ಅಕ್ಕಿ ದುರ್ಬಳಕೆ ತಪ್ಪಿಸಲು ಇಂದಿರಾ ಕಿಟ್: ಡಿಕೆಶಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿರುವ ಅಕ್ಕಿ ದುರ್ಬಳಕೆ ಮಾಡುವುದನ್ನು ತಪ್ಪಿಸಲು, ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ಸೇರಿದಂತೆ ಐದಾರು ಪದಾರ್ಥಗಳಿರುವ ಇಂದಿರಾ ಕಿಟ್ ವಿತರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ವಿಶ್ವ ಆಹಾರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಅನ್ನ ಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯನ್ನು 10 ಕೆ.ಜಿಗೆ ಏರಿಸುವುದಾಗಿ ಭರವಸೆ ನೀಡಿದೆವು. ನಂತರ ಇದರ ದುರ್ಬಳಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಸಚಿವ … Read more

ನಟ ಪಂಕಜ್ ಧೀರ್ ನಿಧನ

ಮುಂಬೈ: ಭಾರತದ ಬಲು ಜನಪ್ರಿಯ ಧಾರಾವಾಹಿ ಮಹಾಭಾರತದಲ್ಲಿ ಕರ್ಣನ ಪಾತ್ರ ಸೇರಿದಂತೆ ಹಲವಾರು ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ನಟ ಪಂಕಜ್ ಧೀರ್ (68) ಬುಧವಾರ ನಿಧನ ಹೊಂದಿದ್ದಾರೆ. ಪಂಕಜ್ ಧೀರ್ ಅವರು ಹಲವು ವರ್ಷಗಳಿಂದಲೂ ಕ್ಯಾನ್ಸರ್ ಜೊತೆ ಹೋರಾಡುತ್ತಿದ್ದರು. ಇತ್ತೀಚೆಗಷ್ಟೆ ಕ್ಯಾನ್ಸರ್ ಗಾಗಿ ಪ್ರಮುಖ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ನಿಧನ ಹೊಂದಿದ್ದಾರೆ. ಪಂಕಜ್ ಅವರು ಹಿಂದಿಯ ಹಲವಾರು ಜನಪ್ರಿಯ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ ವಿಷ್ಣುವರ್ಧನ್ ಜೊತೆಗೆ ಎರಡು ಕನ್ನಡ ಸಿನಿಮಾಗಳಲ್ಲಿಯೂ … Read more

ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆ

ಕೋಲಾರ: ಜಾತಿ ಗಣತಿ ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆಯಾಗಿದ್ದು, ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಅಖ್ತರ್ ಬೇಗಂ ಮೃತಪಟ್ಟ ಮಹಿಳೆಯಾಗಿದ್ದಾರೆ. ಕೆಜಿಎಫ್ ತಾಲೂಕಿನ ಐಪಲ್ಲಿ ಕೆರೆಯಲ್ಲಿ ಅವರ ಶವ ಪತ್ತೆಯಾಗಿದೆ. ಕೋಲಾರ ತಾಲೂಕಿನ ಬಿ.ಹೊಸಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಅಖ್ತರ್ ಬೇಗಂ ಕೋಲಾರದ ಮಹಾಲಕ್ಷ್ಮಿ ಬಡವಾಣೆಯ ನಿವಾಸಿಯಾಗಿದ್ದರು. ನರಸಾಪುರದಲ್ಲಿ ಸಮೀಕ್ಷೆ ಕಾರ್ಯ ನಡೆಸಿದ ಬಳಿಕ ನಾಪತ್ತೆಯಾಗಿದ್ದರು. ಎರಡು ದಿನಗಳಿಂದ ನಾಪತ್ತೆಯಾಗಿದ್ದ ಶಿಕ್ಷಕಿ ಸುಳಿವು ಸಿಕ್ಕಿರಲಿಲ್ಲ. ಈ ಸಂಬಂಧ ಕೋಲಾರ ಪೊಲೀಸ್ ಠಾಣೆಯಲ್ಲಿ … Read more

