ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ: ಪೋಕ್ಸೋ ಕಾಯ್ದೆಯಡಿ ಮಾಹಿತಿ ಕಡ್ಡಾಯ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಗರ್ಭಧಾರಣೆ ಪ್ರಕರಣಗಳ ಬಗ್ಗೆ ಖಾಸಗಿ ಆಸ್ಪ್ರತ್ರೆಗಳು ಪೋಕ್ಸೋ ಕಾಯ್ದೆಯಡಿ ವರದಿ ಮಾಡುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಖಾಸಗಿ ಆಸ್ಪತ್ರೆಗಳು ಪೋಕ್ಸೋ ಕಾಯ್ದೆಯಡಿಯಲ್ಲಿ ಬರುವ ಎಲ್ಲಾ ಪ್ರಕರಣಗಳನ್ನು ಮತ್ತು ವಿಶೇಷವಾಗಿ ಅಪ್ರಾಪ್ತ ವಯಸ್ಸಿನ ಗರ್ಭಧಾರಣೆ ಪ್ರಕರಣಗಳನ್ನು ವರದಿ ಮಾಡುವುದು ಕಡ್ಡಾಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರ ಯಾವುದೇ ನಿರ್ಲಕ್ಷ್ಯ ಅಥವಾ ಕಾನೂನಿನ ಉಲ್ಲಂಘನೆಯನ್ನು ಸಹಿಸುವುದಿಲ್ಲ. ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಈ … Read more

7 ವರ್ಷ ಸೇವೆ ನಂತರ ಅಂತರ್ ಜಿಲ್ಲಾ ವರ್ಗಾವಣೆಗೆ ಅರ್ಹ: ಪರಂ

ಬೆಂಗಳೂರು: ವರ್ಗಾವಣೆ ನಿಯಮಗಳ ಪ್ರಕಾರ ಸರ್ಕಾರಿ ಸಿಬ್ಬಂದಿ ಒಂದು ಜಿಲ್ಲೆಯಲ್ಲಿ ಕನಿಷ್ಠ ಏಳು ವರ್ಷ ಕರ್ತವ್ಯ ಸಲ್ಲಿಸಿದ ನಂತರವಷ್ಟೇ ಅಂತರ್ ಜಿಲ್ಲಾ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅರ್ಹರು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಅಂತರ್ ಜಿಲ್ಲಾ ವರ್ಗಾವಣೆ ಸಿಗದೆ ಕಂಗಾಲಾಗಿರುವ ಕಾನ್‌ ಸ್ಟೆಬಲ್‌ ಗಳು ದಯಾಮರಣ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಏಳು ವರ್ಷ ತುಂಬಿದ ತಕ್ಷಣ ವರ್ಗಾವಣೆ ಖಚಿತ ಎಂದಲ್ಲ. ಅರ್ಜಿದಾರರ ಹಿರಿತನ ಮತ್ತು ಆ ಜಿಲ್ಲೆಯಲ್ಲಿ ಲಭ್ಯವಿರುವ ಖಾಲಿ … Read more

ಚಿನ್ನದ ಬೆಲೆ ಭಾರೀ ಏರಿಕೆ

ಬೆಂಗಳೂರು: ಅಮೆರಿಕ-ಇರಾನ್ ನಡುವೆ ಕದನ ವಿರಾಮ ಹಿನ್ನೆಲೆಯಲ್ಲಿ ತೈಲ ಬೆಲೆ ಇಳಿಕೆಯಾಗಿದೆ. ಆದರೆ, ಹೂಡಿಕೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಬುಧವಾರ ಚಿನ್ನ ಬೆಳ್ಳಿ ದರಗಳು ಭಾರಿ ಏರಿಕೆ ಕಂಡಿವೆ. 24 ಕ್ಯಾರೆಟ್ 10 ಗ್ರಾಂ ಚಿನ್ನ 3,980 ರೂ ಏರಿಕೆ ಆಗಿ 1,53,820 ರೂ. ಬೆಲೆ ದಾಖಲಾಗಿದೆ. 1 ಗ್ರಾಂ ಬೆಲೆ 15,382 ರೂ.ಗೆ ಏರಿಕೆ ಆಗಿದೆ. 22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 365 ರೂ ಏರಿಕೆ ಆಗಿ 14,100 ರೂ ಆಗಿದೆ. 10 ಗ್ರಾಂ … Read more

