ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ತುಮಕೂರು: ತಾಲ್ಲೂಕಿನ ನಾಗವಲ್ಲಿ ಬಳಿಯ ಮಾಯಣ್ಣಗೌಡನ ಪಾಳ್ಯದ ಹತ್ತಿರ ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ತಾಲ್ಲೂಕಿನ ರಂಗನಾಥಪುರದ ಪ್ರಸಾದ್ (21), ವಸಂತಕುಮಾರ್ (22) ಮೃತಪಟ್ಟವರು. ಕುಣಿಗಲ್ ಕಡೆಯಿಂದ ಸ್ವಗ್ರಾಮಕ್ಕೆ ತೆರಳುವಾಗ ನಿಯಂತ್ರಣ ತಪ್ಪಿದ ಬೈಕ್ ರಸ್ತೆಗೆ ಉರುಳಿದೆ. ಗಂಭೀರ ಗಾಯಗೊಂಡಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಸಂತ ಖಾಸಗಿ ಕಂಪನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಸಾದ್ ಪೇಟಿಂಗ್ ಕೆಲಸ ಮಾಡಿಕೊಂಡಿದ್ದರು. ಸ್ನೇಹಿತನ ಹುಟ್ಟುಹಬ್ಬದ ಸಂಭ್ರಮಾಚರಣೆ ಮುಗಿಸಿಕೊಂಡು ವಾಪಸ್ ತೆರಳುವಾಗ ಬೈಕ್ ಅಪಘಾತವಾಗಿದೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ … Read more

ದಾಸವಾಳ ನುಂಗಿ ಮಗು ಸಾವು

ಮೈಸೂರು: ಒಣಗಿದ ದಾಸವಾಳದ ಹೂವು ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ ಸುದರ್ಶನ್-ನವ್ಯ ದಂಪತಿಯ ಎರಡನೇ ಪುತ್ರ ಆರು ತಿಂಗಳ ಚಿನ್ಮಯಿಗೌಡ ಸಾವನ್ನಪ್ಪಿದ ಮಗು. ಮನೆಯ ಹೊಸಲಿನಲ್ಲಿ ಪೂಜೆಗೆ ಇರಿಸಿದ್ದ ದಾಸವಾಳದ ಹೂವನ್ನು ಮಗು ನುಂಗಿದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದೆ. ತನ್ನ ಅಣ್ಣನೊಂದಿಗೆ ಆಟವಾಡುತ್ತಿದ್ದ ಮಗು ಮನೆಯ ಹೊಸಲಿಗೆ ಪೂಜೆಗೆ ಇಟ್ಟಿದ್ದ ದಾಸವಾಳದ ಹೂವಿನ ತುಂಡನ್ನು ಬಾಯಿಗೆ ಹಾಕಿಕೊಂಡಿದೆ. ಈ ವೇಳೆ ಅಣ್ಣ ಕಿತ್ತುಕೊಳ್ಳುತ್ತಾನೆಂದು ಮಗು … Read more

ರೂಪಾಯಿ ದಾಖಲೆ ಕುಸಿತ

ನವದೆಹಲಿ: ಮಧ್ಯಪ್ರಾಚ್ಯ ಯುದ್ಧದಿಂದ ದಿನೇ ದಿನೇ ಡಾಲರ್ ಮುಂದೆ ಪಲ್ಟಿಯಾಗುತ್ತಿರುವ ರೂಪಾಯಿ ಮೌಲ್ಯವನ್ನು ವೃದ್ಧಿಸಲು ಆರ್‌ಬಿಐ ಮಧ್ಯಪ್ರವೇಶ ಮಾಡಿದರೂ ಮತ್ತೆ ಕುಸಿದಿದೆ. ಮೊದಲ ಬಾರಿಗೆ 1 ಡಾಲರ್ ಮೌಲ್ಯ 95 ರೂ.ಗಳ ಗಡಿಯನ್ನು ದಾಟಿದೆ. ಎಲ್ಲಾ ಬ್ಯಾಂಕುಗಳು ಪ್ರತಿ ವ್ಯವಹಾರದ ದಿನದ ಅಂತ್ಯಕ್ಕೆ ತಮ್ಮ ಎನ್‌ಒಪಿ-ಐಎನ್ ಆರ್ ಅನ್ನು ಗರಿಷ್ಠ 100 ಮಿಲಿಯನ್ ಡಾಲರ್‌ಗೆ ಮಿತಿಗೊಳಿಸಬೇಕು ಎಂದು ಆರ್‌ಬಿಐ ನಿರ್ದೇಶನ ನೀಡಿದೆ. ಈ ಹೊಸ ನಿಯಮವನ್ನು ಪಾಲಿಸಲು ಬ್ಯಾಂಕ್‌ಗಳಿಗೆ ಏಪ್ರಿಲ್ 10 ರವರೆಗೆ ಗಡುವು ನೀಡಲಾಗಿದೆ. ಆರ್‌ಬಿಐ … Read more

