ರಜೆ ಹಾಕಿದ್ದಕ್ಕೆ ವಿದ್ಯಾರ್ಥಿನಿಗೆ ಥಳಿತ

ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ರಜೆ ಹಾಕಿದ್ದಕ್ಕೆ ಮುಖ್ಯ ಶಿಕ್ಷಕಿ ಆಕೆಗೆ ಬಾಸುಂಡೆ ಬರುವಂತೆ ಥಳಿಸಿ ಹಿಂಸಿಸಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಶಾಲೆಯಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. 5ನೇ ತರಗತಿ ವಿದ್ಯಾರ್ಥಿನಿ ಯಮುನಾ ಮುಖ್ಯ ಶಿಕ್ಷಕಿಯಿಂದ ಹಲ್ಲೆಗೊಳಗಾದ ಬಾಲಕಿ.ವಿದ್ಯಾರ್ಥಿನಿ ಕ್ಲಾಸ್ ಟೀಚರ್ ಗೆ ಹೇಳಿ ರಜೆ ಹಾಕಿದ್ದಳಂತೆ. ರಜೆ ಮುಗಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯನ್ನು ಪ್ರಶ್ನೆ ಮಾಡಿದ ಮುಖ್ಯ ಶಿಕ್ಷಕಿ ಬಾಸುಂಡೆ ಬರುವಂತೆ ಹೊಡೆದಿದ್ದಾರೆ. ಮುಖ್ಯ ಶಿಕ್ಷಕಿ ಚಂದ್ರಕಲಾ ವಿರುದ್ಧ … Read more

ಮಗಳನ್ನು ಚುಡಾಯಿಸಿದ- ಪ್ರಶ್ನಿಸಿದ್ದಕ್ಕೆ ತಂದೆ ಮೇಲೆ ಹಲ್ಲೆ

ಕೊರಟಗೆರೆ: ಮಗಳನ್ನು ಚುಡಾಯಿಸಿದ್ದನ್ನ ಪ್ರಶ್ನಿಸಿದ ತಂದೆಗೆ ಆರೋಪಿ ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಚಾಕು ಹಾಕಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಕೊರಟಗೆರೆ ತಾಲ್ಲೂಕಿನ ಸಿ.ಎನ್.ದುರ್ಗಾ ಹೋಬಳಿ ಬೋರಪ್ಪನಹಳ್ಳಿ ಗ್ರಾಮದಲ್ಲಿ ದುರ್ಘಟನೆ ಜರುಗಿದ್ದು, ಶಾಲಾ ವಿದ್ಯಾರ್ಥಿನಿಯನ್ನ ಅನಾವಶ್ಯಕವಾಗಿ ರೇಗಿಸುತ್ತಿದ್ದ ಯುವಕನನ್ನ ಪ್ರಶ್ನಿಸಿದ ತಂದೆ ಗಿರೀಶ್ ಎಂಬುವರ ಮೇಲೆ ಮೂರು ಜನ ದಾಳಿ ನಡೆಸಿ ಕ್ರಿಕೆಟ್ ಬ್ಯಾಟ್ ನಿಂದ ತಲೆಗೆ ಮಾರಣಾಂತ ಹಲ್ಲೇ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡುವ ಯತ್ನ ಮಾಡಲಾಗಿದೆ ಎಂದು ದೂರಿನಲ್ಲಿ … Read more

ಗರ್ಭಿಣಿ ಅನುಮಾನಾಸ್ಪದ ಸಾವು

ಬೆಂಗಳೂರು: ನಗರದಲ್ಲಿ ಗರ್ಭಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಉತ್ತರ ಪ್ರದೇಶ ಮೂಲದ ಸುಮನಾ (22) ಮೃತಪಟ್ಟ ಗರ್ಭಿಣಿ. ಸುಮನಾ ಅವರು ಪತಿ ಶಿವಂನೊಂದಿಗೆ ಹೆಣ್ಣೂರಿನ ಥಳಿಸಂದ್ರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಸುಮನಾ ಅವರು ಗರ್ಭಿಣಿಯಾಗಿದ್ದು, ಮೂರು ದಿನಗಳ ಹಿಂದೆ ಸಾವನ್ನಪ್ಪಿದ್ದಾರೆ. ಪತ್ನಿಯ ಮೃತದೇಹದ ಜೊತೆಯೇ ಪತಿ ಎರಡು ದಿನ ಕಳೆದಿದ್ದಾನೆ.ಪತ್ನಿ ಸಾವನ್ನಪ್ಪಿದ ಮೊದಲ ದಿನ ಕೆಲಸಕ್ಕೆ ಹೋಗಿ ಬಂದಿದ್ದಾನೆ. ಎರಡನೇ ದಿನ ರಾತ್ರಿ ಪತ್ನಿಯ ಮೃತದೇಹದ ಮುಂದೆ ಮದ್ಯಸೇವಿಸಿ, ಮೊಟ್ಟೆ … Read more