ಇಂಜೆಕ್ಷನ್ ನೀಡಿ ಪತ್ನಿಯನ್ನೇ ಕೊಂದ ವೈದ್ಯ

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ವೈದ್ಯ ಪತ್ನಿಯನ್ನೇ ಇಂಜೆಕ್ಷನ್ ನೀಡಿ ಡಾಕ್ಟರ್ ಪತಿ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂಬುದಾಗಿ ನಾಟಕವಾಡಿದ್ದಾರೆ, ಆ ಬಳಿಕ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಇಂಜೆಕ್ಷನ್ ನೀಡಿ ಹತ್ಯೆಗೈದಿರುವ ಶಾಕಿಂಗ್ ಮಾಹಿತಿ ಬಹಿರಂಗವಾಗಿದೆ. ಹೀಗಾಗಿ ಪತ್ನಿಯನ್ನೇ ಇಂಜೆಕ್ಷನ್ ನೀಡಿ ಕೊಂದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ.ಮೇ.26, 2024ರಂದು ಡಾ.ಮಹೇಂದ್ರ ರೆಡ್ಡಿ ಹಾಗೂ ಡಾ.ಕೃತಿಕಾ ರೆಡ್ಡಿ ವಿವಾಹವಾಗಿತ್ತು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞೆಯಾಗಿ ಡಾ.ಕೃತಿಕಾರೆಡ್ಡಿ ಕಾರ್ಯ ನಿರ್ವಹಿಸುತ್ತಿದ್ದರು. ಅವರು ಅಜೀರ್ಣ, ಗ್ಯಾಸ್ಟ್ರಿಕ್, ಲೋಶುಗರ್ ನಿಂದ … Read more

ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್

ಹಾಸನ: ಹಾಸನದ ಹಾಸನಾಂಬೆ ದೇವಿಯ ಆರಾಧನೆ ಕರ್ನಾಟಕದ ಜನರ ಹೃದಯಗಳಲ್ಲಿ ಶಾಶ್ವತ ಸ್ಥಾನ ಪಡೆದಿದೆ. ವರ್ಷಕ್ಕೆ ಕೇವಲ ಕೆಲವು ದಿನಗಳಷ್ಟೇ ತೆರೆದಿರೋ ಈ ದೇವಸ್ಥಾನದಲ್ಲಿ ದರುಶನ ಪಡೆಯಲು ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಬಾರಿ ಬೂಕರ್ ಪ್ರಶಸ್ತಿ ವಿಜೇತೆ ಹಾಗೂ ಖ್ಯಾತ ಕನ್ನಡ ಸಾಹಿತಿ ಬಾನು ಮುಷ್ತಾಕ್ ಅವರು ಹಾಸನಾಂಬೆ ದೇವಿಯ ದರುಶನ ಪಡೆದು ಆಶೀರ್ವಾದ ಪಡೆದಿದ್ದಾರೆ. ಹಾಸನದ ಮೂಲದ ಬಾನು ಮುಷ್ತಾಕ್, ಬಾಲ್ಯದಿಂದಲೇ ಸಾಮಾಜಿಕ ಹೋರಾಟ ಮತ್ತು ಸಾಹಿತ್ಯದಲ್ಲಿ ತೊಡಗಿಸಿಕೊಂಡವರು. ಪತ್ರಕರ್ತೆಯಾಗಿ, ವಕೀಲೆಯಾಗಿಯೂ, ಹೋರಾಟಗಾರ್ತಿಯಾಗಿ ಅವರು … Read more

ನಟ ಉಮೇಶ್ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು: ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವಂತ ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಆರೋಗ್ಯ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿಯಂತೆ ಹಿರಿಯ ನಟ ಉಮೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಅವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಅವರು ಮನೆಯಲ್ಲಿ ಸ್ನಾನದ ರೂಂ ನಲ್ಲಿ ಕಾಲು ಜಾರಿ ಆಯಾ ತಪ್ಪಿ ಬಿದ್ದಿದ್ದರು. ಆ ಬಳಿಕ ಅವರ ಸ್ಥಿತಿ ಗಂಭೀರವಾಗಿತ್ತು. ಹೀಗಾಗಿ ಅವರನ್ನು ಬೆಂಗಳೂರಿನ … Read more

