ಇಂದು ಸುವೇಂದು ಪ್ರಮಾಣ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಗಿದೆ. ಈ ಮೂಲಕ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕೋಲ್ಕತ್ತಾದಲ್ಲಿ ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅಧಿಕಾರಿ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು. ಎಲ್ಲಾ ಬಿಜೆಪಿ ಶಾಸಕರು ಅದನ್ನು ಅನುಮೋದಿಸಿದರು. ನಂತರ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಕೇಂದ್ರ ಗೃಹ … Read more

ಪ್ರಾದೇಶಿಕ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ಸ್ಥಿತಿಯಿಲ್ಲ ಕರ್ನಾಟಕದ ರಾಜಕೀಯ ಪರಿಸ್ಥಿತಿ ವಿಭಿನ್ನ: ಎಚ್.ಡಿ.ಕುಮಾರಸ್ವಾಮಿ

ಹಾಸನ: ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಬಹುದು ಎಂಬ ಚರ್ಚೆ ಜನಸಾಮಾನ್ಯರಲ್ಲಿದೆ. ಆದರೆ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳು ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ವಾತಾವರಣ ಇಲ್ಲ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕರ್ನಾಟಕದ ರಾಜಕೀಯ ಪರಿಸ್ಥಿತಿಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು. ಟಿವಿಕೆ ವಿಜಯವನ್ನು ಉಲ್ಲೇಖಿಸಿ ಮಾತನಾಡಿದ ಅವರು, ಇಲ್ಲಿ ಇರುವ ರಾಜಕೀಯ ಪರಿಸ್ಥಿತಿ ಬೇರೆ ರಾಜ್ಯಗಳಿಗಿಂತ ವಿಭಿನ್ನವಾಗಿದೆ ಎಂದರು. ತಮಿಳುನಾಡಿನ ರಾಜಕಾರಣದಲ್ಲಿ ಸಿನಿಮಾದ … Read more

ದಾವಣಗೆರೆ: ಒಳಜಗಳದಿಂದ ಹಿನ್ನಡೆ ಕಾಂಗ್ರೆಸ್ 20 ಸಾವಿರ ಅಂತರದಿಂದ ಗೆಲ್ಲಬೇಕಿತ್ತು: ಜಾರಕಿಹೊಳಿ

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕಡಿಮೆ ಅಂತರದಿಂದ ಗೆಲುವು ಸಾಧಿಸಿದೆ. ಒಳಜಗಳದ ಪರಿಣಾಮ ಪಕ್ಷಕ್ಕೆ ಹಿನ್ನಡೆ ಆಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟರು. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಬಾಗಲಕೋಟೆಯಲ್ಲಿ ಅಹಿಂದ ಸೂತ್ರ ಯಶಸ್ಸು ತಂದುಕೊಟ್ಟಿತು. ಈ ಸೂತ್ರ ದಕ್ಷಿಣದಲ್ಲಿ ಯಶಸ್ಸು ಕಂಡಿಲ್ಲ. ಇದಕ್ಕೆ ಪಕ್ಷದ ಒಳಜಗಳವೇ ಕಾರಣ. ಇಲ್ಲವಾದರೆ 20,000ಕ್ಕೂ ಹೆಚ್ಚು ಮತಗಳ ಅಂತರದಿಂದ ಕಾಂಗ್ರೆಸ್ ಗೆಲುವು ಸಾಧಿಸುತ್ತಿತ್ತು ಎಂದು ತಿಳಿಸಿದರು. ಜನರು ಕಾಂಗ್ರೆಸ್ ಮೇಲೆ ಭರವಸೆ ಇಟ್ಟು ಮತ … Read more

ಸುಪ್ರೀಂ ಆದೇಶದಂತೆ ಜಿಬಿಎ ಚುನಾವಣೆ *ಜೂನ್ 20ರಿಂದ 24ರೊಳಗೆ ಪ್ರಕ್ರಿಯೆ ಪೂರ್ಣ: ಸಿಇಸಿ ಸಂಗ್ರೇಶಿ

ಬೆಂಗಳೂರು: ಸುಪ್ರೀಂಕೋರ್ಟ್ ಸೂಚನೆಯಂತೆ ಜೂ.20ರಿಂದ 24ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಚುನಾವಣೆಯನ್ನು ನಡೆಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಶುಕ್ರವಾರ ತಿಳಿಸಿದರು. ಬೆಂಗಳೂರು ಪಂಚ ನಗರಪಾಲಿಕೆಗಳ ಚುನಾವಣೆ ಸಂಬಂಧ ಶುಕ್ರವಾರ ಆಯೋಗದಲ್ಲಿ ಕರೆಯಲಾಗಿದ್ದ ಸಭೆಯ ನಂತರ ಈ ಕುರಿತು ಮಾಹಿತಿ ನೀಡಿದರು. ಜೂನ್ 14ರಿಂದ 24ರ ಒಳಗೆ ಚುನಾವಣೆ ದಿನಾಂಕ ಘೋಷಣೆ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದರು. ಕಾನೂನು ಪ್ರಕಾರ ರಾಜ್ಯ ಚುನಾವಣಾ ಆಯೋಗವು ಜಿಬಿಎ ಜೊತೆಗೆ ಸಮಾಲೋಚನೆ … Read more

