ಮೂರು ಹುಂಡಿಯಲ್ಲಿದ್ದ ನಗದು ಕಳವು

ಕುಣಿಗಲ್: ತಾಲೂಕಿನ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಕೊತ್ತಗೆರೆ ಹೋಬಳಿಯ ಗುಡ್ಡದ ರಂಗನಾಥ ಸ್ವಾಮಿ ದೇವಾಲಯದ ಮೂರು ಹುಂಡಿಗಳನ್ನು ಹೊಡೆದು ಅದರಲ್ಲಿನ ನಗದು ಕಳವು ಮಾಡುವ ಜೊತೆಯಲ್ಲಿ ಸಿಸಿಟಿವಿ ಡಿವಿಆರ್ ದುಷ್ಕರ್ಮಿಗಳು ಕಳವು ಮಾಡಿದ್ದಾರೆ. ದೇವಾಲಯವು ಮುಜರಾಯಿ ಇಲಾಖೆ ವಶದಲ್ಲಿರುವ ಕಾರಣ ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ಪೊಲೀಸರಿಗೆ ದೂರು ನೀಡಿದ್ದಾರೆ, ಸದರಿ ದೇವಾಲಯದಲ್ಲಿ ಕಳೆದ ಕೆಲ ತಿಂಗಳ ಹಿಂದೆ ಅಷ್ಟೇ ಹುಂಡಿಗಳು ಮಾಡಲಾಗಿತ್ತು, ಪುನಃ ಹುಂಡಿ ಕಳವು ಆಗಿರುವುದು ಆಡಳಿತ ವ್ಯವಸ್ಥೆ ಲೋಪಕ್ಕೆ ಹಿಡಿದ ಕೈಕನ್ನಡಿಯಾಗಿದೆ ಎಂದು ಭಕ್ತಾದಿಗಳು … Read more

ಕಾಡು ಆನೆ ತುಳಿದು ಮಹಿಳೆ ಸಾವು

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಮನುಷ್ಯ-ಆನೆ ಸಂಘರ್ಷ ಮುಂದುವರಿದಿದೆ, ಶುಕ್ರವಾರ ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದ ಬಳಿ ಕಾಡು ಆನೆ ತುಳಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಚಂದ್ರಮ್ಮ (45) ಎಂದು ಗುರುತಿಸಲಾಗಿದೆ. ಹತ್ತಿರದ ಕಾಫಿ ತೋಟಕ್ಕೆ ಹೋಗುತ್ತಿದ್ದಾಗ ಆನೆಯ ದಾಳಿಗೆ ಒಳಗಾಗಿದ್ದಾರೆ. ಘಟನೆಯ ನಂತರ, ಆಕ್ರೋಶಗೊಂಡ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಮೃತರ ಶವ ಸ್ಥಳಾಂತರಿಸಲು ನಿರಾಕರಿಸಿದರು. ಜಿಲ್ಲಾ ಸಚಿವ ಕೆ ಎನ್ ರಾಜಣ್ಣ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಪರಿಹಾರ … Read more

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಎಚ್.ಡಿ.ಕೋಟೆ: ಪಟ್ಟಣದ ಹೆಬ್ಬಾಳ ಜಲಾಶಯದಲ್ಲಿ ನೀರಿಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಚ್.ಡಿ. ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದ ನಿವಾಸಿ ಮಹದೇವಸ್ವಾಮಿ (55), ಪತ್ನಿ ಮಂಜುಳಾ (42), ಪುತ್ರಿ ಹರ್ಷಿತಾ ಮೃತಪಟ್ಟವರು. ಶನಿವಾರ ಮುಂಜಾನೆ ಜಲಾಶಯಕ್ಕೆ ಆಗಮಿಸಿದ ಮೂವರೂ ಡೆತ್ ನೋಟ್ ಬರೆದು, ದಡದಲ್ಲಿ ಬೈಕ್ ನಿಲ್ಲಿಸಿ, ನೀರಿಗೆ ಹಾರಿದ್ದಾರೆ. ಗ್ರಾಮಸ್ಥರು ಆ ಮಾರ್ಗವಾಗಿ ಸಂಚರಿಸುವಾಗ ಬೈಕ್ ನಿಲ್ಲಿಸಿರುವುದನ್ನು ಗಮನಿಸಿ, ಚಪ್ಪಲಿಗಳೂ ದಡದಲ್ಲಿ ಬಿಟ್ಟಿರುವುದನ್ನು ನೋಡಿ ಪರಿಶೀಲಿಸಿದಾಗ ಬೈಕ್ ನಲ್ಲಿ ಡೆತ್ ನೋಟ್ ಪತ್ತೆಯಾಗಿದೆ. … Read more

