
ವಿಜಯಪುರ: ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್ನಲ್ಲೇ ಮುಸ್ಲಿಂಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಾಹಾಕುತ್ತೇನೆ. ರಾಜ್ಯದಲ್ಲಿ ಯೋಗಿ ಆದಿತ್ಯನಾಥ ಆಡಳಿತ ನಡೆಸುತ್ತೇನೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಂಜನೇಯನ ಸನ್ನಿಧಾನದಲ್ಲಿ ನಿಂತು ಹೇಳುತ್ತೇನೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರಿಸಿಕೊಳ್ಳಿ ಅಂತ ಕೇಳಲ್ಲ. ಅವರಾಗಿಯೇ ಅಪ್ಪ, ಮಗನ ಕೈ ಬಿಟ್ಟು ನನ್ನನ್ನು ಬಿಜೆಪಿಗೆ ಬನ್ನಿ ಅಂತಾ ಕರೆಯುತ್ತಾರೆ. ಬಳಿಕ ಸಿಎಂ ಆಗಿ ರಾಜ್ಯದಲ್ಲಿ ಯೋಗಿ ಆದಿತ್ಯನಾಥ ತರಹ ರಾಜ್ಯಭಾರ ಮಾಡುತ್ತೇನೆ. ಸಿಎಂ ಆದ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಅಲ್ಪಸಂಖ್ಯಾತರ ಪಟ್ಟಿಯಿಂದ ಮುಸ್ಲಿಮರನ್ನು ಹೊರಹಾಕುತ್ತೇನೆ. ಇವರ ಹೊರತಾಗಿ ಮರಾಠರು, ಬ್ರಾಹ್ಮಣರು, ಕ್ಷತ್ರಿಯರು ಸೇರಿದಂತೆ ಅನೇಕರು ಅಲ್ಪಸಂಖ್ಯಾತರು ಇದ್ದಾರೆ. ಅವರಿಗೆಲ್ಲ ಅಲ್ಪಸಂಖ್ಯಾತ ಸ್ಥಾನಮಾನ ಕೊಡುತ್ತೇನೆ ಎಂದು ತಿಳಿಸಿದರು.
ನಾನು ಸಿಎಂ ಆದರೆ ಮುಸ್ಲಿಮರ ಅಲ್ಪಸಂಖ್ಯಾತರ ಪಟ್ಟಿಗೆ ಕೊಕ್: ಯತ್ನಾಳ್