ಟಿಸಿಎಸ್ ಜಿಹಾದ್ ಪ್ರಕರಣ: ನಿದಾ ಖಾನ್ ಬಂಧನ

ಮುಂಬೈ: ಟಿಸಿಎಸ್ ಕಾರ್ಪೊರೇಟ್ ಜಿಹಾದ್ ಪ್ರಕರಣದ ಮಾಸ್ಟರ್ ಮೈಂಡ್ ನಿದಾ ಖಾನ್‌ಳನ್ನು ವಿಶೇಷ ತನಿಖಾ ತಂಡ ಸಂಭಾಜಿ ನಗರದಲ್ಲಿ ಬಂಧಿಸಿದೆ. ಟಿಸಿಎಸ್‌ನಲ್ಲಿ ನಡೆದ ಮತಾಂತರ ಪ್ರಕರಣದಲ್ಲಿ ನಿದಾ ಖಾನ್ ವಿರುದ್ಧ ಹಲವಾರು ದೂರುಗಳು ದಾಖಲಾದ ನಂತರ ನಾಪತ್ತೆಯಾಗಿದ್ದರು. ಸುಮಾರು 25 ದಿನಗಳ ಕಾಲ ಆಕೆ ತಲೆಮರೆಸಿಕೊಂಡಿದ್ದಳು. ಅಲ್ಲದೇ ಎಫ್‌ಐಆರ್ ದಾಖಲಾದ ನಂತರ ಬಂಧನದಿಂದ ಬಚಾವ್ ಆಗಲು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ನಿದಾ ಕಳೆದ ನಾಲ್ಕು ದಿನಗಳಿಂದ ಛತ್ರಪತಿ ಸಂಭಾಜಿನಗರದ … Read more

ಪ್ರಾಧ್ಯಾಪಕರ ಹುದ್ದೆ ನೇರ ನೇಮಕಾತಿಗೆ ಹೈಕೋರ್ಟ್ ತಡೆ

ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿವಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ. ಸರ್ಕಾರದಿಂದ ಮಂಜೂರಾಗಿದ್ದ ವಿವಿಯ ಸಹಾಯಕ ಪ್ರಾಧ್ಯಾಪಕರ 24 ಹುದ್ದೆಗಳ ನೇಮಕಾತಿಗೆ ಕಲಬುರಗಿ ಹೈಕೋರ್ಟ್ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರ ನೇಮಕಾತಿಗೆ 16 ಏಪ್ರಿಲ್ 2026 ರಂದು ಮಂಜೂರಾತಿ ನೀಡಿತ್ತು. ಸರ್ಕಾರದ ಕೆಲ ಮಾರ್ಗಸೂಚಿಗಳು ಯು.ಜಿ.ಸಿ ನಿಯಮಾವಳಿಗಳನ್ನು ಉಲ್ಲಂಘಿಸಿವೆ ಎಂದು ಸ್ಪರ್ಧಾಕಾಂಕ್ಷಿಗಳು ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಪೀಠ ನೇಮಕಾತಿ ಪ್ರಕ್ರಿಯೆಗೆ … Read more

ಸಮಯಕ್ಕೆ ತಕ್ಕಂತೆ ಸಿಎಂ ಸುಳ್ಳು: ವಿ.ಸೋಮಣ್ಣ ಕಿಡಿ

ರಾಮನಗರ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಳ್ಳು ಹೇಳುವುದರಲ್ಲಿ ಡಾಕ್ಟರೇಟ್ ಕೊಡಬೇಕು. ಎರಡು ಬಾರಿ ಸಿಎಂ ಆದರೂ ಬುದ್ಧಿ ಕಲಿಯದ ಅವರು, ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಕಿಡಿಕಾರಿದರು. ಶೃಂಗೇರಿ ಮರು ಅಂಚೆ ಮತ ಎಣಿಕೆಯಲ್ಲಿ ಮತ ಡಕಾಯಿತಿ ಆಗಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ನಗರದಲ್ಲಿ ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಶೃಂಗೇರಿ ಕ್ಷೇತ್ರದಲ್ಲಿ ಕೋರ್ಟ್ ಆದೇಶದಂತೆ ಮರು ಎಣಿಕೆಯಾಗಿದೆ. ಹೀಗಿರುವಾಗ ಕ್ಷೇತ್ರದಲ್ಲಿ ಮತ ಡಕಾಯಿತಿ ಎಂದು ಬಾಯಿಗೆ ಬಂದAತೆ ಮಾತನಾಡುವುದು ಸರಿಯಲ್ಲ … Read more