ಅಪ್ರಾಪ್ತೆ ಮೇಲೆ ಅತ್ಯಾಚಾರ- ಸ್ವಾಮೀಜಿ ಬಂಧನ

ಬೆಳಗಾವಿ: ಜಿಲ್ಲೆಯ ರಾಯಭಾಗ ತಾಲೂಕಿನ ಮೇಕಳಿ ಗ್ರಾಮದ ಮಠದ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದು, ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಸದ್ಯ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ ಜೈಲಿಗಟ್ಟಿದ್ದಾರೆ. ಮೇ 13ರಂದು ಮನೆಗೆ ಬಿಡುವುದಾಗಿ ಬಾಲಕಿಯನ್ನು ಸ್ವಾಮೀಜಿ … Read more

ಇನ್ ಸ್ಟಾಗ್ರಾಂ ಲಿಂಕ್ ನಂಬಿ 51 ಲಕ್ಷ ಕಳೆದುಕೊಂಡ ವ್ಯಾಪಾರಿ

ದಾವಣಗೆರೆ: ಇನ್ ಸ್ಟ್ರಾಗ್ರಾಂನಲ್ಲಿ ಬಂದ ಲಿಂಕ್ ನಂಬಿ ಹಣ ಹೂಡಿಕೆ ಮಾಡಿದ್ದ ವ್ಯಾಪಾರಿಯೊಬ್ಬರು 51 ಲಕ್ಷ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಜಿಲ್ಲೆಯ ಹೊನ್ನಾಳಿ ತಾಲೂಕಿನ ಹೊಸಹಳ್ಳಿಯ ಮಧುಕುಮಾರ್ ಎಂಬುವರಿಗೆ ಹಣ ಹೂಡಿಕೆ ಮೇಲೆ ಶೇ.200ರಷ್ಟು ಲಾಭ ಸಿಗಲಿದೆ ಎಂದು ಇನ್ ಸ್ಟ್ರಾಗ್ರಾಂನಲ್ಲಿ ಲಿಂಕ್ ಬಂದಿತ್ತು. ಇದನ್ನೇ ನಂಬಿದ ಮಧುಕುಮಾರ್ ತಮ್ಮ ಹೆಸರು, ಪ್ಯಾನ್ ಕಾರ್ಡ್, ಫೋನ್ ನಂಬರ್ ನೀಡಿ ಹೊಸ ಐಡಿ ತೆರೆದಿದ್ದಾರೆ. ಕಳೆದ 2024ರ ಸೆಪ್ಟಂಬರ್ 22ರಿಂದ 2025 ಏಪ್ರಿಲ್ 26ರವರೆಗೆ ಒಟ್ಟು 51,24,464 … Read more

ಆಸ್ತಿ ತೆರಿಗೆ ಬಾಕಿ- ಮೂರು ದಿನದಲ್ಲಿ ಪಾವತಿಸಲು ಸೂಚನೆ ಶಿವಗಂಗಾ ಚಿತ್ರಮಂದಿರ, ಕಲ್ಯಾಣ ಮಂಟಪ ಜಪ್ತಿ

ಕೊರಟಗೆರೆ: 2018 ರಿಂದ 2025ರ ವರೆಗೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಶಿವಗಂಗಾ ಚಿತ್ರಮಂದಿರದ ಮಾಲೀಕನಿಗೆ ಪಟ್ಟಣ ಪಂಚಾಯಿತಿ ಅಧಿಕಾರಿ ವರ್ಗ ಶುಕ್ರವಾರ ಬಿಗ್ ಶಾಕ್ ನೀಡಿದ್ದು ಚಿತ್ರಮಂದಿರ, ಕಲ್ಯಾಣಮಂಟಪ, ಹೋಟೆಲ್ ಜಪ್ತಿ ಮಾಡಿ 3 ದಿನದ ಒಳಗೆ ಕಂದಾಯ ಪಾವತಿ ಮಾಡುವಂತೆ ಅಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಕೊರಟಗೆರೆ ಪಟ್ಟಣ ಪಂಚಾಯಿತಿಯ ವಾರ್ಡ್ ನಂ.1ರ ಗಂಗಾಧರಯ್ಯ ಬಿನ್ ಬಸೇಟಪ್ಪ ಖಾತೆ ನಂ.37/37ರ ಬಾಕಿ ಇರುವ ಆಸ್ತಿ ತೆರಿಗೆಯನ್ನು 1964ರ ಕಲಂ ಪುರಸಭಾ ಕಾಯ್ದೆ ಮತ್ತು ಸ್ವಯಂ ಘೋಷಣೆ … Read more