ಶೆಲ್ ಪೆಟ್ರೋಲ್ ಬೆಲೆ ಏರಿಕೆ

ಬೆಂಗಳೂರು: ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್‌ಗಳು ಜನತೆಗೆ ಶಾಕ್ ಕೊಟ್ಟಿವೆ. ನಯಾರ ಪೆಟ್ರೋಲ್ ಬಂಕ್ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿದ ಬೆನ್ನಲ್ಲೇ ಇದೀಗ ಶೆಲ್ ಪೆಟ್ರೋಲ್ ಬಂಕ್ ಕೂಡ ದರ ಹೆಚ್ಚಿಸಿದೆ. ಬಂಕ್‌ಗಳಲ್ಲಿ 1 ಲೀ. ಪೆಟ್ರೋಲ್ ಬೆಲೆ 6 ರೂಪಾಯಿ ಮತ್ತು ಲೀಟರ್ ಡೀಸೆಲ್ ಬೆಲೆ 7 ರೂಪಾಯಿ ಹೆಚ್ಚಿಸಿದೆ. ಇದು ಕಳೆದ 15 ದಿನಗಳಲ್ಲಿ 3ನೇ ಬಾರಿಗೆ ಮಾಡಿದ ದರ ಏರಿಕೆಯಾಗಿದೆ. ಪ್ರೀಮಿಯಂ ಪೆಟ್ರೋಲ್ ಜೊತೆಗೆ ಸಾಮಾನ್ಯ ಪೆಟ್ರೋಲ್ ದರವನ್ನು ಶೆಲ್ ಪೆಟ್ರೋಲ್ … Read more

ಹಾರ್ಮುಜ್ ದಾಟಿದ ಮತ್ತೆರಡು ಹಡಗು

ನವದೆಹಲಿ: ಭಾರತದ ಮತ್ತೆರಡು ಹಡುಗುಗಳು ಹಾರ್ಮುಜ್ ಜಲಸಂಧಿಯನ್ನ ಸುರಕ್ಷಿತವಾಗಿ ದಾಟಿವೆ. ಸುಮಾರು 94,000 ಟನ್‌ಗಳಷ್ಟು ಎಲ್‌ಪಿಜಿ ಹೊತ್ತ ಎರಡು ಭಾರತೀಯ ಹಡಗುಗಳು ಶೀಘ್ರದಲ್ಲೇ ಭಾರತವನ್ನು ಪ್ರವೇಶಿಸುವ ನಿರೀಕ್ಷೆಯಿದೆ. ಪೆಟ್ರೋಲಿಯಂ ಸಚಿವಾಲಯ ನೀಡಿರುವ ಹೇಳಿಕೆಯಂತೆ, ಸುಮಾರು 94 ಸಾವಿರ ಟನ್‌ಗಳಷ್ಟು ಎಲ್‌ಪಿಜಿ ಸರಕು ಟ್ಯಾಂಕರ್‌ಗಳನ್ನು ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿಯನ್ನ ಸುರಕ್ಷಿತವಾಗಿ ದಾಟಿ ಭಾರತದ ತೀರಗಳತ್ತ ಸಾಗಿವೆ. ಟ್ಯಾಂಕರ್ ಮುಂಬೈಗೆ ತೆರಳುತ್ತಿದ್ದು, ಮಾರ್ಚ್ 31ರಂದು ಮುಂಬೈ ಬಂದರಿಗೆ ಬರುವ ನಿರೀಕ್ಷೆಯಿದೆ. ಇನ್ನೊಂದು ಎಲ್‌ಪಿಜಿ ಟ್ಯಾಂಕರ್ ಹೊತ್ತ ಹಡಗು … Read more

