ಸಮಯಕ್ಕೆ ತಕ್ಕಂತೆ ಸಿಎಂ ಸುಳ್ಳು: ವಿ.ಸೋಮಣ್ಣ ಕಿಡಿ

ರಾಮನಗರ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಳ್ಳು ಹೇಳುವುದರಲ್ಲಿ ಡಾಕ್ಟರೇಟ್ ಕೊಡಬೇಕು. ಎರಡು ಬಾರಿ ಸಿಎಂ ಆದರೂ ಬುದ್ಧಿ ಕಲಿಯದ ಅವರು, ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಕಿಡಿಕಾರಿದರು. ಶೃಂಗೇರಿ ಮರು ಅಂಚೆ ಮತ ಎಣಿಕೆಯಲ್ಲಿ ಮತ ಡಕಾಯಿತಿ ಆಗಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ನಗರದಲ್ಲಿ ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಶೃಂಗೇರಿ ಕ್ಷೇತ್ರದಲ್ಲಿ ಕೋರ್ಟ್ ಆದೇಶದಂತೆ ಮರು ಎಣಿಕೆಯಾಗಿದೆ. ಹೀಗಿರುವಾಗ ಕ್ಷೇತ್ರದಲ್ಲಿ ಮತ ಡಕಾಯಿತಿ ಎಂದು ಬಾಯಿಗೆ ಬಂದAತೆ ಮಾತನಾಡುವುದು ಸರಿಯಲ್ಲ … Read more

ತಮಿಳುನಾಡಿನಲ್ಲಿ ಅಚ್ಚರಿ, ಕೇರಳದಲ್ಲಿ ನಿರೀಕ್ಷಿತ: ಸಿಎಂ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಫಲಿತಾಂಶ ಆಶ್ಚರ್ಯಕರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ತಮಿಳುನಾಡಿನಲ್ಲಿ ಫಲಿತಾಂಶ ಆಶ್ಚರ್ಯಕರವಾಗಿದೆ. ಯುವಕರು ವಿಜಯ್‌ಗೆ ಮತ ಹಾಕಿದ್ದಾರೆ. ಚುನಾವಣೆಗಳಲ್ಲಿ ಹೀಗೂ ಆಗುತ್ತದೆ ಎಂದರು. ಪಶ್ಚಿಮ ಬಂಗಾಳದಲ್ಲಿ 15 ವರ್ಷ ಮಮತಾ ಬ್ಯಾನರ್ಜಿ ಇದ್ದರು. ಆಡಳಿತ ವಿರೋಧಿ ಅಲೆ ಇರಬಹುದು. ನಾನು ಅಲ್ಲಿಗೆ ಹೋಗಿಲ್ಲ. ಎಸ್‌ಐಆರ್ ಮಾಡಿ 91 ಲಕ್ಷ ಮತ ರದ್ದು ಮಾಡಿದ್ದರು. ಇವೆಲ್ಲ ಕಾರಣ ಇರಬಹುದು. ಕೇರಳ ಫಲಿತಾಂಶ … Read more

ಸಾರಿಗೆ ಬಸ್‌ಗೆ ಬೆಂಕಿ: 17 ಪ್ರಯಾಣಿಕರು ಪಾರು

ಹಾವೇರಿ: ರಾಜ್ಯ ಸಾರಿಗೆ ಸಂಸ್ಥೆಯ ‘ಪಲ್ಲಕ್ಕಿ’ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ಮಂಗಳವಾರ ನಡೆದಿದೆ. 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ರಾಣೆಬೆನ್ನೂರು ತಾಲ್ಲೂಕಿನ ದೇವರೂಡ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಬಸ್ ಬೆಂಗಳೂರಿನಿAದ ಗದಗಕ್ಕೆ ತೆರಳುತಿತ್ತು. ಬಸ್‌ನಲ್ಲಿ ಸುಮಾರು 17 ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬ್ರೇಕ್ ಲೈನ್ ದೋಷದಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಕೂಡಲೇ ಎಚ್ಚೆತ್ತುಕೊಂಡ ಚಾಲಕ ಪಕ್ಕೀರಪ್ಪ ಬಸ್ ಅನ್ನು ನಿಲ್ಲಿಸಿದ್ದಾರೆ. ಅವರ … Read more

ಮನೆ ಕೆಲಸದಾಕೆ ಈಗ ಶಾಸಕಿ!

