ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ: ಬ್ಯಾನರ್ಜಿ ಪಟ್ಟು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಪಟ್ಟು ಹಿಡಿದಿದ್ದಾರೆ. ಚುನಾವಣಾ ಫಲಿತಾಂಶವನ್ನು ಕಾನೂನುಬದ್ಧ ಸೋಲು ಎಂದು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿರುವ ಅವರು, ಹಿನ್ನಡೆ ಹೊರತಾಗಿಯೂ ತಮ್ಮ ರಾಜಕೀಯ ಹೋರಾಟವನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಭಾರೀ ಸೋಲಿನ ನಂತರ ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ಯಾನರ್ಜಿ, ದೊಡ್ಡ ಪ್ರಮಾಣದ ರಿಗ್ಗಿಂಗ್, ಮತದಾರರ ಪಟ್ಟಿ ತಿರುಚಿರುವುದು ಮತ್ತು ವ್ಯಾಪಕ ಹಿಂಸಾಚಾರ ನಡೆದಿದೆ ಎಂದು ಆರೋಪಿಸಿದರು. ಬಿಜೆಪಿ 100 ಸ್ಥಾನಗಳನ್ನು ಕಳವು ಮಾಡಿದೆ. … Read more

ಮೋದಿಗೆ ಜೈ: ದೀದಿಗೆ ಬೈ ಪಶ್ಚಿಮ ಬಂಗಾಳ, ಪುದುಚೇರಿ, ಅಸ್ಸಾಂ ಬಿಜೆಪಿ ತೆಕ್ಕೆಗೆ ಕೇರಳದಲ್ಲಿ ಕಾಂಗ್ರೆಸ್ ಕಮಾಲ್, ತಮಿಳುನಾಡು ಟಿವಿಕೆ ಪಾಲು

ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಕಮಾಲ್ ಮಾಡಿದೆ. 5 ರಾಜ್ಯಗಳಲ್ಲಿ 3ರಲ್ಲಿ ಜಯಗಳಿಸುವ ಮೂಲಕ ತನ್ನ ಸಾಮ್ರಾಜ್ಯವನ್ನು ಮತ್ತಷ್ಟು ವಿಸ್ತರಣೆ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭರ್ಜರಿ ಜಯಗಳಿಸುವ ಮೂಲಕ ದೀದಿಗೆ ಶಾಕ್ ನೀಡಿದೆ. ಪಶ್ಚಿಮ ಬಂಗಾಳದ ಆಡಳಿತ ಪಕ್ಷ ಟಿಎಂಸಿ 15 ವರ್ಷಗಳ ನಂತರ ಹೀನಾಯ ಸೋಲುಕಂಡಿದೆ. ಈ ಮೂಲಕ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಮುಖಭಂಗವಾಗಿದೆ. ತಮಿಳುನಾಡಿನ 234 ಕ್ಷೇತ್ರಗಳಲ್ಲಿ ಟಿವಿಕೆ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಅತಿ ಹೆಚ್ಚು … Read more

ಉಪ ಸಮರದಲ್ಲಿ ಕಾಂಗ್ರೆಸ್ ಗೆಲುವು

*ಬಾಗಲಕೋಟೆ, ದಾವಣಗೆರೆಯಲ್ಲೂ ಬಿಜೆಪಿಗೆ ಮುಖಭಂಗ ಬಾಗಲಕೋಟೆ: ರಾಜ್ಯದ ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸುವ ಮೂಲಕ ತನ್ನ ಸ್ಥಾನಗಳನ್ನು ಉಳಿಸಿಕೊಂಡಿದೆ. ಬಾಗಲಕೋಟೆಯಲ್ಲಿ ಎಚ್.ವೈ.ಮೇಟಿ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ವೀರಭದ್ರಯ್ಯ ಚರಂತಿಮಠ ವಿರುದ್ಧ 22,332 ಮತಗಳ ಅಂತರದಿAದ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಕ್ಷೇತ್ರವನ್ನು ಮರಳಿ ಕಾಂಗ್ರೆಸ್ ತನ್ನ ತೆಕ್ಕೆಗೆ … Read more

ತಮಿಳುನಾಡಿಗೆ ವಿಜಯ್ ‘ದಳಪತಿ’

*ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಜಯಗಳಿಸಿದ ಟಿವಿಕೆ ಚೆನ್ನೈ: ತಮಿಳುನಾಡಿನ ವಿಧಾನಸಭೆ ಸಮರದಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷವು (ಟಿವಿಕೆ) ಹಳೆ ಹುಲಿಗಳ ಲೆಕ್ಕಾಚಾರವನ್ನು ತಲೆಕೆಳಗು ಮಾಡಿದೆ. ದಶಕಗಳಿಂದ ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಸುತ್ತುತ್ತಿದ್ದ ತಮಿಳು ರಾಜಕಾರಣದಲ್ಲಿ ವಿಜಯ್ ಈಗ ‘ಸೂಪರ್ ಕಿಂಗ್’ ಆಗಿ ಉದಯಿಸಿದ್ದಾರೆ. ಯುವಶಕ್ತಿ ಮತ್ತು ಮಹಿಳೆಯರ ಅಭೂತಪೂರ್ವ ಬೆಂಬಲವೇ ಈ ಐತಿಹಾಸಿಕ ಬದಲಾವಣೆಗೆ ಕಾರಣ ಎನ್ನಲಾಗಿದೆ. ತಮಿಳುನಾಡಿನ ಸುಮಾರು 2.38 ಕೋಟಿ ಯುವ ಮತದಾರರು ಸಾಂಪ್ರದಾಯಿಕ ದ್ರಾವಿಡ ಪಕ್ಷಗಳ … Read more

ಗ್ಯಾರಂಟಿ ಕೈಹಿಡಿದಿದೆ: ಡಿಕೆಶಿ

ಬೆಂಗಳೂರು: ಜನ ನಮ್ಮ ಜೊತೆ ಇದ್ದಾರೆ. ನಮ್ಮ ಗ್ಯಾರಂಟಿ ನಮ್ಮ ಕೈಹಿಡಿದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಉಪ ಚುನಾವಣೆ ಫಲಿತಾಂಶದ ನಂತರ ಮಾತನಾಡಿದ ಅವರು, ನಮ್ಮ ಗ್ಯಾರಂಟಿ ರಾಜ್ಯದಲ್ಲಿ ಚೆನ್ನಾಗಿ ನಡೆಯುತ್ತಿದೆ. ಜನ ಸ್ಪಂದಿಸಿದ್ದಾರೆ. ಇದಕ್ಕೆ ಈ ಫಲಿತಾಂಶ ಉದಾಹರಣೆ. ಇನ್ನೂ ರೌಂಡ್ ಇದೆ, ಚೆನ್ನಾಗಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ಕಾಂಗ್ರೆಸ್ ಗೆ ಎಸ್‌ಡಿಪಿಐ ವೋಟ್ ನಮಗೆ ಡೇಂಜರ್ ಆಗಿದೆ. ಎಸ್‌ಡಿಪಿಐ ಅವರನ್ನು ಲೈಟಾಗಿ ತೆಗೆದುಕೊಂಡಿಲ್ಲ. ಇಷ್ಟು ಆಗಲಿದೆ ಅಂತ ಅಂದಾಜಿಸಿರಲಿಲ್ಲ. … Read more

ಜೈಲಿನಲ್ಲಿ ದರ್ಶನ್‌ಗೆ ಸೌಕರ್ಯ: ವರದಿ ನೀಡಲು ಸುಪ್ರೀಂ ಸೂಚನೆ

ಬೆಂಗಳೂರು: ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್, ಜಾಮೀನು ಕೋರಿ ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ನೇತೃತ್ವದ ಪೀಠ, ರಾಜ್ಯ ಸರ್ಕಾರಕ್ಕೆ ಹಾಗೂ ವಿಚಾರಣಾಧೀನ ನ್ಯಾಯಾಲಯಕ್ಕೆ 1 ವಾರದೊಳಗೆ ವರದಿ ಸಲ್ಲಿಸಲು ಸೂಚಿಸಿದೆ. ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂದು ರಾಜ್ಯ ಸರ್ಕಾರಕ್ಕೆ ಹಾಗೂ ಸಾಕ್ಷಿಗಳ ವಿಚಾರಣೆ ಪ್ರಗತಿ ಬಗ್ಗೆ ವಿಚಾರಣಾ … Read more

