ಭೀಕರ ಅಪಘಾತ: 6 ಮಂದಿ ಸಾವು ತುಮಕೂರು ಮತ್ತು ಮಂಡ್ಯ ಸಮೀಪ ಪ್ರತ್ಯೇಕ ಅಪಘಾತದಲ್ಲಿ ದುರಂತ

ಮಂಡ್ಯ /ತುಮಕೂರು: ಮಂಡ್ಯ ಮತ್ತು ತುಮಕೂರು ಜಿಲ್ಲೆಯ ಕುಣಿಗಲ್ ಸಮೀಪ ನಡೆದ ಪ್ರತ್ಯೇಕ ಎರಡು ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಕುಣಿಗಲ್ ಬಳಿ ನಡೆದ ಅಪಘಾತದಲ್ಲಿ ಗಂಡ-ಹೆಂಡತಿ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮಂಡ್ಯ ಸಮೀಪದ ನಡೆದ ಅಪಘಾತದಲ್ಲಿ ತಂದೆ-ಮಗ ಜೀವ ಬಿಟ್ಟಿದ್ದಾರೆ. ತುಮಕೂರು ವರದಿ: ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಶನಿವಾರ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಶನಿವಾರ ಮಧ್ಯಾಹ್ನ ಗೊಬ್ಬರ ತುಂಬಿದ್ದ … Read more

ಇಂದು ವಿಜಯ್ ಸರ್ಕಾರ್ ಕೊನೆಗೂ 120 ಶಾಸಕರ ಬೆಂಬಲ ಪ್ರಮಾಣ ವಚನಕ್ಕೆ ಸಿದ್ಧತೆ

ಚೆನ್ನೈ: ತಮಿಳುನಾಡಿನಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಕಣ್ಣಾ ಮುಚ್ಚಾಲೆಗೆ ಕೊನೆಗೂ ತೆರೆಬಿದ್ದಿದೆ. ಶತಪ್ರಯತ್ನಗಳ ಬಳಿಕ ವಿಜಯ್ ನೇತೃತ್ವದ ಟಿವಿಕೆಗೆ 120 ಶಾಸಕರ ಬಲ ಸಿಕ್ಕಿದೆ. ಬಳಿಕ ವಿಜಯ್ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ವಿಜಯ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ವಿಜಯ್ ಪ್ರಮಾಣ ವಚನಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ವಿಸಿಕೆಯ ಬೆಂಬಲದಿAದ … Read more

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ ಬಂಧನ

ಬೆಂಗಳೂರು: ಬಿಟ್ ಕಾಯಿನ್ ಬಹುಕೋಟಿ ಹಗರಣ ಸಂಬAಧ ಇಡಿ ಅಧಿಕಾರಿಗಳು ಹ್ಯಾಕರ್ ಶ್ರೀಕಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶ್ರೀಕಿ ಅಲಿಯಾಸ್ ಶ್ರೀಕೃಷ್ಣ, ರಾಬಿನ್ ಖಂಡೇವಾಲ ಮತ್ತು ಸುನೀಶ್ ಹೆಗ್ಡೆ ಬಂಧಿತ ಆರೋಪಿಗಳು. ಇಡಿ ಅಧಿಕಾರಿಗಳು ಶುಕ್ರವಾರ ತಡರಾತ್ರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶನಿವಾರ ಬೆಳಿಗ್ಗೆ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದಾರೆ. ಮೂವರು ಆರೋಪಿಗಳನ್ನು ಇಡಿ ಅಧಿಕಾರಿಗಳು 10 ದಿನ ಕಸ್ಟಡಿಗೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಈ ಮೂಲಕ ಹಗರಣದ ಪ್ರಮುಖ ಆರೋಪಿಯಾದ ನಲಪಾಡ್ ಗೂ ಬಂಧನದ ಭೀತಿ … Read more