ಟ್ರಕ್, ಬಸ್ ನಡುವೆ ಡಿಕ್ಕಿ- ಇಬ್ಬರ ಸಾವು

ಮೈಸೂರು: ಶುಕ್ರವಾರ ಬೆಳಗಿನ ಜಾವ ಟ್ರಕ್ ಮತ್ತು ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೈಸೂರು- ಮಡಿಕೇರಿ ರಸ್ತೆಯ ಹುಣಸೂರು ತಾಲ್ಲೂಕಿನ ಜಡಗನಕೊಪ್ಪಲು ಬಳಿ ಬೆಳಗಿನ ಜಾವ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿತ್ತು, ಮೃತರನ್ನು ಬಸ್ ಚಾಲಕ ಶಂಶಾದ್ ಮತ್ತು ಕ್ಲೀನರ್ ದಿನೇಶ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಖಾಸಗಿ ಬಸ್ ಮೈಸೂರು ಕಡೆಗೆ ಹೋಗುತ್ತಿದ್ದು ಸಿಮೆಂಟ್ ಚೀಲಗಳನ್ನು ತುಂಬಿದ ಟ್ರಕ್ ಹುಣಸೂರು ಕಡೆಗೆ ಹೋಗುತ್ತಿತ್ತು. ಪೊಲೀಸರು … Read more

ಪೋಕ್ಸೋ ಆರೋಪಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಲ್ಲಿ ಸಿಟಿ ಸಿವಿಲ್ ಕೋರ್ಟ್ ನ 5ನೇ ಮಹಡಿಯಿಂದ ಜಿಗಿದು ಪೋಕ್ಸೋ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೋರ್ಟ್ ನ 5ನೇ ಮಹಡಿಯಿಂದ ಕೆಳ್ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣ ಆರೋಪಿಯನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ದಾಖಲಿಸಿ ಸಾರ್ವಜನಿಕರು ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಹಲಸೂರು ಗೇಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಟಿ ರಮ್ಯಾಗೆ ಅಶ್ಲೀಲ ಸಂದೇಶ- ಚಾರ್ಜ್ಶೀಟ್ ಸಲ್ಲಿಕೆ

ಬೆಂಗಳೂರು: ದರ್ಶನ್ ಅಭಿಮಾನಿಗಳಿಂದ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಸಿಬಿ ಪೊಲೀಸರು 11 ಆರೋಪಿಗಳ ವಿರುದ್ಧ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸುಮಾರು 380 ಪುಟಗಳ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ 45ನೇ ಎಸಿಜೆಎಂ ಕೋರ್ಟಿಗೆ ಸಲ್ಲಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕಿದ್ದ ಸ್ಕ್ರೀನ್ ಶಾಟ್, ಆರೋಪಿಗಳ ಮೊಬೈಲ್, ದೂರುದಾರೆ ರಮ್ಯಾ ಸ್ಟೇಟ್ಮೆಂಟ್, ಹಾಗೂ ಎಫ್ ಎಸ್ ಎಲ್ ವರದಿ ಆರೋಪಿಗಳ ಸ್ವ ಇಚ್ಚ ಹೇಳಿಕೆ ಆಧಾರದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು … Read more

ಎಸ್ ಬಿಐ ದರೋಡೆ- ನಾಲ್ವರ ಬಂಧನ

ಬೆಂಗಳೂರು: ಇತ್ತೀಚಿಗೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನಲ್ಲಿ ಎಸ್ ಬಿಐ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ ನಾಲ್ವರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ತನಿಖೆ ದೃಷ್ಟಿಯಿಂದ ಆರೋಪಿಗಳ ಹೆಸರು, ಮತ್ತು ಮಾಹಿತಿಯನ್ನು ಗೌಪ್ಯವಾಗಿಸಿದ್ದಾರೆ. ಸದ್ಯಕ್ಕೆ 9 ಕೆಜಿ ಚಿನ್ನ 86.31 ಲಕ್ಷ ನಗದು ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಡಚಣ ಎಸ್ ಬಿಐ ಬ್ಯಾಂಕ್ ದರೋಡೆಗೆ ಆರೋಪಗಳಿಗೆ ನೇರವಾಗಿದ್ದ ಬಿಹಾರ ಮೂಲದ ಮೂವರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ರಾಕೇಶ್ ಕುಮಾರ್ ಸಹಾನಿ (22) ರಾಜಕುಮಾರ … Read more