3ನೇ ಹಂತದ ಎಸ್ ಐಆರ್ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ಆರಂಭ: ಚುನಾವಣಾ ಆಯೋಗ ಘೋಷಣೆ

ನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಮೂರನೇ ಹಂತ ಆರಂಭಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರು ಗುರುವಾರ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಹಂತ-3 ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಘೋಷಿಸಿದರು. ಈ ಅಭಿಯಾನದಲ್ಲಿ ಮತದಾರರು ಉತ್ಸಾಹದಿಂದ ಭಾಗವಹಿಸಿ ತಮ್ಮ ಎಣಿಕೆ ಫಾರ್ಮ್ಗಳನ್ನು ಭರ್ತಿ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಸತೀಶನ್ ಕೇರಳ ಸಿಎಂ

ತಿರುವನಂತಪುರಂ: ಕೇರಳ ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಕಳೆದೊಂದು ವಾರದಿಂದ ನಡೆದಿದ್ದ ರಾಜಕೀಯ ಪ್ರಹಸನಕ್ಕೆ ಕೊನೆಗೂ ತೆರೆ ಬಿದ್ದಿದ್ದು ಯುಡಿಎಫ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ವಿ.ಡಿ. ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತ ಕಾಂಗ್ರೆಸ್‌ನ ಸಸ್ಪೆನ್ಸ್ಗೆ ಅಂತ್ಯವಾಗಿದ್ದು, ವಿ.ಡಿ.ಸತೀಶನ್ ಅವರೇ ನೂತನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಲಾಗಿದೆ. 61 ವರ್ಷದ ಮಾಜಿ ವಿರೋಧ ಪಕ್ಷದ ನಾಯಕನಾಗಿದ್ದ ಅವರನ್ನು ಕಾಂಗ್ರೆಸ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಈ ಮುಖ್ಯಮಂತ್ರಿ … Read more

‘ಅಗ್ನಿಪರೀಕ್ಷೆ’ಯಲ್ಲಿ ವಿಜಯ್ ಗೆಲುವು ಎಐಎಡಿಎಂಕೆ ಬಂಡಾಯ ಬಣದ ಬೆಂಬಲ 144 ಶಾಸಕರ ವಿಶ್ವಾಸ ಮತ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿಶ್ವಾಸ ಮತ ಅಗ್ನಿಪರೀಕ್ಷೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ವಿಜಯ್ ಸರ್ಕಾರಕ್ಕೆ 144 ಶಾಸಕರ ಬೆಂಬಲ ದೊರೆತಿದೆ. ವಿಧಾನಸಭೆಯಲ್ಲಿ ಬುಧವಾರ ನಡೆದ ವಿಶ್ವಾಸಮತಯಾಚನೆ ವೇಳೆ ನಿರೀಕ್ಷೆಗೂ ಮೀರಿ 144 ಶಾಸಕರ ಬೆಂಬಲದೊAದಿಗೆ ತಮಿಳಗ ವೆಟ್ರಿ ಕಳಗಂ ಪಕ್ಷ ಬಹುಮತ ಸಾಬೀತುಪಡಿಸಿದೆ. ಮತ್ತೊಂದೆಡೆ ಟಿವಿಕೆ ಬೆಂಬಲಿಸುವ ಮೂಲಕ ಎಐಎಡಿಎಂಕೆ ಛಿದ್ರಗೊಂಡಿದೆ. ಟಿವಿಕೆ, ಕಾಂಗ್ರೆಸ್, ಸಿಪಿಎಂ, ಸಿಪಿಐ, ಮುಸ್ಲಿಮ್ ಲೀಗ್, ವಿಸಿಕೆ ಜೊತೆ ಎಐಎಡಿಎಂಕೆಯ ಬಂಡಾಯ ಎದ್ದಿರುವ 27 ಶಾಸಕರು ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. … Read more

ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರಕ್ಕೆ ಅವಕಾಶ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ. ಸರ್ಕಾರದ ನಿರ್ದೇಶನಗಳಿಗೆ ಅನುಗುಣವಾಗಿ ಆದೇಶ ಹೊರಡಿಸಲಾಗಿದೆ. ಸಮವಸ್ತ್ರ ನಿಗದಿಪಡಿಸಿ ಕಡ್ಡಾಯಗೊಳಿಸುವುದನ್ನು ಮುಂದುವರೆಸಬಹುದು ಎಂದು ಹೇಳಲಾಗಿದೆ. ಸಾಮಾನ್ಯವಾಗಿ ವಿದ್ಯಾರ್ಥಿಗಳು ಜನಿವಾರ, ಪವಿತ್ರ ದಾರ, ಶಿವದಾರ, ರುದ್ರಾಕ್ಷಿ, ಪೇಟ ಅಥವಾ ಟರ್ಬನ್, ತಲೆ ವಸ್ತ್ರ ಅಥವಾ ಹಿಜಾಬ್ ಇತರೆ ಯಾವುದೇ ಸ್ವರೂಪದ ಸಾಂಪ್ರದಾಯಿಕ ಸಂಕೇತವನ್ನು ನಿಗದಿಪಡಿಸಲಾದ … Read more

ಹೃದಯಾಘಾತದಿಂದ ನಟ, ನಿರ್ದೇಶಕ ದಿಲೀಪ್ ನಿಧನ

ಬೆಂಗಳೂರು: ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ದಿಲೀಪ್ ರಾಜ್ (47) ಬುಧವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ಮತ್ತು ಟಿವಿ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. 2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಹೆಸರು ಪಡೆದಿದ್ದರು. … Read more

ಕಣ್ಣಿಗೆ ಕಾರದಪುಡಿ ಹಾಕಿ ದರೋಡೆ: ನಾಲ್ವರ ಬಂಧನ

ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬರ ಕಣ್ಣಿಗೆ ಮೆಣಸಿನ ಪುಡಿ ಎಸೆದು, ಮಚ್ಚಿನಿಂದ ಬೆದರಿಸಿ 7.5 ಲಕ್ಷ ದರೋಡೆ ಮಾಡಲಾಗಿದೆ. ನಾಲ್ವರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಅಪರಾಧ ನಡೆದ ಕೇವಲ ಮೂರು ಗಂಟೆಗಳಲ್ಲಿ ಪ್ರಕರಣ ಬೇಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಯಶವಂತ್, ದರ್ಶನ್, ಭರತ್ ಮತ್ತು ವಿಶಕಾಂತಮೂರ್ತಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ದರೋಡೆ ಮಾಡಿದ್ದ 7.5 ಲಕ್ಷ, ಒಂದು ಕಾರು ಮತ್ತು ಅಪರಾಧಕ್ಕೆ ಬಳಸಲಾಗಿದೆ ಎನ್ನಲಾದ ಮೋಟಾರ್ ಬೈಕ್ ಮತ್ತು ಮಚ್ಚನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳ ಸಿಎಂ ಆಯ್ಕೆ ನಂತರ ರಾಜ್ಯದತ್ತ ಗಮನ: ಜಾರಕಿಹೊಳಿ

ಬೆಂಗಳೂರು: ಕೇರಳದಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಕಾಂಗ್ರೆಸ್ ಹೈಕಮಾಂಡ್ ಶೀಘ್ರದಲ್ಲೇ ರಾಜ್ಯದತ್ತ ಗಮನ ಹರಿಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ನಾಯಕತ್ವ ವಿಚಾರವಾಗಿ ಹೈಕಮಾಂಡ್ ಮೌನದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ಪುನಾರಚನೆ ಬಗ್ಗೆ ತೀರ್ಮಾನಿಸಲು ಈ ತಿಂಗಳ ಅಂತ್ಯದವರಗೆ ಸಮಯ ಇದೆ. ಮೊದಲು ಕೇರಳ ಸಿಎಂ ಇತ್ಯರ್ಥ ಆಗಬೇಕು. ಇನ್ನೂ ಸ್ವಲ್ಪ ದಿನ ಕಾಯಬೇಕು ಎಂದು ತಿಳಿಸಿದರು.