ಕೋಲ್ಕತ್ತಾ: ತಿಂಗಳಿಗೆ 2,500 ಸಂಬಳ ಪಡೆಯುತ್ತಿದ್ದ ಮನೆಕೆಲಸ ಮಾಡುವ ಕಲಿತಾ ಮಾಝಿ ಈಗ ಪಶ್ಚಿಮ ಬಂಗಾಳದ ಆಸ್ಗ್ರಾಮ್ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಾಝಿ 1,07,692 ಮತಗಳನ್ನು ಗಳಿಸಿ, ತಮ್ಮ ಹತ್ತಿರದ ಪ್ರತಿಸ್ಪರ್ಧಿ ಶ್ಯಾಮ ಪ್ರಸನ್ನ ಲೋಹರ್ ಅವರನ್ನು 12,535 ಮತಗಳ ಅಂತರದಿAದ ಸೋಲಿಸಿದ್ದಾರೆ. ಗುಸ್ಕಾರ ನಿವಾಸಿ ಮಾಝಿ, ಸಕ್ರಿಯ ರಾಜಕೀಯಕ್ಕೆ ಕಾಲಿಡುವ ಮೊದಲು ನಾಲ್ಕು ಮನೆಗಳಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಅವರ ಸಾಧಾರಣ ಹಿನ್ನೆಲೆ ಮತ್ತು ಬಲವಾದ ಸ್ಥಳೀಯ ಸಂಪರ್ಕಗಳಿAದಾಗಿ … Read more

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ: ಬ್ಯಾನರ್ಜಿ ಪಟ್ಟು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಪಟ್ಟು ಹಿಡಿದಿದ್ದಾರೆ. ಚುನಾವಣಾ ಫಲಿತಾಂಶವನ್ನು ಕಾನೂನುಬದ್ಧ ಸೋಲು ಎಂದು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿರುವ ಅವರು, ಹಿನ್ನಡೆ ಹೊರತಾಗಿಯೂ ತಮ್ಮ ರಾಜಕೀಯ ಹೋರಾಟವನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಭಾರೀ ಸೋಲಿನ ನಂತರ ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ಯಾನರ್ಜಿ, ದೊಡ್ಡ ಪ್ರಮಾಣದ ರಿಗ್ಗಿಂಗ್, ಮತದಾರರ ಪಟ್ಟಿ ತಿರುಚಿರುವುದು ಮತ್ತು ವ್ಯಾಪಕ ಹಿಂಸಾಚಾರ ನಡೆದಿದೆ ಎಂದು ಆರೋಪಿಸಿದರು. ಬಿಜೆಪಿ 100 ಸ್ಥಾನಗಳನ್ನು ಕಳವು ಮಾಡಿದೆ. … Read more

ಮೋದಿಗೆ ಜೈ: ದೀದಿಗೆ ಬೈ ಪಶ್ಚಿಮ ಬಂಗಾಳ, ಪುದುಚೇರಿ, ಅಸ್ಸಾಂ ಬಿಜೆಪಿ ತೆಕ್ಕೆಗೆ ಕೇರಳದಲ್ಲಿ ಕಾಂಗ್ರೆಸ್ ಕಮಾಲ್, ತಮಿಳುನಾಡು ಟಿವಿಕೆ ಪಾಲು

ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಕಮಾಲ್ ಮಾಡಿದೆ. 5 ರಾಜ್ಯಗಳಲ್ಲಿ 3ರಲ್ಲಿ ಜಯಗಳಿಸುವ ಮೂಲಕ ತನ್ನ ಸಾಮ್ರಾಜ್ಯವನ್ನು ಮತ್ತಷ್ಟು ವಿಸ್ತರಣೆ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭರ್ಜರಿ ಜಯಗಳಿಸುವ ಮೂಲಕ ದೀದಿಗೆ ಶಾಕ್ ನೀಡಿದೆ. ಪಶ್ಚಿಮ ಬಂಗಾಳದ ಆಡಳಿತ ಪಕ್ಷ ಟಿಎಂಸಿ 15 ವರ್ಷಗಳ ನಂತರ ಹೀನಾಯ ಸೋಲುಕಂಡಿದೆ. ಈ ಮೂಲಕ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಮುಖಭಂಗವಾಗಿದೆ. ತಮಿಳುನಾಡಿನ 234 ಕ್ಷೇತ್ರಗಳಲ್ಲಿ ಟಿವಿಕೆ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಅತಿ ಹೆಚ್ಚು … Read more

ಉಪ ಸಮರದಲ್ಲಿ ಕಾಂಗ್ರೆಸ್ ಗೆಲುವು

*ಬಾಗಲಕೋಟೆ, ದಾವಣಗೆರೆಯಲ್ಲೂ ಬಿಜೆಪಿಗೆ ಮುಖಭಂಗ ಬಾಗಲಕೋಟೆ: ರಾಜ್ಯದ ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸುವ ಮೂಲಕ ತನ್ನ ಸ್ಥಾನಗಳನ್ನು ಉಳಿಸಿಕೊಂಡಿದೆ. ಬಾಗಲಕೋಟೆಯಲ್ಲಿ ಎಚ್.ವೈ.ಮೇಟಿ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ವೀರಭದ್ರಯ್ಯ ಚರಂತಿಮಠ ವಿರುದ್ಧ 22,332 ಮತಗಳ ಅಂತರದಿAದ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಕ್ಷೇತ್ರವನ್ನು ಮರಳಿ ಕಾಂಗ್ರೆಸ್ ತನ್ನ ತೆಕ್ಕೆಗೆ … Read more