ದಿವ್ಯಾಂಶಿ ಓಲೆ ಕಳವು- ತಾಯಿಯಿಂದ ದೂರು

ಬೆಂಗಳೂರು: ಈ ಬಾರಿಯ ಐಪಿಎಲ್ ನಲ್ಲಿ ಟ್ರೋಫಿ ಗೆದ್ದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಯನ್ನು ಆಯೋಜಿಸಿತ್ತು.ಈ ವೇಳೆ ಕ್ರೀಡಾಂಗಣದ ಬಳಿಕ ಜನಸಂದಣಿ ಹೆಚ್ಚಿದ್ದ ಕಾರಣ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದರು.ಈ ಪೈಕಿ ದಿವ್ಯಾಂಶಿ ಎಂಬ ಯುವತಿ ಸಹ ಸೇರಿದ್ದಳು. ನೆಚ್ಚಿನ ತಂಡದ ಗೆಲುವನ್ನು ಸಂಭ್ರಮಿಸಲ ಬಂದಿದ ದಿವ್ಯಾಂಶಿ ಕಾಲ್ತುಳಿತಕ್ಕೆ ಬಲಿಯಾಗಿದ್ದಳು. ಇದೀಗ ದಿವ್ಯಾಂಶಿ ತಾಯಿ ಮಾಧ್ಯಮದ ಮುಂದೆ ಬಂದು ತನ್ನ ಮಗಳ ಕಿವಿಯಲ್ಲಿದ್ದ ಓಲೆ ಕಳುವಾಗಿದೆ ಎಂದು ಹೇಳಿಕೆ … Read more

ಕಾಲ್ತುಳಿತ ಪ್ರಕರಣ- ಆರ್ ಸಿಬಿ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು: ಜೂನ್ 4ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಮುಂದಾಗಿದೆ. ಜುಲೈ 17ರದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಈ ದೊಡ್ಡ ಹೆಜ್ಜೆಯನ್ನಿಡಲು ತೀರ್ಮಾನಿಸಿತ್ತು.ಚಿನ್ನಸ್ವಾಮಿ ಕಾಲ್ತುಳಿತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯೇ ಕಾರಣ ಅದರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ತಂಡ ಈ ವರದಿಯನ್ನು ಸಿದ್ದಪಡಿಸಿ ರಾಜ್ಯ … Read more

ಅಪಾರ ಹಣ, ವಡವೆ ವಶ

ಬೆಂಗಳೂರು: ಪಾಕೆಟ್ ಗಳಲ್ಲಿ ಚಿನ್ನದ ಬಿಸ್ಕತ್, 15ಕ್ಕೂ ಹೆಚ್ಚು ಚಿನ್ನದ ಕಿವಿಯೋಲೆಗಳು, ಸಾಲು ಸಾಲು ಚಿನ್ನದ ಸರಗಳು, ಬೆಳ್ಳಿಯ ಆಭರಣಗಳು, ಬೆಳ್ಳಿಯ ಬಟ್ಟಲು, ಬೆಳ್ಳಿ ತಟ್ಟೆ, ಬೆಳ್ಳಿಯ ದೀಪ, ಕಂತೆ ಕಂತೆ ನಗದು ಹಣ! ಇವೆಲ್ಲ ರಾಜ್ಯದ ವಿವಿಧೆಡೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕ ಅಕ್ರಮ ಸಂಪತ್ತು.

ಕೊಲೆ ಪ್ರಕರಣದಲ್ಲಿ ಶಾಸಕರ ಕಾರು ಚಾಲಕ ಬಂಧನ

ಚಿತ್ರದುರ್ಗ: ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಗೋವಿಂದಪ್ಪ ಕಾರು ಚಾಲಕ ಯಶವಂತ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿ.ಜಿ.ಗೋವಿಂದಪ್ಪ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಕಾಂಗ್ರೆಸ್ ಶಾಸಕರಾಗಿದ್ದು, ಕೊಲೆ ಪ್ರಕರಣದಲ್ಲಿ ಶಾಸಕರ ಚಾಲಕ ಯಶವಂತನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾರ್ಚ್ 17 ರಂದು ಜಾನಕಲ್ ಗ್ರಾಮದ ಪ್ರಸನ್ನ (45) ಎನ್ನುವ ವ್ಯಕ್ತಿ ನಾಪತ್ತೆಯಾಗಿದ್ದರು. ಮಾರ್ಚ್ 21ರಂದು ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಚಿಕ್ಕಮಗಳೂರು ಜಿಲ್ಲೆಯ ಲಿಂಗದಳ್ಳಿ ಬಳಿ ಪ್ರಸನ್ನ ಅವರ ಶವ … Read more

