--ಇಲ್ಲಿ ಜಾಹೀರಾತು--

ಈಜಲು ಹೋದ ಬಾಲಕ ನೀರು ಪಾಲು

On: May 11, 2026 2:21 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now

ಪಾವಗಡ: ತಾಲೂಕಿನ ವಿರಮ್ಮನಹಳ್ಳಿ ಗೇಟ್ ಸಮೀಪದ ಖಾಸಗಿ ತೋಟದ ತೊಟ್ಟಿಯಲ್ಲಿ ನಡೆದ ಹೃದಯವಿದ್ರಾವಕ ಘಟನೆದಲ್ಲಿ 13 ವರ್ಷದ ಬಾಲಕ ತಾಹಿರ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಎಂಟನೇ ತರಗತಿಯಲ್ಲಿ ಓದುತ್ತಿದ್ದ ತಾಹಿರ್ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಈಜುವ ವೇಳೆ ಕಾಲು ಜಾರಿ ಆಳವಾದ ನೀರಿಗೆ ಬಿದ್ದ ಬಾಲಕ ಹೊರಬರಲು ಸಾಧ್ಯವಾಗದೆ ಮುಳುಗಿ ಮೃತಪಟ್ಟಿದ್ದಾನೆ. ಮೃತ ಬಾಲಕ ಪಟ್ಟಣದ 21ನೇ ವಾರ್ಡ್ ನಿವಾಸಿಗಳಾದ ನೂರಿ ಮತ್ತು ರಿಜ್ವಾನ್ ದಂಪತಿಯ ಪುತ್ರ. ಘಟನೆಯ ಸುದ್ದಿ ಹರಡುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಿಸಲು ಯತ್ನಿಸಿದರೂ ಪ್ರಯೊಜನವಾಗಿಲ್ಲ. ಪಾವಗಡ ಠಾಣ ಇನ್ಸ್‌ಪೆಕ್ಟರ್ ಸುರೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಪರಿಶಿಲಿಸಿ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now