ಕೆರೆಯಲ್ಲಿ ಈಜಲು ತೆರಳಿದ್ದ ಅಣ್ಣ-ತಮ್ಮ ನೀರುಪಾಲು

ಕೋಲಾರ: ಕೆರೆಯಲ್ಲಿ ಈಜಲು ಹೋಗಿದ್ದ ಅಣ್ಣ-ತಮ್ಮ ಇಬ್ಬರೂ ನೀರುಪಾಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಶ್ರೀನಿವಾಸಪುರ ತಾಲೂಕಿನ ಪಚ್ಚರಮಾಕಲಹಳ್ಳಿ ಬಳಿ ದುರ್ಘಟನೆ ಸಂಭವಿಸಿದೆ. ಮೃತಪಟ್ಟ ಯುವಕರನ್ನು ರೋಣೂರು ಹೋಬಳಿ ವ್ಯಾಪ್ತಿಯ ಚಾಂಪಲ್ಲಿ ಗ್ರಾಮದ ನಿವಾಸಿಗಳಾದ ನರೇಂದ್ರ (25) ಹಾಗೂ ಚಂದನ್ (23) ಎಂದು ಗುರುತಿಸಲಾಗಿದೆ. ಪಚ್ಚರಮಾಕಲಹಳ್ಳಿಗೆ ಗಾರೆ ಕೆಲಸಕ್ಕೆ ತೆರಳಿದ್ದ ಯುವಕರು ಬಿಸಿಲಿನ ತಾಪಮಾನದಿಂದಾಗಿ ಸಮೀಪದ ಕೆರೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನ ಆಳ ಅಂದಾಜಿಸಲು ಸಾಧ್ಯವಾಗದೆ ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ವಿಜಯ್ ಗೆ ‘ಮ್ಯಾಜಿಕ್ ನಂಬರ್’ ಸಿಕ್ತು ಟಿವಿಕೆಗೆ ಸಿಪಿಐ, ಸಿಪಿಎಂ, ವಿಸಿಕೆ, ಕಾಂಗ್ರೆಸ್ ಬೆಂಬಲ ಘೋಷಣೆ

ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ದಳಪತಿ ವಿಜಯ್ ಅವರಿಗೆ ಅಧಿಕಾರ ಹಿಡಿಯಲು ಕೊನೆಗೂ ಮ್ಯಾಜಿಕ್ ನಂಬರ್ ಸಿಕ್ಕಿದೆ. ಕಾಂಗ್ರೆಸ್ ನಂತರ ಸಿಪಿಐ ಮತ್ತು ವಿಸಿಕೆ ಸಹ ಬೆಂಬಲ ಘೋಷಿಸಿವೆ. ಹೀಗಾಗಿ ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಲಿದ್ದಾರೆ. ಸರ್ಕಾರ ರಚನೆಗೆ ವಿಜಯ್ ನೇತೃತ್ವದ ಟಿವಿಕೆಗೆ ಸಿಪಿಐ ಶುಕ್ರವಾರ ಬೇಷರತ್ ಬೆಂಬಲ ಘೋಷಿಸಿದೆ. ಇದರ ಬೆನ್ನಲ್ಲೇ ವಿಸಿಕೆ ಸಹ ಟಿವಿಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ನೀಡಿದೆ. ಇಂದು ಸುದೀರ್ಘ ಚರ್ಚೆ ನಂತರ, ಎಡಪಕ್ಷ … Read more

ಇಂದು ಸುವೇಂದು ಪ್ರಮಾಣ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಗಿದೆ. ಈ ಮೂಲಕ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕೋಲ್ಕತ್ತಾದಲ್ಲಿ ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅಧಿಕಾರಿ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು. ಎಲ್ಲಾ ಬಿಜೆಪಿ ಶಾಸಕರು ಅದನ್ನು ಅನುಮೋದಿಸಿದರು. ನಂತರ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಕೇಂದ್ರ ಗೃಹ … Read more

ಪ್ರಾದೇಶಿಕ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ಸ್ಥಿತಿಯಿಲ್ಲ ಕರ್ನಾಟಕದ ರಾಜಕೀಯ ಪರಿಸ್ಥಿತಿ ವಿಭಿನ್ನ: ಎಚ್.ಡಿ.ಕುಮಾರಸ್ವಾಮಿ

ಹಾಸನ: ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಬಹುದು ಎಂಬ ಚರ್ಚೆ ಜನಸಾಮಾನ್ಯರಲ್ಲಿದೆ. ಆದರೆ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳು ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ವಾತಾವರಣ ಇಲ್ಲ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕರ್ನಾಟಕದ ರಾಜಕೀಯ ಪರಿಸ್ಥಿತಿಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು. ಟಿವಿಕೆ ವಿಜಯವನ್ನು ಉಲ್ಲೇಖಿಸಿ ಮಾತನಾಡಿದ ಅವರು, ಇಲ್ಲಿ ಇರುವ ರಾಜಕೀಯ ಪರಿಸ್ಥಿತಿ ಬೇರೆ ರಾಜ್ಯಗಳಿಗಿಂತ ವಿಭಿನ್ನವಾಗಿದೆ ಎಂದರು. ತಮಿಳುನಾಡಿನ ರಾಜಕಾರಣದಲ್ಲಿ ಸಿನಿಮಾದ … Read more

