ಸಿಎಂ ಆಯ್ಕೆ ಹೈಕಮಾಂಡ್ ತೀರ್ಮಾನಿಸುತ್ತೆ: ರಮ್ಯಾ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಸ್ಥಾನ ಕುರಿತ ಕಿತ್ತಾಟದ ಕುರಿತು ನಟಿ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಖಾಸಗಿ ಆಸ್ಪತ್ರೆಯೊಂದು ಉದ್ಘಾಟನೆ ಕಾರ್ಯಕ್ರಮದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರಮ್ಯಾ, ಮುಖ್ಯಮಂತ್ರಿ ಯಾರು ಎನ್ನುವುದನ್ನು ತಾವೇ ನಿರ್ಧರಿಸುವ ವಿಷಯವಲ್ಲ, ಅದು ಪಕ್ಷದ ಹೈಕಮಾಂಡ್ ಕೈಯಲ್ಲಿರುವ ತೀರ್ಮಾನ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಮುಖ್ಯಮಂತ್ರಿ ಕುರಿತು ಅಂತಿಮ ನಿರ್ಧಾರವನ್ನು ಪಕ್ಷದ ಹಿರಿಯ ನಾಯಕರು ತೆಗೆದುಕೊಳ್ಳುತ್ತಾರೆ. ಈ ವಿಚಾರದಲ್ಲಿ ಎಲ್ಲರಿಗೂ ತಮ್ಮ ತಮ್ಮ ಅಭಿಪ್ರಾಯ … Read more

ಜೈಲುಗಳಲ್ಲಿ ಕಳ್ಳಭಟ್ಟಿ ತಯಾರು- ಆರ್.ಅಶೋಕ್ ಕಿಡಿ

ಬೆಂಗಳೂರು: ಸರ್ಕಾರ ಕುರ್ಚಿ ಕಿತ್ತಾಟದಲ್ಲಿ ಮುಳುಗಿದ್ದರೆ, ಮತ್ತೊಂದು ಕಡೆ ಆಡಳಿತ ನಿಷ್ಕ್ರಿಯತೆಯಿಂದ ಜೈಲುಗಳು ಕಳ್ಳಭಟ್ಟಿ ತಯಾರಿಕಾ ಫ್ಯಾಕ್ಟರಿಗಳಾಗಿ ಮಾರ್ಪಟ್ಟಿವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ತಮ ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೇ, ಕಾರಾಗ್ರಹಗಳು ಕಳ್ಳಭಟ್ಟಿ ಕಾರ್ಖಾನೆಗಳಾಗಿ ಮಾರ್ಪಟ್ಟಿರುವ ವಿಷಯ ತಮಗೆ ಗೊತ್ತಿದೆಯೋ ಅಥವಾ ಎಂದಿನಂತೆ ಗೊತ್ತಿಲ್ಲ ಎಂದು ಜಾರಿಕೊಳ್ಳುತ್ತೀರೋ? ಎಂದು ಪ್ರಶ್ನೆ ಮಾಡಿದ್ದಾರೆ. ಒಂದು ಕಡೆ ಕಾಂಗ್ರೆಸ್ ಸರ್ಕಾರ ಕುರ್ಚಿ … Read more

ಆನ್ ಲೈನ್ ಲೈಂಗಿಕ ಕಿರುಕುಳ- ವಿದ್ಯಾರ್ಥಿನಿಗೆ ಬೆದರಿಕೆ

ಬೆಂಗಳೂರು: ಬೆಂಗಳೂರಿನಲ್ಲಿದ್ದ 24 ವರ್ಷದ ಶ್ರೀಲಂಕಾದ ಪ್ರಜೆಯೊಬ್ಬರು ಆನ್ ಲೈನ್ ಲೈಂಗಿಕ ಕಿರುಕುಳ ಜಾಲಕ್ಕೆ ಬಲಿಯಾಗಿದ್ದು, ಈ ಸಂಬಂಧ ದೂರು ದಾಖಲಾಗಿದೆ. ದೂರುದಾರರ ಪ್ರಕಾರ, ಅಪರಿಚಿತ ವ್ಯಕ್ತಿ ಇನ್ ಸ್ಟಾಗ್ರಾಂನಲ್ಲಿ ಸಂತ್ರಸ್ತ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದಾನೆ. ಕ್ರಮೇಣ ಆನ್ ಲೈನ್ ಮೂಲಕ ಸ್ನೇಹ ಬೆಳೆಸಿಕೊಂಡು ನಂತರ ವಾಟ್ಸಾಪ್ ನಲ್ಲಿ ಸಂತ್ರಸ್ತೆಯನ್ನು ಸಂಪರ್ಕಿಸಿದ್ದಾನೆ. ವಿಡಿಯೋ ಕರೆಗಳ ಸಮಯದಲ್ಲಿ, ಆರೋಪಿಯು ತನ್ನ ಒಪ್ಪಿಗೆಯಿಲ್ಲದೆ ವೈಯಕ್ತಿಕ ಪೋಟೊಗಳು ಮತ್ತು ಖಾಸಗಿ ವಿಡಿಯೋಗಳನ್ನು ರಹಸ್ಯವಾಗಿ ತೆಗೆದುಕೊಂಡಿದ್ದಾನೆ. ನಂತರ ಅವುಗಳನ್ನು ಡಿಲೀಟ್ ಮಾಡಲು ಹಣಕ್ಕೆ ಬೇಡಿಕೆ … Read more

