ಪಾನ್ ಗೆ ಗಾಂಜಾ ಬೆರೆಸಿ ಮಾರಾಟ- ಆರೋಪಿ ಅರೆಸ್ಟ್

ದಾವಣಗೆರೆ: ಚಾಕೊಲೇಟ್ ಪಾನ್ ಗೆ ಗಾಂಜಾ ಬೆರೆಸಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಪಾನ್ ಅಂಗಡಿ ಮಾಲೀಕನನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಪ್ಯಾರೆಲಾಲ್ ಅಲಿಯಾಸ್ ರಾಜು (38) ಬಂಧಿತ ಆರೋಪಿ. ದಾವಣಗೆರೆ ನಗರದ ರಾಮ್ ಆಂಡ್ ಕೋ ಸರ್ಕಲ್ ನಲ್ಲಿ ಪಾನ್ ಶಾಪ್ ಇಟ್ಟುಕೊಂಡಿದ್ದ. ಕಳೆದ ನಾಲ್ಕು ವರ್ಷಗಳಿಂದ ಪಾನ್ ಶಾಪ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ. ಇತ್ತೀಚೆಗೆ ಚಾಕೊಲೇಟ್ ನಲ್ಲಿ ಗಾಂಜಾ, ಚಾಕೊಲೇಟ್ ಪಾನ್ ಗೆ ಗಾಂಜಾ ಬೆರೆಸಿ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ತನ್ನ ಅಪ್ರಾಪ್ತ … Read more

ಬ್ಯಾಂಕ್ ವಂಚನೆ- ಇಡಿ ಪರಿಶೀಲನೆ

ಬೆಂಗಳೂರು: ಶುಶ್ರುತಿ ಸೌಹಾರ್ದ ಸಹಕಾರ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದೆ. ಶುಶ್ರುತಿ ಸೌಹಾರ್ದ ಸಹಕಾರ ಬ್ಯಾಂಕ್, ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನಲ್ಲಿ ಇಂದು ಬೆಳ್ಳ ಬೆಳಗ್ಗೆ ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.ಈ ಹಿಂದೆ ಬೆಂಗಳೂರಿನ ಶುಶತಿ ಸೌಹಾರ್ದ ಸಹಕಾರ ಬ್ಯಾಂಕ್ ನಲ್ಲಿ ಹಗರಣ ನಡೆದಿರುವ … Read more

ದೇವಸ್ಥಾನದಲ್ಲಿ ಕಳ್ಳತನ- ಆರೋಪಿ ಬಂಧನ

ತಿಪಟೂರು: ಕೆ.ಬಿ.ಕ್ರಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ಬೀರಸಂದ್ರ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಇದೇ ತಿಂಗಳು 5 ನೇ ತಾರೀಕು ದೇವಸ್ಥಾನದ ಬೇಗ ಮುರಿದು ಚಾಮುಂಡೇಶ್ವರಿ ವಿಗ್ರಹದ ಮೇಲಿದ್ದ ಒಡವೆ ಮತ್ತು ಹುಂಡಿಯ ಹಣ ಕಳ್ಳತನ ಮಾಡಿಕೊಂಡು ಹೋಗಿದ್ದ ಬಗ್ಗೆ ಕೆ.ಬಿ.ಕ್ರಾಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಪತ್ತೆ ಹಚ್ಚಲು ತುಮಕೂರು ಜಿಲ್ಲಾ ಪೊಲೀಸ್ ಅಧಿಕ್ಷಕರ ಆದೇಶದ ಮೇರೆಗೆ ಜಿಲ್ಲಾ ಪೊಲೀಸರು ಮತ್ತು ತಿಪಟೂರು ಉಪ ವಿಭಾಗದ ಡಿ ಎಸ್ ಪಿ ವಿನಾಯಕ ಶೆಟ್ಟಿಗೇರ ಮಾರ್ಗದರ್ಶನದಲ್ಲಿ ಗ್ರಾಮಾಂತರ ವೃತ್ತ … Read more

ಮೈಕ್ರೋಫೈನಾನ್ಸ್ ಉದ್ಯೋಗಿ ಸಾವು

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ (ರಾಮನಗರ) ಕನಕಪುರ ಪಟ್ಟಣದಲ್ಲಿರುವ ತನ್ನ ಕಚೇರಿಯಲ್ಲಿ 20 ವರ್ಷದ ಮೈಕ್ರೋಫೈನಾನ್ಸ್ ಉದ್ಯೋಗಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮೃತನನ್ನು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಕೊಳತ್ತೂರು ಗ್ರಾಮದ ಆರ್ ದರ್ಶನ್ ಎಂದು ಗುರುತಿಸಲಾಗಿದೆ.ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶಾಖೆ ವ್ಯವಸ್ಥಾಪಕರನ್ನು ಬಂಧಿಸಿದ್ದಾರೆ ಮತ್ತು ಇತರ ಇಬ್ಬರು ಸಹೋದ್ಯೋಗಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ಮಂಡ್ಯದ ಹಲಗೂರು ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇತ್ತೀಚೆಗೆ ಬಡ್ತಿಯ ನಂತರ ಕನಕಪುರಕ್ಕೆ ವರ್ಗಾವಣೆಗೊಂಡಿದ್ದರು. ದರ್ಶನ್ ಅವರ ತಂದೆಗೆ ಮೂವರು … Read more

