
ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಭಬಾನಿಪುರ ಕ್ಷೇತ್ರವನ್ನು ಉಳಿಸಿಕೊಳ್ಳುವುದಾಗಿ ಬುಧವಾರ ಘೋಷಿಸಿದ್ದಾರೆ. ನಂದಿಗ್ರಾಮಕ್ಕೆ ರಾಜೀನಾಮೆ ನೀಡಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರು ಭಬಾನಿಪುರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಹಾಗೂ ತಮ್ಮ ಸ್ವಕ್ಷೇತ್ರ ನಂದಿಗ್ರಾಮದಲ್ಲಿ ಟಿಎಂಸಿ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು. ಈಗ ಒಂದು ಕಡೆ ರಾಜೀನಾಮೆ ನೀಡಿದ್ದು, ಭವಾನಿಪುರವನ್ನು ಉಳಿಸಿಕೊಂಡಿದ್ದಾರೆ.
ನಂದಿಗ್ರಾಮ ಕ್ಷೇತ್ರಕ್ಕೆ ಸುವೇಂದು ರಾಜೀನಾಮೆ








