--ಇಲ್ಲಿ ಜಾಹೀರಾತು--

ಹೆತ್ತ ಮಗಳಿಂದಲೇ ತಾಯಿ ಹತ್ಯೆ. ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ.

On: February 13, 2026 2:01 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ತುಮಕೂರು: ತುಮಕೂರು ನಗರದ ಬಂಡೇಪಾಳ್ಯ ಬಳಿಯ ಶ್ರೀನಗರ ನಿವಾಸಿ ಪುಷ್ಪಲತಾ ಸ್ವಂತ ಸೂರು ಕಟ್ಟಿಕೊಂಡು ಮಗಳು ಸುಚಿತ್ರಾ ಹಾಗೂ ಆಳಿಯನ ಜೊತೆ ವಾಸವಿದ್ದರು. ಕಳೆದ ಕೆಲ ದಿನಗಳಿಂದ ಮಂಡಿನೋವು ಎಂದು ಹಾಸಿಗೆ ಹಿಡಿದಿದ್ದರು. ಫೆಬ್ರವರಿ 11 ರಂದು ರಾತ್ರಿ ನಿಗೂಢವಾಗಿ ಸಾವನಪ್ಪಿದ್ದಾರೆ. ಆಕೆಯ ಜೊತೆಗೆ ವಾಸವಿದ್ದ ಮಗಳು ಹೃದಯಾಘಾತ ಎಂದು ಅಂತ್ಯಕ್ರಿಯೆ ಮಾಡಲು ಮುಂದಾಗಿದ್ದಳು. ಆದರೆ, ಅದೇ ಸಮಯಕ್ಕೆ, ಕೆಲವು ಮಂದಿ ಸ್ಥಳೀಯರು ಅನುಮಾನದಿಂದ ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು ಸಾವಿನ ಹಿಂದಿನ ಅಸಲಿ ಸತ್ಯ ಬಯಲು ಮಾಡಿದ್ದಾರೆ. ಪುಷ್ಪಲತಾ ಹೃದಯಾಘಾತದಿಂದ ಸಾವನ್ನಪ್ಪಿಲ್ಲ, ಕೊಲೆಯಾಗಿದ್ದಾರೆ ಎಂಬುದನ್ನು ಬಯಲುಮಾಡಿದ್ದಾರೆ. ಪುಷ್ಪಲತಾರನ್ನು ಕೊಲೆ ಮಾಡಿದ್ದು, ಮತ್ಯಾರೂ ಅಲ್ಲ. ಆಕೆಯ ಮಗಳೇ!
ಸುಚಿತ್ರಾ ಹಾಗೂ ಆಕೆಯ ಪತಿ ಸುರೇಶ್ ಸಹ ಪುಷ್ಪಲತಾ ಮನೆಯಲ್ಲಿಯೇ ವಾಸವಿದ್ದರು. ಸುರೇಶ ಕೊರಿಯರ್ ಕಂಪನಿಯಲ್ಲಿ ಕೆಲಸ ಮಾಡುತಿದ್ದ. ಆತನ ದುಡಿಮೆಯಲ್ಲೇ ಜೀವನ ಸಾಗುತಿತ್ತು ಎನ್ನಲಾಗಿದೆ. ಒಂದು ವರ್ಷದ ಹಿಂದೆ ಇದ್ದಕಿದ್ದಂತೆ ಆರೋಗ್ಯ ಸಮಸ್ಯೆಗೆ ಒಳಗಾದ ಪುಷ್ಪಲತಾ ಗಂಡ ಬಾಬು ನಾಯಕ್ ಮೃತಪಟ್ಟಿದ್ದರು. ತಂದೆಯ ಮುದ್ದಿನ ಮಗಳು ಸುಚಿತ್ರಾ, ಅವರನ್ನು ಕಳೆದುಕೊಂಡಿದ್ದ ದುಃಖದಲ್ಲಿದ್ದ ಜ್ಯೋತಿಷಿಯೊಬ್ಬರ ಭೇಟಿ ಮಾಡಿದ್ದಳು. ಈ ವೇಳೆ ಬಾಬು ಸಾವಿಗೆ ಆತನ ಪತ್ನಿಯೇ ಕಾರಣ. ಪುಷ್ಪಲತಾ ಮಾಟಮಂತ್ರ ಮಾಡಿಸಿದ್ದರು. ನಿನಗೂ ಅವರಿಂದ ಕಂಠಕ ಇದೆ ಎಂದು ಜ್ಯೋತಿಷಿ ಹೇಳಿದ್ದರು ಎನ್ನಲಾಗಿದೆ.
ಈ ಮಾತು ಕೇಳಿದ ಸುಚಿತ್ರಾ, ತನ್ನ ಪ್ರೀತಿಯ ತಂದೆಯನ್ನು ಕೊಂದಿದ್ದಾಳೆಂಬ ಅಲೋಚನೆ ಹಾಗೂ ತಾನೂ ಈಕೆಯಿಂದ ಸಾಯಬಹುದೆಂಬ ಆತಂಕದಲ್ಲಿ ಫೆಬ್ರವರಿ 11ರ ರಾತ್ರಿ ಊಟ ಮಾಡಿ ಮಲಗಿದ್ದ ತಾಯಿಯನ್ನು ದಿಂಬಿನಿಂದ ಉಸಿರುಗಟ್ಟಿಸಿ ಸಾಯಿಸಿದ್ದಾಳೆ. ಈ ವೇಳೆ ಹಲ್ಲೆ ಸಹ ಮಾಡಿದ್ದಳು ಎನ್ನಲಾಗಿದ್ದು, ಮುಖದಲ್ಲಿ ರಕ್ತಕಲೆಗಳು ಕಾಣಿಸಿವೆ. ಈ ಎಲ್ಲಾ ವಿಚಾರ ಗೊತ್ತಿದ್ದ ಸುಚಿತ್ರಾ ಗಂಡ ಮೌನವಹಿಸಿದ್ದ. ಪೊಲೀಸರ ತನಿಖೆ ವೇಳೆ ಆತ ಸಹ ಪರೋಕ್ಷವಾಗಿ ಶಾಮೀಲಾಗಿರುವ ಅಂಶಗಳು ಕಂಡು ಬಂದಿವೆ. ಸದ್ಯ ಸುಚಿತ್ರಾ ಹಾಗೂ ಆಕೆಯ ಪತಿ ಸುರೇಶ್ ಅನ್ನು ಕ್ಯಾತಸಂದ್ರ ಪೊಲೀಸರು ಬಂಧಿಸಿದ್ದಾರೆ.

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now