ಮಣ ಎನ್ನುವ ಸಹೋದರರು ಕಟಿಂಗ್ ಶಾಪ್ ಇಟ್ಕೊಂಡು ಜೀವನ ನಡೆಸುತ್ತಿದ್ದರು. ಕಟಿಂಗ್ ಮಾಡಿದ ಹಣ ಹಂಚಿಕೆ ವಿಚಾರದಲ್ಲಿ ಇಬ್ಬರ ಸಹೋದರರ ನಡುವೆ ಜಗಳ ನಡೆದಿದೆ. ಸಹೋದರರಾದ ಮಂಜುನಾಥ್ ಮತ್ತು ಲಕ್ಷ್ಮಣ ನಡುವೆ ಹಣದ ವಿಚಾರವಾಗಿ ಗಲಾಟೆ ನಡೆದಿದೆ. ಜಗಳ ಬಿಡಿಸಲು ಬಂದಿದ್ದ … Read more

ಗುಡ್ಡ ಕುಸಿತ- ಅಜ್ಜಿ, ಮೊಮ್ಮಕ್ಕಳು ಬಲಿ

ಮಂಗಳೂರು: ರಾಜ್ಯದಲ್ಲಿ ಮಹಾಮಳೆಗೆ ಬಾರಿ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಗುಡ್ಡ ಕುಸಿದು ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿದ್ದಾರೆ. ಈ ಒಂದು ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಮಂಗಳೂರಿನಲ್ಲಿ ಮತ್ತೊಂದು ದುರಂತ ನಡೆದಿದ್ದು, ಮೀನುಗಾರಿಕೆಗೆ ಸಮುದ್ರಕ್ಕೆ ಇಳಿದಿದ್ದ ಇಬ್ಬರು ಮೀನುಗಾರರು ನೀರು ಪಾಲಾಗಿರುವ ಘಟನೆ ತೋಟಬೇಂಗ್ರೇ ಅಳಿವೇ ಬಾಗಿಲುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ., ಕಡಲಿನ ಅಲೆಯ ಅಬ್ಬರಕ್ಕೆ ನಾಡ ದೋಣಿ ಮುಗುಚಿದೆ. ಈ ವೇಳೆ ನಾಡ ದೋಣಿಯ ಅವಶೇಷಗಳು ಕಡಲ ತೀರದಲ್ಲಿ ಬಂದು … Read more

ಅಪರಿಚಿತ ಶವ ಪತ್ತೆ

ತುಮಕೂರು: ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿ ಬಿಳಿದೇವಾಲಯದಿಂದ ಆಲಪ್ಪನಗುಡ್ಡೆ ಕಡೆಗೆ ಹೋಗುವ ರಸ್ತೆಯ ಎಡಭಾಗದಲ್ಲಿ ರೇಷ್ಮೆ ರಂ ಕಾಂಪೌಂಡ್ ಬಳಿ ಮೇ 8ರಂದು ಸುಮಾರು 65 ವರ್ಷದ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ವಾರಸುದಾರರು ಯಾರೆಂದು ತಿಳಿದು ಬಂದಿರುವುದಿಲ್ಲ. ಮೃತನು 5.6 ಅಡಿ ಎತ್ತರವಿದ್ದು, ಮೃತ ದೇಹವು ಕೊಳೆತು ಹುಳು ಬಿದ್ದಿರುತ್ತದೆ. ಮೃತನ ಮೈಮೇಲೆ ಬಿಳಿ ಬಣ್ಣದ ಹೂವಿನ ಚಿತ್ರವಿರುವ ಮಾಸಲಾದ ರೆಡಿಮೇಡ್ ತುಂಬು ತೋಳಿನ ಅಂಗಿ ಹಾಗೂ ಕಪ್ಪು ಬಣ್ಣದ ಪ್ಯಾಂಟು ಇರುತ್ತದೆ. ಮೃತನ ವಾರಸುದಾರರು … Read more

ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

ಕುಣಿಗಲ್: ಜೀವನದಲ್ಲಿ ಜಿಗುಪ್ಸೆಯಿಂದ ವ್ಯಕ್ತಿಯೊಬ್ಬ ಸೇತುವೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತನನ್ನು ಬೋರಲಿಂಗನ ಪಾಳ್ಯದ ತಿಮ್ಮಪ್ಪ (68) ಎಂದು ಗುರುತಿಸಲಾಗಿದೆ, ಈತ ಇದೇ ಗ್ರಾಮದವನಾಗಿದ್ದು, ಜೀವನದಲ್ಲಿ ಜಿಗುಪ್ಸೆಯಿಂದಾಗಿ ಕಳೆದ ಎರಡು ದಶಕದಿಂದ ಮನೆಬಿಟ್ಟು ಅಲೆಮಾರಿಯಾಗಿದ್ದು, ಶುಕ್ರವಾರ ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರಿಗೆ ನಾಗಿನಿ ನದಿಗೆ ನಿರ್ಮಿಸಲಾಗಿದ್ದ ಸೇತುವೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ, ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.

