ಡಿಕೆಶಿ ಇವತ್ತೇ ಸಿಎಂ ಆಗ್ತಾರೆ ಅಂತ ಹೇಳಿದ್ದೀನಾ?: ಡಿಕೆಸು

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆಂಬ ಆಸೆಯಿದೆ. ಆದರೆ ಅವರು ಇವತ್ತೇ ಸಿಎಂ ಆಗ್ತಾರೆ ಅಂತ ನಾನು ಹೇಳಿದ್ದೀನಾ?. ಇದರ ಬಗ್ಗೆ ಸಮಯ ಬಂದಾಗ ಮಾತಾಡೋಣ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಇನ್ನೂ ಎರಡು ವರ್ಷ ಸಿಎಂ ಆಗಿ ಮುಂದುವರೆಯಲಿದ್ದಾರೆAಬ ಪರಮೇಶ್ವರ್ ಹೇಳಿಕೆ ವಿಚಾರಕ್ಕೆ ಪ್ರತಿಕಿಯಿಸಿದ ಅವರು, ಇದು ನನಗೆ ಗೊತ್ತಿಲ್ಲ. ಅವರನ್ನೇ ಕೇಳಬೇಕು. ಅವರು ಗೃಹ ಸಚಿವರಾಗಿದ್ದಾರೆ. ಅವರು ಹೇಳಿದನ್ನು ನಾವು ಕೇಳಬೇಕಾಗುತ್ತದೆಂದು ವ್ಯಂಗ್ಯವಾಡಿದರು. ಕ್ಷೇತ್ರ ಪುನರ್ ವಿಂಗಡಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ … Read more

ಗುತ್ತಿಗೆದಾರ ಶವವಾಗಿ ಪತ್ತೆ

ಮಂಡ್ಯ: ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಅನುಮಾನಾಸ್ಪದ ರೀತಿಯಲ್ಲಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಹುಣಸನಹಳ್ಳಿ ಗ್ರಾಮದ ಪವನ್ (27) ಅನುಮಾನಸ್ಪದ ಸಾವನ್ನಪ್ಪಿರುವ ಪ್ರಥಮ ದರ್ಜೆ ಗುತ್ತಿಗೆದಾರ. ಪವನ್ ಕೋಟ್ಯಂತರ ರೂ. ಮೌಲ್ಯದ ಎಲೆಕ್ಟ್ರಿಕ್ ಕಾಮಗಾರಿ ನಡೆಸುತ್ತಿದ್ದರು. ಏ.2ರಂದು ಮನೆಯಿಂದ ಕೆಲಸದ ಸ್ಥಳಕ್ಕೆ ಹೋಗುತ್ತೇನೆ ಎಂದು ತೆರಳಿದ್ದ ಪವನ್ ಮನೆಗೆ ವಾಪಸ್ ಬಂದಿರಲಿಲ್ಲ. ನಾಪತ್ತೆ ಬಳಿಕ ಪವನ್ ಫೋನ್ ಸ್ಪೀಚ್ ಆಫ್ ಆಗಿತ್ತು. ಸಾಮಾಜಿಕ ಜಾಲತಾಣದ … Read more

