ದಯಾಮರಣಕ್ಕೆ ಸುಪ್ರೀಂ ಅನುಮತಿ

ನವದೆಹಲಿ: 13 ವರ್ಷದಿಂದ ಕೋಮಾದಲ್ಲಿರುವ 32 ವರ್ಷದ ವ್ಯಕ್ತಿಯ ದಯಾಮರಣಕ್ಕೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ತನ್ನ ಮಗನಿಗೆ ದಯಾಮರಣಕ್ಕೆ ಕೋರಿ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ. ಘನತೆ ಕಾಪಾಡಿಕೊಳ್ಳುವುದರ ಜತೆಗೆ ಸೂಕ್ತ ಯೋಜನೆಯೊಂದಿಗೆ ಹರೀಶ್ ರಾಣಾ ಅವರ ವೈದ್ಯಕೀಯ ಚಿಕಿತ್ಸೆಯನ್ನು ಹಿಂಪಡೆಯಬಹುದು ಎಂದು ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠವು ದೆಹಲಿಯ … Read more

ಮದುವೆಗಳಿಗೂ ಗ್ಯಾಸ್ ಕಂಟಕ

ಬೆಂಗಳೂರು: ಕಲ್ಯಾಣ ಮಂಟಪಗಳಿಗೂ ಈಗ ಗ್ಯಾಸ್ ಟ್ರಬಲ್ ಆಗಿದೆ. ಮದುವೆ ಮನೆಯವರೇ ಗ್ಯಾಸ್ ಸಿಲಿಂಡರ್ ತರಬೇಕೆಂದು ಕಲ್ಯಾಣ ಮಂಟಪಗಳು ಹೇಳುತ್ತಿವೆ. ಹೀಗಾಗಿ ಮದುವೆಗಳಿಗೆ ಗ್ಯಾಸ್ ಕಂಟಕವಾಗಿದೆ. ಕಲ್ಯಾಣ ಮಂಟಪಗಳಿಗೆ ವಾಣಿಜ್ಯ ಗ್ಯಾಸ್ ಸಿಗುತ್ತಿಲ್ಲ. ಹೀಗಾಗಿ ಮದುವೆ ಬುಕ್ಕಿಂಗ್ ಮಾಡಿದ ವಧು/ ವರನ ಕಡೆಯವರಿಗೆ ಸಿಲಿಂಡರ್ ತರುವಂತೆ ಕಲ್ಯಾಣ ಮಂಟಪಗಳ ಸಿಬ್ಬಂದಿ ಸೂಚಿಸುತ್ತಿದ್ದಾರೆ. ಶುಭ ಕಾರ್ಯಕ್ರಮಗಳಿಗೆ ಕಲ್ಯಾಣ ಮಂಟಪಗಳೇ ವಾಣಿಜ್ಯ ಸಿಲಿಂಡರ್‌ಗಳನ್ನು ನೀಡುತ್ತಿದ್ದವು. ಆದರೆ ಈಗ ಸಿಲಿಂಡರ್ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದರಿಂದ ಮದುವೆ ಕಾರ್ಯಕ್ರಮಗಳಿಗೆ ಬುಕ್ಕಿಂಗ್ ಮಾಡಿದವರು … Read more

ಹೋಟೆಲ್‌ಗಳಲ್ಲಿ ಸೌದೆ ಒಲೆ ಮೊರೆ

ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ವಾರ್ ಎಫೆಕ್ಟ್ನಿಂದಾಗಿ ಸಂಪೂರ್ಣವಾಗಿ ಕಮರ್ಷಿಯಲ್ ಗ್ಯಾಸ್ ಬಂದಾಗಿದೆ. ಸಿಲಿಂಡರ್ ಸಿಗದೇ ಹೋಟೆಲ್ ಮಾಲೀಕರು ಅಕ್ಷರಶಃ ಪರದಾಡುತ್ತಿದ್ದಾರೆ. ಕೆಲವು ಹೋಟೆಲ್ ಗಳಲ್ಲಿ ಸೌದೆ ಒಲೆ ಮೊರೆಹೋಗಿದ್ದಾರೆ. ಗ್ಯಾಸ್ ಸಿಲಿಂಡರ್ ಬಂದ್ ಆದ ಹಿನ್ನೆಲೆ ಸಂಪೂರ್ಣವಾಗಿ ಹೋಟೆಲ್ ಮಾಲೀಕರು ಸೌದೆ ಒಲೆಗಳ ಮೊರೆ ಹೋಗಿದ್ದಾರೆ. ಸೌದೆ ಮೇಲೆಯೇ ಉಪಹಾರ, ಊಟ ತಯಾರಿಸುತ್ತಿದ್ದಾರೆ. ಗ್ಯಾಸ್ ಸಿಲಿಂಡರ್ ಸಿಗದೇ 10-15 ಕ್ವಿಂಟಾಲ್ ಸೌದೆಯನ್ನು ಹೋಟೆಲ್ ಮಾಲೀಕರು ಸ್ಟಾಕ್ ಮಾಡಿಕೊಂಡಿದ್ದಾರೆ. ಹೋಟೆಲ್ ಉದ್ಯಮ ಬಂದ್ ಮಾಡದೇ ಸೌದೆ ಬಳಸಿಕೊಂಡು … Read more