ಟಿವಿಕೆ ಶಾಸಕರಿಗೆ ‘ಸುಪ್ರೀಂ’ನಲ್ಲಿ ಗೆಲುವು

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತು ವೇಳೆ ಹಾಜರಾಗದಂತೆ ಟಿವಿಕೆ ಶಾಸಕ ಆರ್.ಶ್ರೀನಿವಾಸ ಸೇತುಪತಿ ಅವರನ್ನು ತಡೆದಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ. ಈ ಸಂಬಂಧ ಸೇತುಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ವಿಜಯ್ ಬಿಷ್ಣೋಯ್ ಅವರನ್ನೊಳಗೊಂಡ ನ್ಯಾಯಪೀಠ, ಕನಿಷ್ಠವಾಗಿ ಹೇಳುವುದಾದರೆ ಇದು ಅಮಾನವೀಯ ನಡೆಯಾಗಿದೆ. ಚುನಾವಣಾ ಅರ್ಜಿಯೇ ಪರಿಹಾರ ಎಂದು ಹೈಕೋರ್ಟ್ ಹೇಳುತ್ತದೆ. ಆದರೆ ಆರ್ಟಿಕಲ್ 226ರ ಅರ್ಜಿಯನ್ನು ಇನ್ನೂ ಪರಿಗಣಿಸುತ್ತಿದೆ … Read more

ಬಿಜೆಪಿ ಗೆಲುವಿಗೆ ತಿರುಚಿದ ಅಂಚೆ ಪತ್ರ ಕಾರಣ: ರಾಜೇಗೌಡ

ಬೆಂಗಳೂರು: ಶೃಂಗೇರಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ನಕಲಿ ಹಾಗೂ ತಿರುಚಿದ ಅಂಚೆ ಪತ್ರಗಳು ಕಾರಣ ಎಂದು ಶಾಸಕ ಡಿ.ಟಿ.ರಾಜೇಗೌಡ ಆರೋಪಿಸಿದರು. ಶೃಂಗೇರಿ ಕ್ಷೇತ್ರದ ಅಂಚೆ ಮತ ಎಣಿಕೆಯ ಫಲಿತಾಂಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಚುನಾಯಿತ ಪ್ರತಿನಿಧಿಯಾಗಿ ಅವರನ್ನು ಮರುನೇಮಕಗೊಳಿಸಿದ ನಂತರ ಮಾತನಾಡಿದ ಅವರು, ಈ ಹೋರಾಟದಲ್ಲಿ ಬಿಜೆಪಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿತ್ತು. ನಕಲಿ ದಾಖಲೆ, ಅಂಚೆ ಮತಪತ್ರಗಳನ್ನು ತಿರುಚಲಾಗಿತ್ತು ಎಂದು ದೂರಿದರು. ನ್ಯಾಯಾಲಯವು ಅನೇಕ ಸುಳ್ಳುಗಳನ್ನು ಹಾಗೂ ನನ್ನ ವಿರೋಧಿಗಳು ಹೇರಿದ ಸುಮಾರು 18 … Read more

ನಂದಿಗ್ರಾಮ ಕ್ಷೇತ್ರಕ್ಕೆ ಸುವೇಂದು ರಾಜೀನಾಮೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಭಬಾನಿಪುರ ಕ್ಷೇತ್ರವನ್ನು ಉಳಿಸಿಕೊಳ್ಳುವುದಾಗಿ ಬುಧವಾರ ಘೋಷಿಸಿದ್ದಾರೆ. ನಂದಿಗ್ರಾಮಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರು ಭಬಾನಿಪುರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಹಾಗೂ ತಮ್ಮ ಸ್ವಕ್ಷೇತ್ರ ನಂದಿಗ್ರಾಮದಲ್ಲಿ ಟಿಎಂಸಿ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು. ಈಗ ಒಂದು ಕಡೆ ರಾಜೀನಾಮೆ ನೀಡಿದ್ದು, ಭವಾನಿಪುರವನ್ನು ಉಳಿಸಿಕೊಂಡಿದ್ದಾರೆ.