ಕ್ಷುಲ್ಲಕ ಕಾರಣಕ್ಕೆ ದೊಣ್ಣೆಯಿಂದ ಹಲ್ಲೆ- ವೃದ್ಧ ಸಾವು
ಪಾವಗಡ: ದ್ವಿಚಕ್ರ ವಾಹನಕ್ಕೆ ಬಾಲಕ ಅಡ್ಡಬಂದನೆಂಬ ಕಾರಣಕ್ಕೆ ವಾಹನ ಸವಾರ ಬಾಲಕನ ಕುಟುಂಬದವರ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ ಪರಿಣಾಮ ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳಿಬಟ್ಲು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಹನುಮಂತರಾಯಪ್ಪ (60) ಎನ್ನಲಾಗಿದ್ದು, ಹಲ್ಲೆ ಮಾಡಿದ ಆರೋಪಿ ಅದೇ ಗ್ರಾಮದ ವಾಲ್ಮೀಕಿ ಅಲಿಯಾಸ್ ಓಬಳಪತಿ (45) ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನ ಬಂಧನಕ್ಕಾಗಿ ಶೋಧ ನಡೆಸಿದ್ದಾರೆ. ಸೆಪ್ಟೆಂಬರ್ 10 ಬುಧವಾರ ಬೆಳ್ಳಿಬಟ್ಲು ಗ್ರಾಮದ ಬಾಲಾಜಿ … Read more






