
ಚಾಮರಾಜನಗರ: ಬೆಂಗಳೂರು ರಾಬರಿ ಪ್ರಕರಣ ತನಿಖೆ ನಡೆಯುವ ಹೊತ್ತಲ್ಲೇ ರಾಜ್ಯದಲ್ಲಿ ಮತ್ತೊಂದು ದರೋಡೆ ನಡೆದಿದೆ. ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಕೂಡ ರಾಬರಿ ಪ್ರಕರಣ ನಡೆದಿದೆ. ಕಾರನ್ನು ಫಾಲೋ ಮಾಡಿಕೊಂಡು ಬಂದ ಕೇರಳ ಗ್ಯಾಂಗ್ ಒಂದು ಸಿನಿಮಾ ಸ್ಟೈಲ್ ನಲ್ಲಿ ಬಂಡೀಪುರದ ಅರಣ್ಯದಲ್ಲಿ ಕಾರನ್ನು ಅಡ್ಡಗಟ್ಟಿ ಹಲ್ಲೆ ಮಾಡಿ ಚಿನ್ನ ದರೋಡೆ ಮಾಡಿ ಹೋಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಿಂದ ಕೇರಳಕ್ಕೆ ಹಾದು ಹೋಗುವ ರಸ್ತೆಯಲ್ಲಿ ಈ ದರೋಡೆ ನಡೆದಿದೆ. ಮೂರು ಕಾರಿನಿಂದ ಬಂದ ದರೋಡೆ ಗ್ಯಾಂಗ್ ಬ್ರಿಜಾ ಕಾರಿನಲ್ಲಿ ಚಿನ್ನ ತೆಗೆದುಕೊಂಡು ಹೋಗುತ್ತಿದ್ದ1 ವೇಳೆ ಕಾರಿನ ಹಿಂಭಾಗ ಹಾಗೂ ಮುಂಭಾಗಕ್ಕೆ ಡಿಕ್ಕಿ ಹೊಡೆದು ಕಾರು ನಿಲ್ಲಿಸಿ ಕಾರಿನ ಸೀಟು ಹರಿದು 1.3 ಕೆಜಿ ತೂಕದ ಚಿನ್ನದ ಗಟ್ಟಿ ಹೊತ್ತೊಯ್ದಿದ್ದಾರೆ.
ಕಾರು ಅಡ್ಡಗಟ್ಟಿ ಹಲ್ಲೆ ಮಾಡಿ ಚಿನ್ನ ದರೋಡೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