ಬಾಲಿಹುಡ್ ನ ಹಿರಿಯ ನಟ ಧರ್ಮೇಂದ್ರ ನಿಧನ

ಮುಂಬೈ: ಬಾಲಿವುಡ್ ನ ಎವರ್ ಗ್ರೀನ್ ಸ್ಟಾರ್ ಹಾಗೂ ಆಕ್ಷನ್ ಕಿಂಗ್ ಎಂದು ಹೆಸರಾಗಿದ್ದ ಹಿರಿಯ ನಟ ಧರ್ಮೇಂದ್ರ ಅವರು 89ನೇ ವಯಸ್ಸಿನಲ್ಲಿ ಸೋಮವಾರ ಮುಂಬೈನ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಇನ್ನೂ ಎರಡು ವಾರಗಳಲ್ಲಿ 90ನೇ ವಸಂತಕ್ಕೆ ಕಾಲಿಡಬೇಕಿದ್ದ ಧರ್ಮೇಂದ್ರ ಅವರ ಅಗಲಿಕೆಯಿಂದ ಚಲನಚಿತ್ರ ಕ್ಷೇತ್ರದಲ್ಲಿ ತುಂಬಲಾರದ ನಷ್ಟವಾಗಿದೆ.

ತಡೆಗೋಡೆಗೆ ಕಾರು ಡಿಕ್ಕಿ – ನಾಲ್ವರು ಸಾವು

ಕೋಲಾರ: ಸೋಮವಾರ ಬೆಳಗಿನ ಜಾವ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಗ್ರಾಮದಲ್ಲಿ ಅತಿವೇಗದಿಂದ ಬಂದ ಕಾರೊಂದು ಫ್ಲೈಓವರ್ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದು, ಅಂಡರ್ ಪಾಸ್ ಗೆ ಉರುಳಿ ಬಿದ್ದ ಪರಿಣಾಮ ಶಬರಿಮಲೆಗೆ ತೆರಳುತ್ತಿದ್ದ ನಾಲ್ವರು ಯಾತ್ರಿಕರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಬೆಳಗಿನ ಜಾವ 2.15 ರಿಂದ 2.30ರ ನಡುವೆ ಸಂಭವಿಸಿದೆ. ಅಪಘಾತದಲ್ಲಿ ಸಾವಿಗೀಡಾದವರೆಲ್ಲರೂ ಸ್ನೇಹಿತರಾಗಿದ್ದು, ಕೇರಳದ ಶಬರಿಮಲೆಗೆ ಕಾರಿನಲ್ಲಿ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಗೋಪಿ (38), ಗೌತಮ್ ರಮೇಶ್ (28), ಹರಿಹರನ್ … Read more

ಅಪಘಾತದಲ್ಲಿ ವಿದ್ಯಾರ್ಥಿ ತೇಜಸ್ ಗೌಡ ಸಾವು

ಬೆಂಗಳೂರು: ನೆಲಮಂಗಲದಲ್ಲಿ ನಡೆದ ಅಪಘಾತದಲ್ಲಿ ಜರ್ಮನಿಯಲ್ಲಿ ಎಂಎಸ್ ಪದವಿ ಪಡೆಯುತ್ತಿದ್ದ 27 ವರ್ಷದ ಯುವಕ ಸಾವನ್ನಪ್ಪಿದ್ದಾನೆ. ನೆಲಮಂಗಲದ ಸಿ.ತೇಜಸ್ ಗೌಡ ಮೃತ ವಿದ್ಯಾರ್ಥಿ. ಬೈಕ್ ಸ್ಕಿಡ್ ಆಗಿ ರಸ್ತೆ ವಿಭಜಕಕ್ಕೆ ಬಿದ್ದ ಪರಿಣಾಮ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದ್ದಾನೆ. ಹೆಲ್ಮೆಟ್ ಧರಿಸಿರಲಿಲ್ಲ, ಇದರಿಂದ ತಲೆಗೆ ತೀವ್ರ ಪೆಟ್ಟಾಗಿದೆ. ಸೋಮವಾರ ಬೆಸ್ಕಾಂ ಕಚೇರಿ ಎದುರು, ತೇಜಸ್ ಸ್ನೇಹಿತನ ಮದುವೆಗೆ ಹೋಗಿ ಮನೆಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಒಂದು ವಾರದ ಹಿಂದೆ … Read more

