ಕೆಎಸ್ಆರ್ಟಿಸಿ ಬಸ್ ಡಿಕ್ಕಿ- ವ್ಯಕ್ತಿ ಸಾವು

ತಿಪಟೂರು: ಕೆಎಸ್ ಆರ್ ಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು 40 ವರ್ಷದ ನಾಗರಾಜು ಮೃತಪಟ್ಟಿದ್ದಾರೆ. ನಗರದ ಕೆಎಸ್ ಆರ್ ಟಿಸಿ ಬಸ್ ಸ್ಟ್ಯಾಂಡ್ ಮುಂಬಾಗ ಶಿವಮೊಗ್ಗ ಡಿಪೋ ವಿಭಾಗದ ಬಸ್ ಬರುವಾಗ ಹಾಲುಕುರ್ಕೆ ವಾಸಿ ಪ್ರದೀಪ್ ಮತ್ತು ನಾಗರಾಜು ಬೈಕ್ ನಲ್ಲಿ ಬರುತ್ತಿದ್ದಾಗ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನ ಹಿಂಬದಿ ಕುಳಿತಿದ್ದ ನಾಗರಾಜು ಸ್ಥಳದಲ್ಲೇ ಮೃತಪಟ್ಟಿದ್ದು ಪ್ರದೀಪ್ ಗಾಯಗೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ತಿಪಟೂರು ನಗರ ಠಾಣೆ ಪೊಲೀಸರು ಭೇಟಿ … Read more

ಎಟಿಎಂನಲ್ಲಿ ಹಣ ಕದಿಯುತ್ತಿದ್ದ ಕಳ್ಳ ಬಂಧನ

ಬಳ್ಳಾರಿ: ಬಳ್ಳಾರಿಯಲ್ಲಿ ಎಟಿಎಂ ಕಿಯೋಸ್ಕ್ ಮುರಿದು ಹಣ ಕದಿಯುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಕಾಳಮ್ಮ ಸರ್ಕಲ್ ಬಳಿ ಇರುವ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ನುಗ್ಗಿ ಕಳ್ಳತನ ಮಾಡಲು ಯತ್ನಿಸಿದ ಆರೋಪಿಯನ್ನು ರಾತ್ರಿ ಬೀಟ್ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಬ್ರೂಸ್ ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಲ್ಲಿಕಾರ್ಜುನ್ ಅವರಿಗೆ ಎಟಿಎಂನಲ್ಲಿ ಕಳ್ಳನ ಇರುವಿಕೆಯ ಬಗ್ಗೆ ಸುಳಿವು ಸಿಕ್ಕಿದ್ದು, ಕೂಡಲೇ ಎಎಸ್ ಐ ಮತ್ತು ಇಬ್ಬರು ಕಾನ್ಸ್ ಟೆಬಲ್ ಗಳು ಎಟಿಎಂಗೆ ಧಾವಿಸಿ ಕಳ್ಳನನ್ನು … Read more

ಜಾತಿ ನಿಂದನೆ ಆರೋಪ- ಸ್ವಾಮೀಜಿ ವಿರುದ್ಧ ಪ್ರಕರಣ

ಕುಣಿಗಲ್: ದೇವಾಲಯದೊಳಗೆ ಪ್ರವೇಶವನ್ನು ತಡೆದು, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಕುಣಿಗಲ್ ತಾಲ್ಲೂಕಿನ ಹಂಗರಹಳ್ಳಿ ಗ್ರಾಮದ ವಿದ್ಯಾಚೌಡೇಶ್ವರಿ ದೇವಸ್ಥಾನದ ಬಾಲಮಂಜುನಾಥ ಸ್ವಾಮೀಜಿ ಸೇರಿದಂತೆ ಐವರು ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಗಡಿ ತಾಲ್ಲೂಕಿನ ಚಂದುರಾಯನಹಳ್ಳಿ ಗ್ರಾಮದ ಎಸ್.ಜಿ.ವನಜಾ ಎಂಬ ಮಹಿಳೆ ನೀಡಿರುವ ದೂರಿನ ಪ್ರಕಾರ, ಅವರು ದೇವಾಲಯಕ್ಕೆ ಕರ್ಪೂರ ಹಚ್ಚಲು ಹೋಗಿದ್ದಾಗ, ಸ್ವಾಮೀಜಿಯವರು ಮಾದಿಗಳು ಬರುತ್ತಿದ್ದಾಳೆ, ಬಾಗಿಲು ಹಾಕಿ ಎಂದು ತಮ್ಮ ಆಪ್ತರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಹೇಳಿಕೆಯನ್ನು ಆಧರಿಸಿ ದೇವಾಲಯದ … Read more