ಲಂಚ ಪಡೆದಿದ್ದ ಪಿಡಿಒಗೆ ಕಡ್ಡಾಯ ನಿವೃತ್ತಿ

ಬೆಂಗಳೂರು: ಇ-ಸ್ವತ್ತುಗಾಗಿ ಕೇವಲ 2,000 ರೂ. ಲಂಚ ಪಡೆದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗೆ ರಾಜ್ಯ ಸರ್ಕಾರ ಕಡ್ಡಾಯ ನಿವೃತ್ತಿ ನೀಡಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಚನ್ನೇಪುರ ಗ್ರಾಮ ಪಂಚಾಯತ್ ನ ಪಿಡಿಒ ಹನುಮಂತಪ್ಪ ಹಂಚಿನಮನೆ, ಮಂಗಳಾಬಾಯಿ ಎಂಬುವವರಿಂದ 14/100 ಅಡಿ ಅಳತೆಯ ಮನೆಯೊಂದಿಗೆ ಮನೆ ಖರೀದಿಸಲು ‘ಇ-ಸ್ವತ್ತು’ ಮಂಜೂರಾತಿಗಾಗಿ ಬೇಡಿಕೆ ಇಟ್ಟಿದ್ದರು. ಮಾವಿನಕಟ್ಟೆ ಗ್ರಾಮದ ನಿವಾಸಿ ರಂಗನಾಥ ಬಿ.ಎಚ್.ಅವರಿಂದ 2,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತನಿಖಾಧಿಕಾರಿಯು ಅವರ ವಿರುದ್ಧದ … Read more

ಇಂಧನ ಪೂರೈಕೆ ಕಡಿತದಿಂದ ಏರ್ ಇಂಡಿಯಾ ವಿಮಾನ ಪತನ

ನವದೆಹಲಿ: ಜೂನ್ 12ರಂದು ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ ವರದಿಯು ಹಲವು ಪ್ರಮುಖ ವಿಷಯಗಳನ್ನು ಬಹಿರಂಗಪಡಿಸಿದೆ. ಹಾರಾಟದ ಕೆಲವು ಸೆಕೆಂಡುಗಳ ನಂತರ ವಿಮಾನದ ಎರಡೂ ಎಂಜಿನ್ಗಳ ಇಂಧನ ಪೂರೈಕೆಯನ್ನು ಕಡಿತಗೊಳಿಸಲಾಗಿದೆ ಎಂಬ ಅನುಮಾನವನ್ನು ಈ ವರದಿಯು ಹುಟ್ಟುಹಾಕಿದೆ. ಒಬ್ಬ ಪೈಲಟ್ ಇನ್ನೊಬ್ಬನನ್ನು ಇಂಧನ ಸ್ವಿಚ್ ಆಫ್ ಮಾಡಿದ್ದೀರಾ ಎಂದು ಕೇಳಿದರು. ಇನ್ನೊಬ್ಬ ಪೈಲಟ್ ‘ನಾನು ಮಾಡಲಿಲ್ಲ’ ಎಂದು ಉತ್ತರಿಸಿದರು. ಪೈಲಟ್ ನ ಸಂಭಾಷಣೆಯು ವಿಷಯವನ್ನು ಮತ್ತಷ್ಟು ಜಟಿಲಗೊಳಿಸಿದೆ. … Read more

ಡ್ರಗ್ಸ್ ಪೂರೈಸುತ್ತಿದ್ದ ವ್ಯಕ್ತಿ ಬಂಧನ

ಮಂಗಳೂರು: ಮಂಗಳೂರಿನಲ್ಲಿ ಡ್ರಗ್ಸ್ ಜಾಲವನ್ನು ಬಯಲಿಗೆಳೆದಿರುವ ಪೊಲೀಸರು ಡ್ರಗ್ಸ್ ಪೂರೈಸುತ್ತಿದ್ದ ಬೀದರ್ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ವೈದ್ಯನಾಗಿದ್ದ ಎಂಬ ಅಘಾತಕಾರಿ ಮಾಹಿತಿ ಈಗ ಹೊರಬಂದಿದೆ. ವೈದ್ಯರ ಬಂಧನದ ಬೆನ್ನಲ್ಲೇ, ಜಿಲ್ಲೆಯಲ್ಲಿ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ಅನೇಕ ಅಚ್ಚರಿ ಹಾಗೂ ಆತಂಕಕಾರಿ ಮಾಹಿತಿಗಳು ಬಹಿರಂಗವಾಗಿದೆ. ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿರುವ ಪ್ರಜ್ವಲ್ ಪೀಣ್ಯಾಸ್ ಬಂಧಿತ ವೈದ್ಯನಾಗಿದ್ದಾನೆ. ಪ್ರಜ್ವಲ್ ಪೀಣ್ಯಾಸ್ ಹಾಗೂ ಇತರ ಪೆಡ್ಲರ್ ಗಳು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು ಎಂಬ ಅಘಾತಕಾರಿ ಅಂಶ ಈ … Read more