ಕದನ ವಿರಾಮ ಬೆನ್ನಲ್ಲೇ ಕಚ್ಚಾತೈಲ ಬೆಲೆ ಭಾರೀ ಕುಸಿತ

ಲಂಡನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 14 ದಿನಗಳ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರೀ ಕುಸಿತವಾಗಿದೆ. ಒಂದೇ ದಿನ ಸುಮಾರು ಶೇ.13 ರಿಂದ 17ರಷ್ಟು ಕುಸಿದಿದೆ. ಕಳೆದ ಆರು ವರ್ಷಗಳಲ್ಲೇ ಒಂದೇ ದಿನ ಕಂಡ ಅತಿ ದೊಡ್ಡ ಕುಸಿತ ಇದಾಗಿದೆ. ಅಮೆರಿಕದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ ಕಚ್ಚಾತೈಲದ ಬೆಲೆ ಸುಮಾರು 16.13 ಡಾಲರ್ (14.3%) ಇಳಿಕೆಯಾಗಿ ಪ್ರತಿ ಬ್ಯಾರೆಲ್‌ಗೆ 96.82 ಡಾಲರ್ (8,940 ರೂ.) ತಲುಪಿದೆ. ಜಾಗತಿಕ ಮಾನದಂಡವಾದ … Read more

ಕಾಡಾನೆ ದಾಳಿ: ಕಾಫಿ ಎಸ್ಟೇಟ್ ಮಾಲೀಕ ಸಾವು

ಮಡಿಕೇರಿ: ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಕಾಯಿಮಾನಿ ನಿವಾಸಿ ರತ್ತು ಆನೆ ದಾಳಿಯಲ್ಲಿ ಸಾವನ್ನಪ್ಪಿದ ಕಾಫಿ ಬೆಳೆಗಾರ. ಬುಧವಾರ ಬೆಳಗ್ಗೆ ರತ್ತು ಅವರು ಕುರ್ಚಿ-ಕಾಯಿಮಾನಿ ನಡುವೆ ಇರುವ ತಮ್ಮ ಕಾಫಿ ತೋಟಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರಾದ ಕಾಡಾನೆ ದಾಳಿ ನಡೆಸಿ, ತುಳಿದು ಸಾಯಿಸಿದೆ. ಕಳೆದ ಕೆಲವು ದಿನಗಳಿಂದ ಶ್ರೀಮಂಗಲ ಹೋಬಳಿಯ ಕುರ್ಚಿ ಮತ್ತು ಕಾಯಿಮಾನಿ ಭಾಗದಲ್ಲಿ ಸುಮಾರು 8 ರಿಂದ 10 ಕಾಡಾನೆಗಳ ಹಿಂಡು ಬೀಡುಬಿಟ್ಟಿವೆ.

ಸ್ವಾಮೀಜಿ ವಿರುದ್ಧ ದೂರು: ಸಂತ್ರಸ್ತ ಮಹಿಳೆ ನಾಪತ್ತೆ?

ಬೆಂಗಳೂರು: ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಮಹಿಳೆ ನಾಪತ್ತೆ ಆಗಿದ್ದಾರೆ ಎನ್ನಲಾಗದೆ. ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ನೇತೃತ್ವ ವಹಿಸಿಕೊಂಡಿದ್ದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆ ದೂರು ನೀಡಿದ್ದರು. ಸ್ವಾಮೀಜಿ ನನ್ನ ಖಾಸಗಿ ವಿಡಿಯೋ ಮಾಡಿಕೊಂಡು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ದೂರು ಸಲ್ಲಿಸಿದ್ದರು. ಗಂಭೀರ ಆರೋಪ ಮಾಡಿದ್ದ ಮಹಿಳೆ ವಿರುದ್ಧ ಸ್ವಾಮೀಜಿ ಪ್ರತಿದೂರು ದಾಖಲಿಸುತ್ತಿದ್ದಂತೆ ಮಹಿಳೆ ನಾಪತ್ತೆಯಾಗಿದ್ದಾರೆ. ಮಹಿಳೆಯನ್ನು ಸಂಪರ್ಕಿಸಲು … Read more

ರೆಪೊ ದರ ಯಥಾಸ್ಥಿತಿ

ನವದೆಹಲಿ: ಹಣಕಾಸು ನೀತಿ ಸಮಿತಿಯು ರೆಪೊ ದರವನ್ನು ಹಾಲಿ ಇರುವ ದರದಲ್ಲೇ ಮುಂದುವರೆಸಲು ನಿರ್ಧರಿಸಿದೆ. ಹಣದುಬ್ಬರವನ್ನು ಶೇ.4.6 ಎಂದು ಅಂದಾಜಿಸಿದೆ. ಹಣಕಾಸು ನೀತಿ ಸಮಿತಿಯು ರೆಪೊ ದರವನ್ನು ಶೇ.5.25ರಲ್ಲಿ ಯಥಾಸ್ಥಿತಿಯಲ್ಲಿಡಲು ಮತ್ತು ತಟಸ್ಥ ನಿಲುವನ್ನು ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದರು. ಮೊನ್ನೆಯಿಂದ ನಡೆದ ಆರ್‌ಬಿಐ ಎಂಪಿಸಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರೈಲಿನಲ್ಲಿ 20.24 ಲಕ್ಷ ಮೌಲ್ಯದ ಗಾಂಜಾ ವಶ

