ಹಡಗಿಗೆ ಅಮೆರಿಕಾ ತಡೆ: ಮಾತುಕತೆಗೆ ಇರಾನ್ ತಿರಸ್ಕಾರ

ಟೆಹ್ರಾನ್: ಅಮೆರಿಕ ಕೊಲ್ಲಿಯಲ್ಲಿ ಇರಾನ್ ಧ್ವಜ ಹೊತ್ತ ಸರಕು ಹಡಗನ್ನು ತಡೆದಿದೆ. ಟೌಸ್ಕಾ ಹಡಗನ್ನು ಅಮೆರಿಕದ ನೌಕಾಪಡೆ ನಿಲ್ಲಿಸುವಂತೆ ನೀಡಿದ ಎಚ್ಚರಿಕೆಗೆ ಸ್ಪಂದಿಸದ ಕಾರಣ ವಶಪಡಿಸಿಕೊಳ್ಳಲಾಗಿದೆ ಎಂದು ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಇದು ಕದನ ವಿರಾಮದ ಉಲ್ಲಂಘನೆ. ಸಶಸ್ತ್ರ ಕಡಲ್ಗಳ್ಳತನದ ಕೃತ್ಯಕ್ಕೆ ಶೀಘ್ರದಲ್ಲೇ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಎಚ್ಚರಿಸಿದೆ. ಪಾಕಿಸ್ತಾನದಲ್ಲಿ ಇರಾನ್ ಜೊತೆಗಿನ ಯುದ್ಧವನ್ನು ಕೊನೆಗೊಳಿಸುವ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮತ್ತೊಂದು ನಿಯೋಗದ ನೇತೃತ್ವ ವಹಿಸಲಿದ್ದಾರೆ ಎಂದು ಶ್ವೇತಭವನ ದೃಢಪಡಿಸಿತ್ತು. … Read more

ವಿನಯ್ ಗೆ ಜೀವಾವಧಿ ಶಿಕ್ಷೆ

16 ಅಪರಾಧಿಗಳಿಗೂ ಜೀವಾವಧಿ ಜೈಲು ಟಿಂಗರೀಕರ್‌ ಗೆ ಏಳು ವರ್ಷ ಶಿಕ್ಷೆ ವಿಧಿಸಿ ಆದೇಶ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 16 ಅಪರಾಧಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಶುಕ್ರವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಿದರು. 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿದ್ದಾರೆ. ಮತ್ತೊಬ್ಬ ಅಪರಾಧಿ ಇನ್‌ಸ್ಪೆಕ್ಟರ್ ಚನ್ನಕೇಶವ … Read more

ಹೈಕಮಾಂಡ್ ಸೂಚನೆಯಂತೆ ಕ್ರಮ ಮುಸ್ಲಿಂ ನಾಯಕರ ‘ತಲೆದಂಡ’ದ ಬಗ್ಗೆ ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ಇದರಲ್ಲಿ ನನ್ನ ವೈಯಕ್ತಿಕ ವಿಚಾರವಿಲ್ಲ ಎಂದು ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡಿರುವ ಕ್ರಮವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಶುಕ್ರವಾರ ಮಾತನಾಡಿದ ಡಿಕೆಶಿ, ಇದರಲ್ಲಿ ನನ್ನ ವೈಯಕ್ತಿಕ ವಿಚಾರ ಯಾವುದೂ ಇಲ್ಲ. ಎಲ್ಲವೂ ಪಕ್ಷದ ನಿರ್ಧಾರ. ಪಕ್ಷಕ್ಕೆ ತನ್ನದೇ ಆದ ವರದಿ ಇದೆ. ದೆಹಲಿ ನಾಯಕರ ಸೂಚನೆ, ಸಲಹೆ ಮೇರೆಗೆ ನಾವು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಾವು ಮಾರ್ಗದರ್ಶನ … Read more

