ತುಮಕೂರು ಮದರಸಾದಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಆರೋಪ 24 ಮಕ್ಕಳ ರಕ್ಷಣೆ, ಮೌಲ್ವಿ ವಿರುದ್ಧ ಎಫ್‌ಐಆರ್

Tumakuru: ತುಮಕೂರಿನ ಅಮ್ಲಾಪುರದಲ್ಲಿರುವ ಜಾಮಿಯಾ ಅರೇಬಿಯಾ ಹಸೀನಿಯಾ ಟ್ರಸ್ಟ್‌ನ ಮದರಸಾದಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಮದರಸಾ ಮೌಲ್ವಿ ಮೌಲಾಲಿ ವಿರುದ್ಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮದರಸಾದಲ್ಲಿದ್ದ ಬಿಹಾರ ಮೂಲದ 24 ಮಕ್ಕಳು ಕಿರುಕುಳದಿಂದ ಬೇಸತ್ತು ಅಲ್ಲಿಂದ ಓಡಿ ಹೋಗಿದ್ದರೆಂದು ತಿಳಿದುಬಂದಿದೆ. ಬಳಿಕ ಮಕ್ಕಳು Bengaluru ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ರೈಲ್ವೆ ರಕ್ಷಣಾ ದಳ (RPF) ಅವರು ಮಕ್ಕಳನ್ನು ರಕ್ಷಣೆ … Read more

ಅಕ್ರಮ: ನೀಟ್ ಪರೀಕ್ಷೆ ರದ್ದು ಸಿಬಿಐ ತನಿಖೆಗೆ ಆದೇಶ ಲಕ್ಷಾಂತರ ಆಕಾಂಕ್ಷಿಗಳಿಗೆ ನಿರಾಸೆ

ನವದೆಹಲಿ: ವೈದ್ಯಕೀಯ ಶಿಕ್ಷಣ ಪ್ರವೇಶಾತಿಗೆ ದೇಶಾದ್ಯಂತ ನಡೆಸಿದ್ದ ನೀಟ್ ಯುಜಿ ಪರೀಕ್ಷೆಯನ್ನು ಅಕ್ರಮದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ) ರದ್ದುಗೊಳಿಸಿ ಆದೇಶಿಸಿದೆ. ಅಕ್ರಮದ ಬಗ್ಗೆ ಸಿಬಿಐ ತನಿಖೆಗೆ ವಹಿಸಲಾಗಿದೆ. ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಪರೀಕ್ಷೆ ಬರೆದಿದ್ದ ಲಕ್ಷಾಂತರ ಆಕಾಂಕ್ಷಿಗಳಿಗೆ ಇದರಿಂದ ನಿರಾಸೆ ಆಗಿದೆ. ಅಲ್ಲದೆ, ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯಬೇಕಾದ ಆತಂಕದಲ್ಲಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಪರೀಕ್ಷಾ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ … Read more

ರಾಜೇಗೌಡಗೆ ಮತ್ತೆ ಪ್ರಮಾಣ: ಸ್ಪೀಕರ್

ಮೈಸೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರ ಆಯ್ಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು. ನಗರದಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ಫಲಿತಾಂಶಕ್ಕೆ ನ್ಯಾಯಾಲಯ ತಡೆ ನೀಡಿರುವ ಕಾರಣ ರಾಜೇಗೌಡರೇ ಶಾಸಕರಾಗಿ ಮುಂದುವರಿಯುತ್ತಾರೆ. ಮತ್ತೆ ಪ್ರಮಾಣವಚನ ಸ್ವೀಕಾರಕ್ಕೆ ಅವರು ಸಮಯ ಕೇಳಿದ್ದಾರೆ. ಸದ್ಯದಲ್ಲೇ ಅವಕಾಶ ನೀಡುತ್ತೇನೆ ಎಂದು ಹೇಳಿದರು.