ಅಸ್ಥಿ ಪಂಜರಗಳ ಶೋಧ ಕಾರ್ಯಾಚರಣೆ ಪಾಯಿಂಟ್ ನಂ.13 ರಲ್ಲಿ ಜಿಪಿಆರ್ ಸ್ಕ್ಯಾನ್

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶವ ಹೂತಿಟ್ಟಿದ್ದಾಗಿ ದೂರುದಾರರೊಬ್ಬರು ಹೇಳಿದ್ದಂತ ತಪ್ಪೊಪ್ಪಿಗೆ ಹೇಳಿಕೆಯಿಂದಾಗಿ ಎಸ್ ಐಟಿಯಿಂದ ಅಸ್ಥಿ ಪಂಜರಗಳ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದೀಗ ಜಿಪಿಆರ್ ಮೂಲಕ ಪಾಯಿಂಟ್ ನಂ.13ರಲ್ಲಿ ಸ್ಕ್ಯಾನ್ ಮಾಡಲಾಗಿದ್ದು, ಅದರ ಮುಕ್ತಾಯದ ಬಳಿಕ ತಂತ್ರಜ್ಞರು ಪೂಟೇಜ್ ಪರಿಶೀಲನೆಯಲ್ಲಿ ತೊಡಗಿದ್ದಾರೆ.ಧರ್ಮಸ್ಥಳದಲ್ಲಿ ಶವಗಳ ಅಸ್ಥಿ ಪಂಜರಗಳಿಗಾಗಿ ಎಸ್ ಐಟಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಪಾಯಿಂಟ್ ನಂ.6ರಲ್ಲಿ ಹೊರತಾಗಿ ಇದುವರೆಗಿನ ಶೋಧ ಕಾರ್ಯಾಚರಣೆಯಲ್ಲಿ ಎಸ್ ಐಟಿಗೆ ಅಸ್ಥಿಪಂಜರಗಳು ಬೇರೆ ಯಾವುದೇ ಪಾಯಿಂಟ್ ನಲ್ಲಿ ದೊರೆತಿಲ್ಲ. ಇನ್ನೂ ದೂರುದಾರ ತೋರಿಸುತ್ತಿರುವಂತ ಸ್ಥಳಗಳಲ್ಲಿ … Read more

ವಿದ್ಯಾರ್ಥಿನಿಯರ ಮೇಲೆ ಬೀದಿ ನಾಯಿ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ನಾಯಿ ಕಡಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೀದಿ ನಾಯಿ ದಾಳಿಯಿಂದ ಬೆಂಗಳೂರು ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿನಿಯರು ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಕ್ಯಾಂಪಸ್ ನ ನಾಗರಭಾವಿ ಬಳಿ ಈ ಘಟನೆ ಸಂಭವಿಸಿದೆ. ಈ ಇಬ್ಬರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿದ್ಯಾರ್ಥಿನಿಯರು ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ವಿವಿಯಲ್ಲಿ 3ನೇ ಸೆಮಿಸ್ಟೆರ್ ನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ತೆಲಂಗಾಣ ಮತ್ತು ಹರ್ವಿರಿಯ ಮೂಲದ … Read more

ಕೆಎನ್ಆರ್ ವಜಾ ವಿರೋಧಿಸಿ ಪ್ರತಿಭಟನೆ

ತುಮಕೂರು: ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಅವರ ಬೆಂಬಲಿಗರು ಮಂಗಳವಾರ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೌನ್ಸಿಲರ್ ಗಿರಿಜಾ ಮಂಜುನಾಥ್ ಮಧುಗಿರಿ ಪುರಸಭೆಗೆ ರಾಜೀನಾಮೆ ನೀಡಿದ್ದು, ಇತರರು ರಾಜಣ್ಣ ಅವರಿಗೆ ಮಾಡಿದ ಅವಮಾನವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ರಾಜಣ್ಣ ಅವರ ಅಭಿಮಾನಿ ಶಿವಲಿಂಗ ಎಂಬುವವರು ಪೆಟ್ರೋಲ್ ಸುರಿದುಕೊಂಡಿದ್ದು, ಸ್ಥಳದಲ್ಲಿದ್ದವರು ಅವರನ್ನು ತಡೆದು ಸಮಾಧಾನಪಡಿಸಿದ್ದಾರೆ. ರಾಜಣ್ಣ ಅವರ ಬೆಂಬಲಿಗರು ತಮ್ಮ ನಾಯಕನ ಪರವಾಗಿ ಬ್ಯಾನರ್ … Read more

ಸಂಸದ ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಮಾಜಿ ಸಚಿವ ಬಿಜೆಪಿ ಸಂಸದ ಸುಧಾಕರ್ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಿ ಕಾರು ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ಬಾಬು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದ ಹಿಂಭಾಗದಲ್ಲಿರುವ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ಸಂಸದ ಡಾ.ಕೆ.ಸುಧಾಕರ್ ಕಾರಣ. ಚಿಕ್ಕಕಾಡಿಗಾನಹಳ್ಳಿ ನಾಗೇಶ್ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ಹಣ … Read more

