ಸಿಎಂ ವಿಜಯ್ ಗೆ ಹೈಕೋರ್ಟ್ ಶಾಕ್ ಒಂದು ಮತದಿಂದ ಗೆಲುವು: ವಿಶ್ವಾಸಮತದಲ್ಲಿ ಪಾಲ್ಗೊಳ್ಳದಂತೆ ತಡೆ

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಗೆ ಮೊದಲ ದಿನವೇ ಮದ್ರಾಸ್ ಹೈಕೋರ್ಟ್ ಶಾಕ್ ನೀಡಿದೆ. ಟಿವಿಕೆ ಶಾಸಕರೊಬ್ಬರಿಗೆ ವಿಶ್ವಾಸಮತ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಂತೆ ತಡೆ ನೀಡಿದೆ. ಮದ್ರಾಸ್ ಹೈಕೋರ್ಟ್ ಮಂಗಳವಾರ ತಿರುಪತ್ತೂರು ಶಾಸಕ ಆರ್.ಶ್ರೀನಿವಾಸ ಸೇತುಪತಿ ಅವರನ್ನು ವಿಧಾನಸಭೆಯ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ತಾತ್ಕಾಲಿಕವಾಗಿ ನಿರ್ಬಂಧಿಸಿದೆ. ಹೀಗಾಗಿ ವಿಜಯ್ ನೇತೃತ್ವದ ಸರ್ಕಾರ ಎದುರಿಸಲಿರುವ ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ನ್ಯಾಯಮೂರ್ತಿಗಳಾದ ಎಲ್.ವಿಕ್ಟೋರಿಯಾ ಗೌರಿ ಮತ್ತು ಎನ್.ಸೆಂಥಿಲ್ ಕುಮಾರ್ ಒಳಗೊಂಡ ವಿಭಾಗೀಯ ಪೀಠವು ಮಧ್ಯಂತರ ತಡೆ ಆದೇಶವನ್ನು … Read more

ಮುಗಿಯದ ಕೇರಳ ಸಿಎಂ ಆಯ್ಕೆ ಬಿಕ್ಕಟ್ಟು

ತಿರುವನಂತಪುರ: ಕೇರಳದಲ್ಲಿ ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ. ಪಕ್ಷದ ವರಿಷ್ಠರೊಂದಿಗೆ ಉನ್ನತ ಮಟ್ಟದ ಚರ್ಚೆಗಾಗಿ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮಾಜಿ ಅಧ್ಯಕ್ಷ ಕೆ.ಸುಧಾಕರನ್ ದೆಹಲಿಗೆ ತೆರಳಿದ್ದಾರೆ. ಕೇರಳ ಸಿಎಂ ಬಿಕ್ಕಟ್ಟು ನಿವಾರಿಸುವ ನಿಟ್ಟಿನಲ್ಲಿ ಕೆ.ಸುಧಾಕರನ್ ಜೊತೆಗೆ, ಹಿರಿಯ ಕಾಂಗ್ರೆಸ್ ನಾಯಕರ ನಿಯೋಗ ವರಿಷ್ಠರೊಂದಿಗೆ ಮಾತುಕತೆಗಾಗಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ನಾಯಕತ್ವದ ಬಗ್ಗೆ ಅಂತಿಮ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ಕೆ.ಮುರಳೀಧರನ್ ತಿಳಿಸಿದ್ದಾರೆ. ರಾಜ್ಯದಲ್ಲಿನ ಪ್ರಸ್ತುತ … Read more

ಗೂಗಲ್ ಎಂಜಿನ್ ಡೌನ್

ನವದೆಹಲಿ: ವಿಶ್ವದ ಅತಿದೊಡ್ಡ ಸರ್ಚ್ ಎಂಜಿನ್ ಗೂಗಲ್ ಭಾರತ ಸೇರಿದಂತೆ ಕೆಲವು ದೇಶಗಳಲ್ಲಿ ತಾಂತ್ರಿಕ ಸಮಸ್ಯೆಯನ್ನು ಎದುರಿಸಿತು. ಮಂಗಳವಾರ ಬೆಳಿಗ್ಗೆ 9:48ರಿಂದ ಗೂಗಲ್ ಸೇವೆಗಳಲ್ಲಿ ವ್ಯತ್ಯಯ ಆಗಿತ್ತು. ದೇಶದ ಹಲವು ಭಾಗಗಳ ಬಳಕೆದಾರರು ಗೂಗಲ್ ಸೇವೆಗಳನ್ನು ಬಳಸಲು ಸಾಧ್ಯವಾಗುತ್ತಿಲ್ಲ ಎಂದು ದೂರು ನೀಡಿದರು. ಸೇವಾ ಸ್ಥಗಿತಗಳನ್ನು ಟ್ರ್ಯಕ್ ಮಾಡುವ ಡೌನ್‌ಡೆಕ್ಟರ್ ಪ್ರಕಾರ, ಬೆಳಿಗ್ಗೆ 10:23ರ ವೇಳೆಗೆ 3,665ಕ್ಕೂ ಹೆಚ್ಚು ಬಳಕೆದಾರರು ಸಮಸ್ಯೆ ಬಗ್ಗೆ ವರದಿ ಮಾಡಿದ್ದಾರೆ. ಗೂಗಲ್ ಸರ್ಚ್ ಸೇರಿದಂತೆ ಹಲವು ಗೂಗಲ್ ಸೇವೆಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ … Read more

