ಸಿಡಿಲು ಬಡಿದು ರೈತ ಸಾವು
ಹಾವೇರಿ: ಸಿಡಿಲು ಬಡಿದು ಎತ್ತು ಮೇಯಿಸಲು ಹೋಗಿದ್ದ ರೈತನೋರ್ವ ಮೃತಪಟ್ಟಿರುವ ಘಟನೆ ಹಿರೇಕೆರೂರ ತಾಲೂಕಿನ ಡಮ್ಮಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಡಮ್ಮಳ್ಳಿ ಗ್ರಾಮದ ನಾಗಪ್ಪ ಕಣಸೋಗಿ ಮೃತಪಟ್ಟಿರುವ ರೈತ ಎಂದು ಗುರುತಿಸಲಾಗಿದೆ. ಎತ್ತುಗಳನ್ನ ಮೇಯಿಸಲು ಹೋದಾಗ ಸಿಡಿಲು ಬಡಿದು ರೈತ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹಿರೇಕೆರೂರು ಶಾಸಕ ಯು.ಬಿ. ಬಣಕಾರ, ತಹಶೀಲ್ದಾರ್ ಪ್ರಭಾಕರ್, ಹಿರೇಕೆರೂರು ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದರು.