ವಿಧಾನಸಭೆಯಲ್ಲಿ ‘ಗ್ಯಾಸ್ ವಾರ್’ ಆಡಳಿತ- ವಿಪಕ್ಷ ಸದಸ್ಯರ ನಡುವೆ ವಾಗ್ವಾದ

ಬೆಂಗಳೂರು: ವಿಧಾನಸಭೆಯಲ್ಲಿ ಬುಧವಾರ ಗ್ಯಾಸ್ ಸಮಸ್ಯೆ ಕುರಿತು ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ ಸದಸ್ಯರ ನಡುವೆ ಗದ್ದಲಕ್ಕೆ ಕಾರಣವಾಯಿತು. ಸದನದಲ್ಲಿ ಶೂನ್ಯ ವೇಳೆಯಲ್ಲಿ ಶಾಸಕ ಕುಣಿಗಲ್ ರಂಗನಾಥ್ ಗ್ಯಾಸ್ ಪ್ರಾಬ್ಲಂ ಕುರಿತು ಪ್ರಸ್ತಾಪಿಸಿದರು. ರಾಜ್ಯದ ಹಲವೆಡೆ ಮತ್ತು ಬೆಂಗಳೂರಲ್ಲಿ ಗ್ಯಾಸ್ ಸಮಸ್ಯೆ ಇದೆ. ಬ್ಲಾಕ್ ಮಾರ್ಕೆಟ್ ಶುರುವಾಗಿದೆ. ಇದಕ್ಕೆ ಮೋದಿ ವಿದೇಶಾಂಗ ನೀತಿಯೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಯುದ್ಧದ ಸಂದರ್ಭದಲ್ಲಿ ರಾಜಕೀಯ ಏಕೆ ಮಾಡುತ್ತೀರೆಂದು ಆಕ್ರೋಶ … Read more

ಅಂಗನವಾಡಿ ಹುದ್ದೆಗಳ ಭರ್ತಿಗೆ 90 ದಿನ ಗಡುವು: ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯದ ಅಂಗನವಾಡಿಗಳ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ವಿಧಾನಸಭೆಯಲ್ಲಿ ಬುಧವಾರ ಪ್ರಶ್ತೋತ್ತರ ಕಲಾಪದಲ್ಲಿ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದೆ. ಜಿಲ್ಲಾಧಿಕಾರಿ … Read more

ಎಸ್ಎಸ್ಐಬಿಎಂ ಕಾಲೇಜಿನಲ್ಲಿ ಎಐ ಕಾರ್ಯಾಗಾರ

ಭವಿಷ್ಯದ ತಂತ್ರಜ್ಞಾನಕ್ಕೆ ವಿದ್ಯಾರ್ಥಿಗಳು ಸಜ್ಜಾಗಲಿ   ತುಮಕೂರು: ಇಂದಿನ ಆಧುನಿಕ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿಯೂ ವ್ಯಾಪಕವಾಗಿ ಬಳಕೆಯಾಗುತ್ತಿದೆ. ಆದ್ದರಿಂದ ಈ ತಂತ್ರಜ್ಞಾನದ ಅರಿವು ಮತ್ತು ಕಲಿಕೆ ಇಂದಿನ ವಿದ್ಯಾರ್ಥಿಗಳಿಗೆ ಅನಿವಾರ್ಯವಾಗಿದೆ ಎಂದು ಎಸ್‌ಎಸ್‌ಐಬಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಮಮತಾ ಹೇಳಿದರು. ನಗರದ ಎಸ್‌ಎಸ್‌ಐಬಿಎಂ ಕಾಲೇಜಿನಲ್ಲಿ ಐಬಿಎಂ ಸ್ಕಿಲ್ಸ್ಬಿಲ್ಡ್ ಸಹಯೋಗದಲ್ಲಿ ಆಯೋಜಿಸಲಾದ ನಾಲ್ಕು ದಿನಗಳ ಎಐ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿ, ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಅಗತ್ಯತೆಗಳನ್ನು … Read more

