ಬಿಎಂಟಿಸಿ ಬಸ್ಗೆ ಮತ್ತೊಂದು ಜೀವ ಬಲಿ

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ ಮತ್ತೊಂದು ಜೀವ ಬಲಿ ಪಡೆದುಕೊಂಡಿದೆ. 10 ವರ್ಷದ ಬಾಲಕಿಯ ತಲೆ ಮೇಲೆ ಬಸ್ ಚಕ್ರ ಹರಿದು ಸಾವನ್ನಪ್ಪಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್ ಬಳಿ ಗುರುವಾರ ನಡೆದಿದೆ. ಮೃತ ಬಾಲಕಿಯನ್ನು ತನ್ವಿ (10) ಎಂದು ಗುರುತಿಸಲಾಗಿದೆ. ಮೃತ ಬಾಲಕಿ ಮಿಲಿಯನಿಯಂ ಸ್ಕೂಲ್ನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ತಾಯಿ ಹರ್ಷಿತಾ ಅವರು ಮಗಳನ್ನು ಸ್ಕೂಲ್ ಗೆ ಬಿಡಲು ಹೋದಾಗ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ದ್ವಿಚಕ್ರ ವಾಹನದಲ್ಲಿ ಬಾಲಕಿಯನ್ನು ತಾಯಿ ಕರೆದುಕೊಂಡು … Read more

ಯುಟ್ಯೂಬರ್ ಸಮೀರ್ಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಕುರಿತು ಅಐ ವಿಡಿಯೋ ಮಾಡಿ, ಬಂಧನ ಭೀತಿಯಲ್ಲಿದ್ದ ಯುಟ್ಯೂಬರ್ ಎಂಡಿ ಸಮೀರ್ ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಗುರುವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಧರ್ಮಸ್ಥಳ ವಿರುದ್ಧ ವಿಡಿಯೋ ಮೂಲಕ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಜುಲೈ 12ರಂದು ಸರ್ಮೀ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದರು. ಅಲ್ಲದೆ ಸಮೀರ್ನನ್ನು ವಶಕ್ಕೆ ಪಡೆಯಲು ಧರ್ಮಸ್ಥಳ ಪೊಲೀಸರು ಇಂದು ಬನ್ನೇರುಘಟ್ಟದ ನಿವಾಸಕ್ಕೆ ಆಗಮಿಸಿದ್ದರು. ಈ ಮಧ್ಯೆ ಆಗಸ್ಟ್ 19 … Read more

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಬೆಂಬಲಿಗರ ವಿರೋಧದ ನಡುವೆ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆದಿದ್ದು ಸ್ಥಳದಲ್ಲಿ ಹೈ ಡ್ರಾಮಾ ನಡೆದು ಹೋಗಿದೆ. ಪೊಲೀಸರು ಹಾಗೂ ಮಹೇಶ್ ಶೆಟ್ಟಿ ತಿಮರೋಡಿ ನಡುವೆ ವಾಕ್ಸಮರ ನಡೆದಿದ್ದು, ಧರ್ಮಸ್ಥಳದ ಕೇಸ್ ಮುಚ್ಚಿ ಹಾಕಲು ಇದೊಂದು ಮಹಾ ಷಡ್ಯಂತ್ರ ಎಂದು ತಿಮರೋಡಿ ಮಾಧ್ಯಮಗಳೆದುರು ಕೆಂಡಕಾರಿದ್ದಾರೆ. ಪೊಲೀಸರು ವಶಕ್ಕೆ ಪಡೆದ ಬಳಿಕ ಬಿಜೆಪಿ ಹಾಗೂ ಸರ್ಕಾರದ ವಿರುದ್ಧ ಮಹೇಶ್ … Read more

