
ತಿರುವನಂತಪುರ: ಕೇರಳದಲ್ಲಿ ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ. ಪಕ್ಷದ ವರಿಷ್ಠರೊಂದಿಗೆ ಉನ್ನತ ಮಟ್ಟದ ಚರ್ಚೆಗಾಗಿ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮಾಜಿ ಅಧ್ಯಕ್ಷ ಕೆ.ಸುಧಾಕರನ್ ದೆಹಲಿಗೆ ತೆರಳಿದ್ದಾರೆ.
ಕೇರಳ ಸಿಎಂ ಬಿಕ್ಕಟ್ಟು ನಿವಾರಿಸುವ ನಿಟ್ಟಿನಲ್ಲಿ ಕೆ.ಸುಧಾಕರನ್ ಜೊತೆಗೆ, ಹಿರಿಯ ಕಾಂಗ್ರೆಸ್ ನಾಯಕರ ನಿಯೋಗ ವರಿಷ್ಠರೊಂದಿಗೆ ಮಾತುಕತೆಗಾಗಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ನಾಯಕತ್ವದ ಬಗ್ಗೆ ಅಂತಿಮ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ಕೆ.ಮುರಳೀಧರನ್ ತಿಳಿಸಿದ್ದಾರೆ.
ರಾಜ್ಯದಲ್ಲಿನ ಪ್ರಸ್ತುತ ರಾಜಕೀಯ ವಾತಾವರಣದ ಬಗ್ಗೆ ಕೇಂದ್ರದ ನಾಯಕತ್ವಕ್ಕೆ ವಿವರಿಸಲಾಗುವುದು ಎಂದು ವಿ.ಎಂ ಸುಧೀರನ್ ಹೇಳಿದ್ದಾರೆ.
ಮುಗಿಯದ ಕೇರಳ ಸಿಎಂ ಆಯ್ಕೆ ಬಿಕ್ಕಟ್ಟು