ಕಾರು ಅಡ್ಡಗಟ್ಟಿ ಹಲ್ಲೆ ಮಾಡಿ ಚಿನ್ನ ದರೋಡೆ

ಚಾಮರಾಜನಗರ: ಬೆಂಗಳೂರು ರಾಬರಿ ಪ್ರಕರಣ ತನಿಖೆ ನಡೆಯುವ ಹೊತ್ತಲ್ಲೇ ರಾಜ್ಯದಲ್ಲಿ ಮತ್ತೊಂದು ದರೋಡೆ ನಡೆದಿದೆ. ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಕೂಡ ರಾಬರಿ ಪ್ರಕರಣ ನಡೆದಿದೆ. ಕಾರನ್ನು ಫಾಲೋ ಮಾಡಿಕೊಂಡು ಬಂದ ಕೇರಳ ಗ್ಯಾಂಗ್ ಒಂದು ಸಿನಿಮಾ ಸ್ಟೈಲ್ ನಲ್ಲಿ ಬಂಡೀಪುರದ ಅರಣ್ಯದಲ್ಲಿ ಕಾರನ್ನು ಅಡ್ಡಗಟ್ಟಿ ಹಲ್ಲೆ ಮಾಡಿ ಚಿನ್ನ ದರೋಡೆ ಮಾಡಿ ಹೋಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಿಂದ ಕೇರಳಕ್ಕೆ ಹಾದು ಹೋಗುವ ರಸ್ತೆಯಲ್ಲಿ ಈ ದರೋಡೆ ನಡೆದಿದೆ. ಮೂರು ಕಾರಿನಿಂದ ಬಂದ ದರೋಡೆ ಗ್ಯಾಂಗ್ … Read more

ಮುರುಘಾಶ್ರೀ ಪೋಕ್ಸೋ ಪ್ರಕರಣ ನ.26ಕ್ಕೆ ತೀರ್ಪು ಪ್ರಕಟ

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಮುರುಘಾಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಮುಕ್ತಾಯಗೊಂಡಿದ್ದು, ನವೆಂಬರ್ 26ರಂದು ತೀರ್ಪನ್ನು ಕೋರ್ಟ್ ಪ್ರಕಟಿಸಲಿದೆ. ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಸಂಬಂಧ ಜೈಲು ಪಾಲು ಆಗಿದ್ದರು. ಪ್ರಕರಣದ ವಿಚಾರಣೆಯನ್ನು ಚಿತ್ರದುರ್ಗದ 2ನೇ ಅಪರ ಸೆಷನ್ಸ್ ಕೋರ್ಟ್ ನಡೆಸಿತ್ತು. ವಾದ-ಪ್ರತಿವಾದ ಆಲಿಸಿದ್ದಂತ ಕೋರ್ಟ್, ನವೆಂಬರ್ 26ರಂದು ತೀರ್ಪು ಪ್ರಕಟಿಸುವುದಾಗಿ ದಿನಾಂಕ ನಿಗದಿ ಪಡಿಸಿದೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ 1 ಸಾವಿರ ಗೌರವ ಧನ ಹೆಚ್ಚಳಕ್ಕೆ ಸರಕಾರ ಪ್ಲಾನ್

18 PAGE 4 NOV ಬೆಂಗಳೂರು: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಇದ್ದು, ಅದೇನೆಂದರೆಮುಂದಿನ ಬಜೆಟ್ ನಲ್ಲಿ 1,000 ಗೌರವಧನ ಹೆಚ್ಚಳ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ 1,000 ಗೌರವಧನ ಹೆಚ್ಚಳ ಮಾಡಲಾಗಿದೆ. ಮತ್ತೆ ಮುಂದಿನ ಬಜೆಟ್ ನಲ್ಲಿ ಗೌರವಧನವನ್ನು 1,000 ಹೆಚ್ಚಳ ಮಾಡುವುದಾಗಿ ತಿಳಿಸಿದರು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವಧನ ಹೆಚ್ಚಳದ ಬಗ್ಗೆ ಈಗಾಗಲೇ … Read more

ತುಮಕೂರುವರೆಗೆ ಮೆಟ್ರೋ ವಿಸ್ತರಿಸಲು ಸಿದ್ಧತೆಗೆ ಟೆಂಡರ್

ತುಮಕೂರು: ತುಮಕೂರಿನವರೆಗೂ ಮೆಟ್ರೋ ವಿಸ್ತರಿಸಲು ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಬಿ ಎಂ ಆರ್ ಸಿ ಎಲ್ ಈಗಾಗಲೇ ಟೆಂಡರ್ ಕರೆದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತಾಗಿ ರಾಜ್ಯ ಸರಕಾರ ಸಾಧಕ-ಬಾಧಕಗಳ ಚರ್ಚೆ ಮಾಡಿದೆ. ನಂತರ ಡಿಪಿಆರ್ ಮಾಡಲು ತೀರ್ಮಾನಿಸಲಾಗಿದೆ. ನಾಲ್ಕೈದು ತಿಂಗಳಲ್ಲಿ ಡಿಪಿಆರ್ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದ್ದೇವೆ ಎಂದು ಅವರು ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿ ಸ್ಫೋಟ ಕುರಿತು ಮಾಧ್ಯಮದವರ ಪ್ರಶ್ನೆಗೆ, ಕೇಂದ್ರದಲ್ಲಿ ವಿವಿಧ ಏಜೆನ್ಸಿಗಳಿವೆ. ಇವೆಲ್ಲವೂ … Read more