ಪಬ್ನಲ್ಲಿ ಗಲಾಟೆ- ಇನ್ಸ್ ಪೆಕ್ಟರ್ ಅಮಾನತು

ಮೈಸೂರು: ಪಬ್ ನಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸಿಸಿಬಿ ಇನ್ಸ್ಪೆಕ್ಟರ್ ಮೋಹನ್ ಕುಮಾರ್ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಆದೇಶ ಹೊರಡಿಸಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನ ಜೆಸಿ ನಗರದ ಪಬ್ ಒಂದಕ್ಕೆ ತೆರಳಿ ಕುಡಿದ ಮತ್ತಿನಲ್ಲಿ ಸಿಬ್ಬಂದಿ ಜೊತೆ ಜಗಳವಾಡಿದ್ದ ವಿಡಿಯೋ ವೈರಲ್ ಆಗಿತ್ತು. ಅವಾಚ್ಯ ಶಬ್ದಗಳನ್ನ ಬಳಸಿ ಆವಾಜ್ ಹಾಕಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕಮಿಷನರ್ ಸೀಮಾ ಲಾಟ್ಕರ್ ರವರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮೋಹನ್ … Read more

ಮಾದಕ ಪದಾರ್ಥ ಮಾರಾಟ- ಇಬ್ಬರ ಬಂಧನ

ಬೆಂಗಳೂರು: ವಿದ್ಯಾರ್ಥಿ ವೀಸಾದಡಿ ಬಂದು ಮಾದಕ ಪದಾರ್ಥ ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ಆಫ್ರಿಕಾ ಮೂಲದ ಜೋಯಲ್ ಕಾಬೊಂಗ್ ಹಾಗೂ ಆತನ ಸ್ನೇಹಿತೆ ಜೋಯ್ ಸಂಡೆ ಎಂಬಾಕೆಯನ್ನ ಬಂಧಿಸಲಾಗಿದ್ದು, ಬರೋಬ್ಬರಿ 5 ಕೋಟಿ ರೂ ಮೌಲ್ಯದ 2 ಕೆಜಿ 150 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್ಸ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಜೋಯಲ್ ಕಾಬೊಂಗ್ 12 ವರ್ಷಗಳ ಹಿಂದೆ ಸ್ಟೂಡೆಂಟ್ ವೀಸಾದಡಿ ಭಾರತಕ್ಕೆ ಬಂದಿದ್ದ. ಜೋಯ್ ಸಂಡೆ … Read more

ಅಗ್ನಿ ಅವಘಡ- ಐವರು ಸಜೀವ ದಹನ

ಬೆಂಗಳೂರು: ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ. ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ, ಮತ್ತೊಂದು ಮಹಡಿಯಲ್ಲಿ ಸುರೇಶ್ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾತ್ರಿ 2.30ರ ಸುಮಾರಿಗೆ ಅಗ್ನಿ ಅವಗಢ ಸಂಭವಿಸಿದ ಮಾಹಿತಿ … Read more

ಕುಸಿದು ಬಿದ್ದು ಯುವಕ ಸಾವು

ಕುಣಿಗಲ್: ಸ್ನೇಹಿತರೊಂದಿಗೆ ಕುಳಿತಿದ್ದ ಯುವಕ ದಿಢೀರ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ಪಟ್ಟಣದ ಆರ್ ಎಂಸಿ ಯಾರ್ಡ್ ಬಳಿ ಸಂಭವಿಸಿದೆ. ಮೃತನನ್ನು ವಾನಾಂಬಾಡಿ ಕಾಲೋನಿಯ ಅಭಿಲಾಷ (22) ಎಂದು ಗುರುತಿಸಲಾಗಿದೆ, ಈತ ಅಂಚೆಪಾಳ್ಯದ ಟೈಲ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಸ್ವಾತಂತ್ರೋತ್ಸವ ರಜೆ ನಿಮಿತ್ತ ಕೆಲಸಕ್ಕೆ ಹೋಗಿರಲಿಲ್ಲ. ಸ್ನೇಹಿತರು ಕರೆದ ಹಿನ್ನೆಲೆಯಲ್ಲಿ ಆರ್ ಎಂಸಿ ಯಾರ್ಡ್ ಬಳಿ ಬೈಕ್ ನಲ್ಲಿ ಬಂದು ಕುಸಿದು ಬಿದ್ದಿದ್ದ ಸ್ನೇಹಿತರು ಸಾರ್ವಜನಿಕ ಆಸ್ಪತ್ರೆಗೆ ಕರೆತರುವಾಗ ಮೃತಪಟ್ಟಿದ್ದಾರೆ, ಸಾವಿಗೆ ಹೃದಯಘಾತ ಕಾರಣ … Read more

