ಹಾಸ್ಯ ನಟ ಸಂಜು ಬಸಯ್ಯ ಪತ್ನಿಗೆ ಅಶ್ಲೀಲ ಸಂದೇಶ

ಬೆಳಗಾವಿ: ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯ ನಟ ಸಂಜು ಬಸಯ್ಯ ಪತ್ನಿ ಪಲ್ಲವಿ ಅವರಿಗೆ ಯುವಕನೋರ್ವ ಅಶ್ಲೀಲ ಸಂದೇಶ ರವಾನಿಸಿ ಸಿಕ್ಕಿಬಿದ್ದಿರುವ ಘಟನೆ ವರದಿಯಾಗಿದೆ. ಕನ್ನಡ ಕಿರುತೆರೆಯಲ್ಲಿ ಹಾಸ್ಯ ಕಾರ್ಯಕ್ರಮಗಳ ಮೂಲಕ ಪ್ರಸಿದ್ಧಿಯಾಗಿರುವ ಹಾಸ್ಯಕಲಾವಿದ ಸಂಜು ಬಸಯ್ಯ ಅವರ ಪತ್ನಿ ಪಲ್ಲವಿ ಅವರಿಗೆ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ಮೂಲಕ ಯುವಕನೋರ್ವ ಅಶ್ಲೀಲ ಸಂದೇಶಗಳನ್ನು ರವಾನಿಸಿ ವಿಕೃತಿ ಮೆರೆದಿದ್ದಾನೆ. ಮೂಲಗಳ ಪ್ರಕಾರ ವಿಜಯನಗರ ಜಿಲ್ಲೆಯ ಪಿಯುಸಿ ಓದುವ ವಿದ್ಯಾರ್ಥಿಯೊಬ್ಬ ಪಲ್ಲವಿ ಅವರಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಾನೆ ಎನ್ನಲಾಗಿದೆ. … Read more

ಉಪ ಲೋಕಾಯುಕ್ತರಿಗೆ ವಂಚನೆ ಯತ್ನ

ಬೆಂಗಳೂರು: ಉಪ ಲೋಕಾಯುಕ್ತರಿಗೆ ಸೈಬರ್ ವಂಚಕರು ವಂಚಿಸಲು ಯತ್ನಿಸಿರುವ ಘಟನೆ ನಡೆದಿದೆ. ಜುಲೈ 9 ರಂದು ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರಿಗೆ ಕರೆ ಮಾಡಿದ್ದ ಅಪರಿಚಿತರು ಬೆದರಿಸಲು ಯತ್ನಿಸಿದ್ದು, ಬೆಂಗಳೂರು ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರಿಗೆ ಕರೆ ಮಾಡಿದ್ದ ಅಪರಿಚಿತರು, ಹಿರಿಯ ಕಾನೂನು ಸಲಹೆಗಾರ ದೀಪಕ್ ಕುಮಾರ್ ಶರ್ಮಾ ಹಾಗೂ ಕಿರಿಯ ಕಾನೂನು ಸಲಹೆಗಾರ ರಾಹುಲ್ ಕುಮಾರ್ ಶರ್ಮಾ ಎಂದು ಪರಿಚಯಿಸಿಕೊಂಡಿದ್ದರು. ಮುಂಬೈನಲ್ಲಿರುವ ಭಾರತೀಯ ದತ್ತಾಂಶ … Read more

15 ಮಂದಿ ಡಕಾಯಿತರ ಬಂಧನ

ಬೆಂಗಳೂರು: ಕೆನರಾ ಬ್ಯಾಂಕ್ ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿರುವ ವಿಜಯಪುರದ ಮನಗೂಳಿ ಪೊಲೀಸ್ ಠಾಣೆಯ 8 ವಿಶೇಷ ತಂಡಗಳು 15 ಮಂದಿ ಡಕಾಯಿತರನ್ನು ಬಂಧಿಸಿ 1.16 ಕೋಟಿ ನಗದು,39 ಕೆಜಿ ಬಂಗಾರದ ಗಟ್ಟಿ ಸೇರಿದಂತೆ 39.26 ಕೋಟಿ ರೂ.ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿವೆ. ಹುಬ್ಬಳ್ಳಿಯ ವಿಜಯ ಕುಮಾರ, ಚಂದ್ರಶೇಖರ,ಸುನೀಲ, ಬಾಲರಾಜ ಮಣಿಕಮ್, ಗುಂಡು ಜೊಸೇಫ್, ಚಂದನ್ ರಾಜ್, ಇಜಾಜ್, ಪೀಟರ್, ಸುಸೈರಾಜ್, ಬಾಬುರಾವ, ಮಹಮದ ಆಸೀಫ್, ಅನೀಲ, ಅಬು, ಸೋಲೋಮ್ ವೇಸ್ಲಿ ಮತ್ತು ಮರಿಯಾದಾಸ ಬಂಧಿತ ಡಕಾಯಿತರು. … Read more