ಏ.10ರಿಂದ ನಗದು ರಹಿತ ಟೋಲ್

ನವದೆಹಲಿ: ದೇಶದ ಎಲ್ಲಾ ಟೋಲ್ ಗಳನ್ನ ಡಿಜಿಟಲೀಕರಣಗೊಳಿಸುವತ್ತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಏಪ್ರಿಲ್ 10ರಿಂದ ಜಾರಿಯಾಗುವಂತೆ ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ವ್ಯವಸ್ಥೆ ಬಂದ್ ಆಗಲಿದೆ. ಟೋಲ್ ಪ್ಲಾಜಾ ಹಾದು ಹೋಗಲು ಫಾಸ್ಟ್ಟ್ಯಾಗ್ ಇಲ್ಲದ ವಾಹನಗಳಿಗೆ ಯುಪಿಐ ಮೂಲಕ ಪಾವತಿಸುವ ಪರ್ಯಾಯ ಆಯ್ಕೆ ನೀಡಲಾಗಿದೆ. ಆದರೆ, ಈ ಸೌಲಭ್ಯಕ್ಕೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ. ಯುಪಿಐ ವಹಿವಾಟು ನಡೆಸಿದಲ್ಲಿ ಸಾಮಾನ್ಯ ಟೋಲ್ ಶುಲ್ಕಕ್ಕಿಂತ ಶೇ.25ರಷ್ಟು ಹೆಚ್ಚುವರಿ ಹಣವನ್ನ ಚಾಲಕರು ಪಾವತಿಸಬೇಕಾಗುತ್ತದೆ. ಫಾಸ್ಟ್ಟ್ಯಾಗ್ ಮತ್ತು ಯುಪಿಐ … Read more

ಇರಾನ್ ಸರ್ವೋಚ್ಛ ನಾಯಕ ಮೊಜ್ತಬಾ ಪ್ರಜ್ಞಾಹೀನ ಸ್ಥಿತಿ?

ಟೆಹ್ರಾನ್: ಅಮೆರಿಕದ ಕದನ ವಿರಾಮಕ್ಕೆ ಒಪ್ಪದ ಇರಾನ್ ಮೇಲೆ ಭೀಕರ ದಾಳಿಯ ಎಚ್ಚರಿಕೆಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊಟ್ಟಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೇ ಇರಾನ್‌ಗೆ ದೊಡ್ಡ ಆಘಾತ ಎದುರಾಗಿದೆ. ಇರಾನ್‌ನ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ಇಸ್ರೇಲ್-ಅಮೆರಿಕ ಗುಪ್ತಚರ ಮೂಲ ಆಧರಿಸಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಮೊಜ್ತಬಾ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಅವರನ್ನ ಕೋಮ್ ನಗರದ ರಹಸ್ಯ ಸ್ಥಳದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಮೆರಿಕ ದಾಳಿ ಎಚ್ಚರಿಕೆ ನಡುವೆಯೇ ನಾಯಕತ್ವದ ಬಗ್ಗೆ ಪ್ರಶ್ನೆಗಳೂ … Read more

ಪ್ರಾಣ ತ್ಯಾಗಕ್ಕೂ ಸಿದ್ಧ: ಇರಾನ್ ಅಧ್ಯಕ್ಷ ತಿರುಗೇಟು

ಟೆಹರಾನ್: ಯುದ್ಧದಲ್ಲಿ ನಾನು ಸೇರಿದಂತೆ 14 ಮಿಲಿಯನ್ ಇರಾನಿಯನ್ನರು ಸ್ವಯಂಪ್ರೇರಿತರಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧರಿದ್ದೇವೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಘೋಷಿಸಿದ್ದಾರೆ. ಹಾರ್ಮುಜ್ ಜಲಸಂಧಿಯ ಮೇಲಿನ ನಿರ್ಬಂಧ ತೆರವುಗೊಳಿಸದಿದ್ದರೆ ಇರಾನಿನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆಗೆ ಮಸೌದ್ ಪೆಜೆಶ್ಕಿಯಾನ್ ತಿರುಗೇಟು ನೀಡಿದ್ದಾರೆ. 14 ಮಿಲಿಯನ್‌ಗಿಂತಲೂ ಹೆಚ್ಚು ಇರಾನಿನ ಜನರು ತಮ್ಮ ಪ್ರಾಣವನ್ನು ತ್ಯಾಗಮಾಡಲು ಸಿದ್ಧರಿದ್ದಾರೆ. ನಾನು ಕೂಡ ಇರಾನ್‌ಗಾಗಿ ನನ್ನ ಪ್ರಾಣ ತ್ಯಾಗಕ್ಕೆ … Read more