717 ಮದ್ಯದಂಗಡಿ ಬಂದ್ ತಮಿಳುನಾಡು ಮುಖ್ಯಮಂತ್ರಿ ವಿಜಯ್ ದಿಟ್ಟ ನಿರ್ಧಾರ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ರಾಜ್ಯದಲ್ಲಿ ಮದ್ಯಪಾನ ನಿಯಂತ್ರಣಕ್ಕೆ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ದೇವಾಲಯ, ಶಾಲೆಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯೊಳಗೆ ಇರುವ 717 ಸರ್ಕಾರಿ ಮದ್ಯದಂಗಡಿಗಳನ್ನು ಎರಡು ವಾರದೊಳಗೆ ಮುಚ್ಚಲು ಆದೇಶಿಸಿದ್ದಾರೆ. ರಾಜ್ಯ ಸರ್ಕಾರದ ಅಧೀನದಲ್ಲಿ (ತಮಿಳುನಾಡು ಸ್ಟೇಟ್ ಮಾರ್ಕೆಟಿಂಗ್ ಕಾರ್ಪೋರೇಷನ್) ಈ ಮದ್ಯದಂಗಡಿಗಳು ಕಾರ್ಯನಿರ್ವಹಿಸುತ್ತಿವೆ. ರಾಜ್ಯದಲ್ಲಿ ಒಟ್ಟು 4,765 ಟಿಎಎಸ್‌ಎಮ್‌ಎಸಿ ಅಂಗಡಿಗಳಿವೆ. ಅವುಗಳಲ್ಲಿ 276 ದೇವಾಲಯಗಳ ಸಮೀಪ, 186 ಶಿಕ್ಷಣ ಸಂಸ್ಥೆಗಳ ಬಳಿ ಹಾಗೂ 255 ಬಸ್ ನಿಲ್ದಾಣಗಳ ಬಳಿ … Read more

ಬೌರಿಂಗ್ ಆಸ್ಪತ್ರೆ ದುರಂತ: ಸರ್ಕಾರಕ್ಕೆ ಡಿಸಿ ವರದಿ ಸಲ್ಲಿಕೆ

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಜನರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಜಿಲ್ಲಾಧಿಕಾರಿ ಜಗದೀಶ್ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಏಳು ಜನರ ಸಾವಿಗೆ ಆರೋಗ್ಯ ಇಲಾಖೆ ಇಂಜಿನಿಯರ್ ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯವೇ ಕಾರಣ ಹಾಗೂ ಆಸ್ಪತ್ರೆ ಆಡಳಿತ ಮಂಡಳಿಯ ನಿರ್ಲಕ್ಷ್ಯ ಬಯಲಾಗಿದೆ. ಬೆಂಗಳೂರು ಡಿಸಿ ಜಗದೀಶ್ ಮಾತನಾಡಿ, ಸರ್ಕಾರ ತನಿಖೆಗೆ ಸೂಚಿಸಿತ್ತು. ಕೂಲಂಕುಷವಾಗಿ ತನಿಖೆಯನ್ನ ಮಾಡಿ, ವರದಿ ಸಲ್ಲಿಕೆ ಮಾಡಿದ್ದೇನೆ. ಏನು ಸಲ್ಲಿಕೆ ಆಗಿದೆ ಅಂತಾ ಡಿಸ್ಕ್ಲೋಸ್ ಮಾಡಲ್ಲ. ಮುಚ್ಚಿದ ಲಕೋಟೆಯಲ್ಲಿ … Read more

