ಸುತ್ತೂರು ಮಠಕ್ಕೆ ಕೇಂದ್ರ ಸಚಿವ ಪ್ರಧಾನ್ ಭೇಟಿ

ಮೈಸೂರು: ಮೈಸೂರಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ಭೇಟಿ ನೀಡಿದ್ದರು. ಈ ಸಂದರ್ಭ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಕೇಂದ್ರ ಸಚಿವರು ಬೆಳಗ್ಗೆ ಮಠದಲ್ಲಿ ಆಯೋಜಿಸಿದ್ದ ಉಪಹಾರವನ್ನು ಸವಿದರು. ಮಠದ ವತಿಯಿಂದ ಅವರಿಗೆ ಸನ್ಮಾನ ಮಾಡಲಾಯಿತು. ಕೆ.ಎಸ್.ಓ.ಯು.ನಲ್ಲಿ ನಡೆಯಲಿರುವ ಆರ್.ಎಸ್.ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಮಿತ್ತ ಧರ್ಮೇಂದ್ರ ಪ್ರಧಾನ್ ಅವರು ಮೈಸೂರಿಗೆ ಆಗಮಿಸಿದ್ದಾರೆ. ಮಠಕ್ಕೆ ಭೇಟಿ ನೀಡಿದ ಬಳಿಕ ಅವರು ಕಾರ್ಯಕ್ರಮಕ್ಕೆ … Read more

ಇಂದು ಎಲ್ಲಾ ಸಿಎಂಗಳ ಜೊತೆ ಮೋದಿ ಸಂವಾದ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಉಂಟಾಗಿರುವ ಸಮಸ್ಯೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮಾ.27ರಂದು ಸಂಜೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸುವರು. ರಾಜ್ಯಗಳ ಸಿದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲಾಗುತ್ತದೆ. ಎಲ್ಲಾ ಸಿಎಂಗಳ ಜೊತೆಗೆ ಪ್ರಧಾನಿ ನಡೆಸುವ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುವರೇ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಈ ಕುರಿತು ಮುಖ್ಯಮಂತ್ರಿ ಕಚೇರಿಯಿಂದ ಇದುವರೆಗೆ ಯಾವುದೇ ಅಧಿಕೃತ ಪ್ರಕಟಣೆ ಬಂದಿಲ್ಲ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ … Read more

ನಾಳೆಯಿಂದ ಐಪಿಎಲ್ ಕ್ರಿಕೆಟ್

ಬೆಂಗಳೂರು: ಐಪಿಎಲ್ ಕ್ರಿಕೆಟ್ ಆವೃತ್ತಿ ಮಾ.28ರಿಂದ ಆರಂಭವಾಗುತ್ತಿದೆ. ನಗರದ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 28ರಂದು ಪಂದ್ಯ ಉದ್ಘಾಟನೆ ಆಗಲಿದೆ. ಹೀಗಾಗಿ ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದೆ. ಕೆಲವೆಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕಳೆದ ವರ್ಷ ಜೂ.4ರಂದು ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿತ್ತು. ಹೀಗಾಗಿ ಈ ಬಾರಿ ಯಾವುದೇ ಲೋಪಗಳಾಗದಂತೆ ಪೊಲೀಸ್ ಇಲಾಖೆ ಹಾಗೂ ಸಂಚಾರಿ ಪೊಲೀಸರು ಕೆಲವು ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಮೊದಲ ಐಪಿಎಲ್ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಆರ್‌ಸಿಬಿ ಹಾಗೂ … Read more

ನಮಗೂ ಕ್ರಿಕೆಟ್ ಟಿಕೆಟ್ ಕೊಡಿ! ವಿಧಾನಸಭೆಯಲ್ಲಿ ಪಕ್ಷಾತೀತವಾಗಿ ಶಾಸಕರ ಒತ್ತಾಯ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುವಾಗ ಶಾಸಕರಿಗೆ ಕನಿಷ್ಠ 4ರಿಂದ 5 ಟಿಕೆಟ್ ಕೊಡಿಸಿ ಎಂದು ವಿಧಾನಸಭೆಯಲ್ಲಿ ಸೋಮವಾರ ಸದಸ್ಯರು ಪಕ್ಷಾತೀತವಾಗಿ ಆಗ್ರಹಿಸಿದರು. ಚಿನ್ನಸ್ವಾಮಿ ಕ್ರೀಡಾಂಗಣ ಸಂಬಂಧ ನಡೆದ ಚರ್ಚೆ ವೇಳೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಮೊನ್ನೆ 11 ಜನ ಕಾಲ್ತುಳಿತದಲ್ಲಿ ಸತ್ತಿದ್ದಾರೆ. ಮತ್ತೊಂದು ಸ್ಟೇಡಿಯಂ ಬೇಡ. ಚಿನ್ನಸ್ವಾಮಿ ಸ್ಟೇಡಿಯಂ ಜಾಗ ನಮ್ಮದು. ಅಲ್ಲಿ ಕ್ರಿಕೆಟ್ ಟ್ರೈನಿಂಗ್ ಮಾಡಿ ಎಂದು ಜಾಗ ನೀಡಿದ್ದೇವೆ. ಅವರು ಏನು ತರಬೇತಿ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಒಂದು ಟಿಕೆಟ್‌ಗೆ … Read more