ತಮಿಳುನಾಡಿನಲ್ಲಿ ಅಚ್ಚರಿ, ಕೇರಳದಲ್ಲಿ ನಿರೀಕ್ಷಿತ: ಸಿಎಂ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಫಲಿತಾಂಶ ಆಶ್ಚರ್ಯಕರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ತಮಿಳುನಾಡಿನಲ್ಲಿ ಫಲಿತಾಂಶ ಆಶ್ಚರ್ಯಕರವಾಗಿದೆ. ಯುವಕರು ವಿಜಯ್‌ಗೆ ಮತ ಹಾಕಿದ್ದಾರೆ. ಚುನಾವಣೆಗಳಲ್ಲಿ ಹೀಗೂ ಆಗುತ್ತದೆ ಎಂದರು. ಪಶ್ಚಿಮ ಬಂಗಾಳದಲ್ಲಿ 15 ವರ್ಷ ಮಮತಾ ಬ್ಯಾನರ್ಜಿ ಇದ್ದರು. ಆಡಳಿತ ವಿರೋಧಿ ಅಲೆ ಇರಬಹುದು. ನಾನು ಅಲ್ಲಿಗೆ ಹೋಗಿಲ್ಲ. ಎಸ್‌ಐಆರ್ ಮಾಡಿ 91 ಲಕ್ಷ ಮತ ರದ್ದು ಮಾಡಿದ್ದರು. ಇವೆಲ್ಲ ಕಾರಣ ಇರಬಹುದು. ಕೇರಳ ಫಲಿತಾಂಶ … Read more

ಸಾರಿಗೆ ಬಸ್‌ಗೆ ಬೆಂಕಿ: 17 ಪ್ರಯಾಣಿಕರು ಪಾರು

ಹಾವೇರಿ: ರಾಜ್ಯ ಸಾರಿಗೆ ಸಂಸ್ಥೆಯ ‘ಪಲ್ಲಕ್ಕಿ’ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ಮಂಗಳವಾರ ನಡೆದಿದೆ. 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ರಾಣೆಬೆನ್ನೂರು ತಾಲ್ಲೂಕಿನ ದೇವರೂಡ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಬಸ್ ಬೆಂಗಳೂರಿನಿAದ ಗದಗಕ್ಕೆ ತೆರಳುತಿತ್ತು. ಬಸ್‌ನಲ್ಲಿ ಸುಮಾರು 17 ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬ್ರೇಕ್ ಲೈನ್ ದೋಷದಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಕೂಡಲೇ ಎಚ್ಚೆತ್ತುಕೊಂಡ ಚಾಲಕ ಪಕ್ಕೀರಪ್ಪ ಬಸ್ ಅನ್ನು ನಿಲ್ಲಿಸಿದ್ದಾರೆ. ಅವರ … Read more

ಮನೆ ಕೆಲಸದಾಕೆ ಈಗ ಶಾಸಕಿ!

ಕೋಲ್ಕತ್ತಾ: ತಿಂಗಳಿಗೆ 2,500 ಸಂಬಳ ಪಡೆಯುತ್ತಿದ್ದ ಮನೆಕೆಲಸ ಮಾಡುವ ಕಲಿತಾ ಮಾಝಿ ಈಗ ಪಶ್ಚಿಮ ಬಂಗಾಳದ ಆಸ್ಗ್ರಾಮ್ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಾಝಿ 1,07,692 ಮತಗಳನ್ನು ಗಳಿಸಿ, ತಮ್ಮ ಹತ್ತಿರದ ಪ್ರತಿಸ್ಪರ್ಧಿ ಶ್ಯಾಮ ಪ್ರಸನ್ನ ಲೋಹರ್ ಅವರನ್ನು 12,535 ಮತಗಳ ಅಂತರದಿAದ ಸೋಲಿಸಿದ್ದಾರೆ. ಗುಸ್ಕಾರ ನಿವಾಸಿ ಮಾಝಿ, ಸಕ್ರಿಯ ರಾಜಕೀಯಕ್ಕೆ ಕಾಲಿಡುವ ಮೊದಲು ನಾಲ್ಕು ಮನೆಗಳಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಅವರ ಸಾಧಾರಣ ಹಿನ್ನೆಲೆ ಮತ್ತು ಬಲವಾದ ಸ್ಥಳೀಯ ಸಂಪರ್ಕಗಳಿAದಾಗಿ … Read more