ರಾಜ್ಯದಲ್ಲಿ ಜಲಕಂಟಕ: ಕೋಡಿ ಶ್ರೀ ಭವಿಷ್ಯ

ಶಿವಮೊಗ್ಗ: ರಾಜ್ಯದಲ್ಲಿ ಆಕಾಲಿಕ ಮಳೆಯಿಂದ ಜಲಕಂಟಕ ಎದುರಾಗಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಜಡೆ ಸಂಸ್ಥಾನ ಮಠದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ದೇಶದಲ್ಲಿ ಸಕಾಲಿಕವಾಗಿ ಮಳೆಯಾಗದೆ ಹೋದರೂ ಅಕಾಲಿಕವಾಗಿ ಸುರಿಯುವ ಮಳೆಯಿಂದಾಗಿ ಜಲಕಂಟಕ ಎದುರಾಗಲಿದೆ. ಮಳೆ, ಗುಡುಗು ಮತ್ತು ಸಿಡಿಲಿನ ಆರ್ಭಟ ಹೆಚ್ಚಾಗಲಿದೆ. ಮಳೆಗಾಲದ ನಿಗದಿತ ಅವಧಿಯಲ್ಲಿ ಮಳೆಯಾಗದೆ ಅನಿರೀಕ್ಷಿತ ಸಮಯದಲ್ಲಿ ಸುರಿಯುವ ಮಳೆಯು ಗಂಭೀರ ಪರಿಣಾಮ ಬೀರಲಿದೆ ಎಂದರು. ರಾಜ್ಯ ಮತ್ತು ದೇಶದ ರಾಜಕಾರಣದ ಬಗ್ಗೆ ಕೇಳಲಾದ … Read more

ಸಿಎಂ ವಿಜಯ್ ಗೆ ಹೈಕೋರ್ಟ್ ಶಾಕ್ ಒಂದು ಮತದಿಂದ ಗೆಲುವು: ವಿಶ್ವಾಸಮತದಲ್ಲಿ ಪಾಲ್ಗೊಳ್ಳದಂತೆ ತಡೆ

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಗೆ ಮೊದಲ ದಿನವೇ ಮದ್ರಾಸ್ ಹೈಕೋರ್ಟ್ ಶಾಕ್ ನೀಡಿದೆ. ಟಿವಿಕೆ ಶಾಸಕರೊಬ್ಬರಿಗೆ ವಿಶ್ವಾಸಮತ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಂತೆ ತಡೆ ನೀಡಿದೆ. ಮದ್ರಾಸ್ ಹೈಕೋರ್ಟ್ ಮಂಗಳವಾರ ತಿರುಪತ್ತೂರು ಶಾಸಕ ಆರ್.ಶ್ರೀನಿವಾಸ ಸೇತುಪತಿ ಅವರನ್ನು ವಿಧಾನಸಭೆಯ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ತಾತ್ಕಾಲಿಕವಾಗಿ ನಿರ್ಬಂಧಿಸಿದೆ. ಹೀಗಾಗಿ ವಿಜಯ್ ನೇತೃತ್ವದ ಸರ್ಕಾರ ಎದುರಿಸಲಿರುವ ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ನ್ಯಾಯಮೂರ್ತಿಗಳಾದ ಎಲ್.ವಿಕ್ಟೋರಿಯಾ ಗೌರಿ ಮತ್ತು ಎನ್.ಸೆಂಥಿಲ್ ಕುಮಾರ್ ಒಳಗೊಂಡ ವಿಭಾಗೀಯ ಪೀಠವು ಮಧ್ಯಂತರ ತಡೆ ಆದೇಶವನ್ನು … Read more