ಫೋಕ್ಸೋ ಪ್ರಕರಣ- ಆರೋಪಿಗೆ ಶಿಕ್ಷೆ

ತುಮಕೂರು: ನೊಂದ ಬಾಲಕಿ ತಾಯಿ ಠಾಣೆಗೆ ಹಾಜರಾಗಿ ಮೇ 29, 2021 ರಂದು ನೀಡಿದ ದೂರಿನ ಮೇರೆಗೆ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆಕ್ಟ್ ಪ್ರಕರಣವನ್ನು ಪಿಎಸ್ ಐ ಮಂಗಳಮ್ಮ ದಾಖಲಿಸಿಕೊಂಡಿದ್ದರು. ಪ್ರಕರಣದ ತನಿಖೆ ಕೈಗೊಂಡು ಆರೋಪಿಯಾದ ಸೈಪುಲ್ಲಾ ಅವರನ್ನು ದಸ್ತಗಿರಿ ಮಾಡಿ ತನಿಖೆ ಪೂರ್ಣಗೊಳಿಸಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿ ನ್ಯಾಯಾಲಕ್ಕೆ ಸಲ್ಲಿಸಲಾಗಿತ್ತು. ಸದರಿ ಪ್ರಕರಣವನ್ನು ಸ್ಪೆಷಲ್ ಸಿ.ಸಿ.ನಂ:206/2021 ರಲ್ಲಿ ತುಮಕೂರು ಎಫ್ ಟಿ ಎಸ್ ಸಿ-1 ನ್ಯಾಯಾಲಯದ ನ್ಯಾಯಾಧೀಶರು ವಿಚಾರಣೆ ನಡೆಸಿ ಆರೋಪಿಯ … Read more

ಗಾಂಜಾ ಮಾರಾಟ- ನಾಲ್ವರ ಬಂಧನ

ಬೆಂಗಳೂರು: ಮೆಟ್ರೋ ಸ್ಟೇಷನ್ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವತಿ ಸೇರಿ ನಾಲ್ವರು ಆರೋಪಿಗಳನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.ಒಡಿಶಾ ಮೂಲದ ಸಂಪತ್ ಪ್ರಧಾನ್ (23), ತಪಾಶ್ ಪ್ರಧಾನ್ (22), ಜಗನ್ ಪತಂಜಿ (24) ಹಾಗೂ ದೀಪಾಂಜಲಿ (22) ಬಂಧಿತ ಆರೋಪಿಗಳು. ರಾಜಾಜಿನಗರ ಮೆಟ್ರೋ ಸ್ಟೇಷನ್ ಬಳಿ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರಿಂದ 30 ಲಕ್ಷ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ.ಆರೋಪಿಗಳ ವಿರುದ್ಧ ಆಕ್ಟ್ … Read more

ಗ್ಯಾಂಗ್ ರೇಪ್ ಆರೋಪಿಗಳಿಂದ ರೋಡ್ ಶೋ

ಹಾವೇರಿ: ಗ್ಯಾಂಗ್ ರೇಪ್ ಪ್ರಕರಣದಲ್ಲಿ ಬೇಲ್ ಸಿಕ್ಕ ಕೂಡಲೇ ಪ್ರಕರಣದ ಆರೋಪಿಗಳಿಂದ ರೋಡ್ ಶೋ ನಡೆಸಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ರೋಡ್ ಶೋ ನಡೆದಿದೆ. ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ಕಿ ಆಲೂರು ಪಟ್ಟಣದಲ್ಲಿ ಆರೋಪಿಗಳಿಂದ ಇದೀಗ ರೋಡ್ ಶೋ ನಡೆಸಲಾಗಿದೆ. ಹಾವೇರಿ ಸಬ್ ಜೈಲಿನಿಂದ ಅಕ್ಕಿ ಆಲೂರಿನವರೆಗೂ ಇದೀಗ ಆರೋಪಿಗಳು ರೋಡ್ ಶೋ ನಡೆಸಿದ್ದಾರೆ. 5 ಕಾರುಗಳಲ್ಲಿ 20 ಕ್ಕೂ ಹೆಚ್ಚು ಹಿಂಬಾಲಕರ ಜೊತೆಗೆ ಮೆರವಣಿಗೆ ನಡೆಸಿದ್ದಾರೆ. ಕಳೆದ 2024 ಜನವರಿ 8ರಂದು ಹಾವೇರಿ … Read more

ಮೈಸೂರು ಸ್ಯಾಂಡಲ್ ಸೋಪ್ ಗೆ ತಮ್ಮನ್ನ ರಾಯಭಾರಿ

ಬೆಂಗಳೂರು: ಸರ್ಕಾರದ ಒಡೆತನದ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಉತ್ಪನ್ನಗಳಿಗೆ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಲಾಗಿದೆ. ತಮನ್ನಾ ಭಾಟಿಯಾ ಅವರನ್ನು 02 ವರ್ಷ ಮತ್ತು ಎರಡು ದಿನಗಳ ಅವಧಿಗೆ 6.20 ಕೋಟಿ ರೂ.ವೆಚ್ಚದಲ್ಲಿ ನೇಮಕ ಮಾಡಿಕೊಳ್ಳಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ. ಮೈಸೂರು ಸ್ಯಾಂಡಲ್ ಸೋಪ್ ಅನ್ನು 1916 … Read more