ಲೋಕಾಯುಕ್ತ ಬಲೆಗೆ ಬಿದ್ದ ಜಿಲ್ಲಾಸ್ಪತ್ರೆ ವೈದ್ಯೆ, ಸಹಾಯಕ

ತುಮಕೂರು: ನೇತ್ರ ಶಸ್ತ್ರಚಿಕಿತ್ಸೆ ಮಾಡಿ ಲೆನ್ಸ್ ಅಳವಡಿಸಲು 6 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾಸ್ಪತ್ರೆ ವೈದ್ಯೆ ಸವಿತಾ, ಸಹಾಯಕನಾದ ಹೊರಗುತ್ತಿಗೆ ನೌಕರ ಮನೋಜ್ ಸೋಮವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರದ ಉಪ್ಪಾರಹಳ್ಳಿಯ ಆಟೊ ಚಾಲಕ ಅವಿನಾಶ್ ಅವರು ತಾಯಿ ಮಂಗಳಮ್ಮ ಅವರನ್ನು ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದರು. ತಜ್ಞ ವೈದ್ಯೆ ಸವಿತಾ ಕಣ್ಣು ಪರೀಕ್ಷಿಸಿ ಶಸ್ತ್ರಚಿಕಿತ್ಸೆ ಮಾಡಲು 6 ಸಾವಿರ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಚಿಕಿತ್ಸೆ … Read more

29 ಕೋಟಿ ಮೌಲ್ಯದ ಚಿನ್ನಾಭರಣ ವಶ

ಹಲವು ದರೋಡೆ, ಕಳವು ಪ್ರಕರಣ ಪತ್ತೆ: ಆರೋಪಿಗಳ ಬಂಧನ ಮೈಸೂರು: ಮೈಸೂರು ಜಿಲ್ಲಾ ಪೊಲೀಸರು ಎರಡು ತಿಂಗಳಲ್ಲಿ ಕಾರ್ಯಾಚರಣೆ ನಡೆಸಿ ಹಲವು ಪ್ರಕರಣ ಪತ್ತೆ ಮಾಡಿದ್ದಾರೆ. ನಗದು, ಚಿನ್ನಾಭರಣ, ವಾಹನ ಸೇರಿದಂತೆ 29 ಕೋಟಿಗೂ ಹೆಚ್ಚು ಬೆಲೆಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು, ಈ ವರ್ಷದ ಜನವರಿಯಿಂದ ಫೆಬ್ರವರಿವರೆಗೆ 01 ಡಕಾಯಿತಿ, 2 ಸುಲಿಗೆ, 7 ಮನೆ ಕಳ್ಳತನ, 5 ವಾಹನ ಕಳ್ಳತನ. 8 … Read more

ಡಿಕೆಶಿ ನಾಳೆಯೇ ಬರಲಿ

ಬೆಂಗಳೂರು: ದೆಹಲಿಗೆ ತೆರಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಪರವಾಗಿ ನಾವಿದ್ದೇವೆ. ಅವರು ನಾಳೆಯೇ ಬಂದರೂ ಏನೂ ತೊಂದರೆ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸಿಎಂ ಡಿಕೆಶಿ ದೆಹಲಿಯಲ್ಲೇ ಉಳಿದಿರುವ ವಿಚಾರವಾಗಿ ಪ್ರತಿಕ್ರಿಸಿದರು. ಡಿಸಿಎಂ ಪರವಾಗಿ ಇಲ್ಲಿ ನಾವಿದ್ದೇವೆ. ನಾವು ಇಲ್ಲಿ ನೋಡಿಕೊಳ್ಳುತ್ತೇವೆ ಎಂದರು. ಭಾನುವಾರ ದೆಹಲಿಗೆ ಡಿ.ಕೆ ಶಿವಕುಮಾರ್ ತೆರಳಿದ್ದರು. ಇಂದು ಸೋಮವಾರ ದೆಹಲಿಯಿಂದ ಅವರು ವಾಪಸ್ ಆಗಬೇಕಿತ್ತು. ಇಂದು ಕೂಡಾ ದೆಹಲಿಯಲ್ಲಿರಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ … Read more

ಮಗುವಿನ ಕತ್ತು ಹಿಸುಕಿ ದಂಪತಿ ನೇಣಿಗೆ ಶರಣು

ಮಂಡ್ಯ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲ 2 ವರ್ಷದ ಮಗುವಿನ ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಬದುಕುಳಿದಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ನೇಣಿಗೆ ಶರಣಾದ ದಂಪತಿ. ತಮ್ಮ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ. ಮಗು ಸತ್ತಿದೆ ಎಂದು ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ದಂಪತಿ ಕಳೆದ ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಎರಡು ವರ್ಷದ … Read more