ಸ್ವಾಮೀಜಿ ವಿರುದ್ಧ ಮಹಿಳೆ ದೂರು

ಬೆಂಗಳೂರು: ಬಸವಜಯ ಮೃತ್ಯುಂಜಯ ಸ್ವಾಮೀಜಿ ದೈಹಿಕ, ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಬೆಂಗಳೂರಿನ ಮಹಿಳೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ಮಂಗಳವಾರ ದೂರು ನೀಡಿದ್ದಾರೆ. ಬೆಂಗಳೂರು ದಕ್ಷಿಣ ವಿಭಾಗ ಉಪ ಪೊಲೀಸ್ ಆಯುಕ್ತರು ಹಾಗೂ ಬಾಗಲಕೋಟೆ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿರುವ ಮಹಿಳಾ ಆಯೋಗ ಕ್ರಮಕ್ಕೆ ಸೂಚಿಸಿದೆ. ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ನನ್ನ ಖಾಸಗಿ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದು, ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸುತ್ತಿದ್ದಾರೆ. ಸ್ವಾಮೀಜಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ … Read more

ಎಲ್‌ ಪಿಜಿ ಬದಲಿಗೆ ಪೆಟ್ರೋಲ್ ಬಳಸಿ: ಕೇಂದ್ರ ಸಚಿವ ಜೋಷಿ

ದಾವಣಗೆರೆ: ಪೆಟ್ರೋಲ್ ಸದಾಕಾಲ ಲಭ್ಯವಿರುವ ಇಂಧನ. ಸಮಸ್ಯೆ ಬಗೆಹರಿಯುವ ವರೆಗೆ ಆಟೊ ಚಾಲಕರು ಎಲ್‌ಪಿಜಿ ಬದಲಿಗೆ ಪೆಟ್ರೋಲ್ ಬಳಸಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಸಲಹೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ದೇಶದಲ್ಲಿ ಸುಮಾರು 70 ದಿನಗಳಿಗೆ ಸಾಕಾಗುವಷ್ಟು ಕಚ್ಚಾ ತೈಲ ಸಂಗ್ರಹವಿದೆ. ನಿರಂತರವಾಗಿ ತೈಲ ಪೂರೈಕೆ ಆಗುತ್ತಿದೆ. ಜನರು ಆತಂಕಪಡುವ ಅಗತ್ಯವಿಲ್ಲ. ವಾಣಿಜ್ಯ ಸಿಲಿಂಡರ್‌ಗಳ ವಿತರಣೆಯನ್ನು ಶೇ,70ಕ್ಕೆ ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು. ದೇಶದಲ್ಲೇ ಶೇ.60ರಷ್ಟು ಎಲ್‌ಪಿಜಿಯನ್ನು ಉತ್ಪಾದಿಸಲಾಗುತ್ತಿದೆ. ಶೇ 40ರಷ್ಟು ಆಮದು … Read more

ಆಟೋ ಎಲ್‌ಪಿಜಿ ಪೂರೈಕೆ ಸಮಸ್ಯೆ: 10ರಂದು ಸಭೆ-ಸಚಿವ ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ಆಟೋ ಎಲ್‌ಪಿಜಿ ಪೂರೈಕೆ ಸಮಸ್ಯೆಯನ್ನು ಪರಿಹರಿಸುವ ಉದ್ದೇಶದಿಂದ ಏಪ್ರಿಲ್ 10ರಂದು ಸಭೆ ಕರೆಯುವುದಾಗಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸೋಮವಾರ ತಿಳಿಸಿದರು. ಕೆಲವು ಖಾಸಗಿ ತೈಲ ಕಂಪನಿಗಳು ವಾಹನಗಳಿಗೆ ಎಲ್‌ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಬೆಲೆಯನ್ನು ಹೆಚ್ಚಿಸಿವೆ. ಖಾಸಗಿ ಇಂಧನ ಕೇಂದ್ರಗಳಲ್ಲಿ ಬೆಲೆಗಳು ಹೆಚ್ಚಾದ ಕಾರಣ ಹೆಚ್ಚಿನ ಜನರು ಸಾರ್ವಜನಿಕ ವಲಯದ ಇಂಧನ ಬಂಕ್ ಗಳಿಗೆ ಹೋಗುತ್ತಿದ್ದಾರೆ. ಇದರಿಂದ ಅಲ್ಲಿ ಸರತಿ ಸಾಲುಗಳು ಕಂಡುಬರುತ್ತವೆ ಎಂದು ಅವರು ಹೇಳಿದರು. ಬೆಂಗಳೂರು ಮತ್ತು ರಾಜ್ಯದ ಇತರ ಹಲವಾರು … Read more