ದಾವಣಗೆರೆ: ಒಳಜಗಳದಿಂದ ಹಿನ್ನಡೆ ಕಾಂಗ್ರೆಸ್ 20 ಸಾವಿರ ಅಂತರದಿಂದ ಗೆಲ್ಲಬೇಕಿತ್ತು: ಜಾರಕಿಹೊಳಿ

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕಡಿಮೆ ಅಂತರದಿಂದ ಗೆಲುವು ಸಾಧಿಸಿದೆ. ಒಳಜಗಳದ ಪರಿಣಾಮ ಪಕ್ಷಕ್ಕೆ ಹಿನ್ನಡೆ ಆಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟರು. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಬಾಗಲಕೋಟೆಯಲ್ಲಿ ಅಹಿಂದ ಸೂತ್ರ ಯಶಸ್ಸು ತಂದುಕೊಟ್ಟಿತು. ಈ ಸೂತ್ರ ದಕ್ಷಿಣದಲ್ಲಿ ಯಶಸ್ಸು ಕಂಡಿಲ್ಲ. ಇದಕ್ಕೆ ಪಕ್ಷದ ಒಳಜಗಳವೇ ಕಾರಣ. ಇಲ್ಲವಾದರೆ 20,000ಕ್ಕೂ ಹೆಚ್ಚು ಮತಗಳ ಅಂತರದಿಂದ ಕಾಂಗ್ರೆಸ್ ಗೆಲುವು ಸಾಧಿಸುತ್ತಿತ್ತು ಎಂದು ತಿಳಿಸಿದರು. ಜನರು ಕಾಂಗ್ರೆಸ್ ಮೇಲೆ ಭರವಸೆ ಇಟ್ಟು ಮತ … Read more

ಸುಪ್ರೀಂ ಆದೇಶದಂತೆ ಜಿಬಿಎ ಚುನಾವಣೆ *ಜೂನ್ 20ರಿಂದ 24ರೊಳಗೆ ಪ್ರಕ್ರಿಯೆ ಪೂರ್ಣ: ಸಿಇಸಿ ಸಂಗ್ರೇಶಿ

ಬೆಂಗಳೂರು: ಸುಪ್ರೀಂಕೋರ್ಟ್ ಸೂಚನೆಯಂತೆ ಜೂ.20ರಿಂದ 24ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಚುನಾವಣೆಯನ್ನು ನಡೆಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಶುಕ್ರವಾರ ತಿಳಿಸಿದರು. ಬೆಂಗಳೂರು ಪಂಚ ನಗರಪಾಲಿಕೆಗಳ ಚುನಾವಣೆ ಸಂಬಂಧ ಶುಕ್ರವಾರ ಆಯೋಗದಲ್ಲಿ ಕರೆಯಲಾಗಿದ್ದ ಸಭೆಯ ನಂತರ ಈ ಕುರಿತು ಮಾಹಿತಿ ನೀಡಿದರು. ಜೂನ್ 14ರಿಂದ 24ರ ಒಳಗೆ ಚುನಾವಣೆ ದಿನಾಂಕ ಘೋಷಣೆ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದರು. ಕಾನೂನು ಪ್ರಕಾರ ರಾಜ್ಯ ಚುನಾವಣಾ ಆಯೋಗವು ಜಿಬಿಎ ಜೊತೆಗೆ ಸಮಾಲೋಚನೆ … Read more

ಟಿಸಿಎಸ್ ಜಿಹಾದ್ ಪ್ರಕರಣ: ನಿದಾ ಖಾನ್ ಬಂಧನ

ಮುಂಬೈ: ಟಿಸಿಎಸ್ ಕಾರ್ಪೊರೇಟ್ ಜಿಹಾದ್ ಪ್ರಕರಣದ ಮಾಸ್ಟರ್ ಮೈಂಡ್ ನಿದಾ ಖಾನ್‌ಳನ್ನು ವಿಶೇಷ ತನಿಖಾ ತಂಡ ಸಂಭಾಜಿ ನಗರದಲ್ಲಿ ಬಂಧಿಸಿದೆ. ಟಿಸಿಎಸ್‌ನಲ್ಲಿ ನಡೆದ ಮತಾಂತರ ಪ್ರಕರಣದಲ್ಲಿ ನಿದಾ ಖಾನ್ ವಿರುದ್ಧ ಹಲವಾರು ದೂರುಗಳು ದಾಖಲಾದ ನಂತರ ನಾಪತ್ತೆಯಾಗಿದ್ದರು. ಸುಮಾರು 25 ದಿನಗಳ ಕಾಲ ಆಕೆ ತಲೆಮರೆಸಿಕೊಂಡಿದ್ದಳು. ಅಲ್ಲದೇ ಎಫ್‌ಐಆರ್ ದಾಖಲಾದ ನಂತರ ಬಂಧನದಿಂದ ಬಚಾವ್ ಆಗಲು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ನಿದಾ ಕಳೆದ ನಾಲ್ಕು ದಿನಗಳಿಂದ ಛತ್ರಪತಿ ಸಂಭಾಜಿನಗರದ … Read more