ಕಲ್ಲು ಕ್ವಾರಿಯಲ್ಲಿ ಚಿರತೆ ಮೃತದೇಹ ಪತ್ತೆ

ಚಾಮರಾಜನಗರ: ಇಲ್ಲಿನ ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ ಬರುವ ಕೊತ್ತಲವಾಡಿ ಗ್ರಾಮದ ಬಳಿಯ ಪ್ರದೇಶದ ಕಲ್ಲು ಕ್ವಾರಿಯಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಸುಮಾರು ಐದರಿಂದ ಆರು ವರ್ಷ ವಯಸ್ಸಿನ ಗಂಡು ಚಿರತೆ ಇದಾಗಿದ್ದು, ವಿಷಪ್ರಾಶನ ಮಾಡಿ ಕೊಂದಿರಬಹುದು ಎಂದು ಅವರು ಶಂಕಿಸಿದ್ದಾರೆ. ಅರಣ್ಯ ಇಲಾಖೆ ಪ್ರಕಾರ, ಗುರುವಾರ ಚಿರತೆಯ ಮೃತದೇಹದ ಬಳಿ ನಾಯಿ ಮತ್ತು ಕರುವಿನ ಮೃತದೇಹಗಳು ಪತ್ತೆಯಾಗಿವೆ.ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ … Read more

ಉಗ್ರ ಅಬೂಬಕರ್ ಸಿದ್ದಿಕಿ ಬಂಧನ

ಬೆಂಗಳೂರು: ಬರೋಬ್ಬರಿ 30 ವರ್ಷಗಳ ನಂತ್ರ ಉಗ್ರ ಅಬೂಬಕರ್ ಸಿದ್ದಿಕಿಯನ್ನು ಬಂಧಿಸಲಾಗಿದೆ. ಬಂಧಿತ ಉಗ್ರ ಆಂಧ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದನು. ಇಂತಹ ಆರೋಪಿಯನ್ನು ತಮಿಳುನಾಡು ಎಟಿಎಸ್ ನಿಂದ ಬಂಧಿಸಲಾಗಿದೆ. ತಮಿಳುನಾಡು ಎಟಿಎಸ್ ನಿಂದ ಆಂಧ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದಂತ ಉಗ್ರ ಅಬೂಬಕರ್ ಸಿದ್ದಕಿಯನ್ನು ಬಂಧಿಸಲಾಗಿದೆ. ಈತನಿಗೆ ಆಶ್ರಯ ನೀಡಿದ್ದಂತ ಮೊಹಮ್ಮದ್ ಆಲಿ ಕೂಡ ಬಂಧನವಾಗಿದೆ. ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ಸ್ಪೋಟದಲ್ಲಿ ಭಾಗಿಯಾಗಿದ್ದಂತ ಆರೋಪಿ ಅಬೂಬಕರ್ ಸಿದ್ದಿಕಿ ಆಗಿದ್ದಾನೆ. ಉಗ್ರ ಅಬೂಬಕರ್ ಸಿದ್ದಿಕಿ ಬೆಂಗಳೂರಿಗೆ ಕರೆತರಲು ಎಟಿಎಸ್ ಸಿದ್ಧತೆ ನಡೆಸುತ್ತಿದ್ದಾರೆ. ಜುಲೈ 14 … Read more

ತೈಲ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆ ಉಸಿರುಗಟ್ಟಿ ಇಬ್ಬರು ಸಿಬ್ಬಂದಿ ಸಾವು

ಬೆಂಗಳೂರು: ತೈಲ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆಯಿಂದಾಗಿ ಉಸಿರುಗಟ್ಟಿ ಇಬ್ಬರು ಸಿಬ್ಬಂದಿ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಸೂರತ್ಕಲ್ ನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ದೀಪ ಚಂದ್ರ ಭಾರ್ತಿಯಾ ಮತ್ತು ಬಿಜಿಲ್ ಪ್ರಸಾದ ಸಾವನ್ನಪ್ಪಿದ ಸಿಬ್ಬಂದಿ, ಸೂರತ್ಕಲ್ ನ ಎಂಆರ್ಪಿಎಲ್ ತೈಲ ಶುದ್ಧೀಕರಣ ಘಟಕದ ಆಯಿಲ್ ಮೂವ್ ಮೆಂಟ್ ವಿಭಾಗದಲ್ಲಿ ಬೆಳಗ್ಗೆ 8.30 ರ ಸುಮಾರಿನಲ್ಲಿ ದೋಷ ಕಂಡು ಬಂದಿದೆ.ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಪರಿಶೀಲನೆಗಾಗಿ ತೈಲ ಶುದ್ಧೀಕರಣದ ಟ್ಯಾಂಕ್ ಮೇಲ್ಛಾ ವಣಿಗೆ ಹೋಗಿದ್ದಾರೆ. ಆ ವೇಳೆ ಅನಿಲ … Read more