ಕಿರುತೆರೆ ನಟಿ ಮೇಲೆ ಪತಿಯಿಂದ ಚಾಕು ಇರಿತ

ಬೆಂಗಳೂರು: ಖಾಸಗಿ ವಾಹಿನಿಯ ನಿರೂಪಕಿ, ಅಮೃತಧಾರೆ ಧಾರಾವಾಹಿಯ ನಟಿಯ ಮೇಲೆ ಆಕೆಯ ಪತಿಯೇ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್ನಲ್ಲಿ ನಡೆದಿದೆ. ಮಂಜುಳಾ ಅಲಿಯಾಸ್ ಶ್ರುತಿ ಪತಿಯಿಂದ ಚಾಕು ಇರಿತಕ್ಕೊಳಗಾದ ನಟಿಯಾಗಿದ್ದು, ಘಟನೆಗೆ ಸಂಬಂಧಿಸಿ ಪೊಲೀಸರು ಪತಿ ಅಮರೇಶ್ ನನ್ನು ಬಂಧಿಸಿದ್ದಾರೆ, ಘಟನೆ ಕಳೆದ ಜುಲೈ 4 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ, ಸದ್ಯ ನಟಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ, … Read more

ಆರೋಗ್ಯ ಸಮಸ್ಯೆ- ತಾಯಿ, ಮಗ ನೇಣಿಗೆ ಶರಣು

ತುರುವೇಕೆರೆ: ಆರೋಗ್ಯ ಸಮಸ್ಯೆಗೆ ಬೇಸತ್ತು ಪಟ್ಟಣದ ಬ್ರಾಹ್ಮಣ ಬೀದಿಯಲ್ಲಿ ವಾಸವಾಗಿದ್ದ ತಾಯಿ, ಮಗ ಇಬ್ಬರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಮೃತರಾಗಿರುವ ಕಮಲಮ್ಮ (78) ಮಗ ರಘು (55) ಇಬ್ಬರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದರು, ಅನಾರೋಗ್ಯ ಸಹಿಸಲಾರದೇ ಇಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರ ಬರೆದಿಟ್ಟು ಶುಕ್ರವಾರ ಬೆಳಗಿನ ಜಾವ ಮನೆಯ ತೀರಿಗೆ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಮೃತ ರಘು ಗೋಣಿ ತುಮಕೂರಿನ ರಾಮಾಂಜನೇಯ ಗ್ರಾಮಾಂತರ ಪ್ರೌಢಶಾಲೆಯಲ್ಲಿ … Read more

ಶಾಲಾ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

ಚಾಮರಾಜನಗರ: ಶಾಲೆಯಲ್ಲಿ ಪಾಠ ಕೇಳುವಾಗಲೇ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಈ ಮೂಲಕ ಕರ್ನಾಟಕದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಜನರು ಆತಂಕಗೊಂಡಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು. ದೊಡ್ಡಹುಂಡಿ ಗ್ರಾಮದ ಮನೋಜ್ ಕುಮಾರ್ (10) ಮೃತ ವಿದ್ಯಾರ್ಥಿ. ಮೂಲತಃ ದೊಡ್ಡಹುಂಡಿ ಗ್ರಾಮದ ನಾಗರಾಜು ಹಾಗೂ ನಾಗರತ್ನ ದಂಪತಿಯ ಪುತ್ರ ಮನೋಜ್ ಕುಮಾರ್ ದೊಡ್ಡಹುಂಡಿಯಲ್ಲಿ 1 ಮತ್ತು 2ನೇ ತರಗತಿ ವ್ಯಾಸಂಗ ಮಾಡಿದ್ದನು. … Read more

ನದಿಗೆ ಹಾರಿ ಯುವತಿ ಆತ್ಮಹತ್ಯೆ

ಮಂಡ್ಯ: ಸೇತುವೆ ಮೇಲಿಂದ ನದಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಂಗ ಪಟ್ಟಣದ ಉತ್ತರ ಕಾವೇರಿ ಬಳಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಪ್ರಸಾದಹಳ್ಳಿ ಗ್ರಾಮದ ಸಿಂಚನ (24) ಕಾವೇರಿ ನದಿಗೆ ಹಾರಿದ ಯುವತಿ. ಸಿಂಚನ ಎಂಸಿಎ ಪದವೀಧರೆಯಾಗಿದ್ದು, ಇತ್ತೀಚೆಗೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಇದರಿಂದ ಖಿನ್ನತೆಗೊಳಗಾಗಿದ್ದಳು ಎಂದು ಹೇಳಲಾಗುತ್ತಿದೆ. ಮೊನ್ನೆ ರಾತ್ರಿ ಸುಮಾರು 8 ಗಂಟೆ ಸಂದರ್ಭದಲ್ಲಿ ಸೇತುವೆ ಮೇಲಿಂದ ಉಕ್ಕಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿದ್ದಾಳೆ. ಇದನ್ನು ಕಂಡ ಅದೇ ದಾರಿಯಲ್ಲಿ … Read more

