‘ರಾಜಕೀಯ ಅಸ್ತಿತ್ವ’ಕ್ಕಾಗಿ ಸುಮಲತಾ ಯತ್ನ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್ ಪಡೆಯಲು ತೆರೆಮರೆ ಕಸರತ್ತು

ಮಂಡ್ಯ: ಮಂಡ್ಯ ಮಾಜಿ ಸಂಸದೆ ಸುಮಲತಾ ಅಂಬರೀಶ್ ಮತ್ತೆ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಡಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮಗೆ ಟಿಕೆಟ್ ಸಿಗಲೇಬೇಕು ಎಂದು ಬೆಂಬಲಿಗರ ಮೂಲಕ ಬಿಜೆಪಿ ವರಿಷ್ಠರ ಮೇಲೆ ತೀವ್ರ ಒತ್ತಡ ಹೇರಲು ಸುಮಲತಾ ಮುಂದಾಗಿದ್ದಾರೆ. ಮAಡ್ಯ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಸುಮಲತಾ ಅವರು ಯಾವುದೇ ಪ್ರಮುಖ ಕಾರ್ಯಕ್ರಮ ಅಥವಾ ಪಕ್ಷದ ಚಟುವಟಿಕೆಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ, ಈಗ ರಾಜ್ಯಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಅಸ್ತಿತ್ವಕ್ಕಾಗಿ ಅವರ ಹೋರಾಟ … Read more

ಮಲ್ಲಘಟ್ಟ ಅಭಿವೃದ್ಧಿಗೆ 35 ಕೋಟಿ ಗಂಗಾಧರೇಶ್ವರ ದೇವಾಲಯದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಪೂಜೆ ಸಲ್ಲಿಕೆ

ತುಮಕೂರು: ತುರುವೇಕೆರೆ ತಾಲ್ಲೂಕಿನ ಮಲ್ಲಘಟ್ಟ ಸುತ್ತಮುತ್ತ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಶನಿವಾರ ತುಮಕೂರು ಜಿಲ್ಲೆಗೆ ಭೇಟಿ ನೀಡಿದ್ದ ಅವರು, ಮಲ್ಲಘಟ್ಟದ ಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸುತ್ತಮುತ್ತಲಿನ ಜನರಿಗೆ ಅನುಕೂಲವಾಗುವಂತೆ ಕಾಲುವೆ ವ್ಯವಸ್ಥೆ, ಸಮುದಾಯ ಭವನ, ಅತಿಥಿ ಗೃಹ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿ ಮಾಡಲಾಗುವುದು ಎಂದು ಹೇಳಿದರು. ಗಂಗಾಧರೇಶ್ವರ ದೇವಾಲಯ ಹಾಗೂ … Read more

ಅಲೈಡ್ ಹೆಲ್ತ್ ಸೈನ್ಸ್ ವೈದ್ಯಕೀಯ ಕ್ಷೇತ್ರದ ಬೆನ್ನೆಲುಬು

ಶ್ರೀದೇವಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಪದವಿ ಪ್ರದಾನ ತುಮಕೂರು: ಅಲೈಡ್ ಹೆಲ್ತ್ ಸೈನ್ಸ್ ವೈದ್ಯಕೀಯ ಕ್ಷೇತ್ರದ ಬೆನ್ನೆಲುಬಾಗಿದ್ದು, ಆರೋಗ್ಯ ಸೇವಾ ವ್ಯವಸ್ಥೆಯನ್ನು ಸದೃಢಗೊಳಿಸುವಲ್ಲಿ ಈ ವಿಭಾಗದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪಠ್ಯಕ್ರಮ ನಿರ್ದೇಶಕ ಡಾ. ಷಣ್ಮುಖಪ್ಪ ಅಭಿಪ್ರಾಯಪಟ್ಟರು. ನಗರದ ಶಿರಾಗೇಟ್ ಸಮೀಪದ ಶ್ರೀದೇವಿ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್ ಹಾಗೂ ಶ್ರೀದೇವಿ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ವತಿಯಿಂದ ಆಯೋಜಿಸಲಾಗಿದ್ದ 5ನೇ ವರ್ಷದ ಪದವಿ ಪ್ರದಾನ ಸಮಾರಂಭವನ್ನು ಶನಿವಾರ … Read more

