
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕುರ್ಚಿ ಆಸೆಗಾಗಿ ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆಂದು ಜೆಡಿಎಸ್ ಕಿಡಿಕಾರಿದೆ.
ಕಾಂಗ್ರೆಸ್ನಿಂದ ಮುಸ್ಲಿಂ ನಾಯಕ ಅಬ್ದುಲ್ ಜಬ್ಬರ್ ಅಮಾನತು ವಿಚಾರವಾಗಿ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ಅನ್ಯಾಯ ನಡೆಯುತ್ತಿದೆ. ಅಂದು ವಾಲ್ಮೀಕಿ ಜನಾಂಗದ ನಾಯಕ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಿದ್ದರು. ಇಂದು ಅಲ್ಪಸಂಖ್ಯಾತ ಸಮುದಾಯದ ಅಬ್ದುಲ್ ಜಬ್ಬರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಕುರ್ಚಿ ಆಸೆಗಾಗಿ ಡಿಕೆ ಶಿವಕುಮಾರ್ ತಮ್ಮ ವಿರೋಧಿ ಬಣದ ನಾಯಕರನ್ನು ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆ ಎಂದು ಆರೋಪಿಸಿದೆ.
ಹೊಂಚು ಹಾಕಿ ಡಿಕೆಶಿ ಸಂಚು: ಜೆಡಿಎಸ್ ವ್ಯಂಗ್ಯ