ಸಿಎಂ-ಡಿಸಿಎಂ ಹೆಸರಿನಲ್ಲಿ ಕೋಟಿ ಕೋಟಿ ಹಣ ವಂಚನೆ ಯಾಮಾರಿಸಿದ್ದ ಮಹಿಳೆ ಆರೆಸ್ಟ್

ಬೆಂಗಳೂರು: ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆ ಸಿಕ್ಕಿಬಿದ್ದಿದ್ದಾಳೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಗಾಳ ಹಾಕುತ್ತಿದ್ದ ಸವಿತಾ ಎನ್ನುವ ಮಹಿಳೆಯನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಕಿಟ್ಟಿ ಪಾರ್ಟಿಯಲ್ಲಿ ನೆಪದಲ್ಲಿ ಶ್ರೀಮಂತ ಮಹಿಳೆಯರನ್ನೇ ಟಾರ್ಗೇಟ್ ಮಾಡುತ್ತಿದ್ದ ಸವಿತಾ, ಈವರೆಗೆ 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿದ್ದಾಳೆ ಎಂದು ತಿಳಿದುಬಂದಿದ್ದು, ಈ ಸಂಬಂಧ ಪೊಲೀಸರು ತನಿಖೆ ನಡೆಸಿದ್ದಾರೆ. … Read more

ಮೂವರು ಶಂಕಿತ ಉಗ್ರರ ಬಂಧನ

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಬೆಂಗಳೂರು ಕೋಲಾರದಲ್ಲಿ ಒಟ್ಟು ಐದು ಕಡೆ ದಾಳಿ ಮಾಡಿದ್ದು, ಮೂವರು ಶಂಕಿತ ಉಗ್ರರನ್ನು ಬಂಧಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಡಾ.ನಾಗರಾಜ್, ಪರಪ್ಪನ ಅಗ್ರಹಾರ ಜೈಲಿನ ಎಎಸ್ಐ ಚಾಂದ್ ಪಾಷಾ ಅನೀಸ್ ಹಾಗೂ ಫಾತಿಮಾ ಎನ್ನುವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಉಗ್ರರ ಚಟುವಟಿಕೆಗೆ ನೆರವು ನೀಡುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಲಾಗಿದ್ದು, ದಾಳಿ ವೇಳೆ ಎನ್ ಐಎ ಅಧಿಕಾರಿಗಳು 2 ವಾಕಿಟಾಕಿ, ಚಿನ್ನಾಭರಣ ವಶಕ್ಕೆ … Read more

ಬಂಡೆ ಬಿದ್ದು ಕಾರ್ಮಿಕ ಸಾವು

ಕೊರಟಗೆರೆ: ಕಾವರಗಲ್ ಅರಣ್ಯ ಪ್ರದೇಶದ ಕ್ರಷರ್ ಬಂಡೆಯ ಇಳಿಜಾರಿನಲ್ಲಿ ಕಾರ್ಮಿಕರು ಅಭದ್ರತೆಯಲ್ಲಿ ಡ್ರಿಲ್ಲಿಂಗ್ ಮಾಡುತ್ತಿದ್ದ ವೇಳೆ ಮೇಲಿಂದ ಬಂಡೆ ಕುಸಿದ ಹಿನ್ನೆಲೆ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡಿರುವ ಮತ್ತಿಬ್ಬರು ತುಮಕೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲೂಕಿನ ಚನ್ನರಾಯನದುರ್ಗ ಹೋಬಳಿ ಜೆಟ್ಟಿಇಗ್ರಹಾರ ಗ್ರಾಮದ ಸರ್ವೆ ನಂ.35ರಲ್ಲಿನ ಚಂದ್ರಶೇಖರ ಬಾಬು ಎಂಬುವರಿಗೆ ಸೇರಿದ ಕಲ್ಲುಕ್ವಾರೆಯಲ್ಲಿ ಸೋಮವಾರ ಸಂಜೆ ಈ ಅವಘಡ ನಡೆದಿದೆ. ಮಧ್ಯಪ್ರದೇಶ ಮೂಲದ ಕಾರ್ಮಿಕ ದಾಲ್ಮನ್ (26) ಮೃತಪಟ್ಟಿರುವ ದುರ್ದೈವಿ, ಅಶೋಕ (32) ಮತ್ತು ಸೌದರಸಿಂಗ್ … Read more