--ಇಲ್ಲಿ ಜಾಹೀರಾತು--

ಲಂಚ ಪಡೆದಿದ್ದ ಪಿಡಿಒಗೆ ಕಡ್ಡಾಯ ನಿವೃತ್ತಿ

On: July 14, 2025 2:32 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಇ-ಸ್ವತ್ತುಗಾಗಿ ಕೇವಲ 2,000 ರೂ. ಲಂಚ ಪಡೆದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗೆ ರಾಜ್ಯ ಸರ್ಕಾರ ಕಡ್ಡಾಯ ನಿವೃತ್ತಿ ನೀಡಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಚನ್ನೇಪುರ ಗ್ರಾಮ ಪಂಚಾಯತ್ ನ ಪಿಡಿಒ ಹನುಮಂತಪ್ಪ ಹಂಚಿನಮನೆ, ಮಂಗಳಾಬಾಯಿ ಎಂಬುವವರಿಂದ 14/100 ಅಡಿ ಅಳತೆಯ ಮನೆಯೊಂದಿಗೆ ಮನೆ ಖರೀದಿಸಲು ‘ಇ-ಸ್ವತ್ತು’ ಮಂಜೂರಾತಿಗಾಗಿ ಬೇಡಿಕೆ ಇಟ್ಟಿದ್ದರು.
ಮಾವಿನಕಟ್ಟೆ ಗ್ರಾಮದ ನಿವಾಸಿ ರಂಗನಾಥ ಬಿ.ಎಚ್.ಅವರಿಂದ 2,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತನಿಖಾಧಿಕಾರಿಯು ಅವರ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಹೇಳಿದರು. ವಿಚಾರಣಾ ವರದಿಯನ್ನು ಪರಿಶೀಲಿಸಿದ ರಾಜ್ಯ ಸರ್ಕಾರ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿತು. ಅದಾದ ನಂತರ ಪಿಓಡಿಗೆ ಕಡ್ಡಾಯ ನಿವೃತ್ತಿ ಘೋಷಿಸಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now