ಯುದ್ಧ ನಷ್ಟ ಪರಿಹಾರ ನೀಡಿದರೆ ಹಾರ್ಮುಜ್ ಓಪನ್

ಡೊಡ್ಡಣ್ಣನ ಡೆಡ್‌ ಲೈನ್‌ ಗೆ ಇರಾನ್ ತಿರುಗೇಟು ಟೆಹ್ರಾನ್: ವಿಶ್ವದ ದೊಡ್ಡಣ್ಣ ಟ್ರಂಪ್ ಡೆಡ್‌ಲೈನ್‌ಗೆ ಇರಾನ್ ಕೂಡ ತನ್ನದೇ ದಾಟಿಯಲ್ಲಿ ಕೌಂಟರ್ ನೀಡಿದೆ. ಯುದ್ಧದಿಂದಾಗಿರುವ ನಷ್ಟ ಪರಿಹಾರ ನೀಡದೆ ಹಾರ್ಮುಜ್ ಜಲಸಂಧಿ ತೆರೆಯುವ ಮಾತಿಲ್ಲ ಎಂದು ಅಮೆರಿಕಗೆ ಇರಾನ್ ತಿರುಗೇಟು ನೀಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಬೆದರಿಕೆ ಹಾಕಿದ್ದಾರೆ. ಒಪ್ಪಂದಕ್ಕೆ ಬನ್ನಿ ಅಥವಾ ಶರಣಾಗಿ. ಇಲ್ಲವಾದಲ್ಲಿ ಮಂಗಳವಾರ ರಾತ್ರಿ 8 ಗಂಟೆಗೆ ಮಾರಕ ದಾಳಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಆದರೆ ಇರಾನ್ ಹಿಂದೆ … Read more

ರಾಜ್ಯಕ್ಕೆ ಕೇಂದ್ರ ಕನಿಷ್ಠ ಗ್ಯಾಸ್ ಪೂರೈಸುತ್ತಿಲ್ಲ: ಪರಮೇಶ್ವರ್

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ಕನಿಷ್ಠ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡದ ಕಾರಣ ರಾಜ್ಯದಲ್ಲಿ ಸಮಸ್ಯೆ ಹೆಚ್ಚಾಗಿದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಆರೋಪಿಸಿದರು. ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕೇಂದ್ರಕ್ಕೆ ಬೇಡಿಕೆ ಇಟ್ಟಿದ್ದೇವೆ. ನಮ್ಮ ರಾಜ್ಯಕ್ಕೆ ಕೊಡಬೇಕಾದ ಅಲಾಟ್‌ಮೆಂಟ್ ನೀಡಬೇಕು. ಯುದ್ದದಿಂದ ಎಲ್ಲಾರಿಗೂ ತೊಂದರೆ ಆಗಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ಅನಿಲ ಪೂರೈಕೆ ಮಾಡಿಲ್ಲ. ಕನಿಷ್ಠ ಪೂರೈಕೆಯನ್ನಾದರೂ ಮಾಡಬೇಕಲ್ಲವೇ? ಅದಕ್ಕಾಗಿ ಸಮಸ್ಯೆ ಆಗಿದೆ. ಎಲ್ಲಾ ರಾಜ್ಯಗಳಿಗೆ ಕೊಟ್ಟಂತೆ ನಮಗೂ … Read more