ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಉಷ್ಣಾಂಶ ಏರಿಕೆಯಾಗಿದ್ದು, ಸೋಮವಾರವೂ ಬಿರುಬಿಸಿಲು ಮುಂದುವರಿದಿದೆ. ಮೈಸೂರು ಹಾಗೂ ಮಂಡ್ಯದಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲೂ ಸಾಮಾನ್ಯಕ್ಕಿಂತ ಸುಮಾರು 4 ಡಿಗ್ರಿ ಹೆಚ್ಚಾಗಿದೆ.
ಕಲಬುರಗಿ, ರಾಯಚೂರು ಹಾಗೂ ದಾವಣಗೆರೆಯಲ್ಲೂ ಬಿಸಿಲಿನ ಝಳ ಹೆಚ್ಚಿದೆ. ಮುಂದಿನ ಏಳು ದಿನ ರಾಜ್ಯಾದ್ಯಂತ ಒಣಹವೆ ಮುಂದುವರಿಯಲಿದ್ದು, ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೊತ್ತಿ ಉರಿಯುತ್ತಿದೆ ಕರುನಾಡು ಹಳೇ ಮೈಸೂರು ಪ್ರದೇಶದಲ್ಲಿ ಬಿರುಬಿಸಿಲಿನ ವಾತಾವರಣ