ಸೋನಿಯಾ ಗಾಂಧಿ ಆರೋಗ್ಯ ಸ್ಥಿತಿ ಸ್ಥಿರ

ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದೆ. ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುವುದು ಎಂದು ಆಸ್ಪತ್ರೆ ಅಧ್ಯಕ್ಷ ಡಾ.ಅಜಯ್ ಸ್ವರೂಪ್ ಹೇಳಿದ್ದಾರೆ. ಮಾರ್ಚ್ 24ರ ರಾತ್ರಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರಿಗೆ ಆಂಟಿ ಬಯೋಟಿಕ್ ನೀಡಲಾಗುತ್ತಿದೆ. ಅವರು ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದು ಅಜಯ್ ತಿಳಿಸಿದ್ದಾರೆ. … Read more

ಲೋಕಾಯಕ್ತ ಬಲೆಗೆ ಬಿದ್ದ ಡಿಎಚ್‌ಒ ಕಚೇರಿ ಅಧೀಕ್ಷಕ

ತುಮಕೂರು: ಆರೋಗ್ಯ ಜಾಗೃತಿ ವಸ್ತು ಪ್ರದರ್ಶನ ಬಿಲ್ ಪಾವತಿಗೆ ಲಂಚ ಪಡೆಯುವಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಲೆಕ್ಕಪತ್ರ ವಿಭಾಗದ ವ್ಯವಸ್ಥಾಪಕ ಎಂ.ಎಚ್. ಅರವಿಂದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಮೀಪದ ಡಿಎಚ್‌ಒ ಕಚೇರಿ ಆವರಣದಲ್ಲಿ ಕೆ.ರಾಜಶೇಖರ್ ಎಂಬುವರಿದ 12 ಸಾವಿರ ಲಂಚದ ಹಣ ತೆಗೆದುಕೊಳ್ಳುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಂತರ ಬಂಧಿಸಿದ್ದಾರೆ. ತಿಪಟೂರಿನ ಡಾ.ಬಿ.ಆರ್.ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ … Read more

ಹೈಕಮಾಂಡ್ ತೀರ್ಮಾನದವರೆಗೂ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ರಾಜ್ಯದ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು. ಸದನದಲ್ಲಿ ಬಜೆಟ್ ಉತ್ತರ ವೇಳೆ ಡಿಕೆಶಿ ಹೆಸರು ಹಾಗೂ ಸ್ಪೀಕರ್ ಖಾದರ್ ಫೋಟೋ ಸೆಷನ್ ವಿಚಾರ ಪ್ರಸ್ತಾಪಿಸಿ ವಿಪಕ್ಷಗಳ ನಾಯಕರು ಸಿದ್ದರಾಮಯ್ಯ ಅವರ ಕಾಲೆಳೆದರು. ವಿಪಕ್ಷಗಳ ಲೇವಡಿಗೆ ಉತ್ತರಿಸಿದ ಸಿಎಂ, ನಮ್ಮಲ್ಲಿ ಎಲ್ಲ ಶಾಸಕರೂ ಸಿಎಂ ಹುದ್ದೆಗೆ ಅರ್ಹರು. ಯಾರೇ ಸಿಎಂ ಆದರೂ ನನಗೆ ಖುಷಿಯಾಗುತ್ತದೆ. ಹೈಕಮಾಂಡ್ ಎಲ್ಲಿಯವರೆಗೆ ಇರು ಅಂತಾರೋ, ಅಲ್ಲೀವರೆಗೂ ಖಾದರ್ ಸ್ಪೀಕರ್ ಆಗಿರುತ್ತಾರೆ. … Read more

