--ಇಲ್ಲಿ ಜಾಹೀರಾತು--

ಅಧಿಕಾರಿಗಳ ಎದುರಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ

On: November 5, 2025 1:06 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಗದಗ: ಬೆಳೆಹಾನಿ ಪರಿಹಾರ ಬಾರದಕ್ಕೆ ಮನನೊಂದು ರೈತ ನಾಡಕಚೇರಿಯಲ್ಲಿ ಅಧಿಕಾರಿಗಳ ಎದುರಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ. ನರಗುಂದ ತಾಲೂಕಿನ ಬೆಳ್ಳೇರಿ ಗ್ರಾಮದ ರೈತ ಸಿದ್ದನಗೌಡ ಹಿರೇಗೌಡ್ರು ಆತ್ಮಹತ್ಯೆಗೆ ಯತ್ನಿಸಿದ್ದು, ಸಂಕಟ ತಾಳಲಾರದೆ ನಾಡ ಕಚೇರಿಯಲ್ಲೇ ನರಳಾಡಿದ್ದಾರೆ.
ನಾಲ್ಕು ಎಕರೆ ಜಮೀನಿನಲ್ಲಿ ಗೋವಿನ ಜೋಳ, ಈರುಳ್ಳಿ ಬೆಳೆಯನ್ನ ಸಿದ್ದನಗೌಡ ಹಿರೇಗೌಡ್ರು ಬೆಳೆದಿದ್ದರು. ಆದರೆ, ಮಳೆ ಮತ್ತು ಮಲಪ್ರಭಾ ನದಿ ಪ್ರವಾಹದಿಂದ ಬೆಳೆಗೆ ಹಾನಿಯಾಗಿದೆ. ಹೀಗಿದ್ದರೂ ಈ ಬಗ್ಗೆ ಬೆಳೆ ಹಾನಿ ಎಂಟ್ರಿಯಾಗಿಲ್ಲ. ವಿಷಯವನ್ನು ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತರದೆ ಗ್ರಾಮ ಲೆಕ್ಕಾಧಿಕಾರಿ ನಿರ್ಲಕ್ಷ್ಯತೋರಿದ್ದಾರೆ ಎಂಬುದು ಆರೋಪ ರೈತನದ್ದು. ಹೀಗಾಗಿ ಮನನೊಂದಿದ್ದ ಸಿದ್ದನಗೌಡ ಹಿರೇಗೌಡ್ರು ನಾಡಕಚೇರಿ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ವಿಷ ಸೇವಿಸಿದ್ದ ಸಿದ್ದನಗೌಡ ಹಿರೇಗೌಡ್ರನ್ನು ಸ್ಥಳದಲ್ಲಿದ್ದ ರೈತರು ತಕ್ಷಣ ನರಗುಂದ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ಕೊಂಡೊಯ್ದು ದಾಖಲಿಸಿದ್ದಾರೆ. ಆದರೆ ಪರಿಸ್ಥಿತಿ ಗಂಭೀರವಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ನರಗುಂದ ಡಿವೈಎಸ್ಪಿ ಪ್ರಭು ಸೇರಿ ಅಧಿಕಾರಿಗಳು ಘಟನೆ ಬಗ್ಗೆ ಮಾಹಿತಿ ಪಡೆದಿದ್ದು, ಸಿದ್ದನಗೌಡ ಹಿರೇಗೌಡರಿಗೆ ಏನಾದರೂ ಹೆಚ್ಚುಕಮ್ಮಿ ಆದರೆ ಅಧಿಕಾರಿಗಳೇ ಹೊಣೆ ಎಂದು ಈ ವೇಳೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now