ಪೆಟ್ರೋಲ್ ಬಂಕ್ ಗಳಲ್ಲಿ ಸೀಮೆಎಣ್ಣೆಯೂ ಮಾರಾಟ

ನವದೆಹಲಿ: ದೇಶಾದ್ಯಂತ ಸೀಮೆ ಎಣ್ಣೆ ವಿತರಣೆ ಮಾಡುವ ನಿಯಮವನ್ನ ಕೇಂದ್ರ ಸರ್ಕಾರ ಸಡಿಲಗೊಳಿಸಿದೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ತೈಲ ಬಿಕ್ಕಟ್ಟು ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಮನೆ ಬಳಕೆಗೆ ಅಗತ್ಯವಾದ ಸೀಮೆ ಎಣ್ಣೆ ತಲುಪಿಸಲು ಈ ನಿರ್ಧಾರ ತೆಗೆದುಕೊಂಡಿದೆ. ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆ ಪ್ರಕಾರ ಸ21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸೀಮೆ ಎಣ್ಣೆ ವಿತರಿಸಲು ಅನುಮತಿ ನೀಡಿದೆ. ಮುಂದಿನ 60 ದಿನಗಳ ವರೆಗೆ ಪೆಟ್ರೋಲ್ ಪಂಪ್‌ಗಳು ಸೇರಿದಂತೆ ಚಿಲ್ಲರೆ ಮಾರಾಟದ ಮೂಲಕ ಸೀಮೆ ಎಣ್ಣೆ ವಿತರಿಸಲು ಪೆಟ್ರೋಲಿಯಂ … Read more

ಹಾರ್ಮುಜ್ ತೆರೆಯದಿದ್ದರೆ ಇರಾನ್ ನಾಶ: ಟ್ರಂಪ್

ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು ತಕ್ಷಣವೇ ತೆರೆಯದಿದ್ದರೆ ಇರಾನ್ ಘನಘೋರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ತಕ್ಷಣವೇ ವ್ಯವಹಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನಿನ ಎಲ್ಲಾ ವಿದ್ಯುತ್ ಉತ್ಪಾದನಾ ಸ್ಥಾವರಗಳು, ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸ್ಫೋಟಿಸಿ ಸಂಪೂರ್ಣವಾಗಿ ನಾಶಮಾಡುತ್ತೇನೆ ಎಂದು ಟ್ರೂಥ್ ಪೋಸ್ಟ್ನಲ್ಲಿ ಟ್ರಂಪ್ ಹೇಳಿದ್ದಾರೆ. ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಗಂಭೀರ ಚರ್ಚೆ ನಡೆಸುತ್ತಿದೆ. ಶೀಘ್ರದಲ್ಲೇ ಒಪ್ಪಂದಕ್ಕೆ ಬರದಿದ್ದರೆ ಇರಾನಿನ ಮೂಲಸೌಕರ್ಯ ಘಟಕಗಳನ್ನೇ ನಾಶ … Read more

12 ಮಂದಿ ಸಜೀವ ದಹನ *ಟಿಪ್ಪರ್‌ಗೆ ಖಾಸಗಿ ಬಸ್ ಡಿಕ್ಕಿ: ಹೊತ್ತಿ ಉರಿದ ಬಸ್

ಅಮರಾವತಿ: ಟಿಪ್ಪರ್‌ಗೆ ಖಾಸಗಿ ಬಸ್ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ ಬಸ್ ನಲ್ಲಿದ್ದ ಕನಿಷ್ಠ 12 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. 20 ಜನರು ಗಾಯಗೊಂಡಿರುವ ದುರ್ಘಟನೆ ಆಂಧ್ರಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಹರಿಕೃಷ್ಣ ಟ್ರಾವೆಲ್ಸ್ಗೆ ಸೇರಿದ ಖಾಸಗಿ ಬಸ್ ರಾಯವರಂ ಬಳಿ ಜಲ್ಲಿ ತುಂಬಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ತೀವ್ರತೆಗೆ ಬಸ್ ಹೊತ್ತಿ ಉರಿದಿದೆ. ಬೆಂಕಿ ಕೆನ್ನಾಲಿಗೆಗೆ 12 ಮಂದಿ ಸಜೀವ ದಹನವಾಗಿದ್ದಾರೆ. ಪೊಲೀಸರು ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನ ರಕ್ಷಣೆ ಮಾಡಿ … Read more