ಮುಕ್ತ ವಿವಿಯಲ್ಲಿ ಭ್ರಷ್ಟಾಚಾರ: ಬ್ಯಾಂಕ್ ಖಾತೆ ಸ್ಥಗಿತಕ್ಕೆ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ (ಕೆಎಸ್‌ಒಯು) ನಡೆದಿದೆ ಎನ್ನಲಾದ ಲಂಚ ಹಾಗೂ ಭ್ರಷ್ಟಾಚಾರ ಆರೋಪಗಳ ತನಿಖೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಪ್ರಕರಣಗಳ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಆರ್.ಆರ್.ಪಾಟೀಲ ಸಮಿತಿಯನ್ನು ನೇಮಕ ಮಾಡಲಾಗಿದೆ. ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಣಕಾಸಿನ ದುರುಪಯೋಗವನ್ನು ತಡೆಯಲು ವಿಶ್ವವಿದ್ಯಾಲಯದ ಎಲ್ಲಾ ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಸಂಬAಧಪಟ್ಟ ಬ್ಯಾಂಕುಗಳಿಗೆ ಸೂಚನೆ ನೀಡಿದೆ. ಈ ಕ್ರಮದಿಂದ ಪ್ರಕರಣಕ್ಕೆ ಸಂಬAಧಿಸಿದ ಹಣಕಾಸು ವ್ಯವಹಾರಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ … Read more

ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಲಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ ಹಿರಿಯ ಸಾಹಿತಿಗಳಿಗೆ ನೀಡಲಾಗುವ ಕರ್ನಾಟಕ ಸಾಹಿತ್ಯ ಅಕಾಡೆಮಿ ವರ್ಷದ ಗೌರವ ಪ್ರಶಸ್ತಿಗೆ ಪ್ರೊ.ಶಿವರಾಮಯ್ಯ, ಚಂದ್ರಶೇಖರ ತಾಳ್ಯ, ಡಾ. ಚಂದ್ರಶೇಖರ ಪೋಕಳೆ, ಡಾ.ವಸುಂಧರಾ ಭೂಪತಿ ಹಾಗೂ ಡಾ.ಎಸ್.ತುಕಾರಾಂ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು 50 ಸಾವಿರ ನಗದು ಒಳಗೊಂಡಿದೆ. 50ರಿAದ 60 ವರ್ಷ ವಯೋಮಾನದ ಸಾಹಿತಿಗಳಿಗೆ ನೀಡಲಾಗುವ ಸಾಹಿತ್ಯ ಶ್ರೀ ಪ್ರಶಸ್ತಿಗೆ ಬಿ.ಎಂ. ಬಷೀರ್, ಕಂಕನಾಡಿ … Read more

ಗ್ಯಾಸ್ ಬುಕ್ಕಿಂಗ್ ಅವಧಿ ಬದಲಾವಣೆ ಆಗಿಲ್ಲ

ನವದೆಹಲಿ: ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಬದಲಾವಣೆಯಾಗಿದೆ ಎಂಬ ವರದಿ ಸರಿಯಲ್ಲ. ಯಾವುದೇ ರೀತಿಯ ಬದಲಾವಣೆಗಳಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಈ ಕುರಿತು ಇಂಡಿಯನ್ ಆಯಿಲ್ ಕಂಪನಿ ಪೋಸ್ಟ್ ಹಂಚಿಕೊಂಡಿದ್ದು, ಎಲ್‌ಪಿಜಿ ರಿಫೀಲ್ ಬುಕ್ಕಿಂಗ್ ಅವಧಿಯಲ್ಲಿ ಬದಲಾವಣೆಗಳಾಗಿವೆ ಎಂಬ ವರದಿಗಳು ತಪ್ಪಾಗಿವೆ. ಸದ್ಯ ಜಾರಿಯಲ್ಲಿರುವ ಅವಧಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ದೇಶಾದ್ಯಂತ ಎಲ್‌ಪಿಜಿ ಸರಬರಾಜಿನಲ್ಲಿಯೂ ಯಾವುದೇ ಸಮಸ್ಯೆ ಇಲ್ಲ. ಸ್ಟಾಕ್ ಇದೆ ಎಂದು ಸರ್ಕಾರ ತಿಳಿಸಿದೆ. ಪಿಎಂಯುವೈ (ಉಜ್ವಲ್ ಗ್ಯಾಸ್) 45 ದಿನ, ನಗರ ಪ್ರದೇಶಕ್ಕೆ 25 … Read more