ಸಿಇಟಿಯಲ್ಲಿ ಜೆಮ್ಸಿಗೆ 708ನೇ ರ‍್ಯಾಂಕ್

ತುಮಕೂರು: ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಎ. ದಾನಿಯ ಜೆಮ್ಸಿ ಅವರು ಕೆ-ಸಿಇಟಿ 2026 ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ 708ನೇ ಇಂಜಿನಿಯರಿAಗ್ ರ‍್ಯಾಂಕ್ ಗಳಿಸಿದ್ದಾರೆ. ಶೈಕ್ಷಣಿಕ ಸಾಧನೆಯೊಂದಿಗೆ ಶಿಸ್ತು, ನಿರಂತರ ಪರಿಶ್ರಮ ಮತ್ತು ಆತ್ಮವಿಶ್ವಾಸದ ಪ್ರತೀಕವಾಗಿರುವ ದಾನಿಯ ಜೆಮ್ಸಿಯ ಈ ಸಾಧನೆ ವಿದ್ಯಾವಾಹಿನಿ ಶಿಕ್ಷಣ ಸಂಸ್ಥೆಯ ಗುಣಮಟ್ಟದ ಶಿಕ್ಷಣ, ವಿದ್ಯಾರ್ಥಿ-ಕೇಂದ್ರಿತ ಬೋಧನೆ ಹಾಗೂ ನಿರಂತರ ಮೌಲ್ಯಮಾಪನದ ಫಲವಾಗಿದೆ. ವಿದ್ಯಾವಾಹಿನಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಎನ್.ಬಿ. ಪ್ರದೀಪ್ ಕುಮಾರ್ ಅವರು ಸನ್ಮಾನಿಸಿ ಅಭಿನಂದಿಸಿದರು. ಈ … Read more

ಕೆಸಿಇಟಿ: ಯಶಸ್‌ಗೆ 77ನೇ ರ‍್ಯಾಂಕ್

ತುಮಕೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿರುವ 2026ರ ಕೆಸಿಇಟಿ ಫಲಿತಾಂಶದಲ್ಲಿ ವಿದ್ಯಾನಿಧಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ವಿದ್ಯಾನಿಧಿಯ ವಿದ್ಯಾರ್ಥಿ ಎಸ್.ಯಶಸ್ ರಾಜ್ಯ ಮಟ್ಟದಲ್ಲಿ 77ನೇ ರ‍್ಯಾಂಕ್ ಗಳಿಸಿದ್ದು, ಶಶಾಂಕ್ ಡಿ.ಕೆ. 386ನೇ ರ‍್ಯಾಂಕ್ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ಇತರೆ ವಿದ್ಯಾರ್ಥಿಗಳಾದ ರಚನಾ ಎಸ್. 1111, ರೋಹಿತ್ ವೈ.ಜಿ. 1370, ಗಿರಿಜಾ ಎನ್. 1656, ಅಕ್ಷಯ್ ಎಸ್. 2380, ನಿಹಾರಿಕಾ ಎ. 2520, ಕಿರಣ್ ಗೋವಿಂದ್ 2550 ಹಾಗೂ ಹರ್ಷನ್ ಗೌಡ … Read more

ಡಿಸಿಎಂ ಪರಂಗೆ ಭವ್ಯ ಸ್ವಾಗತ

ತುಮಕೂರು: ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಶನಿವಾರ ತುಮಕೂರು ಜಿಲ್ಲೆಗೆ ಆಗಮಿಸಿದ ಡಾ.ಜಿ. ಪರಮೇಶ್ವರ್ ಅವರಿಗೆ ಜಿಲ್ಲಾ ಆಡಳಿತದ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು. ಜಿಲ್ಲೆಗೆ ಆಗಮಿಸಿದ ಡಾ.ಪರಮೇಶ್ವರ್ ಅವರು ಮೊದಲಿಗೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು. ನೂತನ ಡಿಸಿಎಂ ಆಗಮನದ ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ಭವ್ಯ ಮೆರವಣಿಗೆಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿತ್ತು. ಬಟವಾಡಿ ಸರ್ಕಲ್‌ನಿಂದ ಟೌನ್‌ಹಾಲ್ … Read more