
ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬರ ಕಣ್ಣಿಗೆ ಮೆಣಸಿನ ಪುಡಿ ಎಸೆದು, ಮಚ್ಚಿನಿಂದ ಬೆದರಿಸಿ 7.5 ಲಕ್ಷ ದರೋಡೆ ಮಾಡಲಾಗಿದೆ. ನಾಲ್ವರು ವ್ಯಕ್ತಿಗಳನ್ನು ಬಂಧಿಸಲಾಗಿದೆ.
ಅಪರಾಧ ನಡೆದ ಕೇವಲ ಮೂರು ಗಂಟೆಗಳಲ್ಲಿ ಪ್ರಕರಣ ಬೇಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಯಶವಂತ್, ದರ್ಶನ್, ಭರತ್ ಮತ್ತು ವಿಶಕಾಂತಮೂರ್ತಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ದರೋಡೆ ಮಾಡಿದ್ದ 7.5 ಲಕ್ಷ, ಒಂದು ಕಾರು ಮತ್ತು ಅಪರಾಧಕ್ಕೆ ಬಳಸಲಾಗಿದೆ ಎನ್ನಲಾದ ಮೋಟಾರ್ ಬೈಕ್ ಮತ್ತು ಮಚ್ಚನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಣ್ಣಿಗೆ ಕಾರದಪುಡಿ ಹಾಕಿ ದರೋಡೆ: ನಾಲ್ವರ ಬಂಧನ