ಗಾಂಜಾ ಸೊಪ್ಪು ಕಿತ್ತು ವೀಡಿಯೀ- ಇಬ್ಬರ ಮೇಲೆ ಕೇಸ್

ಕುಣಿಗಲ್: ಗಾಂಜಾ ಬೆಳೆದು ಸೊಪ್ಪನ್ನು ಕಿತ್ತು ಪೂಜೆ ಉದ್ದೇಶಕ್ಕೆ ಬಳಸುವುದಾಗಿ ಹೇಳುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣದ ಮೇರೆಗೆ ಪೊಲೀಸರು ಇಬ್ಬರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಯುವಕರಿಬ್ಬರು ಗಾಂಜಾ ಸೊಪ್ಪನ್ನು ಕಿತ್ತು ಸಂಭಾಷಣೆ ನಡೆಸುತ್ತಿರುವ ಬಗ್ಗೆ ವೀಡಿಯೋ ವೈರಲ್ ಆಗಿತ್ತು, ಈ ಬಗ್ಗೆ ಪರಿಶೀಲನೆ ನಡೆಸಿದಾಗ ಸದರಿ ಕೃತ್ಯ ಮಡಿಕೆಹಳ್ಳಿ ಗ್ರಾಮದ ವ್ಯಾಪ್ತಿಗೆ ಸೇರಿದ್ದು ಎನ್ನಲಾಗಿದ್ದು ಸಂಭಾಷಣೆ ನಡೆಸುತ್ತಿದ್ದ ವ್ಯಕ್ತಿಗಳು ಚಂದ್ರಣ್ಣ, ಪ್ರತಾಪ್ ಎನ್ನಲಾಗಿದೆ, ಈ ಬಗ್ಗೆ ಗುಪ್ತ ಮಾಹಿತಿ ಸಿಬ್ಬಂದಿ ನಟರಾಜ್ … Read more

ಅಪಘಾತದಲ್ಲಿ ಗ್ರಾಮ ಆಡಳಿತಾಧಿಕಾರಿ ಸಾವು

ತುಮಕೂರು: ಸಾರಿಗೆ ಸಂಸ್ಥೆ ಬಸ್ ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗ್ರಾಮ ಆಡಳಿತಾಧಿಕಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೊಲ್ಲಹಳ್ಳಿ ಬಳಿ ನಡೆದಿದೆ. ಗುಬ್ಬಿ ತಾಲ್ಲೂಕಿನ ಮೂಕನಾಯಕನಹಳ್ಳಿ ಗ್ರಾಮದ ನಿವಾಸಿ ಹಾಗೂ ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ ಹೋಬಳಿಯ ಪರ್ತಿಹಳ್ಳಿ ವೃತ್ತದ ಗ್ರಾಮ ಆಡಳಿತಾಧಿಕಾರಿ ಎಂ.ಹೆಚ್. ಮಹೇಶ್(31) ಎಂಬುವರೇ ಮೃತಪಟ್ಟಿರುವ ದುರ್ದೈವಿ, ಗ್ರಾಮ ಆಡಳಿತಾಧಿಕಾರಿ ಮಹೇಶ್ ಅವರು ತುಮಕೂರಿನಿಂದ ತಮ್ಮ ಸ್ವಗ್ರಾಮ ಮೂಕನಾಯಕನಹಳ್ಳಿ ಪಟ್ಟಣಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆ … Read more

ಬ್ರೇಕ್ ಫೇಲ್ಯೂರ್- ಬೇಕರಿಗೆ ನುಗ್ಗಿದ ಗೊಬ್ಬರದ ಲಾರಿ ದುರಂತದಲ್ಲಿ ಮೂವರು ಸಾವು, ಮೂವರಿಗೆ ಗಾಯ

ಕೊರಟಗೆರೆ: ಗೊಬ್ಬರ ತುಂಬಿದ್ದ ಲಾರಿ ಬ್ರೇಕ್ ಫೇಲ್ಯೂರ್ ಆಗಿ ಬೇಕರಿಗೆ ನುಗ್ಗಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಕೋಳಾಲ ಗ್ರಾಮದಲ್ಲಿ ಮಂಗಳವಾರ ಬೆ.12ಗಂಟೆ ಸುಮಾರಿಗೆ ಕೋಳಾಲ ಪೊಲೀಸ್ ಠಾಣೆ ರಸ್ತೆ ಕಡೆಯಿಂದ ಬಂದ ಗೊಬ್ಬರದ ಲಾರಿ ಬ್ರೇಕ್ ಫೇಲ್ಯೂರ್ ನಿಂದ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಭೈರವೇಶ್ವರ ಕಾಂಡಿಮೆಂಟ್ಸ್ಗೆ ನುಗ್ಗಿದ್ದು, ಈ ದುರಂತದಲ್ಲಿ ಬೇಕರಿ ಮುಂದೆಯಿದ್ದ ರಂಗಶಾಮಯ್ಯ (70), ಬೈಲಪ್ಪ (65), ಜಯಣ್ಣ (55) ಎಂಬುವವರು … Read more