ಎಲ್ ಪಿಜಿ ಉತ್ಪಾದನೆ ಹೆಚ್ಚಳ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ದೇಶದಲ್ಲಿ ಇಂಧನ ಪೂರೈಕೆ ಕೊರತೆ. ಎಲ್ ಪಿಜಿ ಉತ್ಪಾದನೆ ದಿನಕ್ಕೆ 54,000 ಟನ್ ಗೆ ಏರಿಕೆಯಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದರು. ಬಿಸಿನೆಸ್ ಸಮಿಟ್‌ನಲ್ಲಿ ಮಂಗಳವಾರ ಮಾತನಾಡಿದ ಅವರು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ದೇಶದಲ್ಲಿ ಇಂಧನ ಪೂರೈಕೆ ಕೊರತೆ ಇಲ್ಲ ಎಂದು ಭರವಸೆ ನೀಡಿದರು. ಅಲ್ಲದೆ ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಎಲ್‌ಪಿಜಿ ಉತ್ಪಾದನೆಯನ್ನು ದಿನಕ್ಕೆ 35,000 ಟನ್‌ನಿಂದ … Read more

ಪಂಚಭೂತಗಳಲ್ಲಿ ಡಿ.ಸುಧಾಕರ್ ಲೀನ

ಚಿತ್ರದುರ್ಗ: ಹಿರಿಯೂರು ಶಾಸಕ ಹಾಗೂ ಸಚಿವ ಡಿ.ಸುಧಾಕರ್ ಪಂಚಭೂತಗಳಲ್ಲಿ ಲೀನವಾದರು. ಪಾವಗಡ ರಸ್ತೆಯ ಜೈನ ಮುಕ್ತಿಧಾಮದಲ್ಲಿ ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಿತು. ಪುತ್ರ ಸುಹಾಸ್ ಅಂತಿಮ ಕ್ರಿಯೆಗಳನ್ನು ನಡೆಸಿದರು. ಜೈನ ಸಂಪ್ರದಾಯದAತೆ ಅಂತಿಮ ಸಂಸ್ಕಾರ ನಡೆಸಲಾಯಿತು. ಸುಧಾಕರ್ ಅವರ ಪಾರ್ಥಿವ ಶರೀರಕ್ಕೆ ಪುತ್ರ ಸುಹಾಸ್ ಅಗ್ನಿ ಸ್ಪರ್ಶ ಮಾಡಿದರು. ತೀವ್ರ ಅನಾರೋಗ್ಯ ಸಚಿವ ಡಿ.ಸುಧಾಕರ್ ಭಾನುವಾರ ನಿಧನರಾಗಿದ್ದರು. ಅಂತ್ಯ ಸಂಸ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯುಟಿ ಖಾದರ್, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು … Read more

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ: ಹೆಬ್ಬಾಳ್ಕರ್

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಮಾರ್ಚ್ ತಿಂಗಳ ಕಂತಿನ ಹಣ ನಾಲ್ಕೈದು ದಿನಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ತಾಲ್ಲೂಕಿನ ಬಾಕನೂರಿನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಜನೆಯ ಏಪ್ರಿಲ್ ಕಂತಿನ ಹಣವೂ 8ರಿಂದ 10 ದಿನಗಳಲ್ಲಿ ಫಲಾನುಭವಿಗಳ ಕೈಸೇರಲಿದೆ ಎಂದು ಹೇಳಿದರು.

ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ಸಾವು

ಮಂಡ್ಯ: ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಯರಗನಹಳ್ಳಿ ಬಳಿ ಸೋಮವಾರ ನಡೆದಿದೆ. ಮೃತರನ್ನು ಪ್ರಕಾಶ್ ಗೌಡ (24) ಮತ್ತು ಯಶಸ್ (23) ಎಂದು ಗುರುತಿಸಲಾಗಿದೆ. ಇವರಿಬ್ಬರೂ ತಮ್ಮ ಸ್ನೇಹಿತರೊಂದಿಗೆ ಯರಗನಹಳ್ಳಿ ಕೆರೆಯಲ್ಲಿ ಈಜಲು ಹೋದಾಗ ಈ ದುರ್ಘಟನೆ ನಡೆದಿದೆ. ಇಬ್ಬರೂ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ನೀರಿನಲ್ಲಿ ಮುಳುಗಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು … Read more

ಕ್ಯಾನ್ ಗಳಿಗೆ ಇಂಧನ ಪೂರೈಕೆ ನಿಷೇಧ

ಬೆಂಗಳೂರು: ರಾಜ್ಯದಲ್ಲಿ ಇಂಧನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ನಾಗರಿಕ ಹಾಗೂ ಆಹಾರ ಸರಬರಾಜು ಇಲಾಖೆಯು ಪೆಟ್ರೋಲ್ ಮತ್ತು ಡೀಸೆಲ್ ವಿತರಣೆಗೆ ಸಂಬಂಧಿಸಿದಂತೆ ಹೊಸ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದೆ. ಗ್ರಾಹಕರಿಗೆ ಕ್ಯಾನ್ ಅಥವಾ ಡಬ್ಬಗಳಲ್ಲಿ ಇಂಧನ ಮಾರಾಟ ಮಾಡುವಂತಿಲ್ಲ ಎಂದು ಆದೇಶಿಸಿದೆ. ಗ್ರಾಹಕರ ಸುರಕ್ಷತೆಯ ಕಾರಣಗಳಿಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಇಂಧನ ವಿತರಣಾ ಕೇಂದ್ರಗಳಿಗೆ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಇಲಾಖೆಯ ಈ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ನಿಯಮ ಉಲ್ಲಂಘಿಸುವ ಪೆಟ್ರೋಲ್ ಬಂಕ್‌ಗಳ ವಿರುದ್ಧ … Read more

ಈಜಲು ಹೋದ ಬಾಲಕ ನೀರು ಪಾಲು

ಪಾವಗಡ: ತಾಲೂಕಿನ ವಿರಮ್ಮನಹಳ್ಳಿ ಗೇಟ್ ಸಮೀಪದ ಖಾಸಗಿ ತೋಟದ ತೊಟ್ಟಿಯಲ್ಲಿ ನಡೆದ ಹೃದಯವಿದ್ರಾವಕ ಘಟನೆದಲ್ಲಿ 13 ವರ್ಷದ ಬಾಲಕ ತಾಹಿರ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಎಂಟನೇ ತರಗತಿಯಲ್ಲಿ ಓದುತ್ತಿದ್ದ ತಾಹಿರ್ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಈಜುವ ವೇಳೆ ಕಾಲು ಜಾರಿ ಆಳವಾದ ನೀರಿಗೆ ಬಿದ್ದ ಬಾಲಕ ಹೊರಬರಲು ಸಾಧ್ಯವಾಗದೆ ಮುಳುಗಿ ಮೃತಪಟ್ಟಿದ್ದಾನೆ. ಮೃತ ಬಾಲಕ ಪಟ್ಟಣದ 21ನೇ ವಾರ್ಡ್ ನಿವಾಸಿಗಳಾದ ನೂರಿ ಮತ್ತು ರಿಜ್ವಾನ್ ದಂಪತಿಯ ಪುತ್ರ. ಘಟನೆಯ ಸುದ್ದಿ … Read more

ಭೀಕರ ಅಪಘಾತ: 6 ಮಂದಿ ಸಾವು ತುಮಕೂರು ಮತ್ತು ಮಂಡ್ಯ ಸಮೀಪ ಪ್ರತ್ಯೇಕ ಅಪಘಾತದಲ್ಲಿ ದುರಂತ

ಮಂಡ್ಯ /ತುಮಕೂರು: ಮಂಡ್ಯ ಮತ್ತು ತುಮಕೂರು ಜಿಲ್ಲೆಯ ಕುಣಿಗಲ್ ಸಮೀಪ ನಡೆದ ಪ್ರತ್ಯೇಕ ಎರಡು ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಕುಣಿಗಲ್ ಬಳಿ ನಡೆದ ಅಪಘಾತದಲ್ಲಿ ಗಂಡ-ಹೆಂಡತಿ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮಂಡ್ಯ ಸಮೀಪದ ನಡೆದ ಅಪಘಾತದಲ್ಲಿ ತಂದೆ-ಮಗ ಜೀವ ಬಿಟ್ಟಿದ್ದಾರೆ. ತುಮಕೂರು ವರದಿ: ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಶನಿವಾರ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಶನಿವಾರ ಮಧ್ಯಾಹ್ನ ಗೊಬ್ಬರ ತುಂಬಿದ್ದ … Read more