
ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ (ಕೆಎಸ್ಒಯು) ನಡೆದಿದೆ ಎನ್ನಲಾದ ಲಂಚ ಹಾಗೂ ಭ್ರಷ್ಟಾಚಾರ ಆರೋಪಗಳ ತನಿಖೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಪ್ರಕರಣಗಳ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಆರ್.ಆರ್.ಪಾಟೀಲ ಸಮಿತಿಯನ್ನು ನೇಮಕ ಮಾಡಲಾಗಿದೆ.
ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಣಕಾಸಿನ ದುರುಪಯೋಗವನ್ನು ತಡೆಯಲು ವಿಶ್ವವಿದ್ಯಾಲಯದ ಎಲ್ಲಾ ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಸಂಬAಧಪಟ್ಟ ಬ್ಯಾಂಕುಗಳಿಗೆ ಸೂಚನೆ ನೀಡಿದೆ. ಈ ಕ್ರಮದಿಂದ ಪ್ರಕರಣಕ್ಕೆ ಸಂಬAಧಿಸಿದ ಹಣಕಾಸು ವ್ಯವಹಾರಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಹೇರಲು ಸರ್ಕಾರ ಮುಂದಾಗಿದೆ.
ಮುಕ್ತ ವಿವಿಯಲ್ಲಿ ಭ್ರಷ್ಟಾಚಾರ: ಬ್ಯಾಂಕ್ ಖಾತೆ ಸ್ಥಗಿತಕ್ಕೆ ಆದೇಶ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