ತಮಿಳುನಾಡಿಗೆ ವಿಜಯ್ ‘ದಳಪತಿ’

*ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಜಯಗಳಿಸಿದ ಟಿವಿಕೆ ಚೆನ್ನೈ: ತಮಿಳುನಾಡಿನ ವಿಧಾನಸಭೆ ಸಮರದಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷವು (ಟಿವಿಕೆ) ಹಳೆ ಹುಲಿಗಳ ಲೆಕ್ಕಾಚಾರವನ್ನು ತಲೆಕೆಳಗು ಮಾಡಿದೆ. ದಶಕಗಳಿಂದ ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಸುತ್ತುತ್ತಿದ್ದ ತಮಿಳು ರಾಜಕಾರಣದಲ್ಲಿ ವಿಜಯ್ ಈಗ ‘ಸೂಪರ್ ಕಿಂಗ್’ ಆಗಿ ಉದಯಿಸಿದ್ದಾರೆ. ಯುವಶಕ್ತಿ ಮತ್ತು ಮಹಿಳೆಯರ ಅಭೂತಪೂರ್ವ ಬೆಂಬಲವೇ ಈ ಐತಿಹಾಸಿಕ ಬದಲಾವಣೆಗೆ ಕಾರಣ ಎನ್ನಲಾಗಿದೆ. ತಮಿಳುನಾಡಿನ ಸುಮಾರು 2.38 ಕೋಟಿ ಯುವ ಮತದಾರರು ಸಾಂಪ್ರದಾಯಿಕ ದ್ರಾವಿಡ ಪಕ್ಷಗಳ … Read more

ಗ್ಯಾರಂಟಿ ಕೈಹಿಡಿದಿದೆ: ಡಿಕೆಶಿ

ಬೆಂಗಳೂರು: ಜನ ನಮ್ಮ ಜೊತೆ ಇದ್ದಾರೆ. ನಮ್ಮ ಗ್ಯಾರಂಟಿ ನಮ್ಮ ಕೈಹಿಡಿದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಉಪ ಚುನಾವಣೆ ಫಲಿತಾಂಶದ ನಂತರ ಮಾತನಾಡಿದ ಅವರು, ನಮ್ಮ ಗ್ಯಾರಂಟಿ ರಾಜ್ಯದಲ್ಲಿ ಚೆನ್ನಾಗಿ ನಡೆಯುತ್ತಿದೆ. ಜನ ಸ್ಪಂದಿಸಿದ್ದಾರೆ. ಇದಕ್ಕೆ ಈ ಫಲಿತಾಂಶ ಉದಾಹರಣೆ. ಇನ್ನೂ ರೌಂಡ್ ಇದೆ, ಚೆನ್ನಾಗಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ಕಾಂಗ್ರೆಸ್ ಗೆ ಎಸ್‌ಡಿಪಿಐ ವೋಟ್ ನಮಗೆ ಡೇಂಜರ್ ಆಗಿದೆ. ಎಸ್‌ಡಿಪಿಐ ಅವರನ್ನು ಲೈಟಾಗಿ ತೆಗೆದುಕೊಂಡಿಲ್ಲ. ಇಷ್ಟು ಆಗಲಿದೆ ಅಂತ ಅಂದಾಜಿಸಿರಲಿಲ್ಲ. … Read more

ಜೈಲಿನಲ್ಲಿ ದರ್ಶನ್‌ಗೆ ಸೌಕರ್ಯ: ವರದಿ ನೀಡಲು ಸುಪ್ರೀಂ ಸೂಚನೆ

ಬೆಂಗಳೂರು: ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್, ಜಾಮೀನು ಕೋರಿ ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ನೇತೃತ್ವದ ಪೀಠ, ರಾಜ್ಯ ಸರ್ಕಾರಕ್ಕೆ ಹಾಗೂ ವಿಚಾರಣಾಧೀನ ನ್ಯಾಯಾಲಯಕ್ಕೆ 1 ವಾರದೊಳಗೆ ವರದಿ ಸಲ್ಲಿಸಲು ಸೂಚಿಸಿದೆ. ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂದು ರಾಜ್ಯ ಸರ್ಕಾರಕ್ಕೆ ಹಾಗೂ ಸಾಕ್ಷಿಗಳ ವಿಚಾರಣೆ ಪ್ರಗತಿ ಬಗ್ಗೆ ವಿಚಾರಣಾ … Read more