ಹೊತ್ತಿ ಉರಿದ ಬಸ್ಸು-ಕಾರು: 7 ಮಂದಿ ಸಜೀವ ದಹನ

ಭೀಕರ ಅಪಘಾತಕ್ಕೆ ಒಂದೇ ಕುಟುಂಬದವರ ಸಾವು ಯಾದಗಿರಿ: ಕಾರು ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹೊತ್ತಿ ಉರಿದ ಹಿನ್ನೆಲೆಯಲ್ಲಿ 7 ಮಂದಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ಗುರುವಾರ ನಡೆದಿದೆ. ರಾಯಚೂರಿನ ಸಿರವಾರದ ಒಂದೇ ಕುಟುಂಬದ ಕೃಷ್ಣಾ ನಾಯಕ್ (56), ಅವರ ಪತ್ನಿ ಅನಂತ ಕಲಾ (45), ನಿಸರ್ಗ (28), ಶರಣಪ್ಪ (35), ಸಿದ್ದಾರ್ಥ (3), ಅಣ್ಣನ ಮಗಳು ಶಶಿಕಲಾ (30) ಹಾಗೂ ಅವರ ಮಗ … Read more

ಅರಣ್ಯ ಚಾರಣಕ್ಕೆ ನೇಚರ್ ಗೈಡ್ ಕಡ್ಡಾಯ: ಸಚಿವ ಖಂಡ್ರೆ ಆದೇಶ

ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದರು. ಚಾರಣಿಗರ ಸುರಕ್ಷತೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿ 10 ಚಾರಣಿಗರಿಗೆ ಒಬ್ಬರು ಸ್ಥಳೀಯ ಪ್ರಕೃತಿ ಮಾರ್ಗದರ್ಶಕರಿರುತ್ತಾರೆ. ಎಲ್ಲ ಚಾರಣ ಪಥಗಳಲ್ಲಿ ಒಂದು ಸಲಕ್ಕೆ ಗರಿಷ್ಠ 150 ಜನರಿಗೆ ಮಾತ್ರ ಸೀಮಿತಗೊಳಿಸಲಾಗುವುದು ಎಂದು … Read more

ಯುರೇನಿಯಂ ಹಸ್ತಾಂತರಕ್ಕೆ ಇರಾನ್ ಒಪ್ಪಿಗೆ: ಟ್ರಂಪ್

ವಾಷಿಂಗ್ಟನ್: ಇರಾನ್ ತನ್ನಲ್ಲಿ ಸಮೃದ್ಧವಾಗಿರುವ ಯುರೇನಿಯಂ ಹಸ್ತಾಂತರಿಸಲು ಒಪ್ಪಿಕೊಂಡಿದೆ. ಯುದ್ಧ ಕೊನೆಗೊಳ್ಳುವ ಸಮಯ ಹತ್ತಿರದಲ್ಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಅವರು ನಮಗೆ ಪರಮಾಣು ಧೂಳನ್ನು ಹಿಂತಿರುಗಿಸಲು ಒಪ್ಪಿಕೊಂಡಿದ್ದಾರೆ. ನಾವು ಒಪ್ಪಂದ ಮಾಡಿಕೊಳ್ಳಲು ಉತ್ತಮ ಅವಕಾಶವಿದೆ ಎಂದು ಟ್ರಂಪ್ ತಿಳಿಸಿದರು. ಅಮೆರಿಕ ಮತ್ತು ಇರಾನ್ ಅತ್ಯಂತ ಯಶಸ್ವಿ ಮಾತುಕತೆ ನಡೆಸುತ್ತಿವೆ. ಒಪ್ಪಂದವಾದರೆ ತೈಲ ಸಮಸ್ಯೆ ಬಗೆಹರಿಯುತ್ತದೆ. ಹಾರ್ಮುಜ್ ಜಲಸಂಧಿ ಮುಕ್ತವಾಗಿ ಎಲ್ಲವೂ ಚೆನ್ನಾಗಿರುತ್ತದೆ ಎಂದು ಟ್ರಂಪ್ ಆಶಯ ವ್ಯಕ್ತಪಡಿಸಿದ್ದಾರೆ. … Read more

ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲು

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ವಿಷು ಜಾತ್ರೆ ಪ್ರಯುಕ್ತ ನಡೆಯುವ ವಿಶೇಷ ಪೂಜಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಇಂದಿನಿAದ ಏಪ್ರಿಲ್ 22ರವರೆಗೆ ಸಮಯ ಬದಲಾವಣೆ ಮಾಡಿರುವುದಾಗಿ ಆಡಳಿತ ಮಂಡಳಿ ತಿಳಿಸಿದೆ. ಪ್ರತಿದಿನ ಬೆಳಗ್ಗೆ 8.30ರ ಬಳಿಕ ಮಾತ್ರ ದೇವರ ದರ್ಶನಕ್ಕೆ ಅವಕಾಶ ಇರುತ್ತದೆ. ರಾತ್ರಿ 8 ಗಂಟೆ ನಂತರ ದೇವಸ್ಥಾನದ ಹೊರಾಂಗಣದಿAದ ಮಾತ್ರ ದರ್ಶನಕ್ಕೆ ಅವಕಾಶವಿದೆ.

21ರವರೆಗೆ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲಿನ ನಡುವೆಯೂ ಏ.21ರವರೆಗೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏ.20ರವರೆಗೆ ಉತ್ತರ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಏ.21ರವರೆಗೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಬಹುದು. ಜೊತೆಗೆ ಹಲವೆಡೆ ಆಲಿಕಲ್ಲು ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ. ರಾಜ್ಯದಲ್ಲಿ 1 ರಿಂದ 3 ಡಿಗ್ರಿ ಸೆಲ್ಸಿಯಸ್‌ವರೆಗೆ ಸಾಮಾನ್ಯಕ್ಕಿಂತ ತಾಪಮಾನದಲ್ಲಿ ಏರಿಕೆ ಕಂಡುಬರುತ್ತಿದೆ. ಬೆಂಗಳೂರಿನಲ್ಲಿ 36ರಿಂದ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಬಿಸಿಲು ನೆತ್ತಿ ಸುಡುವಂತಾಗಿದೆ. ಏಪ್ರಿಲ್‌ನಲ್ಲಿ ಅತಿ ಹೆಚ್ಚಿನ ತಾಪಮಾನ … Read more

ಭೀಕರ ಅಪಘಾತ: 8 ಮಂದಿ ಸಾವು

ಮಂತ್ರಾಲಯದಲ್ಲಿ ರಾಯರ ದರ್ಶನಕ್ಕೆ ಹೊರಟ್ಟಿದ್ದವರು ಮಸಣಕ್ಕೆ ರಾಯಚೂರು: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಎಂಟು ಮಂದಿ ಭಕ್ತರು ದುರಂತ ಅಂತ್ಯಕಂಡಿದ್ದಾರೆ. ಮಂತ್ರಾಲಯಕ್ಕೆ ರಾಯರ ದರ್ಶನಕ್ಕೆ ಬೊಲೆರೋ ವಾಹನದಲ್ಲಿ ತೆರಳುತ್ತಿದ್ದಾಗ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕುಮಾರ್ (50), ದೀಪಿಕಾ (42) , ಸುನಿಲ್ (40) ಯಶೋಧಮ್ಮ (60), ಪುಟ್ಟಮ್ಮ (55), ಬೆಳ್ಳಿ (3), … Read more

ಶಾಸಕ ವಿನಯ್ ಸೇರಿ 17 ಮಂದಿಗೆ ಇಂದು ಶಿಕ್ಷೆ ಪ್ರಕಟ

ಬೆಂಗಳೂರು: ಬಿಜೆಪಿ ನಾಯಕ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತು ಇತರ 16 ಮಂದಿ ಅಪರಾಧಿಗಳು ಎಂದು ಘೋಷಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ ಶುಕ್ರವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ನ್ಯಾಯಾಲಯ ಬುಧವಾರ ಶಿಕ್ಷೆಯ ಪ್ರಮಾಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಮತ್ತು ಪ್ರತಿವಾದಿಯ ವಾದಗಳನ್ನು ಆಲಿಸಿತು. ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ಯೋಗೇಶ್ ಗೌಡರ್ ಹತ್ಯೆಗೆ ಕ್ರಿಮಿನಲ್ ಪಿತೂರಿಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದ್ದರು. ಆರೋಪಿಗಳನ್ನು ಕಾನೂನುಬಾಹಿರ ಸಭೆ, ಗಲಭೆ ಮತ್ತು … Read more