ಗುಜರಾತ್ನಲ್ಲಿ ಮಳೆ, ಗಾಳಿಗೆ 14 ಮಂದಿ ಸಾವು

ಗುಜರಾತ್: ಅಹಮದಬಾದ್ ಹಲವು ಭಾಗಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ರಾಜ್ಯದಾದ್ಯಂತ 50-60 ಕಿಮೀ ವೇಗದಲ್ಲಿ ಗುಡುಗು ಸಹಿತ ಬೀರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ 253 ತಾಲೂಕುಗಳ ಪೈಕಿ 168 ತಾಲೂಕುಗಳಲ್ಲಿ ಅಕಾಲಿಕ ಮಳೆಯಾಗಿದೆ, ಖೇಡಾ, ಗಾಂಧಿನಗರ, ಮೆಹ್ವಾನಾ ಮತ್ತು ವಡೋದರಾ ಜಿಲ್ಲೆಗಳಲ್ಲಿ 25 ರಿಂದ 40 … Read more

ಶಾರ್ಟ್ ಸರ್ಕ್ಯೂಟ್ ನಿಂದ ಗೃಹ ಬಳಕೆ ವಸ್ತುಗಳು ಭಸ್ಮ

ಹುಳಿಯಾರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿನ ಗೃಹ ಬಳಕೆ ವಸ್ತುಗಳು ಸುಟ್ಟು ಭಸ್ಮವಾಗಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಹುಳಿಯಾರಿನಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಇಲ್ಲಿನ ಉರ್ದು ಸ್ಕೂಲ್ ರಸ್ತೆಯಲ್ಲಿನ ರಹೀಂ ಉನ್ನಿಸಾ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ, ಮನೆಯ ಮೊದಲ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಕೆಲ ವಸ್ತುಗಳು ಹೊತ್ತಿ ಹೊಗೆ ಬರಲಾರಂಭಿಸಿದೆ, ದಾರಿಹೋಕರು ಮನೆ ಮೇಲ್ಭಾಗದಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿ ಮನೆಯಲ್ಲಿದ್ದವರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಎಲ್ಲರೂ ಮೇಲೆ ಹೋಗಿ ನೋಡುವಷ್ಟರಲ್ಲಿ … Read more

ಪತ್ನಿ ಕೊಲೆ ಮಾಡಿದ ಪತಿ

ಬೆಂಗಳೂರು: ಪತಿ-ಪತ್ನಿಯ ನಡುವೆ ಮೊಬೈಲ್ ಸ್ಪೀಕರ್ ಆನ್ ಮಾಡುವ ವಿಚಾರಕ್ಕೆ ಗಲಾಟೆ ನಡೆದಿದೆ, ಪತ್ನಿ ತನ್ನ ಪತಿಗೆ ಮೊಬೈಲ್ ಸ್ಪೀಕರ್ ಆನ್ ಮಾಡಲು ಹೇಳಿದ್ದಾಳೆ, ಇದೇ ವಿಚಾರಕ್ಕೆ ಗಲಾಟೆ ನಡೆದು ಪತ್ನಿಯ ಕತ್ತು ಹಿಸುಕಿ ಪತಿ ಕೊಲೆ ಮಾಡಿರುವ ಘಟನೆ ನಡೆದಿದೆ. ಪತ್ನಿಯ ಕತ್ತು ಹಿಸುಕಿ ಕೊಂದ ಆರೋಪಿಯನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪತ್ನಿ ನಮಿತಾ ಸಾಹು (43) ಕೊಲೆಯದ ದುರ್ದೈವಿ. ಲೋಕೇಶ್ ಕುಮಾರ್ ಗೆಹ್ಲೋಟ್ ಎಂಬಾತ ಬಂಧಿತ ಕೊಲೆ ಆರೋಪಿ ಎಂದು ತಿಳಿದುಬಂದಿದೆ. … Read more

ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ಗೆ ನಿಷೇಧ

ಬೆಂಗಳೂರು: ಕನ್ನಡಿಗರ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಬೆಂಗಳೂರಿನ ಫಿಲಂ ಚೇಂಬರ್ ನಲ್ಲಿ ಮಹತ್ವದ ಸಭೆ ನಡೆಯಿತು. ಈ ಒಂದು ಸಭೆಯಲ್ಲಿ ಇನ್ಮುಂದೆ ಸೋನು ನಿಗಮ್ ಅವರಿಂದ ಯಾವುದೇ ಕನ್ನಡ ಹಾಡು ಹಾಡಿಸದಿರುವಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಹಾಗಾಗಿ ಸೋನು ನಿಗಮ್ ಗೆ ಬಹುತೇಕ ಕನ್ನಡ ಚಿತ್ರರಂಗದಿಂದ ನಿಷೇಧಿಸಲಾಗಿದೆ. ಈ ಕುರಿತು ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಸಭೆಯ ಬಳಿಕ ಮಾತನಾಡಿ, ಯಾವುದೇ ಚಟುವಟಿಕೆಗಳಲ್ಲಿ ಸೋನು ಜೊತೆ ಭಾಗಿಯಾಗಬಾರದು. ಸೋನು ನಿಗಮ್ ರಿಂದ ಕನ್ನಡ … Read more