ಬಳ್ಳಾರಿ: ರೈಲ್ವೇ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ರೈಲಿನಲ್ಲಿ ಸಾಗಿಸುತ್ತಿದ್ದ 20.24 ಲಕ್ಷ ಮೌಲ್ಯದ 40.49 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ವಾಸ್ಕೋ ಡ ಗಾಮಾ ಶಾಲಿಮರ್ ಅಮರಾವತಿ ಎಕ್ಸಪ್ರೆಸ್ ರೈಲಿನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿತ್ತು. ಶ್ವಾನದಳದ ಮೂಲಕ ದಾಳಿ ಮಾಡಿದ ರೈಲ್ವೇ ಪೊಲೀಸರು ಗಾಂಜಾ ವಶಕ್ಕೆ ಪಡೆದಿದ್ದಾರೆ. ರೈಲಿನ ಜನರಲ್ ಬೋಗಿಯ ಸೀಟ್ ಕೆಳಗಡೆ ಪ್ಯಾಕ್ ಮಾಡಿ ಗಾಂಜಾ ಇಟ್ಟಿದ್ದರು. ಶ್ವಾನದಳದ ಮೂಲಕ 19 ಬಂಡಲ್ ನಲ್ಲಿದ್ದ 20.24 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. … Read more

ಪ್ರಮುಖ ವಲಯಗಳಿಗೆ ಗ್ಯಾಸ್: ಆದ್ಯತೆಗೆ ಸೂಚನೆ

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಪ್ರಮುಖ ವಲಯಗಳಿಗೆ ಎಲ್‌ಪಿಜಿ ಹಂಚಿಕೆ ಮಾಡಲು ಆದ್ಯತೆ ನೀಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಪ್ರಮುಖ ಉದ್ಯಮಗಳು ತಮ್ಮ ಎಲ್‌ಪಿಜಿ ಅಗತ್ಯಗಳಲ್ಲಿ ಶೇ.70ರಷ್ಟು ಪಡೆಯಲಿವೆ. ಔಷಧ, ಆಹಾರ, ಪಾಲಿಮರ್ ಮತ್ತು ಕೃಷಿಯಂತಹ ಕ್ಷೇತ್ರಗಳಿಗೆ ಹೆಚ್ಚಿನ ಅನಿಲ ಪೂರೈಕೆ ಅಗತ್ಯ. ಪ್ಯಾಕೇಜಿಂಗ್, ಪೇಂಟ್, ಯುರೇನಿಯಂ, ಹೆವಿ ವಾಟರ್, ಸ್ಟೀಲ್, ಸೀಡ್, ಮೆಟಲ್, ಸೆರಾಮಿಕ್, ಫೌಂಡ್ರಿ, ಫೋರ್ಜಿಂಗ್, ಗ್ಲಾಸ್ ಮತ್ತು ಏರೋಸಾಲ್ ಸೇರಿದಂತೆ ಇತರ ಘಟಕಗಳು ಇದರಲ್ಲಿ ಸೇರಿವೆ. ಭಾರತದ ಎಲ್‌ಪಿಜಿ ಆಮದುಗಳಲ್ಲಿ ಹೆಚ್ಚಿನ … Read more

ನಾಳೆ ದ್ವಿತೀಯ ಪಿಯು ಫಲಿತಾಂಶ

ಬೆಂಗಳೂರು: ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಏಪ್ರಿಲ್ 9ರಂದು (ಗುರುವಾರ) ಬೆಳಗ್ಗೆ ಪ್ರಕಟವಾಗಲಿದೆ ಎಂದು ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಇಂದು ಮಂಗಳವಾರ ಫಲಿತಾಂಶ ಪ್ರಕಟವಾಗಬೇಕಿತ್ತು. ಕಾರಣವೇ ಇಲ್ಲದೇ ಫಲಿತಾಂಶ ಪ್ರಕಟ ಮುಂದೂಡಿಕೆ ಮಾಡಿತ್ತು. ಈ ಬೆನ್ನಲ್ಲೇ ಫಲಿತಾಂಶ ಪ್ರಕಟಣೆ ಅಂತಿಮ ದಿನಾಂಕವನ್ನೂ ಬಿಡುಗಡೆ ಮಾಡಿದೆ. ಏಪ್ರಿಲ್ 9ರ ಬೆಳಗ್ಗೆ ಸಚಿವರು ನಡೆಸುವ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನದ ನಂತರ ಇಲಾಖೆ ವೆಬ್‌ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. ಫೆಬ್ರವರಿ 28ರಿಂದ ಮಾರ್ಚ್ … Read more