ಮುಗಿಯದ ಕೇರಳ ಸಿಎಂ ಆಯ್ಕೆ ಬಿಕ್ಕಟ್ಟು

ತಿರುವನಂತಪುರ: ಕೇರಳದಲ್ಲಿ ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ. ಪಕ್ಷದ ವರಿಷ್ಠರೊಂದಿಗೆ ಉನ್ನತ ಮಟ್ಟದ ಚರ್ಚೆಗಾಗಿ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮಾಜಿ ಅಧ್ಯಕ್ಷ ಕೆ.ಸುಧಾಕರನ್ ದೆಹಲಿಗೆ ತೆರಳಿದ್ದಾರೆ. ಕೇರಳ ಸಿಎಂ ಬಿಕ್ಕಟ್ಟು ನಿವಾರಿಸುವ ನಿಟ್ಟಿನಲ್ಲಿ ಕೆ.ಸುಧಾಕರನ್ ಜೊತೆಗೆ, ಹಿರಿಯ ಕಾಂಗ್ರೆಸ್ ನಾಯಕರ ನಿಯೋಗ ವರಿಷ್ಠರೊಂದಿಗೆ ಮಾತುಕತೆಗಾಗಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ನಾಯಕತ್ವದ ಬಗ್ಗೆ ಅಂತಿಮ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ಕೆ.ಮುರಳೀಧರನ್ ತಿಳಿಸಿದ್ದಾರೆ. ರಾಜ್ಯದಲ್ಲಿನ ಪ್ರಸ್ತುತ … Read more

ಗೂಗಲ್ ಎಂಜಿನ್ ಡೌನ್

ನವದೆಹಲಿ: ವಿಶ್ವದ ಅತಿದೊಡ್ಡ ಸರ್ಚ್ ಎಂಜಿನ್ ಗೂಗಲ್ ಭಾರತ ಸೇರಿದಂತೆ ಕೆಲವು ದೇಶಗಳಲ್ಲಿ ತಾಂತ್ರಿಕ ಸಮಸ್ಯೆಯನ್ನು ಎದುರಿಸಿತು. ಮಂಗಳವಾರ ಬೆಳಿಗ್ಗೆ 9:48ರಿಂದ ಗೂಗಲ್ ಸೇವೆಗಳಲ್ಲಿ ವ್ಯತ್ಯಯ ಆಗಿತ್ತು. ದೇಶದ ಹಲವು ಭಾಗಗಳ ಬಳಕೆದಾರರು ಗೂಗಲ್ ಸೇವೆಗಳನ್ನು ಬಳಸಲು ಸಾಧ್ಯವಾಗುತ್ತಿಲ್ಲ ಎಂದು ದೂರು ನೀಡಿದರು. ಸೇವಾ ಸ್ಥಗಿತಗಳನ್ನು ಟ್ರ್ಯಕ್ ಮಾಡುವ ಡೌನ್‌ಡೆಕ್ಟರ್ ಪ್ರಕಾರ, ಬೆಳಿಗ್ಗೆ 10:23ರ ವೇಳೆಗೆ 3,665ಕ್ಕೂ ಹೆಚ್ಚು ಬಳಕೆದಾರರು ಸಮಸ್ಯೆ ಬಗ್ಗೆ ವರದಿ ಮಾಡಿದ್ದಾರೆ. ಗೂಗಲ್ ಸರ್ಚ್ ಸೇರಿದಂತೆ ಹಲವು ಗೂಗಲ್ ಸೇವೆಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ … Read more

ಎಲ್ ಪಿಜಿ ಉತ್ಪಾದನೆ ಹೆಚ್ಚಳ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ದೇಶದಲ್ಲಿ ಇಂಧನ ಪೂರೈಕೆ ಕೊರತೆ. ಎಲ್ ಪಿಜಿ ಉತ್ಪಾದನೆ ದಿನಕ್ಕೆ 54,000 ಟನ್ ಗೆ ಏರಿಕೆಯಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದರು. ಬಿಸಿನೆಸ್ ಸಮಿಟ್‌ನಲ್ಲಿ ಮಂಗಳವಾರ ಮಾತನಾಡಿದ ಅವರು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ದೇಶದಲ್ಲಿ ಇಂಧನ ಪೂರೈಕೆ ಕೊರತೆ ಇಲ್ಲ ಎಂದು ಭರವಸೆ ನೀಡಿದರು. ಅಲ್ಲದೆ ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಎಲ್‌ಪಿಜಿ ಉತ್ಪಾದನೆಯನ್ನು ದಿನಕ್ಕೆ 35,000 ಟನ್‌ನಿಂದ … Read more