ಕಾನೂನಿಗೆ ತಲೆಬಾಗುತ್ತೇನೆ: ಸೋನು ನಿಗಮ್

ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಕನ್ನಡ ಚಿತ್ರರಂಗದಿಂದ ಕಠಿಣ ನಿರ್ಣಯ ಕೈಗೊಂಡ ಕೆಲವೇ ಕ್ಷಣಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ನಾನು ಕರ್ನಾಟಕದ ಕಾನೂನು ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ಮೇಲೆ ಪೂರ್ಣ ಗೌರವದಿಂದ ಕಾನೂನಿಗೆ ತಲೆ ಬಾಗುತ್ತೇನೆ ಎಂದಿದ್ದಾರೆ. ಪ್ರಸಕ್ತ ವಿದ್ಯಮಾನಗಳನ್ನು ಗಮನಿಸಿದಂತಿರುವ ಸೋನು ನಿಗಮ್, ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ರವಾನಿಸಿದ್ದಾರೆ. ಈ ವಿಷಯವನ್ನು ಕರ್ನಾಟಕದ ಸೂಕ್ಷ್ಮವಂತರಿಗೆ ಬಿಡುತ್ತೇನೆ. ಇರದಲ್ಲಿ ತಪ್ಪು ಯಾರದ್ದು ಎಂಬುದನ್ನು ಅವರೇ ತೀರ್ಮಾನಿಸಲಿ. ಕಾನೂನು ಹಾಗೂ ಪೊಲೀಸರ … Read more

ಸುಹಾಸ್ ಕೊಲೆ ಶಾಂತಿ ಭಗ ಮಾಡುವಂತಿದೆ

ಬೆಂಗಳೂರು: ಸುಹಾಸ್ ಶೆಟ್ಟಿ ಕೊಲೆಯಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ, ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡು ಬಂದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಗ ಮಾಡುವಂತಿದೆ. ಹಾಗಾಗಿ ಈ ಕೃತ್ಯ ಎಸಗಿದ ಕ್ರಿಮಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಜತೆಗಿನ ಸಭೆ ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್ ಸರಣಿ ಹತ್ಯೆಗಳಾಗುತ್ತಿದ್ದರೆ ಸಮಾಜ ಎಲ್ಲಿಗೆ ಹೋಗಬೇಕು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು. … Read more

ಸುಹಾಶ್ ಶೆಟ್ಟಿ ಕೊಲೆ- ಕುಟುಂಬಸ್ಥರ ಆಕ್ರಂದನ

ಮಂಗಳೂರು: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಕಾರಿಗೆ ಅಪಘಾತ ಮಾಡಿ ಬಳಿಕ ಮಾರಕಾಸ್ತ್ರಗಳಿಂದ ಹತೈಗೈಯ್ಯಲಾಗಿತ್ತು. ಇನ್ನೂ ಸಾವನ್ನಪ್ಪಿದ ಮಗನ ನೆನೆದು ಸುಹಾಶ್ ಶೆಟ್ಟಿ ತಾಯಿ ಕಣ್ಣೀರಿಟ್ಟಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದುತ್ವಕ್ಕಾಗಿ ನನ್ನ ಪ್ರಾಣವನ್ನೇ ಕೊಡುತ್ತೇನೆ ಅಂತಿದ್ದ.ಈಗ ಅವನ ಪ್ರಾಣವನ್ನೇ ತೆಗೆದರು . ನಾವು ನಿನ್ನೆ ಬೆಳಗ್ಗೆ ಮದುವೆಯ ಕೆಲಸದಲ್ಲಿದ್ದೆವು. ಹಾಗಾಗಿ ಮಗನಿಗೆ ನ್ ಮಾಡಲು ಆಗಲಿಲ್ಲ. ರಾತ್ರಿ ಕಾಲ್ ಮಾಡಿದಾಗ ಕಾಲ್ ಸಿಗುತ್ತಿರಲಿಲ್ಲ ಎಂದರು.ಹಿಂದೂಗಳು ಹೆದರಿ ಬದುಕಬೇಕಾದ ಸ್ಥಿತಿ ನಿರ್ಮಾಣವಾಗಿದೆ. 85% ಹಿಂದೂಗಳಿದ್ದರೂ ಅವರಿಗೆ … Read more

ರಾಯಚೂರು ಡೀಸಿ ಕಚೇರಿಗೆ ಬಾಂಬ್ ಈಮೇಲ್!

ರಾಯಚೂರು: ರಾಯಚೂರಿನ ಹೊರವಲಯದ ಎಕ್ಲಾಸಪೂರು ಬಡಾವಣೆಯಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಗೆ ಈಮೇಲ್ ಬಂದಿದ್ದು ಸಿಬ್ಬಂದಿ ಹೌಹಾರಿ ಕಚೇರಿಯಿಂದ ಹೊರಗೆ ಬಂದಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಯವರಿಗೆ ಈಮೇಲ್ ಸಂದೇಶ ಬಂದಿದ್ದು ಮಾಹಿತಿ ಪಡೆಯುತ್ತಿದ್ದಂತೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಕಚೇರಿಯಿಂದ ಓಡಿ ಹೊರಬಂದರು.ಮಾಹಿತಿ ಪಡೆಯುತ್ತಿದ್ದಂತೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೇಸಿಗೆ ಹಿನ್ನೆಲೆಯಲ್ಲಿ ಬೆಳಗ್ಗೆ 8 ರಿಂದ 1 ಗಂಟೆಯವರೆಗೆ ಸರ್ಕಾರಿ ಕಚೇರಿಗಳ ಸಮಯ ನಿಗದಿ ಮಾಡಿದ್ದರಿಂದ ಸ್ವಲ್ಪ … Read more