ಬೀದರ್: ಪೆಟ್ರೋಲ್ ಬಂಕ್ ಬಂದ್

ಬೀದರ್: ಇರಾನ್ ಮತ್ತು ಇಸ್ರೆಲ್ ವಾರ್ ಯುದ್ಧದ ಪರಿಣಾಮ ಗಡಿ ಜಿಲ್ಲೆ ಬೀದರ್‌ನ ಕೆಲವು ಬಂಕ್‌ಗಳಲ್ಲಿ ಪೆಟ್ರೋಲ್ ಅಭಾವ ಸೃಷ್ಟಿಯಾಗಿ ಬಂಕ್‌ಗಳು ಬಂದ್ ಆಗಿವೆ. ತೈಲ ಕೊರತೆ ವದಂತಿ ಹಿನ್ನೆಲೆ ಜನ ಮುಗಿಬಿದ್ದು ಪೆಟ್ರೋಲ್, ಡಿಸೇಲ್ ಖರೀದಿಸಿದ ಹಿನ್ನೆಲೆಯಲ್ಲಿ ಬೀದರ್ ನಗರದ ಬಸವೇಶ್ವರ ವೃತದ ಬಳಿ ಇರುವ ನಯಾರಾ ಪೆಟ್ರೋಲ್ ಬಂಕ್ ಸೇರಿದಂತೆ 7ಕ್ಕೂ ಅಧಿಕ ಬಂಕ್‌ಗಳಲ್ಲಿ ಪೆಟ್ರೋಲ್, ಡಿಸೇಲ್ ಖಾಲಿಯಾಗಿ ಬಂಕ್‌ಗಳನ್ನು ಬಂದ್ ಮಾಡಲಾಗಿದೆ. ಬುಧವಾರ ರಾತ್ರಿಯಿಂದಲೇ ಪೆಟ್ರೋಲ್, ಡಿಸೇಲ್ ಖಾಲಿಯಾಗಿದೆ. ಸ್ಟಾಕ್ ಇಲ್ಲದೇ ಜನರು … Read more

ಮತ್ತೆರಡು ಹುಲಿ ಪತ್ತೆ

ಗುಂಡ್ಲುಪೇಟೆ ತಾಲ್ಲೂಕಿನ ಚೆನ್ನಮಲ್ಲಿಪುರ ಗ್ರಾಮದ ರೈತರ ಜಮೀನಿನ ಬಾಳೆತೋಟ ಹಾಗೂ ಆಸುಪಾಸಿನಲ್ಲಿ ಮರಿಯೊಟ್ಟಿಗೆ ತಾಯಿ ಹುಲಿ ವಾಸ್ತವ್ಯ ಹೂಡಿರುವುದು ಸುತ್ತಮುತ್ತಲಿನ ಗ್ರಾಮಗಳ ರೈತರಲ್ಲಿ ಆತಂಕ ಸೃಷ್ಟಿಯಾಗಿದೆ. ಹುಲಿಗಳ ಚಲನವಲನದ ಮೇಲೆ ಅರಣ್ಯ ಇಲಾಖೆ ಡ್ರೋನ್ ಕ್ಯಾಮೆರಾ ಮೂಲಕ ನಿಗಾ ವಹಿಸಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಅರಣ್ಯ ವಲಯ ವ್ಯಾಪ್ತಿಯ ಚೆನ್ನಮಲ್ಲಿಪುರ ಗ್ರಾಮದ ರೈತ ನಾಗಪ್ಪ ಎಂಬವರ ಜಮೀನಿನಲ್ಲಿ ಕಳೆದ ಮೂರು ದಿನದ ಹಿಂದೆ ಒಂದೂವರೆ ವರ್ಷದ ಗಂಡು ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ … Read more