ಸಿಲಿಂಡರ್ ಸ್ಫೋಟ- ಓರ್ವ ಬಾಲಕ ಬಲಿ

ಬೆಂಗಳೂರು: ವಿಲ್ಸನ್ ಗಾರ್ಡನ್ ನ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಬಾಲಕ ಜೀವ ಕಳೆದುಕೊಂಡಿದ್ದು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಾಣ ಕಳೆದುಕೊಂಡ ಬಾಲಕನ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೀಡಲಾಗುವುದು. ಗಾಯಾಳುಗಳ ಖರ್ಚು ಸರ್ಕಾರ ನೋಡಿಕೊಳ್ಳುತ್ತದೆ. ಘಟನೆಯಲ್ಲಿ ಒಟ್ಟು 13 ಮನೆಗಳಿಗೆ ಹಾನಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾತನಾಡಿದ ಸಿಎಂ, ಮೇಲ್ನೋಟಕ್ಕೆ ಇದು ಸಿಲಿಂಡರ್ ಸ್ಫೋಟದಂತೆ ಕಾಣಿಸುತ್ತದೆ. ಕಸ್ತೂರಮ್ಮ ಎನ್ನುವರ … Read more

ನವಜಾತ ಶಿಶು ಮಾರಾಟ ಮಹಿಳೆ ದೂರು

ಬೆಂಗಳೂರು: ನವಜಾತ ಶಿಶು ಮಾರಾಟ ಮಾಡಿ ಬಳಿಕ ಹಣ ಖರ್ಚಾದ ನಂತರ ಮಗುವನ್ನು ವಾಪಸ್ ಕೊಡಿಸಿ ಎಂದು ಮಹಿಳೆಯೊಬ್ಬರು ಡಿಜೆ ಹಳ್ಳಿ ಪೊಲೀಸ್ ಠಾಣೆ ದೂರು ನೀಡಿದ ಘಟನೆ ನಡೆದಿದೆ. ಅಮುದಾ, ರಮ್ಯಾ ಎಂಬವರಿಗೆ ಸುಮಾರು 2.5 ಲಕ್ಷ ರೂ.ಗೆ ನಸೀಂ ಬೇಗಂ ಎಂಬ ಮಹಿಳೆ ತಮ ಹೆಣ್ಣು ಮಗು ಮಾರಾಟ ಮಾಡಿದ್ದರು. ನಸೀಂ ಬೇಗಂ 15 ವರ್ಷದ ಹಿಂದೆ ದಸ್ತಗೀರ್ ಎಂಬವರ ಜೊತೆ ಮದುವೆಯಾಗಿದ್ದರು. ದಂಪತಿಗೆ ಎರಡು ಗಂಡು, 1ಹೆಣ್ಣುಮಕ್ಕಳಿದ್ದು. ಶಿವಾಜಿನಗರದ ಘೋಷಾ ಆಸ್ಪತ್ರೆಯಲ್ಲಿ ನಾಲ್ಕನೇ … Read more

ಹೊಸಕೆರೆಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ದಾಸನ ಬಂಧನ ಜಾಮೀನು ರದ್ದು- ದರ್ಶನ್ ಗ್ಯಾಂಗ್ ಜೈಲಿಗೆ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಎ2 ಆರೋಪಿ ನಟ ದರ್ಶನ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ದರ್ಶನ ಪತ್ನಿ ವಿಜಯಲಕ್ಷ್ಮಿ ಅವರ ಹೊಸಕೆರೆಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿದ್ದ ಮನೆಯಲ್ಲಿ ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿ ಏಳು ಜನ ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ … Read more