ಅಪಘಾತದಲ್ಲಿ ಕೇಬಲ್ ಆಪರೇಟರ್ಸಾವು

ತುರುವೇಕೆರೆ: ದ್ವಿಚಕ್ರ ವಾಹನಕ್ಕೆ ಬುಲೆರೋ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಕೇಬಲ್ ಆಪರೇಟರ್ ಓರ್ವರು ಸಾವಿಗೀಡಾಗಿರುವ ಘಟನೆ ನಡೆದಿದೆ. ಕೊಡಗೀಹಳ್ಳಿ ಗೇಟ್ ಬಳಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಹುಲಿಕಲ್ ನ ಕೇಬಲ್ ಆಪರೇಟರ್ ಕರುಣಾನಿಧಿ (50) ಅವರಿಗೆ ಬುಲೆರೋ ಜೀಪ್ ಡಿಕ್ಕಿ ಹೊಡೆದಿದೆ, ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಕರುಣಾನಿಧಿಯವರಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಆದಿಚುಂಚನಗಿರಿ ಆಸ್ಪತ್ರೆಗೆ ಮಂಗಳವಾರವೇ ದಾಖಲಿಸಲಾಯಿತು. ಚಿಕಿತ್ಸೆ ಲಕಾರಿಯಾಗದೆ ಕರುಣಾನಿಧಿ ಬುಧವಾರ ಕೊನೆಯುಸಿರೆಳೆದರು. ಮರಣೋತ್ತರ ಪರೀಕ್ಷೆಯ … Read more

ಫೋಕ್ಸೋ ಆರೋಪಿಗೆ ಶಿಕ್ಷೆ

ತುಮಕೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಬ್ಬನಿಗೆ ಜೀವಾವಧಿ ಹಾಗೂ ಮತ್ತೊಬ್ಬನಿಗೆ 20 ವರ್ಷ ಶಿಕ್ಷೆ ವಿಧಿಸಿ ಫೋಕ್ಸೋ ನ್ಯಾಯಾಲಯ ಆದೇಶಿಸಿದೆ. ತಿಪ್ಪೇಶ್ ಕುಮಾರ್ಗೆ ಜೀವಾವಧಿ ಶಿಕ್ಷೆ, 2 ಲಕ್ಷ ದಂಡ ವಿಧಿಸಲಾಗಿದೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ 2022 ಮಾರ್ಚ್ 15ರಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಮತ್ತೊಂದು ಪ್ರಕರಣದಲ್ಲಿ ಆಟೊ ಚಾಲಕ ಶಾಂತಿನಗರದ ಸೈಯದ್ ಶಫಿಕ್ (40) ಎಂಬಾತನಿಗೆ 20 ವರ್ಷ ಶಿಕ್ಷೆ, 1 ಲಕ್ಷ … Read more

ಮುಸ್ಲಿಂ ವ್ಯಕ್ತಿಯ ಹತ್ಯೆ- ನಾಲ್ವರ ಬಂಧನ: ಪರಂ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ 32 ವರ್ಷದ ಮುಸ್ಲಿಂ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಅವರಿಂದ ಸಂಗ್ರಹಿಸಿದ ಮಾಹಿತಿಯ ಆಧರದ ಮೇಲೆ ಮುಲಾಜಿಲ್ಲದೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಗುರುವಾರ ಹೇಳಿದ್ದಾರೆ. ರಾಜ್ಯ ಸರ್ಕಾರ ಈ ಹತ್ಯೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ ಮತ್ತು ಅಂತಹ ಕೋಮು ಚಟುವಟಿಕೆಗಳು ಹಾಗೂ ಕೊಲೆಗಳನ್ನು ನಿಗ್ರಹಿಸುವವರೆಗೆ ತಾವು ವಿಶ್ರಾಂತಿ ಪಡೆಯುವುದಿಲ್ಲ ಎಂದು ಗೃಹ ಸಚಿವರು ತಿಳಿಸಿದ್ದಾರೆ. ತಕ್ಷಣ ಜಾರಿಗೆ ಬರುವಂತೆ ಕೋಮು ವಿರೋಧಿ … Read more