ಬಿ.ಕೋಡಿಹಳ್ಳಿಯಲ್ಲಿ ಚಿರತೆ ಸೆರೆ

ಗುಬ್ಬಿ: ತಾಲೂಕಿನ ನೇರಳೆಕೆರೆ ಹಾಗೂ ಬಿ.ಕೋಡಿಹಳ್ಳಿ ಗ್ರಾಮದಲ್ಲಿ ಪ್ರತ್ಯೇಕವಾಗಿ ಎರಡು ಚಿರತೆ ಇಬ್ಬರ ಮೇಲೆ ಅಟ್ಯಾಕ್ ಮಾಡಿದಂತಹ ಘಟನೆ ಬುಧವಾರ ನಡೆದಿತ್ತು. ಗುರುವಾರ ಬಿ.ಕೋಡಿಹಳ್ಳಿ ಭಾಗದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ನರಸಿಂಹಯ್ಯ ಹಾಗೂ ಬಿ.ಕೋಡಿಹಳ್ಳಿಯಲ್ಲಿ ಬೆಟ್ಟಸ್ವಾಮಿ ಎಂಬುವರ ಮೇಲೆ ಚಿರತೆ ಅಟ್ಯಾಕ್ ಮಾಡಿ ಗಾಯಗೊಳಿಸಿತ್ತು, ಗುರುವಾರ ಅರಣ್ಯ ಇಲಾಖೆಯ ಅಧಿಕಾರಿ ಸತೀಶ್ ಚಂದ್ರ ನೇತೃತ್ವದಲ್ಲಿ ಎಂಟು ವರ್ಷದ ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದು ದೂರದ ಕಾಡಿಗೆ ಬಿಡುವುದಾಗಿ ತಿಳಿಸಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್, … Read more

ಕೈ ಕಾಲು ನೋಡಿ ಪೊಲೀಸರೇ ಶಾಕ್- ಸ್ಥಳಕ್ಕೆ ಎಸ್ಪಿ ಭೇಟಿಮಹಿಳೆ ದೇಹ ತುಂಡು ಮಾಡಿದ ದುಷ್ಕರ್ಮಿ!

ಕೊರಟಗೆರೆ: ಮನುಷ್ಯನ ವಿಕೃತಿಯ ಮನಸ್ಸು ಹೇಗಿರುತ್ತೇ ಎಂಬುದಕ್ಕೆ ಕೊರಟಗೆರೆಯಲ್ಲಿ ಸಿಕ್ಕಿರುವ ಮಹಿಳೆಯ ದೇಹದ ತುಂಡು ತುಂಡು ಭಾಗಗಳೇ ಹೇಳುತ್ತೆ, ಅಪರಿಚಿತ ಮಹಿಳೆಯ ರುಂಡ- ಮುಂಡ ಸೇರಿದಂತೆ ಕೈಕಾಲು ಕಟ್ ಮಾಡಿ ಹತ್ತಾರು ಕಡೆಗಳಲ್ಲಿ ಎಸೆದಿರುವ ಕೃತ್ಯ ಮಾನವ ಕುಲವನ್ನೇ ಪ್ರಶ್ನೆ ಮಾಡುವ ಹಾಗೆ ಮಾಡಿದೆ. ಇದು ನಡೆದಿರೋದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ವಕ್ಷೇತ್ರವಾದ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಂಪುಗಾನಹಳ್ಳಿ ಸಮೀಪದ ಮುತ್ಯಾಲಮ್ಮ ದೇವಾಲಯ ಮತ್ತು ಸಿದ್ದರಬೆಟ್ಟದ ಸುಮಾರು 8 ಕಡೆಗಳಲ್ಲಿ ಅಪರಿಚಿತ … Read more

ಅಪರಿಚಿತ ಮಹಿಳೆ ಶವ ಪತ್ತೆ

ಕುಣಿಗಲ್: ಪಟ್ಟಣದ ಬಿದನಗೆರೆಯ ಬಸವೇಶ್ವರ ಮಠಧ ಆವರಣದಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ. ಮೃತಳು ಸುಮಾರು 70ವರ್ಷ ವಯೋಮಾನದವರಾಗಿದ್ದು, ಹೆಸರು ಶಿವಮ್ಮ ಎಂತಲೂ ಕುಣಿಗಲ್ನವರೆಂದು ಇನ್ನು ಕೆಲವೊಮ್ಮೆ ಮಧುಗಿರಿ ಹತ್ತಿರದ ಸಿದ್ದಾಪುರ ಎಂದು ಹೇಳಿಕೊಂಡು ಬಿದನಗೆರೆ ಬಸವೆಶ್ವರ ಮಠದಲ್ಲಿ ಕೆಲಸ ಮಾಡಿಕೊಂಡು ಅಲ್ಲಿಯೆ ಮಲಗುತ್ತಿದ್ದರು, ಗುರುವಾರ ಬೆಳಗ್ಗೆ ಮೃತಪಟ್ಟಿರುವುದು ಕಂಡುಬಂದಿದೆ. ಮೃತಳು ಚಪ್ಪಟೆ ಮುಖ,ಗೋದಿ ಮೈ ಬಣ್ಣ, ಐದು ಅಡಿ ಎತ್ತರ, ಸಣ್ಣನೆ ಶರೀರ ಹೊಂದಿದ್ದಾರೆ, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.