--ಇಲ್ಲಿ ಜಾಹೀರಾತು--

ಮೈಕ್ರೋಫೈನಾನ್ಸ್ ಉದ್ಯೋಗಿ ಸಾವು

On: July 14, 2025 2:34 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ (ರಾಮನಗರ) ಕನಕಪುರ ಪಟ್ಟಣದಲ್ಲಿರುವ ತನ್ನ ಕಚೇರಿಯಲ್ಲಿ 20 ವರ್ಷದ ಮೈಕ್ರೋಫೈನಾನ್ಸ್ ಉದ್ಯೋಗಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದಾರೆ.
ಮೃತನನ್ನು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಕೊಳತ್ತೂರು ಗ್ರಾಮದ ಆರ್ ದರ್ಶನ್ ಎಂದು ಗುರುತಿಸಲಾಗಿದೆ.ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶಾಖೆ ವ್ಯವಸ್ಥಾಪಕರನ್ನು ಬಂಧಿಸಿದ್ದಾರೆ ಮತ್ತು ಇತರ ಇಬ್ಬರು ಸಹೋದ್ಯೋಗಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಹಿಂದೆ ಮಂಡ್ಯದ ಹಲಗೂರು ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇತ್ತೀಚೆಗೆ ಬಡ್ತಿಯ ನಂತರ ಕನಕಪುರಕ್ಕೆ ವರ್ಗಾವಣೆಗೊಂಡಿದ್ದರು. ದರ್ಶನ್ ಅವರ ತಂದೆಗೆ ಮೂವರು ಹಿರಿಯ ಅಧಿಕಾರಿಗಳ ಕಿರುಕುಳದ ಬಗ್ಗೆ ದೂರು ನೀಡಿದ್ದರು ಎಂದು ವರದಿಯಾಗಿದೆ.
ದರ್ಶನ್ ಅವರ ತಂದೆ ಆರ್ ರಾಜು (58) ನೀಡಿದ ದೂರಿನ ಆಧಾರದ ಮೇಲೆ, ಕನಕಪುರ ಪಟ್ಟಣ ಪೊಲೀಸರು ವ್ಯವಸ್ಥಾಪಕ ರೇವಣ್ಣ , ಇಬ್ಬರು ಹಿರಿಯ ಸಿಬ್ಬಂದಿ ರೇಣುಕಾ ಶರ್ಮಾ ಮತ್ತು ಸಚಿನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now