ಇಬ್ಬರು ಮಕ್ಕಳ ಕೊಲೆ ಮಾಡಿ ತಂದೆ ಆತ್ಮಹತ್ಯೆ

ಕುಣಿಗಲ್: ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಅರ್ಚಕನೊಬ್ಬ ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಗ್ರಾಮದ ಮಲ್ಲೆಶ್ವರ ಸ್ವಾಮಿ ದೇವಸ್ಥಾನದ ಅರ್ಚಕ ಶಿವಣ್ಣ (40) ಎಂದು ಗುರುತಿಸಲಾಗಿದೆ. ಅವರು ಮಕ್ಕಳಾದ ಜೀವನ್ (10) ಹಾಗೂ ಪ್ರಾಣೇಶ್ (5) ಅವರನ್ನು ಕತ್ತುಹಿಸುಕಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಶಿವಣ್ಣ ಅವರ ಪತ್ನಿ ಕಾವ್ಯಾ (35) ಬೇರೊಬ್ಬರ … Read more

ಬೈಕ್ ಸವಾರ ಸಾವು

ಬೆಂಗಳೂರು: ಕೆಲಸ ಮುಗಿಸಿ ಶುಕ್ರವಾರ ತಡರಾತ್ರಿ ಮನೆಗೆ ತೆರಳುವ ವೇಳೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಹೊರವಲಯದ ನೆಲಮಂಗಲ ಬಳಿಯ ಹುಸ್ಕೂರು ಎಪಿಎಂಸಿ ಬಳಿ ನಡೆದಿದೆ. ಬೈಕ್ ಸವಾರ ಗಿರೀಶ್ (30) ಸಾವನ್ನಪ್ಪಿದ್ದಾರೆ. ಬೆಂಗಳೂರು ಉತ್ತರ ತಾಲೂಕು ವಡೇರಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಗಿರೀಶ್ ಡ್ರೈವರ್ ಕೆಲಸ ಮಾಡಿಕೊಂಡಿದ್ದರು. ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಅಪಘಾತದ ಬಳಿಕ ಟಾಟಾ ಏಸ್ ವಾಹನ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.

ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ಸಾವು

ಯಾದಗಿರಿ: ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟೆ ಗ್ರಾಮದಲ್ಲಿ ನಡೆದಿದೆ. ಸಿದ್ದಪ್ಪ ಕೊಂಡಗುಳಿ ಮೃತ ಕಾರ್ಮಿಕ. ಕೂಲಿ ಕೆಲಸದಿಂದ ಮನೆ ಬಂದಾಗ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮನೆಗೆ ಬಂದ ತಕ್ಷಣ ನೀರಿನ ದಾಹ ತಣಿಸಿಕೊಳ್ಳಲು ನೀರು ಕುಡಿದಿದ್ದರು. ಆದರೆ ಕೆಲವು ಕ್ಷಣಗಳಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಅಗ್ನಿ ಅವಘಡದಿಂದ ಪಾರು- ಹೃದಯಾಘಾತದಿಂದ ಸಾವು!

ತಿಪಟೂರು: ತೆಂಗಿನಕಾಯಿ ಮಟ್ಟೆ ತುಂಬಿದ್ದ ಲಾರಿಯೊಂದು ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾಗುತ್ತಿದ್ದ ವೇಳೆ ತನ್ನ ಜೀವ ಹಾಗೂ ವಾಹನ ರಕ್ಷಿಸಲು ಚಾಲಕ ಲಾರಿಯನ್ನು ಕೆರೆಗೆ ಇಳಿಸಿದರೂ ಬಳಿಕ ನೀರಿನಿಂದ ಹೊರಬಂದ ತಕ್ಷಣ ಹೃದಯಾಘಾತದಿಂದ ಮೃತಪಟ್ಟ ಹೃದಯ ವಿದ್ರಾವಕ ಘಟನೆ ತಿಪಟೂರು ತಾಲ್ಲೂಕಿನ ನೊಣವಿನಕೆರೆ ಹೋಬಳಿ ಗುಂಗರಮಳೆ ಕೆರೆಯಲ್ಲಿ ನಡೆದಿದೆ. ತಿಪಟೂರು ನಗರದ ಗಾಂಧೀನಗರ ನಿವಾಸಿ 46 ವರ್ಷದ ಚಾಂದ್ ಪಾಷ ಮೃತ ದುರ್ದೈವಿ ಚಾಲಕರಾಗಿದ್ದಾರೆ. ಚಾಂದ್ ಪಾಷ ಅವರು ಕ್ಯಾಂಟರ್ ಲಾರಿಯಲ್ಲಿ ತೆಂಗಿನಕಾಯಿ ಮಟ್ಟೆ ತುಂಬಿಕೊಂಡು ಸಾಗಿಸುತ್ತಿದ್ದ ವೇಳೆ … Read more